ETV Bharat / bharat

ಕರ್ನಾಟಕದ ಬಳಿಕ ತಮಿಳುನಾಡು, ಕೇರಳ ಸರ್ಕಾರದಿಂದ ಕೇಂದ್ರದ ವಿರುದ್ಧ 'ಅನುದಾನ' ಹೋರಾಟ

ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ ಮಾಡುತ್ತಿದೆ ಎಂದು ಆರೋಪಿಸಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಸಂಸತ್​​ ಭವನದ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು.

author img

By ETV Bharat Karnataka Team

Published : Feb 8, 2024, 10:47 AM IST

Updated : Feb 8, 2024, 12:25 PM IST

ಕೇಂದ್ರದ ವಿರುದ್ಧ 'ಅನುದಾನ' ಹೋರಾಟ
ಕೇಂದ್ರದ ವಿರುದ್ಧ 'ಅನುದಾನ' ಹೋರಾಟ

ತಿರುವನಂತಪುರ/ಚೆನ್ನೈ: ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್​ ಪ್ರತಿಭಟನೆ ನಡೆಸಿದ ಒಂದು ದಿನದ ಬಳಿಕ ಅಂದರೆ ಗುರುವಾರ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ದಿಲ್ಲಿಯಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್, ಸಂಸದ ಟಿಆರ್​.ಬಾಲು ಮುಂದಾಳತ್ವದಲ್ಲಿ ಡಿಎಂಕೆ ಸಂಸದರು ಜಂತರ್​ಮಂತರ್​ನಲ್ಲಿ ಹೋರಾಟ ನಡೆಸಿದವು.

ಈ ವೇಳೆ ಮಾತನಾಡಿದ ಸಿಎಂ ಪಿಣರಾಯಿ, ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗಟ್ಟಾಗಿ ಈ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ. ಫೆಬ್ರವರಿ 8ನೇ ತಾರೀಖನ್ನು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆಂಪು ಅಕ್ಷರಗಳಲ್ಲಿ ಬರೆಯಬೇಕಿದೆ. ಕೇಂದ್ರ ರಾಜ್ಯ ಸಂಬಂಧಗಳ ಸಮತೋಲನಕ್ಕೆ ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

ಕೇರಳ ಸಚಿವ ಕಾಡನ್ನಪಲ್ಲಿ ರಾಮಚಂದ್ರನ್ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಸಂವಿಧಾನದ ವಿರುದ್ಧವಾಗಿವೆ. ನಾವು ಒಕ್ಕೂಟ ಸಂಬಂಧನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ವಿರುದ್ಧವಾಗಿದೆ ಎಂದು ಆರೋಪಿಸಿದರು.

ತಮಿಳುನಾಡು ಸರ್ಕಾರದ ಹೋರಾಟ; 2024- 25ರ ಮಧ್ಯಂತರ ಬಜೆಟ್‌ನಲ್ಲಿ ತಮಿಳುನಾಡಿಗೆ ಅಗತ್ಯ ಹಣ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿ ಡಿಎಂಕೆ ನೇತೃತ್ವದ ಸರ್ಕಾರ ಕೇಂದ್ರದ ವಿರುದ್ಧ ಪ್ರತಿಭಟಿಸಿತು. ಡಿಎಂಕೆ ಸಂಸದ ಟಿ.ಆರ್.ಬಾಲು ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಬಳಿಕ ಮಾತನಾಡಿದ ಸಂಸದ, ತಮಿಳುನಾಡಿಗೆ ಪ್ರವಾಹ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಸರ್ಕಾರ ಇದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಜೊತೆಗೆ ಸದನವನ್ನು ಮುಂದೂಡಲು ಮನವಿ ಮಾಡಲಾಗಿತ್ತು. ಆದರೆ, ಲೋಕಸಭೆ ಸ್ಪೀಕರ್ ತಿರಸ್ಕರಿಸಿದರು. ಇದನ್ನು ವಿರೋಧಿಸಿ ತಮಿಳುನಾಡಿನ ಎಲ್ಲಾ ಪಕ್ಷಗಳು ಮತ್ತು ಕಾಂಗ್ರೆಸ್ ಸದನದಿಂದ ಹೊರನಡೆದವು ಎಂದು ತಿಳಿಸಿದರು.

ಕಳೆದ ವರ್ಷ ಉಂಟಾದ ಚಂಡಮಾರುತ, ಭೀಕರ ಮಳೆ ಮತ್ತು ಪ್ರವಾಹದಿಂದ ರಾಜ್ಯ ತತ್ತರಿಸಿದೆ. ಸುಮಾರು 37 ಸಾವಿರ ಕೋಟಿ ರೂಪಾಯಿಗಳ ಪರಿಹಾರವನ್ನು ಕೋರಲಾಗಿತ್ತು. ಮಧ್ಯಂತರ ಬಜೆಟ್‌ನಲ್ಲಿ ಈ ಬಗ್ಗೆ ಮೀಸಲಿಡಲಾಗಿಲ್ಲ. ತಮಿಳುನಾಡಿನ ಪ್ರಾತಿನಿಧ್ಯದ ಕುರಿತು ಯಾವುದೇ ಘೋಷಣೆ ಮಾಡಿಲ್ಲ ಎಂದು ಹೇಳಿದರು.

ಮಧುರೈನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ತಮಿಳುನಾಡಿನ ಅಭಿವೃದ್ಧಿ ಯೋಜನೆಗಳಿಗೆ ಹಣ ಹಂಚಿಕೆ ಮಾಡಲಾಗಿಲ್ಲ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಯುಡಿಎಫ್​ ಗೈರು: ಇತ್ತ ಕೇರಳ ಸರ್ಕಾರದ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ಯುಡಿಎಫ್​ ನಿರಾಕರಿಸಿದೆ. ರಾಜ್ಯದ ಎಲ್ಲಾ ಆರ್ಥಿಕ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುತ್ತಿರುವ ಸಿಎಂ ಪಿಣರಾಯಿ ವಿಜಯನ್​ ನೇತೃತ್ವದ ಎಲ್​ಡಿಎಫ್​ ನೀತಿಯನ್ನು ಒಪ್ಪಲಾಗದು. ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಘೋಷಿಸಿದೆ.

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಬುಧವಾರ ಕರ್ನಾಟಕ ಕಾಂಗ್ರೆಸ್​ನಿಂದ ಜಂತರ್​ಮಂತರ್​ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕಾಂಗ್ರೆಸ್​ ಸಂಸದರು, ಶಾಸಕರು ನರೇಂದ್ರ ಮೋದಿ ಸರ್ಕಾರದ ನಡುವೆ ಜಟಾಪಟಿ ನಡೆಸಿದ್ದರು.

ಇದನ್ನೂ ಓದಿ: 'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ

ತಿರುವನಂತಪುರ/ಚೆನ್ನೈ: ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್​ ಪ್ರತಿಭಟನೆ ನಡೆಸಿದ ಒಂದು ದಿನದ ಬಳಿಕ ಅಂದರೆ ಗುರುವಾರ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ದಿಲ್ಲಿಯಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್, ಸಂಸದ ಟಿಆರ್​.ಬಾಲು ಮುಂದಾಳತ್ವದಲ್ಲಿ ಡಿಎಂಕೆ ಸಂಸದರು ಜಂತರ್​ಮಂತರ್​ನಲ್ಲಿ ಹೋರಾಟ ನಡೆಸಿದವು.

ಈ ವೇಳೆ ಮಾತನಾಡಿದ ಸಿಎಂ ಪಿಣರಾಯಿ, ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗಟ್ಟಾಗಿ ಈ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ. ಫೆಬ್ರವರಿ 8ನೇ ತಾರೀಖನ್ನು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆಂಪು ಅಕ್ಷರಗಳಲ್ಲಿ ಬರೆಯಬೇಕಿದೆ. ಕೇಂದ್ರ ರಾಜ್ಯ ಸಂಬಂಧಗಳ ಸಮತೋಲನಕ್ಕೆ ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

ಕೇರಳ ಸಚಿವ ಕಾಡನ್ನಪಲ್ಲಿ ರಾಮಚಂದ್ರನ್ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಸಂವಿಧಾನದ ವಿರುದ್ಧವಾಗಿವೆ. ನಾವು ಒಕ್ಕೂಟ ಸಂಬಂಧನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ವಿರುದ್ಧವಾಗಿದೆ ಎಂದು ಆರೋಪಿಸಿದರು.

ತಮಿಳುನಾಡು ಸರ್ಕಾರದ ಹೋರಾಟ; 2024- 25ರ ಮಧ್ಯಂತರ ಬಜೆಟ್‌ನಲ್ಲಿ ತಮಿಳುನಾಡಿಗೆ ಅಗತ್ಯ ಹಣ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿ ಡಿಎಂಕೆ ನೇತೃತ್ವದ ಸರ್ಕಾರ ಕೇಂದ್ರದ ವಿರುದ್ಧ ಪ್ರತಿಭಟಿಸಿತು. ಡಿಎಂಕೆ ಸಂಸದ ಟಿ.ಆರ್.ಬಾಲು ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಬಳಿಕ ಮಾತನಾಡಿದ ಸಂಸದ, ತಮಿಳುನಾಡಿಗೆ ಪ್ರವಾಹ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಸರ್ಕಾರ ಇದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಜೊತೆಗೆ ಸದನವನ್ನು ಮುಂದೂಡಲು ಮನವಿ ಮಾಡಲಾಗಿತ್ತು. ಆದರೆ, ಲೋಕಸಭೆ ಸ್ಪೀಕರ್ ತಿರಸ್ಕರಿಸಿದರು. ಇದನ್ನು ವಿರೋಧಿಸಿ ತಮಿಳುನಾಡಿನ ಎಲ್ಲಾ ಪಕ್ಷಗಳು ಮತ್ತು ಕಾಂಗ್ರೆಸ್ ಸದನದಿಂದ ಹೊರನಡೆದವು ಎಂದು ತಿಳಿಸಿದರು.

ಕಳೆದ ವರ್ಷ ಉಂಟಾದ ಚಂಡಮಾರುತ, ಭೀಕರ ಮಳೆ ಮತ್ತು ಪ್ರವಾಹದಿಂದ ರಾಜ್ಯ ತತ್ತರಿಸಿದೆ. ಸುಮಾರು 37 ಸಾವಿರ ಕೋಟಿ ರೂಪಾಯಿಗಳ ಪರಿಹಾರವನ್ನು ಕೋರಲಾಗಿತ್ತು. ಮಧ್ಯಂತರ ಬಜೆಟ್‌ನಲ್ಲಿ ಈ ಬಗ್ಗೆ ಮೀಸಲಿಡಲಾಗಿಲ್ಲ. ತಮಿಳುನಾಡಿನ ಪ್ರಾತಿನಿಧ್ಯದ ಕುರಿತು ಯಾವುದೇ ಘೋಷಣೆ ಮಾಡಿಲ್ಲ ಎಂದು ಹೇಳಿದರು.

ಮಧುರೈನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ತಮಿಳುನಾಡಿನ ಅಭಿವೃದ್ಧಿ ಯೋಜನೆಗಳಿಗೆ ಹಣ ಹಂಚಿಕೆ ಮಾಡಲಾಗಿಲ್ಲ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಯುಡಿಎಫ್​ ಗೈರು: ಇತ್ತ ಕೇರಳ ಸರ್ಕಾರದ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ಯುಡಿಎಫ್​ ನಿರಾಕರಿಸಿದೆ. ರಾಜ್ಯದ ಎಲ್ಲಾ ಆರ್ಥಿಕ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುತ್ತಿರುವ ಸಿಎಂ ಪಿಣರಾಯಿ ವಿಜಯನ್​ ನೇತೃತ್ವದ ಎಲ್​ಡಿಎಫ್​ ನೀತಿಯನ್ನು ಒಪ್ಪಲಾಗದು. ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಘೋಷಿಸಿದೆ.

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಬುಧವಾರ ಕರ್ನಾಟಕ ಕಾಂಗ್ರೆಸ್​ನಿಂದ ಜಂತರ್​ಮಂತರ್​ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕಾಂಗ್ರೆಸ್​ ಸಂಸದರು, ಶಾಸಕರು ನರೇಂದ್ರ ಮೋದಿ ಸರ್ಕಾರದ ನಡುವೆ ಜಟಾಪಟಿ ನಡೆಸಿದ್ದರು.

ಇದನ್ನೂ ಓದಿ: 'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ

Last Updated : Feb 8, 2024, 12:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.