ETV Bharat / bharat

ಗಾಂಧೀಜಿ-ಶಾಸ್ತ್ರಿ ಜಯಂತಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ​ ಸೇರಿ ಗಣ್ಯರಿಂದ ನಮನ - Mahatma Gandhi Jayanti

author img

By ETV Bharat Karnataka Team

Published : 2 hours ago

ಇಂದು ಗಾಂಧೀಜಿ ಮತ್ತು ಮಾಜಿ ಪ್ರದಾನಿ ಲಾಲ್​ ಬಹದ್ದೂರ್​ ಶಾಸ್ತ್ರಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

TRIBUTES FROM DIGNITARIES  GANDHI JAYANTI  SHASTRI JAYANTI
ರಾಜ್​ಘಾಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ​ ನಮನ (ETV Bharat)

ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಗಾಂಧೀಜಿ ಹಾಗೂ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಗಾಂಧಿ-ಶಾಸ್ತ್ರಿ ಸ್ಮಾರಕಕ್ಕೆ ಗಣ್ಯರು ಭೇಟಿ: ಮಹಾತ್ಮ ಗಾಂಧಿಯವರ 155ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್‌ಘಾಟ್​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ಸತ್ಯ, ಸೌಹಾರ್ದತೆ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ದೇಶದ ಜನತೆಗೆ ಸದಾ ಸ್ಫೂರ್ತಿದಾಯಕವಾಗಿರುತ್ತವೆ ಎಂದು ಮೋದಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ರಾಜ್‌ಘಾಟ್​ನಲ್ಲಿ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಿದರು.

ಜೈ ಜವಾನ್, ಜೈ ಕಿಸಾನ್: ನಂತರ ಪ್ರಧಾನಿ ಮೋದಿ ಅವರು ವಿಜಯಘಾಟ್‌ನಲ್ಲಿ ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದಂದು ಅವರಿಗೆ ನಮನ ಸಲ್ಲಿಸಿದರು. ''ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನೀಡಿದ ಜೈ ಜವಾನ್ ಮತ್ತು ಜೈ ಕಿಸಾನ್ ಘೋಷಣೆ ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ದೇಶದ ಹೆಮ್ಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ'' ಎಂದು ಶ್ಲಾಘಿಸಿದರು.

ಕಾಂಗ್ರೆಸ್ ಸಂಸದ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇತರ ಮುಖಂಡರೊಂದಿಗೆ ರಾಜ್​ಘಾಟ್​​ಗೆ ತೆರಳಿ ಗಾಂಧೀಜಿ ಅವರಿಗೆ ನಮನ ಸಲ್ಲಿಸಿದರು. ಅಲ್ಲದೆ, ಬಳಿಕ ವಿಜಯಘಾಟ್​ನಲ್ಲಿರುವ ಲಾಲ್​ ಬಹದ್ದೂರ್ ಅವರ ಸಮಾಧಿಗೂ ಕೂಡ ರಾಹುಲ್ ಗಾಂಧಿ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಕೆ ಮಾಡಿದರು.

ಜೊತೆಗೆ, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಸಿಎಂ ಅತಿಶಿ ಮತ್ತು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇಂದು ಗಾಂಧಿ ಜಯಂತಿ: ಮಹಾತ್ಮ ಗಾಂಧಿಯವರು ಗುಜರಾತ್‌ನ ಪೋರಬಂದರಿನಲ್ಲಿ 1869ರ ಅಕ್ಟೋಬರ್ 2ರಂದು ಜನಿಸಿದರು. ಅವರ ತಂದೆಯ ಹೆಸರು ಕರಮಚಂದ ಗಾಂಧಿ ಮತ್ತು ತಾಯಿ ಪುತ್ಲಿಬಾಯಿ. ಮಹಾತ್ಮ ಗಾಂಧಿಯವರು ಕಸ್ತೂರಿ ಬಾ ಅವರನ್ನು ವಿವಾಹವಾದರು. ಮಹಾತ್ಮ ಗಾಂಧೀಜಿಯವರ ಜೀವನ ಇಂದಿಗೂ ಜನರಿಗೆ ಮಾದರಿಯಾಗಿದೆ. ಅವರ ಆಲೋಚನೆಗಳಿಂದ ಜನರು ಇನ್ನೂ ಸ್ಫೂರ್ತಿ ಪಡೆದಿದ್ದಾರೆ. ಅಲ್ಲದೆ, ಬ್ರಿಟಿಷರ ಆಡಳಿತದ ವಿರುದ್ಧ ಅವರ ಅಹಿಂಸಾ ಹೋರಾಟ ಇಂದಿಗೂ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ. ಮಹಾನ್ ವ್ಯಕ್ತಿಯ 155ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ.

ಮಾಜಿ ಪ್ರಧಾನಿ ಜನ್ಮದಿನ: ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಚಿಕ್ಕ ನಿಲುವು ಮತ್ತು ಅತ್ಯಂತ ಉನ್ನತ ಆಲೋಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವು ಗಾಂಧೀಜಿಯವರ ಜನ್ಮದಿನದಂದು ಅಂದರೆ ಅಕ್ಟೋಬರ್ 2ರಂದು ಬರುತ್ತದೆ. ರಷ್ಯಾದ ತಾಷ್ಕೆಂಟ್‌ನಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ಶಾಂತಿ ಮಾತುಕತೆ ಪ್ರವಾಸದ ವೇಳೆ ಶಾಸ್ತ್ರಿ ಅವರು ನಿಧನರಾದರು.

ಓದಿ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತ ಮುಕ್ತಾಯ; ಒಂದೇ ಒಂದು ಕಡೆ ಮರು ಮತದಾನ ಇಲ್ಲ - Jammu Kashmir Assembly Polls

ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಗಾಂಧೀಜಿ ಹಾಗೂ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಗಾಂಧಿ-ಶಾಸ್ತ್ರಿ ಸ್ಮಾರಕಕ್ಕೆ ಗಣ್ಯರು ಭೇಟಿ: ಮಹಾತ್ಮ ಗಾಂಧಿಯವರ 155ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್‌ಘಾಟ್​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ಸತ್ಯ, ಸೌಹಾರ್ದತೆ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ದೇಶದ ಜನತೆಗೆ ಸದಾ ಸ್ಫೂರ್ತಿದಾಯಕವಾಗಿರುತ್ತವೆ ಎಂದು ಮೋದಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ರಾಜ್‌ಘಾಟ್​ನಲ್ಲಿ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಿದರು.

ಜೈ ಜವಾನ್, ಜೈ ಕಿಸಾನ್: ನಂತರ ಪ್ರಧಾನಿ ಮೋದಿ ಅವರು ವಿಜಯಘಾಟ್‌ನಲ್ಲಿ ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದಂದು ಅವರಿಗೆ ನಮನ ಸಲ್ಲಿಸಿದರು. ''ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನೀಡಿದ ಜೈ ಜವಾನ್ ಮತ್ತು ಜೈ ಕಿಸಾನ್ ಘೋಷಣೆ ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ದೇಶದ ಹೆಮ್ಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ'' ಎಂದು ಶ್ಲಾಘಿಸಿದರು.

ಕಾಂಗ್ರೆಸ್ ಸಂಸದ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇತರ ಮುಖಂಡರೊಂದಿಗೆ ರಾಜ್​ಘಾಟ್​​ಗೆ ತೆರಳಿ ಗಾಂಧೀಜಿ ಅವರಿಗೆ ನಮನ ಸಲ್ಲಿಸಿದರು. ಅಲ್ಲದೆ, ಬಳಿಕ ವಿಜಯಘಾಟ್​ನಲ್ಲಿರುವ ಲಾಲ್​ ಬಹದ್ದೂರ್ ಅವರ ಸಮಾಧಿಗೂ ಕೂಡ ರಾಹುಲ್ ಗಾಂಧಿ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಕೆ ಮಾಡಿದರು.

ಜೊತೆಗೆ, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಸಿಎಂ ಅತಿಶಿ ಮತ್ತು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇಂದು ಗಾಂಧಿ ಜಯಂತಿ: ಮಹಾತ್ಮ ಗಾಂಧಿಯವರು ಗುಜರಾತ್‌ನ ಪೋರಬಂದರಿನಲ್ಲಿ 1869ರ ಅಕ್ಟೋಬರ್ 2ರಂದು ಜನಿಸಿದರು. ಅವರ ತಂದೆಯ ಹೆಸರು ಕರಮಚಂದ ಗಾಂಧಿ ಮತ್ತು ತಾಯಿ ಪುತ್ಲಿಬಾಯಿ. ಮಹಾತ್ಮ ಗಾಂಧಿಯವರು ಕಸ್ತೂರಿ ಬಾ ಅವರನ್ನು ವಿವಾಹವಾದರು. ಮಹಾತ್ಮ ಗಾಂಧೀಜಿಯವರ ಜೀವನ ಇಂದಿಗೂ ಜನರಿಗೆ ಮಾದರಿಯಾಗಿದೆ. ಅವರ ಆಲೋಚನೆಗಳಿಂದ ಜನರು ಇನ್ನೂ ಸ್ಫೂರ್ತಿ ಪಡೆದಿದ್ದಾರೆ. ಅಲ್ಲದೆ, ಬ್ರಿಟಿಷರ ಆಡಳಿತದ ವಿರುದ್ಧ ಅವರ ಅಹಿಂಸಾ ಹೋರಾಟ ಇಂದಿಗೂ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ. ಮಹಾನ್ ವ್ಯಕ್ತಿಯ 155ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ.

ಮಾಜಿ ಪ್ರಧಾನಿ ಜನ್ಮದಿನ: ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಚಿಕ್ಕ ನಿಲುವು ಮತ್ತು ಅತ್ಯಂತ ಉನ್ನತ ಆಲೋಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವು ಗಾಂಧೀಜಿಯವರ ಜನ್ಮದಿನದಂದು ಅಂದರೆ ಅಕ್ಟೋಬರ್ 2ರಂದು ಬರುತ್ತದೆ. ರಷ್ಯಾದ ತಾಷ್ಕೆಂಟ್‌ನಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ಶಾಂತಿ ಮಾತುಕತೆ ಪ್ರವಾಸದ ವೇಳೆ ಶಾಸ್ತ್ರಿ ಅವರು ನಿಧನರಾದರು.

ಓದಿ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತ ಮುಕ್ತಾಯ; ಒಂದೇ ಒಂದು ಕಡೆ ಮರು ಮತದಾನ ಇಲ್ಲ - Jammu Kashmir Assembly Polls

ETV Bharat Logo

Copyright © 2024 Ushodaya Enterprises Pvt. Ltd., All Rights Reserved.