ETV Bharat / bharat

ಮಣಿಪುರ: 16 ದುಷ್ಕರ್ಮಿಗಳ ಬಂಧನ, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ - MANIPUR

ಮಣಿಪುರದಲ್ಲಿ ಶಸ್ತ್ರಸಜ್ಜಿತ 16 ದುಷ್ಕರ್ಮಿಗಳನ್ನು ಬಂಧಿಸಲಾಗಿದೆ.

ಮಣಿಪುರ: 16 ದುಷ್ಕರ್ಮಿಗಳ ಬಂಧನ, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ
ಮಣಿಪುರ: 16 ದುಷ್ಕರ್ಮಿಗಳ ಬಂಧನ, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ (ians)
author img

By ETV Bharat Karnataka Team

Published : Feb 16, 2025, 5:42 PM IST

ನವದೆಹಲಿ: ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಗಳ ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಮಣಿಪುರದಲ್ಲಿ ಹದಿನಾರು ಸಶಸ್ತ್ರ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಸೇನೆ ರವಿವಾರ ತಿಳಿಸಿದೆ. ಬಂಧಿತರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 14 ರಿಂದ 15 ರವರೆಗೆ ಮಣಿಪುರ ಪೊಲೀಸರ ಸಮನ್ವಯದೊಂದಿಗೆ ಚುರಾಚಂದ್ ಪುರ, ತೌಬಾಲ್, ತೆಂಗ್ನೌಪಾಲ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಡ್ರೋನ್​ಗಳು ಮತ್ತು ಸ್ಫೋಟಕ ಪತ್ತೆ ನಾಯಿಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯದ (ಸೇನೆ) ಸಮಗ್ರ ಪ್ರಧಾನ ಕಚೇರಿಯ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶಕರು ಸಾಮಾಜಿಕ ಮಾಧ್ಯಮದ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಣಿಪುರದ ಗುಡ್ಡಗಾಡು ಮತ್ತು ಕಣಿವೆ ಮೂಲದ ಸಂಘಟನೆಗಳ 16 ಕಾರ್ಯಕರ್ತರನ್ನು ಬಂಧಿಸಲಾಗಿದೆ ಮತ್ತು ಅವರಿಂದ ಸ್ವಯಂಚಾಲಿತ, ಅಸಾಲ್ಟ್ ರೈಫಲ್​, ಪಿಸ್ತೂಲ್, ಸಿಂಗಲ್ ಬ್ಯಾರೆಲ್ ರೈಫಲ್, ಐಇಡಿ, ಗ್ರೆನೇಡ್, ಮದ್ದುಗುಂಡುಗಳು ಮತ್ತು ಯುದ್ಧದಲ್ಲಿ ಬಳಸಲಾಗುವ ಶಸ್ತ್ರಾಸ್ತ್ರ ಒಳಗೊಂಡಂತೆ ಒಂಬತ್ತು ರೀತಿಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳನ್ನು ಮಣಿಪುರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸೇನೆ ತಿಳಿಸಿದೆ.

ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ, ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವಲ್ಲಿ ಹಾಗೂ ರಾಜ್ಯದ ನಾಗರಿಕರ ಸುರಕ್ಷತೆಗಾಗಿ ಭದ್ರತಾ ಪಡೆಗಳು ನಡೆಸಿದ ಈ ಕಾರ್ಯಾಚರಣೆಯನ್ನು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಶನಿವಾರ ಶ್ಲಾಘಿಸಿದ್ದಾರೆ. ರಾಜಭವನದಲ್ಲಿ ನಡೆದ 'ರಾಜ್ಯಪಾಲರ ಘಟಕ ಪ್ರಶಸ್ತಿ ಪತ್ರ 2025' ರ ವಾರ್ಷಿಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರು, ಭದ್ರತಾ ಪಡೆಗಳ ಶೌರ್ಯ, ವೃತ್ತಿಪರತೆ ಮತ್ತು ಕರ್ತವ್ಯ ಬದ್ಧತೆಯು ಜನರ ಮೆಚ್ಚುಗೆಯನ್ನು ಗಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ : ದೇಶದ ಜವಾಬ್ದಾರಿಯುತ ಹಿಂದೂ ಸಮಾಜದಲ್ಲಿ ಒಗ್ಗಟ್ಟು ಅಗತ್ಯ; ಆರ್​ಎಸ್​ಎಸ್​ ಮುಖ್ಯಸ್ಥ ಭಾಗವತ್ - RSS PROGRAMME

ನವದೆಹಲಿ: ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಗಳ ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಮಣಿಪುರದಲ್ಲಿ ಹದಿನಾರು ಸಶಸ್ತ್ರ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಸೇನೆ ರವಿವಾರ ತಿಳಿಸಿದೆ. ಬಂಧಿತರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 14 ರಿಂದ 15 ರವರೆಗೆ ಮಣಿಪುರ ಪೊಲೀಸರ ಸಮನ್ವಯದೊಂದಿಗೆ ಚುರಾಚಂದ್ ಪುರ, ತೌಬಾಲ್, ತೆಂಗ್ನೌಪಾಲ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಡ್ರೋನ್​ಗಳು ಮತ್ತು ಸ್ಫೋಟಕ ಪತ್ತೆ ನಾಯಿಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯದ (ಸೇನೆ) ಸಮಗ್ರ ಪ್ರಧಾನ ಕಚೇರಿಯ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶಕರು ಸಾಮಾಜಿಕ ಮಾಧ್ಯಮದ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಣಿಪುರದ ಗುಡ್ಡಗಾಡು ಮತ್ತು ಕಣಿವೆ ಮೂಲದ ಸಂಘಟನೆಗಳ 16 ಕಾರ್ಯಕರ್ತರನ್ನು ಬಂಧಿಸಲಾಗಿದೆ ಮತ್ತು ಅವರಿಂದ ಸ್ವಯಂಚಾಲಿತ, ಅಸಾಲ್ಟ್ ರೈಫಲ್​, ಪಿಸ್ತೂಲ್, ಸಿಂಗಲ್ ಬ್ಯಾರೆಲ್ ರೈಫಲ್, ಐಇಡಿ, ಗ್ರೆನೇಡ್, ಮದ್ದುಗುಂಡುಗಳು ಮತ್ತು ಯುದ್ಧದಲ್ಲಿ ಬಳಸಲಾಗುವ ಶಸ್ತ್ರಾಸ್ತ್ರ ಒಳಗೊಂಡಂತೆ ಒಂಬತ್ತು ರೀತಿಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳನ್ನು ಮಣಿಪುರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸೇನೆ ತಿಳಿಸಿದೆ.

ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ, ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವಲ್ಲಿ ಹಾಗೂ ರಾಜ್ಯದ ನಾಗರಿಕರ ಸುರಕ್ಷತೆಗಾಗಿ ಭದ್ರತಾ ಪಡೆಗಳು ನಡೆಸಿದ ಈ ಕಾರ್ಯಾಚರಣೆಯನ್ನು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಶನಿವಾರ ಶ್ಲಾಘಿಸಿದ್ದಾರೆ. ರಾಜಭವನದಲ್ಲಿ ನಡೆದ 'ರಾಜ್ಯಪಾಲರ ಘಟಕ ಪ್ರಶಸ್ತಿ ಪತ್ರ 2025' ರ ವಾರ್ಷಿಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರು, ಭದ್ರತಾ ಪಡೆಗಳ ಶೌರ್ಯ, ವೃತ್ತಿಪರತೆ ಮತ್ತು ಕರ್ತವ್ಯ ಬದ್ಧತೆಯು ಜನರ ಮೆಚ್ಚುಗೆಯನ್ನು ಗಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ : ದೇಶದ ಜವಾಬ್ದಾರಿಯುತ ಹಿಂದೂ ಸಮಾಜದಲ್ಲಿ ಒಗ್ಗಟ್ಟು ಅಗತ್ಯ; ಆರ್​ಎಸ್​ಎಸ್​ ಮುಖ್ಯಸ್ಥ ಭಾಗವತ್ - RSS PROGRAMME

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.