ETV Bharat / bharat

ಬಾಂಗ್ಲಾ ಗಡಿಯಂಚಿನ ಬರಾಕ್ ಕಣಿವೆ ಸಮಸ್ಯೆಗೆ ಶೀಘ್ರ ಪರಿಹಾರ: ಬಿಜೆಪಿ ಭರವಸೆ - Barak Valley

author img

By ETV Bharat Karnataka Team

Published : Apr 23, 2024, 2:56 PM IST

ಬಾಂಗ್ಲಾದೇಶದ ಗಡಿಯಲ್ಲಿರುವ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಎರಡು ಲೋಕಸಭಾ ಕ್ಷೇತ್ರಗಳಾದ ಸಿಲ್ಚಾರ್ (ಎಸ್‌ಸಿ) ಮತ್ತು ಕರೀಮ್‌ಗಂಜ್‌ ಪೌರತ್ವ, ನಿರುದ್ಯೋಗ, ಮೂಲಸೌಕರ್ಯ ಮತ್ತು ದೇಶದ ಉಳಿದ ಭಾಗಗಳೊಂದಿಗೆ ಸರಿಯಾದ ಸಂಪರ್ಕದ ಕೊರತೆ ಎದುರಿಸುತ್ತಿದ್ದು, ಅವುಗಳನ್ನು ಕಾಲಾನುಕ್ರಮದಲ್ಲಿ ಬಗೆಹರಿಸಲಾಗುತ್ತದೆ ಎಂದು ಅಸ್ಸಾಂ ಸಚಿವ ಪರಿಮಳ್ ಸುಕ್ಲಬೈದ್ಯ ಹೇಳಿದ್ದಾರೆ.

Lok Sabha Election 2024 BJP Wants to Cash in on CAA in Assam's Barak Valley Bordering Bangladesh
Lok Sabha Election 2024 BJP Wants to Cash in on CAA in Assam's Barak Valley Bordering Bangladesh

ಸಿಲ್ಚಾರ್(ಅಸ್ಸಾಂ): ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಿರುವ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಎರಡು ಲೋಕಸಭಾ ಕ್ಷೇತ್ರಗಳಾದ ಸಿಲ್ಚಾರ್ (ಪರಿಶಿಷ್ಟ ಜಾತಿ) ಮತ್ತು ಕರೀಮ್‌ಗಂಜ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಹುದೊಡ್ಡ ಸಮಸ್ಯೆಯಾಗಿದೆ. ಆದಷ್ಟು ಬೇಗ ಇದನ್ನು ಪರಿಹರಿಸಲಾಗುವುದು ಎಂದು ಬಿಜೆಪಿಯ ಸಿಲ್ಚಾರ್ (ಎಸ್‌ಸಿ) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಅಸ್ಸಾಂ ಸಚಿವ ಪರಿಮಳ್ ಸುಕ್ಲಬೈದ್ಯ ತಿಳಿಸಿದರು. ಬಾಂಗ್ಲಾದೇಶದಿಂದ ಕಣಿವೆಗೆ ವಲಸೆ ಬಂದ ಇವರಿಗೆ ಸರ್ಕಾರದಿಂದ ಸಲ್ಲಬೇಕಾದ ಸೌಲಭ್ಯ ಮತ್ತು ಸಹಾಯ ಸಿಗಲಿದೆ. ಈ ನಿಟ್ಟಿನಲ್ಲಿ ಅಂತಹ ಕಾನೂನು ತರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಬಾಂಗ್ಲಾದೇಶದೊಂದಿಗೆ 129 ಕಿ.ಮೀ ಗಡಿ ಹಂಚಿಕೊಳ್ಳುವ ಈ ಎರಡು ಕ್ಷೇತ್ರಗಳಲ್ಲಿ, ನೆರೆಯ ದೇಶದಿಂದ ಸ್ಥಳಾಂತರಗೊಂಡ ಹಿಂದೂ ಬಂಗಾಳಿಗಳ ಬಹುದೊಡ್ಡ ಜನಸಂಖ್ಯೆ ಇದೆ. ಯಾವುದೋ ಕಾರಣದಿಂದ ಕಾಲಕಾಲಕ್ಕೆ ಅವರು ಕಣಿವೆ ಪ್ರವೇಶಿಸಿದ್ದರು. ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತು ಕಾನೂನಾಗಿ ಜಾರಿಗೊಳಿಸಿದೆ. ಆದರೆ, ನಿಯಮಗಳ ರಚನೆಯ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಅವರಿಗೆ ಬೇಕಾದ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ ಎಂದು ಸುಕ್ಲಬೈದ್ಯ ವಿವರಿಸಿದರು.

ವಿಭಜನೆಯಿಂದಾಗಿ ಪೌರತ್ವ ಸಮಸ್ಯೆ ಸೃಷ್ಟಿಯಾಗಿದ್ದು, 70 ವರ್ಷಗಳಿಂದ ಯಾವುದೇ ರಾಜಕೀಯ ಪಕ್ಷಗಳು ಅದನ್ನು ಪರಿಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಸಮಸ್ಯೆ ಉದ್ಭವಿಸಿದೆ. ಕೆಲವು ಸ್ಥಳೀಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕಷ್ಟಪಡುತ್ತಿರುವುದು ಕಂಡುಬಂದಿದೆ. ದಾಖಲೆಗಳ ಸಲ್ಲಿಕೆಗೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಕೆಲವು ಅಡಚಣೆಗಳಿವೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಸರಳಗೊಳಿಸಲಾಗುವುದು. ಇದರ ಹೊರತಾಗಿ ಅನುಷ್ಠಾನದಲ್ಲಿಯೂ ಸಮಸ್ಯೆಗಳು ಉದ್ಭವಿಸಬಹುದು. ಅವುಗಳನ್ನು ಸಹಪರಿಹರಿಸಲು ನಾವು ಬದ್ಧ. ರಾಜಕೀಯ ಪಕ್ಷಗಳು ಈ ವಿಷಯದಲ್ಲಿ ಅನಗತ್ಯ ಗಲಾಟೆ ಮಾಡುತ್ತಿವೆ. ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಮುಂದಿನ ಆರರಿಂದ ಎಂಟು ತಿಂಗಳಲ್ಲಿ ಎಲ್ಲ ಅಡೆತಡೆಗಳನ್ನು ನಿವಾರಿಸಲಾಗುವುದು ಎಂದು ಸುಕ್ಲಾಬೈದ್ಯ ಭರವಸೆ ಕೊಟ್ಟರು.

ಅನೇಕ ಜನರು ಸಿಎಎ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಏಕೆಂದರೆ ಅವರು ಆ ದೇಶದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಸಾಬೀತುಪಡಿಸಲು ಬಾಂಗ್ಲಾದೇಶ ನೀಡಿದ ಸಂಬಂಧಿತ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಬರಾಕ್ ಕಣಿವೆಯಲ್ಲಿ ಸಂವಹನ ಮತ್ತು ಸಂಪರ್ಕವು ಇತರ ಪ್ರಮುಖ ಸಮಸ್ಯೆಗಳಾಗಿವೆ ಎಂದು ಅವರು ಹೇಳಿದರು.

ಸಿಲ್ಚಾರ್‌ನಿಂದ ಗುಜರಾತ್‌ವರೆಗಿನ ಪೂರ್ವ-ಪಶ್ಚಿಮ ಕಾರಿಡಾರ್​ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೊದಲ ಹೆಜ್ಜೆಯಿಟ್ಟರು. ಆದರೆ, ನಂತರ 10 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಯೋಜನೆಯನ್ನು ನಿರ್ಲಕ್ಷಿಸಿದೆ. 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮತ್ತೊಮ್ಮೆ ಈ ಯೋಜನೆಗೆ ಚಾಲನೆ ನೀಡಿದರು. ಸದ್ಯ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಪೂರ್ಣಗೊಂಡರೆ ಇದು ರಾಜ್ಯ ರಾಜಧಾನಿಗೆ ಹೆಚ್ಚಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಿಜೆಪಿ ಸರ್ಕಾರವು ಇಲ್ಲಿ ಮಿನಿ ಸೆಕ್ರೆಟರಿಯೇಟ್ ಅನ್ನು ಸಹ ಸ್ಥಾಪಿಸುತ್ತಿದೆ. 2026ರ ವಿಧಾನಸಭಾ ಚುನಾವಣೆಗೂ ಮುನ್ನ ಪೂರ್ಣಗೊಳ್ಳಲಿದೆ. ಕಣಿವೆಯಲ್ಲಿನ ಜಲಮಾರ್ಗಗಳನ್ನು ಬಳಸಿಕೊಳ್ಳಲು ಮತ್ತು ವಾಯು ಸಂಪರ್ಕವನ್ನು ಅಭಿವೃದ್ಧಿಪಡಿಸಲು ನಮ್ಮ ಪಕ್ಷವು ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಬರಾಕ್ ವ್ಯಾಲಿಯ ಆಧಾರಸ್ತಂಭವಾದ ಕ್ಯಾಚಾರ್ ಪೇಪರ್ ಮಿಲ್‌ಗಳನ್ನು ಮುಚ್ಚಲಾಗಿತ್ತು. ಆದರೆ, ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಾವು ನೌಕರರ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಅವರ ಬಾಕಿ ಸಹ ಪಾವತಿಸಿದ್ದೇವೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ತನ್ನ ಭೂಮಿಯಲ್ಲಿ ದೊಡ್ಡ ಕೈಗಾರಿಕೆ ಅಥವಾ ಸಣ್ಣ ಕೈಗಾರಿಕೆಗಳ ಗುಂಪನ್ನು ಸ್ಥಾಪಿಸಲು ಯೋಜಿಸುತ್ತಿದೆ. ಇದು ಸಾಮಾನ್ಯವಾಗಿ ಉದ್ಯೋಗಕ್ಕಾಗಿ ಹೊರಗೆ ಹೋಗಬೇಕಾದ ಕಣಿವೆಯ ಯುವಕರಿಗೆ ಉದ್ಯೋಗವನ್ನು ನೀಡುತ್ತದೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದೆ. ಚಹಾ ತೋಟಗಳು ಇಲ್ಲಿನ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡಿವೆ. ಹಲವು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ಕಾರ್ಮಿಕರ ಸ್ಥಿತಿಗತಿ ಕಡಿಮೆ ವೇತನದಿಂದ ಹದಗೆಟ್ಟಿದೆ. ಕಳೆದ ಕೆಲ ವರ್ಷಗಳಲ್ಲಿ ಬಿಜೆಪಿ ಸರ್ಕಾರ ದ್ವಿಗುಣಗೊಳಿಸಿದೆ. ಬರಾಕ್ ಕಣಿವೆಯ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಕೇಂದ್ರದಲ್ಲಿ 10 ವರ್ಷ ಮತ್ತು ರಾಜ್ಯದಲ್ಲಿ ಎಂಟು ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಹರಿಸಲಾಗಿದೆ ಎಂದು ಸುಕ್ಲಬೈದ್ಯ ಹೇಳಿದರು.

ಇದನ್ನೂ ಓದಿ: ಮಹಿಳೆಯರ ಮಾಂಗಲ್ಯ, ಸಂಪತ್ತಿನ ಮೇಲೆ ಕಾಂಗ್ರೆಸ್​ ಕಣ್ಣು: ಮೂರನೇ ಸಲ ಪ್ರಧಾನಿ ಮೋದಿ ಆರೋಪ - PM Modi

ಸಿಲ್ಚಾರ್(ಅಸ್ಸಾಂ): ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಿರುವ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಎರಡು ಲೋಕಸಭಾ ಕ್ಷೇತ್ರಗಳಾದ ಸಿಲ್ಚಾರ್ (ಪರಿಶಿಷ್ಟ ಜಾತಿ) ಮತ್ತು ಕರೀಮ್‌ಗಂಜ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಹುದೊಡ್ಡ ಸಮಸ್ಯೆಯಾಗಿದೆ. ಆದಷ್ಟು ಬೇಗ ಇದನ್ನು ಪರಿಹರಿಸಲಾಗುವುದು ಎಂದು ಬಿಜೆಪಿಯ ಸಿಲ್ಚಾರ್ (ಎಸ್‌ಸಿ) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಅಸ್ಸಾಂ ಸಚಿವ ಪರಿಮಳ್ ಸುಕ್ಲಬೈದ್ಯ ತಿಳಿಸಿದರು. ಬಾಂಗ್ಲಾದೇಶದಿಂದ ಕಣಿವೆಗೆ ವಲಸೆ ಬಂದ ಇವರಿಗೆ ಸರ್ಕಾರದಿಂದ ಸಲ್ಲಬೇಕಾದ ಸೌಲಭ್ಯ ಮತ್ತು ಸಹಾಯ ಸಿಗಲಿದೆ. ಈ ನಿಟ್ಟಿನಲ್ಲಿ ಅಂತಹ ಕಾನೂನು ತರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಬಾಂಗ್ಲಾದೇಶದೊಂದಿಗೆ 129 ಕಿ.ಮೀ ಗಡಿ ಹಂಚಿಕೊಳ್ಳುವ ಈ ಎರಡು ಕ್ಷೇತ್ರಗಳಲ್ಲಿ, ನೆರೆಯ ದೇಶದಿಂದ ಸ್ಥಳಾಂತರಗೊಂಡ ಹಿಂದೂ ಬಂಗಾಳಿಗಳ ಬಹುದೊಡ್ಡ ಜನಸಂಖ್ಯೆ ಇದೆ. ಯಾವುದೋ ಕಾರಣದಿಂದ ಕಾಲಕಾಲಕ್ಕೆ ಅವರು ಕಣಿವೆ ಪ್ರವೇಶಿಸಿದ್ದರು. ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತು ಕಾನೂನಾಗಿ ಜಾರಿಗೊಳಿಸಿದೆ. ಆದರೆ, ನಿಯಮಗಳ ರಚನೆಯ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಅವರಿಗೆ ಬೇಕಾದ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ ಎಂದು ಸುಕ್ಲಬೈದ್ಯ ವಿವರಿಸಿದರು.

ವಿಭಜನೆಯಿಂದಾಗಿ ಪೌರತ್ವ ಸಮಸ್ಯೆ ಸೃಷ್ಟಿಯಾಗಿದ್ದು, 70 ವರ್ಷಗಳಿಂದ ಯಾವುದೇ ರಾಜಕೀಯ ಪಕ್ಷಗಳು ಅದನ್ನು ಪರಿಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಸಮಸ್ಯೆ ಉದ್ಭವಿಸಿದೆ. ಕೆಲವು ಸ್ಥಳೀಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕಷ್ಟಪಡುತ್ತಿರುವುದು ಕಂಡುಬಂದಿದೆ. ದಾಖಲೆಗಳ ಸಲ್ಲಿಕೆಗೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಕೆಲವು ಅಡಚಣೆಗಳಿವೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಸರಳಗೊಳಿಸಲಾಗುವುದು. ಇದರ ಹೊರತಾಗಿ ಅನುಷ್ಠಾನದಲ್ಲಿಯೂ ಸಮಸ್ಯೆಗಳು ಉದ್ಭವಿಸಬಹುದು. ಅವುಗಳನ್ನು ಸಹಪರಿಹರಿಸಲು ನಾವು ಬದ್ಧ. ರಾಜಕೀಯ ಪಕ್ಷಗಳು ಈ ವಿಷಯದಲ್ಲಿ ಅನಗತ್ಯ ಗಲಾಟೆ ಮಾಡುತ್ತಿವೆ. ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಮುಂದಿನ ಆರರಿಂದ ಎಂಟು ತಿಂಗಳಲ್ಲಿ ಎಲ್ಲ ಅಡೆತಡೆಗಳನ್ನು ನಿವಾರಿಸಲಾಗುವುದು ಎಂದು ಸುಕ್ಲಾಬೈದ್ಯ ಭರವಸೆ ಕೊಟ್ಟರು.

ಅನೇಕ ಜನರು ಸಿಎಎ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಏಕೆಂದರೆ ಅವರು ಆ ದೇಶದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಸಾಬೀತುಪಡಿಸಲು ಬಾಂಗ್ಲಾದೇಶ ನೀಡಿದ ಸಂಬಂಧಿತ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಬರಾಕ್ ಕಣಿವೆಯಲ್ಲಿ ಸಂವಹನ ಮತ್ತು ಸಂಪರ್ಕವು ಇತರ ಪ್ರಮುಖ ಸಮಸ್ಯೆಗಳಾಗಿವೆ ಎಂದು ಅವರು ಹೇಳಿದರು.

ಸಿಲ್ಚಾರ್‌ನಿಂದ ಗುಜರಾತ್‌ವರೆಗಿನ ಪೂರ್ವ-ಪಶ್ಚಿಮ ಕಾರಿಡಾರ್​ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೊದಲ ಹೆಜ್ಜೆಯಿಟ್ಟರು. ಆದರೆ, ನಂತರ 10 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಯೋಜನೆಯನ್ನು ನಿರ್ಲಕ್ಷಿಸಿದೆ. 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮತ್ತೊಮ್ಮೆ ಈ ಯೋಜನೆಗೆ ಚಾಲನೆ ನೀಡಿದರು. ಸದ್ಯ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಪೂರ್ಣಗೊಂಡರೆ ಇದು ರಾಜ್ಯ ರಾಜಧಾನಿಗೆ ಹೆಚ್ಚಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಿಜೆಪಿ ಸರ್ಕಾರವು ಇಲ್ಲಿ ಮಿನಿ ಸೆಕ್ರೆಟರಿಯೇಟ್ ಅನ್ನು ಸಹ ಸ್ಥಾಪಿಸುತ್ತಿದೆ. 2026ರ ವಿಧಾನಸಭಾ ಚುನಾವಣೆಗೂ ಮುನ್ನ ಪೂರ್ಣಗೊಳ್ಳಲಿದೆ. ಕಣಿವೆಯಲ್ಲಿನ ಜಲಮಾರ್ಗಗಳನ್ನು ಬಳಸಿಕೊಳ್ಳಲು ಮತ್ತು ವಾಯು ಸಂಪರ್ಕವನ್ನು ಅಭಿವೃದ್ಧಿಪಡಿಸಲು ನಮ್ಮ ಪಕ್ಷವು ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಬರಾಕ್ ವ್ಯಾಲಿಯ ಆಧಾರಸ್ತಂಭವಾದ ಕ್ಯಾಚಾರ್ ಪೇಪರ್ ಮಿಲ್‌ಗಳನ್ನು ಮುಚ್ಚಲಾಗಿತ್ತು. ಆದರೆ, ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಾವು ನೌಕರರ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಅವರ ಬಾಕಿ ಸಹ ಪಾವತಿಸಿದ್ದೇವೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ತನ್ನ ಭೂಮಿಯಲ್ಲಿ ದೊಡ್ಡ ಕೈಗಾರಿಕೆ ಅಥವಾ ಸಣ್ಣ ಕೈಗಾರಿಕೆಗಳ ಗುಂಪನ್ನು ಸ್ಥಾಪಿಸಲು ಯೋಜಿಸುತ್ತಿದೆ. ಇದು ಸಾಮಾನ್ಯವಾಗಿ ಉದ್ಯೋಗಕ್ಕಾಗಿ ಹೊರಗೆ ಹೋಗಬೇಕಾದ ಕಣಿವೆಯ ಯುವಕರಿಗೆ ಉದ್ಯೋಗವನ್ನು ನೀಡುತ್ತದೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದೆ. ಚಹಾ ತೋಟಗಳು ಇಲ್ಲಿನ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡಿವೆ. ಹಲವು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ಕಾರ್ಮಿಕರ ಸ್ಥಿತಿಗತಿ ಕಡಿಮೆ ವೇತನದಿಂದ ಹದಗೆಟ್ಟಿದೆ. ಕಳೆದ ಕೆಲ ವರ್ಷಗಳಲ್ಲಿ ಬಿಜೆಪಿ ಸರ್ಕಾರ ದ್ವಿಗುಣಗೊಳಿಸಿದೆ. ಬರಾಕ್ ಕಣಿವೆಯ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಕೇಂದ್ರದಲ್ಲಿ 10 ವರ್ಷ ಮತ್ತು ರಾಜ್ಯದಲ್ಲಿ ಎಂಟು ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಹರಿಸಲಾಗಿದೆ ಎಂದು ಸುಕ್ಲಬೈದ್ಯ ಹೇಳಿದರು.

ಇದನ್ನೂ ಓದಿ: ಮಹಿಳೆಯರ ಮಾಂಗಲ್ಯ, ಸಂಪತ್ತಿನ ಮೇಲೆ ಕಾಂಗ್ರೆಸ್​ ಕಣ್ಣು: ಮೂರನೇ ಸಲ ಪ್ರಧಾನಿ ಮೋದಿ ಆರೋಪ - PM Modi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.