ETV Bharat / bharat

ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನವೀನ್ ಬಾಬು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - KANNUR ADM DEATH

ಕೇರಳದ ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನವೀನ್ ಬಾಬು ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನವೀನ್ ಬಾಬು
ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನವೀನ್ ಬಾಬು (IANS)
author img

By ETV Bharat Karnataka Team

Published : Oct 15, 2024, 2:31 PM IST

Updated : Oct 15, 2024, 5:55 PM IST

ಕಣ್ಣೂರು(ಕೇರಳ): ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನವೀನ್ ಬಾಬು ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೆಂಗನ್ನೂರ್ ರೈಲ್ವೆ ನಿಲ್ದಾಣದಲ್ಲಿ ಬಾಬು ಅವರ ಪತ್ನಿ ಅವರಿಗಾಗಿ ಕಾಯುತ್ತಿರುವ ಮಧ್ಯೆಯೇ ಅವರು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ತವರು ಜಿಲ್ಲೆ ಪಥನಂತಿಟ್ಟಕ್ಕೆ ವರ್ಗಾವಣೆಯಾಗಿದ್ದ ಅವರು, ಏಳು ತಿಂಗಳಲ್ಲಿ ನಿವೃತ್ತರಾಗಲಿದ್ದರು.

ಸೋಮವಾರ ಮಧ್ಯಾಹ್ನ ಕಣ್ಣೂರಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಪಿಐ (ಎಂ) ನ ಹಿರಿಯ ನಾಯಕಿ, ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಪಿ. ದಿವ್ಯಾ ಅವರು ಬಾಬು ಅವರ ವಿರುದ್ಧ ಕೆಲ ಅಸಂಬದ್ಧ ಹೇಳಿಕೆಗಳನ್ನು ನೀಡಿದ ನಂತರ ಬಾಬು ತೀವ್ರ ನೊಂದಿದ್ದರು ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ. ದಿವ್ಯಾರನ್ನು ಸಮಾರಂಭಕ್ಕೆ ಆಹ್ವಾನಿಸಿರಲಿಲ್ಲವಾದರೂ ಅವರು ಬಲವಂತವಾಗಿ ಒಳಗೆ ಬಂದಿದ್ದರು.

ಪೆಟ್ರೋಲ್ ಪಂಪ್ ಮಂಜೂರು ಮಾಡಿಸಿಕೊಳ್ಳಲು ಬಾಬು ಅವರೊಂದಿಗೆ ಮಾತನಾಡುವಂತೆ ವ್ಯಕ್ತಿಯೊಬ್ಬರು ನನಗೆ ಮನವಿ ಮಾಡಿದ್ದರು. ಈ ಬಗ್ಗೆ ಹಲವಾರು ಬಾರು ಬಾಬು ಅವರಿಗೆ ತಿಳಿಸಿದರೂ ಅವರು ಕೆಲಸ ಮಾಡಿ ಕೊಡಲಿಲ್ಲ. ಆದರೆ ಎರಡು ದಿನಗಳ ಮುಂಚೆ ಪೆಟ್ರೋಲ್ ಪಂಪ್ ಅನ್ನು ಅವರು ಮಂಜೂರು ಮಾಡಿದ್ದಾರೆ. ಯಾವ ರೀತಿಯಲ್ಲಿ ಈ ಅನುಮತಿ ನೀಡಲಾಗಿದೆ ಎಂಬುದು ನನಗೆ ತಿಳಿದಿದ್ದು, ಮುಂದಿನ ಎರಡು ದಿನಗಳಲ್ಲಿ ಈ ವಿಷಯವನ್ನು ಬಹಿರಂಗಪಡಿಸುವುದಾಗಿ ಹೇಳಿದ ದಿವ್ಯಾ ಅಲ್ಲಿಂದ ತೆರಳಿದ್ದರು.

ಬಾಬು ಅವರು ಚೆಂಗನ್ನೂರ್ ಗೆ ಬರಲು ರೈಲು ಹತ್ತಿಲ್ಲ ಎಂದು ತಿಳಿದ ನಂತರ ಅವರ ಪತ್ನಿ ತನ್ನ ಗಂಡನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಬಾಬು ಕಣ್ಣೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ.

ಮೃತರ ಮನೆ ಮುಂದೆ ಪ್ರತಿಭಟನೆ: ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ಮೃತರ ಮನೆಯ ಬಳಿ ಪ್ರತಿಭಟನೆ ನಡೆಸುತ್ತಿದೆ. "ನಮಗೆ ಪೊಲೀಸರ ಮೇಲೆ ನಂಬಿಕೆ ಇಲ್ಲ. ಪ್ರಾಮಾಣಿಕ ಅಧಿಕಾರಿಗಳಿಂದ ವಿಚಾರಣೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ವರದಿ ಸಲ್ಲಿಸುವಾಗ ದಿವ್ಯಾ ಅವರಂತಹ ಜನರು ಆ ತಂಡದ ಭಾಗವಾಗಲು ನಾವು ಬಯಸುವುದಿಲ್ಲ" ಎಂದು ಕಣ್ಣೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾರ್ಟಿನ್ ಜಾರ್ಜ್ ಹೇಳಿದ್ದಾರೆ.

ಪಥನಂತಿಟ್ಟದ ಸ್ಥಳೀಯ ಸಿಪಿಐ (ಎಂ) ಪದಾಧಿಕಾರಿಯಾಗಿ ಗುರುತಿಸಿಕೊಂಡಿರುವ ಬಾಬು ಅವರ ಚಿಕ್ಕಪ್ಪ ಮಾತನಾಡಿ, ಬಾಬು ಅವರು ಸ್ವಚ್ಛ ಸಾರ್ವಜನಿಕ ಜೀವನ ಮತ್ತು ಉತ್ತಮ ದಾಖಲೆಗೆ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.

ದಿವ್ಯಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸುವುದು ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. "ಇಡೀ ಘಟನೆಯು ಕಣ್ಣೂರು ಜಿಲ್ಲಾಧಿಕಾರಿಯ ಸಮ್ಮುಖದಲ್ಲಿ ನಡೆದಿದೆ. ಹೀಗಾಗಿ ಪೊಲೀಸರು ಕಲೆಕ್ಟರ್​ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಬೇಕು. ದಿವ್ಯಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು" ಎಂದು ಸುರೇಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ : ಉಚಿತ ಕೊಡುಗೆ ಪ್ರಶ್ನಿಸಿ ಮತ್ತೊಂದು ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕಣ್ಣೂರು(ಕೇರಳ): ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನವೀನ್ ಬಾಬು ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೆಂಗನ್ನೂರ್ ರೈಲ್ವೆ ನಿಲ್ದಾಣದಲ್ಲಿ ಬಾಬು ಅವರ ಪತ್ನಿ ಅವರಿಗಾಗಿ ಕಾಯುತ್ತಿರುವ ಮಧ್ಯೆಯೇ ಅವರು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ತವರು ಜಿಲ್ಲೆ ಪಥನಂತಿಟ್ಟಕ್ಕೆ ವರ್ಗಾವಣೆಯಾಗಿದ್ದ ಅವರು, ಏಳು ತಿಂಗಳಲ್ಲಿ ನಿವೃತ್ತರಾಗಲಿದ್ದರು.

ಸೋಮವಾರ ಮಧ್ಯಾಹ್ನ ಕಣ್ಣೂರಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಪಿಐ (ಎಂ) ನ ಹಿರಿಯ ನಾಯಕಿ, ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಪಿ. ದಿವ್ಯಾ ಅವರು ಬಾಬು ಅವರ ವಿರುದ್ಧ ಕೆಲ ಅಸಂಬದ್ಧ ಹೇಳಿಕೆಗಳನ್ನು ನೀಡಿದ ನಂತರ ಬಾಬು ತೀವ್ರ ನೊಂದಿದ್ದರು ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ. ದಿವ್ಯಾರನ್ನು ಸಮಾರಂಭಕ್ಕೆ ಆಹ್ವಾನಿಸಿರಲಿಲ್ಲವಾದರೂ ಅವರು ಬಲವಂತವಾಗಿ ಒಳಗೆ ಬಂದಿದ್ದರು.

ಪೆಟ್ರೋಲ್ ಪಂಪ್ ಮಂಜೂರು ಮಾಡಿಸಿಕೊಳ್ಳಲು ಬಾಬು ಅವರೊಂದಿಗೆ ಮಾತನಾಡುವಂತೆ ವ್ಯಕ್ತಿಯೊಬ್ಬರು ನನಗೆ ಮನವಿ ಮಾಡಿದ್ದರು. ಈ ಬಗ್ಗೆ ಹಲವಾರು ಬಾರು ಬಾಬು ಅವರಿಗೆ ತಿಳಿಸಿದರೂ ಅವರು ಕೆಲಸ ಮಾಡಿ ಕೊಡಲಿಲ್ಲ. ಆದರೆ ಎರಡು ದಿನಗಳ ಮುಂಚೆ ಪೆಟ್ರೋಲ್ ಪಂಪ್ ಅನ್ನು ಅವರು ಮಂಜೂರು ಮಾಡಿದ್ದಾರೆ. ಯಾವ ರೀತಿಯಲ್ಲಿ ಈ ಅನುಮತಿ ನೀಡಲಾಗಿದೆ ಎಂಬುದು ನನಗೆ ತಿಳಿದಿದ್ದು, ಮುಂದಿನ ಎರಡು ದಿನಗಳಲ್ಲಿ ಈ ವಿಷಯವನ್ನು ಬಹಿರಂಗಪಡಿಸುವುದಾಗಿ ಹೇಳಿದ ದಿವ್ಯಾ ಅಲ್ಲಿಂದ ತೆರಳಿದ್ದರು.

ಬಾಬು ಅವರು ಚೆಂಗನ್ನೂರ್ ಗೆ ಬರಲು ರೈಲು ಹತ್ತಿಲ್ಲ ಎಂದು ತಿಳಿದ ನಂತರ ಅವರ ಪತ್ನಿ ತನ್ನ ಗಂಡನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಬಾಬು ಕಣ್ಣೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ.

ಮೃತರ ಮನೆ ಮುಂದೆ ಪ್ರತಿಭಟನೆ: ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ಮೃತರ ಮನೆಯ ಬಳಿ ಪ್ರತಿಭಟನೆ ನಡೆಸುತ್ತಿದೆ. "ನಮಗೆ ಪೊಲೀಸರ ಮೇಲೆ ನಂಬಿಕೆ ಇಲ್ಲ. ಪ್ರಾಮಾಣಿಕ ಅಧಿಕಾರಿಗಳಿಂದ ವಿಚಾರಣೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ವರದಿ ಸಲ್ಲಿಸುವಾಗ ದಿವ್ಯಾ ಅವರಂತಹ ಜನರು ಆ ತಂಡದ ಭಾಗವಾಗಲು ನಾವು ಬಯಸುವುದಿಲ್ಲ" ಎಂದು ಕಣ್ಣೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾರ್ಟಿನ್ ಜಾರ್ಜ್ ಹೇಳಿದ್ದಾರೆ.

ಪಥನಂತಿಟ್ಟದ ಸ್ಥಳೀಯ ಸಿಪಿಐ (ಎಂ) ಪದಾಧಿಕಾರಿಯಾಗಿ ಗುರುತಿಸಿಕೊಂಡಿರುವ ಬಾಬು ಅವರ ಚಿಕ್ಕಪ್ಪ ಮಾತನಾಡಿ, ಬಾಬು ಅವರು ಸ್ವಚ್ಛ ಸಾರ್ವಜನಿಕ ಜೀವನ ಮತ್ತು ಉತ್ತಮ ದಾಖಲೆಗೆ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.

ದಿವ್ಯಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸುವುದು ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. "ಇಡೀ ಘಟನೆಯು ಕಣ್ಣೂರು ಜಿಲ್ಲಾಧಿಕಾರಿಯ ಸಮ್ಮುಖದಲ್ಲಿ ನಡೆದಿದೆ. ಹೀಗಾಗಿ ಪೊಲೀಸರು ಕಲೆಕ್ಟರ್​ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಬೇಕು. ದಿವ್ಯಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು" ಎಂದು ಸುರೇಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ : ಉಚಿತ ಕೊಡುಗೆ ಪ್ರಶ್ನಿಸಿ ಮತ್ತೊಂದು ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Last Updated : Oct 15, 2024, 5:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.