ETV Bharat / bharat

ಕಾಂಗ್ರೆಸ್​​ನಿಂದ ಮೀಸಲಾತಿ ಶೇ50ರಷ್ಟು ಹೆಚ್ಚಳ ಪರ ಕೂಗು, ಸಂವಿಧಾನ ಉಳಿಸಿ ಅಭಿಯಾನ - LoP Rahul Gandhi

author img

By ETV Bharat Karnataka Team

Published : 2 hours ago

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಅಕ್ಟೋಬರ್​​ 5 ರಂದು ನಡೆಯುವ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರು 'ಸಂವಿಧಾನ ಉಳಿಸಿ ಅಭಿಯಾನ'ಕ್ಕೆ ಚಾಲನೆ ನೀಡಲಿದ್ದಾರೆ.

ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ
ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ (ETV Bharat)

ನವದೆಹಲಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅಕ್ಟೋಬರ್ 5 ರಂದು ಕಾಂಗ್ರೆಸ್​ ಸಾಮಾಜಿಕ ನ್ಯಾಯ ಸಮಾವೇಶವನ್ನು ಹಮ್ಮಿಕೊಂಡಿದೆ. ಇದರಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿ ಭಾಗವಹಿಸಲಿದ್ದು, 'ಸಂವಿಧಾನ ಉಳಿಸಿ' ಅಭಿಯಾನವನ್ನು ಆರಂಭಿಸಲಿದ್ದಾರೆ. ಜೊತೆಗೆ ಈಗಿರುವ ಮೀಸಲಾತಿ ಮಿತಿಯನ್ನು ಶೇಕಡಾ 50 ರಷ್ಟು ಹೆಚ್ಚಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂವಿಧಾನ ಉಳಿಸಿ ಅಭಿಯಾನ?: ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ವಿಧಾನಸಭೆಗೆ ಅಕ್ಟೋಬರ್ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಸಾಮಾಜಿಕ ನ್ಯಾಯ ಸಮಾವೇಶವು ಮಹತ್ವ ಪಡೆದುಕೊಂಡಿದೆ. ಜೊತೆಗೆ ರಾಹುಲ್ ಅವರು ಸಂವಿಧಾನ ಉಳಿಸಿ ಅಭಿಯಾನ ಆರಂಭಿಸುವ ದಿನವೇ ಹರಿಯಾಣದಲ್ಲಿ ಮತದಾನ ನಡೆಯಲಿದೆ.

ಸಾಮಾಜಿಕ ನ್ಯಾಯ ಕಾರ್ಯಕ್ರಮಕ್ಕೆ ಕೊಲ್ಹಾಪುರವನ್ನೇ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ರಾಜ ರಾಜರ್ಷಿ ಛತ್ರಪತಿ ಶಾಹು ಮಹಾರಾಜ್ ಅವರು ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರು. ಹಾಲಿ ಕಾಂಗ್ರೆಸ್ ಸಂಸದರಾಗಿರು ಛತ್ರಪತಿ ಶಾಹು ಮಹಾರಾಜ್​ ಸಾಮಾಜಿಕ ನ್ಯಾಯದ ದೊಡ್ಡ ನಾಯಕ ಎಂದು ಸ್ಥಳೀಯರು ಬಣ್ಣಿಸಿದ್ದಾರೆ. ಹೀಗಾಗಿ ಅವರ ಕ್ಷೇತ್ರವನ್ನೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ.

ದುರ್ಬಲ ವರ್ಗಗಳ ಸಂಕಷ್ಟಗಳ ಕುರಿತು ಮಾತು: ರಾಹುಲ್ ಗಾಂಧಿ ಅವರು ಸಮಾಜದ ದುರ್ಬಲ ವರ್ಗಗಳ ಸಂಕಷ್ಟಗಳ ಕುರಿತು ಮಾತನಾಡಲಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಅಗತ್ಯತೆ ಮತ್ತು ಮೀಸಲಾತಿಯನ್ನು ಶೇಕಡಾ 50 ಕ್ಕೆ ಹೆಚ್ಚಿಸುವ ಬಗ್ಗೆಯೂ ಘೋಷಣೆ ಮಾಡಲಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕ ಪ್ರವಾಸದ ವೇಳೆ ಮೀಸಲಾತಿ ಮಿತಿಗೆ ಸಂಬಂಧಿಸಿದಂತೆ ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು.

ಕೊಲ್ಹಾಪುರ ಸಮಾವೇಶವು ಮಹತ್ವದ್ದಾಗಿದೆ. ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯ ಅಭಿಯಾನಕ್ಕೆ ಬಲ ನೀಡಲಿದೆ. ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಪ್ರಯಾಗರಾಜ್, ಲಕ್ನೋ ಮತ್ತು ಪಂಚಕುಲದಲ್ಲಿ ನಡೆಸಿದ ರೀತಿಯ ಕಾರ್ಯಕ್ರಮಗಳಂತೆ ಇದು ಇರಲಿದೆ. ಈಗಿನ ರಾಜ್ಯ ಸರ್ಕಾರದಿಂದಾಗಿ ಕೆಳ ವರ್ಗದ ಜನರ ಪರಿಸ್ಥಿತಿ ಉತ್ತಮವಾಗಿಲ್ಲ. ಹೀಗಾಗಿ ಅವರನ್ನು ಮುಖ್ಯ ವಾಹಿನಿಗೆ ತರುವ ಅಗತ್ಯವಿದೆ ಎಂದು ಎಐಸಿಸಿ ರಾಷ್ಟ್ರೀಯ ಸಂಯೋಜಕ ಕೆ.ರಾಜು ಈಟಿವಿ ಭಾರತ್‌ಗೆ ತಿಳಿಸಿದರು.

ಸಂಸತ್ತಿನ ಚುನಾವಣೆ ವೇಳೆ ಬಿಜೆಪಿ ಪಕ್ಷದಿಂದ ದೂರ ಸರಿದ ದಲಿತ ಮತಬ್ಯಾಂಕ್ ಕಾಂಗ್ರೆಸ್‌ನತ್ತ ಹೊರಳಿದೆ. 48 ಸ್ಥಾನಗಳಲ್ಲಿ 13 ಲೋಕಸಭಾ ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸಮಾಜದ ಹಿಂದುಳಿದ ವರ್ಗವನ್ನು ಸೆಳೆಯಲು ಈ ಕಾರ್ಯಕ್ರಮ ನೆರವಾಗಲಿದೆ ಎಂದರು.

ಇದನ್ನೂ ಓದಿ: 4128 ಶವಗಳ ಚಿತಾಭಸ್ಮ ಗಂಗಾನದಿಯಲ್ಲಿ ವಿಸರ್ಜಿಸಿದ ದೇವೋತ್ಥಾನ ಸೇವಾ ಸಂಸ್ಥೆ - ashes immersed in ganga river

ನವದೆಹಲಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅಕ್ಟೋಬರ್ 5 ರಂದು ಕಾಂಗ್ರೆಸ್​ ಸಾಮಾಜಿಕ ನ್ಯಾಯ ಸಮಾವೇಶವನ್ನು ಹಮ್ಮಿಕೊಂಡಿದೆ. ಇದರಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿ ಭಾಗವಹಿಸಲಿದ್ದು, 'ಸಂವಿಧಾನ ಉಳಿಸಿ' ಅಭಿಯಾನವನ್ನು ಆರಂಭಿಸಲಿದ್ದಾರೆ. ಜೊತೆಗೆ ಈಗಿರುವ ಮೀಸಲಾತಿ ಮಿತಿಯನ್ನು ಶೇಕಡಾ 50 ರಷ್ಟು ಹೆಚ್ಚಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂವಿಧಾನ ಉಳಿಸಿ ಅಭಿಯಾನ?: ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ವಿಧಾನಸಭೆಗೆ ಅಕ್ಟೋಬರ್ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಸಾಮಾಜಿಕ ನ್ಯಾಯ ಸಮಾವೇಶವು ಮಹತ್ವ ಪಡೆದುಕೊಂಡಿದೆ. ಜೊತೆಗೆ ರಾಹುಲ್ ಅವರು ಸಂವಿಧಾನ ಉಳಿಸಿ ಅಭಿಯಾನ ಆರಂಭಿಸುವ ದಿನವೇ ಹರಿಯಾಣದಲ್ಲಿ ಮತದಾನ ನಡೆಯಲಿದೆ.

ಸಾಮಾಜಿಕ ನ್ಯಾಯ ಕಾರ್ಯಕ್ರಮಕ್ಕೆ ಕೊಲ್ಹಾಪುರವನ್ನೇ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ರಾಜ ರಾಜರ್ಷಿ ಛತ್ರಪತಿ ಶಾಹು ಮಹಾರಾಜ್ ಅವರು ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರು. ಹಾಲಿ ಕಾಂಗ್ರೆಸ್ ಸಂಸದರಾಗಿರು ಛತ್ರಪತಿ ಶಾಹು ಮಹಾರಾಜ್​ ಸಾಮಾಜಿಕ ನ್ಯಾಯದ ದೊಡ್ಡ ನಾಯಕ ಎಂದು ಸ್ಥಳೀಯರು ಬಣ್ಣಿಸಿದ್ದಾರೆ. ಹೀಗಾಗಿ ಅವರ ಕ್ಷೇತ್ರವನ್ನೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ.

ದುರ್ಬಲ ವರ್ಗಗಳ ಸಂಕಷ್ಟಗಳ ಕುರಿತು ಮಾತು: ರಾಹುಲ್ ಗಾಂಧಿ ಅವರು ಸಮಾಜದ ದುರ್ಬಲ ವರ್ಗಗಳ ಸಂಕಷ್ಟಗಳ ಕುರಿತು ಮಾತನಾಡಲಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಅಗತ್ಯತೆ ಮತ್ತು ಮೀಸಲಾತಿಯನ್ನು ಶೇಕಡಾ 50 ಕ್ಕೆ ಹೆಚ್ಚಿಸುವ ಬಗ್ಗೆಯೂ ಘೋಷಣೆ ಮಾಡಲಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕ ಪ್ರವಾಸದ ವೇಳೆ ಮೀಸಲಾತಿ ಮಿತಿಗೆ ಸಂಬಂಧಿಸಿದಂತೆ ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು.

ಕೊಲ್ಹಾಪುರ ಸಮಾವೇಶವು ಮಹತ್ವದ್ದಾಗಿದೆ. ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯ ಅಭಿಯಾನಕ್ಕೆ ಬಲ ನೀಡಲಿದೆ. ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಪ್ರಯಾಗರಾಜ್, ಲಕ್ನೋ ಮತ್ತು ಪಂಚಕುಲದಲ್ಲಿ ನಡೆಸಿದ ರೀತಿಯ ಕಾರ್ಯಕ್ರಮಗಳಂತೆ ಇದು ಇರಲಿದೆ. ಈಗಿನ ರಾಜ್ಯ ಸರ್ಕಾರದಿಂದಾಗಿ ಕೆಳ ವರ್ಗದ ಜನರ ಪರಿಸ್ಥಿತಿ ಉತ್ತಮವಾಗಿಲ್ಲ. ಹೀಗಾಗಿ ಅವರನ್ನು ಮುಖ್ಯ ವಾಹಿನಿಗೆ ತರುವ ಅಗತ್ಯವಿದೆ ಎಂದು ಎಐಸಿಸಿ ರಾಷ್ಟ್ರೀಯ ಸಂಯೋಜಕ ಕೆ.ರಾಜು ಈಟಿವಿ ಭಾರತ್‌ಗೆ ತಿಳಿಸಿದರು.

ಸಂಸತ್ತಿನ ಚುನಾವಣೆ ವೇಳೆ ಬಿಜೆಪಿ ಪಕ್ಷದಿಂದ ದೂರ ಸರಿದ ದಲಿತ ಮತಬ್ಯಾಂಕ್ ಕಾಂಗ್ರೆಸ್‌ನತ್ತ ಹೊರಳಿದೆ. 48 ಸ್ಥಾನಗಳಲ್ಲಿ 13 ಲೋಕಸಭಾ ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸಮಾಜದ ಹಿಂದುಳಿದ ವರ್ಗವನ್ನು ಸೆಳೆಯಲು ಈ ಕಾರ್ಯಕ್ರಮ ನೆರವಾಗಲಿದೆ ಎಂದರು.

ಇದನ್ನೂ ಓದಿ: 4128 ಶವಗಳ ಚಿತಾಭಸ್ಮ ಗಂಗಾನದಿಯಲ್ಲಿ ವಿಸರ್ಜಿಸಿದ ದೇವೋತ್ಥಾನ ಸೇವಾ ಸಂಸ್ಥೆ - ashes immersed in ganga river

ETV Bharat Logo

Copyright © 2024 Ushodaya Enterprises Pvt. Ltd., All Rights Reserved.