ETV Bharat / bharat

2024ರ ಲೋಕಸಭಾ ಚುನಾವಣೆ: ನಮ್ಮ 'ಇಂಡಿಯಾ' ಮೈತ್ರಿಕೂಟ 295 ಸ್ಥಾನ ಗೆಲ್ಲುತ್ತೆ, ಖರ್ಗೆ ಅಚಲ ವಿಶ್ವಾಸ - INDIA Bloc Meeting

author img

By ETV Bharat Karnataka Team

Published : Jun 1, 2024, 6:38 PM IST

2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ 'ಇಂಡಿಯಾ' ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

INDIA bloc leaders during a meeting at Congress Chief Mallikarjuna Kharge's residence in New Delhi on Saturday, June 1, 2024.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿಇಂಡಿಯಾ' ಮೈತ್ರಿಕೂಟದ ನಾಯಕರು ಸಭೆ ನಡೆಸಿದರು. (X@INCIndia)

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಏಳು ಹಂತಗಳ ಮತದಾನ ಇಂದು ಮುಕ್ತಾಯವಾಗಿದೆ. ಇದರ ನಡುವೆ ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಸಿದೆ. ಸಭೆ ಬಳಿಕ ಖರ್ಗೆ ಮಾತನಾಡಿ, ನಾವು ಒಗ್ಗಟ್ಟಾಗಿದ್ದೇವೆ, ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ. ನಮ್ಮ 'ಇಂಡಿಯಾ' ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಕೊನೆಯ ಹಂತದ ಮತದಾನದೊಂದಿಗೆ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಪ್ರತಿಪಕ್ಷಗಳದ 'ಇಂಡಿಯಾ' ಮೈತ್ರಿಕೂಟದ ಕಾಂಗ್ರೆಸ್, ಸಮಾಜವಾದಿ ಪಕ್ಷ, ಸಿಪಿಐ-ಎಂ, ಸಿಪಿಐ, ಡಿಎಂಕೆ, ಜೆಎಂಎಂ, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಶರದ್ ಪವಾರ್) ಪಕ್ಷದ ನಾಯಕರು ಖರ್ಗೆ ನಿವಾಸದಲ್ಲಿ ಸಭೆ ಸೇರಿದರು.

ಈ ಸಭೆಯಲ್ಲಿ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಎನ್‌ಸಿಪಿ ನಾಯಕ ಜಿತೇಂದ್ರ ಅವದ್, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆಪ್​ ಮುಖಂಡರಾದ ರಾಘವ್ ಚಡ್ಡಾ, ಸಂಜಯ್ ಸಿಂಗ್ ಭಾಗವಹಿಸಿದ್ದರು.

ಅಲ್ಲದೇ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಂಜಯ್ ಯಾದವ್, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ಕಲ್ಪನಾ ಸೊರೆನ್, ಡಿಎಂಕೆಯ ಟಿಆರ್ ಬಾಲು, ಸಿಪಿಐನ ಡಿ.ರಾಜಾ, ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ, ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ, ಶಿವಸೇನಾ (ಯುಬಿಟಿ) ಮುಖಂಡ ಅನಿಲ್ ದೇಸಾಯಿ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸಾಮಾಜಿಕ ಜಾಲತಾಣದ 'ಎಕ್ಸ್‌' ಖಾತೆಯಲ್ಲಿ ಸಭೆಯ ವಿಡಿಯೋ ಹಂಚಿಕೊಂಡಿದ್ದಾರೆ. ಮತ ಎಣಿಕೆ ದಿನದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಲು 'ಇಂಡಿಯಾ' ಒಕ್ಕೂಟದ ಪಕ್ಷಗಳ ನಾಯಕರು ಇಂದು ಅನೌಪಚಾರಿಕವಾಗಿ ಸಭೆ ನಡೆಸುತ್ತಿದ್ದೇವೆ. ಹೋರಾಟ ಇನ್ನೂ ಮುಗಿದಿಲ್ಲ, ಎಲ್ಲ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ತುಂಬಾ ಜಾಗರೂಕರಾಗಿದ್ದಾರೆ. ನಾವು 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಎಲ್ಲ ಶಕ್ತಿಯೊಂದಿಗೆ ಹೋರಾಡಿದ್ದೇವೆ. ಭಾರತದ ಜನರು ನಮ್ಮನ್ನು ಬೆಂಬಲಿಸಿರುವುದರಿಂದ ಸಕಾರಾತ್ಮಕ ಫಲಿತಾಂಶದ ವಿಶ್ವಾಸವಿದೆ ಎಂದು ಖರ್ಗೆ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಸಟ್ಟಾ ಬಜಾರ್​ ಭವಿಷ್ಯ​: ಬಿಜೆಪಿಗೆ ಆಗುತ್ತಾ ನಷ್ಟ, ಕಾಂಗ್ರೆಸ್​​​​​​​​​ಗೆ ಈ ಬಾರಿ ಎಷ್ಟು ಸ್ಥಾನ, ಪಲೋಡಿ ಲೆಕ್ಕಾಚಾರ ಇಲ್ಲಿದೆ ನೋಡಿ!

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಏಳು ಹಂತಗಳ ಮತದಾನ ಇಂದು ಮುಕ್ತಾಯವಾಗಿದೆ. ಇದರ ನಡುವೆ ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಸಿದೆ. ಸಭೆ ಬಳಿಕ ಖರ್ಗೆ ಮಾತನಾಡಿ, ನಾವು ಒಗ್ಗಟ್ಟಾಗಿದ್ದೇವೆ, ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ. ನಮ್ಮ 'ಇಂಡಿಯಾ' ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಕೊನೆಯ ಹಂತದ ಮತದಾನದೊಂದಿಗೆ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಪ್ರತಿಪಕ್ಷಗಳದ 'ಇಂಡಿಯಾ' ಮೈತ್ರಿಕೂಟದ ಕಾಂಗ್ರೆಸ್, ಸಮಾಜವಾದಿ ಪಕ್ಷ, ಸಿಪಿಐ-ಎಂ, ಸಿಪಿಐ, ಡಿಎಂಕೆ, ಜೆಎಂಎಂ, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಶರದ್ ಪವಾರ್) ಪಕ್ಷದ ನಾಯಕರು ಖರ್ಗೆ ನಿವಾಸದಲ್ಲಿ ಸಭೆ ಸೇರಿದರು.

ಈ ಸಭೆಯಲ್ಲಿ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಎನ್‌ಸಿಪಿ ನಾಯಕ ಜಿತೇಂದ್ರ ಅವದ್, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆಪ್​ ಮುಖಂಡರಾದ ರಾಘವ್ ಚಡ್ಡಾ, ಸಂಜಯ್ ಸಿಂಗ್ ಭಾಗವಹಿಸಿದ್ದರು.

ಅಲ್ಲದೇ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಂಜಯ್ ಯಾದವ್, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ಕಲ್ಪನಾ ಸೊರೆನ್, ಡಿಎಂಕೆಯ ಟಿಆರ್ ಬಾಲು, ಸಿಪಿಐನ ಡಿ.ರಾಜಾ, ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ, ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ, ಶಿವಸೇನಾ (ಯುಬಿಟಿ) ಮುಖಂಡ ಅನಿಲ್ ದೇಸಾಯಿ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸಾಮಾಜಿಕ ಜಾಲತಾಣದ 'ಎಕ್ಸ್‌' ಖಾತೆಯಲ್ಲಿ ಸಭೆಯ ವಿಡಿಯೋ ಹಂಚಿಕೊಂಡಿದ್ದಾರೆ. ಮತ ಎಣಿಕೆ ದಿನದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಲು 'ಇಂಡಿಯಾ' ಒಕ್ಕೂಟದ ಪಕ್ಷಗಳ ನಾಯಕರು ಇಂದು ಅನೌಪಚಾರಿಕವಾಗಿ ಸಭೆ ನಡೆಸುತ್ತಿದ್ದೇವೆ. ಹೋರಾಟ ಇನ್ನೂ ಮುಗಿದಿಲ್ಲ, ಎಲ್ಲ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ತುಂಬಾ ಜಾಗರೂಕರಾಗಿದ್ದಾರೆ. ನಾವು 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಎಲ್ಲ ಶಕ್ತಿಯೊಂದಿಗೆ ಹೋರಾಡಿದ್ದೇವೆ. ಭಾರತದ ಜನರು ನಮ್ಮನ್ನು ಬೆಂಬಲಿಸಿರುವುದರಿಂದ ಸಕಾರಾತ್ಮಕ ಫಲಿತಾಂಶದ ವಿಶ್ವಾಸವಿದೆ ಎಂದು ಖರ್ಗೆ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಸಟ್ಟಾ ಬಜಾರ್​ ಭವಿಷ್ಯ​: ಬಿಜೆಪಿಗೆ ಆಗುತ್ತಾ ನಷ್ಟ, ಕಾಂಗ್ರೆಸ್​​​​​​​​​ಗೆ ಈ ಬಾರಿ ಎಷ್ಟು ಸ್ಥಾನ, ಪಲೋಡಿ ಲೆಕ್ಕಾಚಾರ ಇಲ್ಲಿದೆ ನೋಡಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.