ETV Bharat / bharat

ಫರ್ನಿಚರ್​ ಗೋದಾಮಿಗೆ ಬೆಂಕಿ; ತಂದೆ-ಮಗಳು ಸಾವು, ಇಬ್ಬರ ಸ್ಥಿತಿ ಚಿಂತಾಜನಕ - FIRE ACCIDENT

author img

By ETV Bharat Karnataka Team

Published : Jul 24, 2024, 12:41 PM IST

Fire Accident In Hyderabad: ಹೈದರಾಬಾದ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಫರ್ನಿಚರ್​ ಗೋದಾಮಿಗೆ ಬೆಂಕಿ ತಗುಲಿ ತಂದೆ ಮತ್ತು ಮಗಳು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಗೋದಾಮಿನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

MASSIVE FIRE IN JIYAGUDA  HYDERABAD OLD CITY FIRE INCIDENT  FATHER DAUGHTER DIED
ಫರ್ನಿಚರ್​ ಗೋದಾಮಿಗೆ ಬೆಂಕಿ (ETV Bharat)

ಹೈದರಾಬಾದ್​ (ತೆಲಂಗಾಣ): ಹೈದರಾಬಾದ್​ನಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಯಾಗುಡದ ವೆಂಕಟೇಶ್ವರ ನಗರದಲ್ಲಿರುವ ಫರ್ನಿಚರ್ ಮತ್ತು ರೆಗ್ಗೆನ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಒಟ್ಟು 20 ಮಂದಿ ಸಿಲುಕಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಇನ್ನು ಒಂದೇ ಕುಟುಂಬದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Furniture Godown Fire Accident in Hyderabad: ತೆಲಂಗಾಣ ರಾಜ್ಯ ರಾಜಧಾನಿ ಹೈದರಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕುಲ್ಸುಂಪುರ ಜಿಯಾಗುಡಾದ ವೆಂಕಟೇಶ್ವರ ನಗರದಲ್ಲಿ ಪೀಠೋಪಕರಣ ತಯಾರಿಕಾ ಗೋದಾಮಿನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಸುಮಾರು 20 ಕಾರ್ಮಿಕರು ಸಿಲುಕಿದ್ದು, ಅವರನ್ನು ಅಗ್ನಿಶಾಮಕ ಸಿಬ್ಬಂದಿ ಏಣಿ ಬಳಸಿ ಕೆಳಕ್ಕೆ ಇಳಿಸಿದ್ದಾರೆ. ಆದರೆ ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಂದೆ ಮತ್ತು ಮಗಳು ಮೃತಪಟ್ಟಿದ್ದು, ಮತ್ತೊಂದು ಕುಟುಂಬದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮೃತರನ್ನು ಶ್ರೀನಿವಾಸ್ ಮತ್ತು ಶಿವಪ್ರಿಯಾ ಎಂದು ಪೊಲೀಸರು ಗುರುತಿಸಿದ್ದಾರೆ.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 10 ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಳ ಮಹಡಿಯಿಂದ ಮೇಲಿನ ಭಾಗಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕಿಸಿದ್ದಾರೆ.

ಆದರೂ ಗೋದಾಮಿನಲ್ಲಿ ಯಾವುದೇ ಅಗ್ನಿಶಾಮಕ ಸುರಕ್ಷತೆಯ ಮಾನದಂಡಗಳನ್ನು ಅನುಸರಿಸದಿರುವುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಸದ್ಯ ಬೆಂಕಿ ನಿಯಂತ್ರಣದಲ್ಲಿದೆ. ಗಾಯಗೊಂಡವರೆಲ್ಲರೂ ಬೇರೆ ರಾಜ್ಯದವರು. ಬೆಂಕಿಯನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಗೋದಾಮು ಸಂಪೂರ್ಣವಾಗಿ ನಿಯಮಗಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿ ವೇಳೆ ಗೋದಾಮಿನಲ್ಲಿ ಇಷ್ಟೊಂದು ಮಂದಿ ಇರುವುದೇಕೆ ಎಂದು ತನಿಖೆ ನಡೆಸುತ್ತಿದ್ದಾರೆ. ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ರಾತ್ರಿ ವೇಳೆ 20 ಮಂದಿ ನೌಕರರು ಕೆಲಸ ಮಾಡುತ್ತಿದ್ದರೂ ಸಮರ್ಪಕ ವ್ಯವಸ್ಥೆ ಇಲ್ಲದಿರುವುದನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪತ್ತೆ ಹಚ್ಚಿದರು. ತನಿಖೆಯ ನಂತರ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ಒಂದು ಗಂಟೆಯ ಹೊತ್ತಿಗೆ ಹೊಗೆ ಹೊರಬಿತ್ತು. ತಕ್ಷಣ ಎಚ್ಚೆತ್ತ ನಾವು ಸ್ಥಳೀಯರ ಸಹಾಯಕ್ಕಾಗಿ ಕೂಗಿಕೊಂಡೆವು. ಅಕ್ಕಪಕ್ಕದ ಜನ ಬಂದು ಸೀರೆಯಿಂದ ಕೆಳಗೆ ಇಳಿಸಿದರು. ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತು. ಇಲ್ಲಿ ಪರವಾನಿಗೆ ಇಲ್ಲದೆ ಗೋದಾಮುಗಳನ್ನು ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಹಲವು ಬಾರಿ ಹೋರಾಟಗಳು ನಡೆದಿವೆ. ಆದರೂ ಗೋದಾಮುಗಳ ನಿರ್ವಹಣೆ ಮಾಡಲಾಗುತ್ತಿದೆ ಎಂದು ಬೆಂಕಿ ಅವಘಡದಿಂದ ಪಾರಾದ ಸಂತ್ರಸ್ತರು ಹೇಳಿದ್ದಾರೆ.

ಓದಿ: ಕರೀಂಗಂಜ್‌ನಲ್ಲಿ ಆಟೋ ರಿಕ್ಷಾ , ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; 6 ​​ಮಂದಿ ಸಾವು - Auto Rickshaw and Car accident

ಹೈದರಾಬಾದ್​ (ತೆಲಂಗಾಣ): ಹೈದರಾಬಾದ್​ನಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಯಾಗುಡದ ವೆಂಕಟೇಶ್ವರ ನಗರದಲ್ಲಿರುವ ಫರ್ನಿಚರ್ ಮತ್ತು ರೆಗ್ಗೆನ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಒಟ್ಟು 20 ಮಂದಿ ಸಿಲುಕಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಇನ್ನು ಒಂದೇ ಕುಟುಂಬದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Furniture Godown Fire Accident in Hyderabad: ತೆಲಂಗಾಣ ರಾಜ್ಯ ರಾಜಧಾನಿ ಹೈದರಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕುಲ್ಸುಂಪುರ ಜಿಯಾಗುಡಾದ ವೆಂಕಟೇಶ್ವರ ನಗರದಲ್ಲಿ ಪೀಠೋಪಕರಣ ತಯಾರಿಕಾ ಗೋದಾಮಿನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಸುಮಾರು 20 ಕಾರ್ಮಿಕರು ಸಿಲುಕಿದ್ದು, ಅವರನ್ನು ಅಗ್ನಿಶಾಮಕ ಸಿಬ್ಬಂದಿ ಏಣಿ ಬಳಸಿ ಕೆಳಕ್ಕೆ ಇಳಿಸಿದ್ದಾರೆ. ಆದರೆ ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಂದೆ ಮತ್ತು ಮಗಳು ಮೃತಪಟ್ಟಿದ್ದು, ಮತ್ತೊಂದು ಕುಟುಂಬದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮೃತರನ್ನು ಶ್ರೀನಿವಾಸ್ ಮತ್ತು ಶಿವಪ್ರಿಯಾ ಎಂದು ಪೊಲೀಸರು ಗುರುತಿಸಿದ್ದಾರೆ.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 10 ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಳ ಮಹಡಿಯಿಂದ ಮೇಲಿನ ಭಾಗಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕಿಸಿದ್ದಾರೆ.

ಆದರೂ ಗೋದಾಮಿನಲ್ಲಿ ಯಾವುದೇ ಅಗ್ನಿಶಾಮಕ ಸುರಕ್ಷತೆಯ ಮಾನದಂಡಗಳನ್ನು ಅನುಸರಿಸದಿರುವುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಸದ್ಯ ಬೆಂಕಿ ನಿಯಂತ್ರಣದಲ್ಲಿದೆ. ಗಾಯಗೊಂಡವರೆಲ್ಲರೂ ಬೇರೆ ರಾಜ್ಯದವರು. ಬೆಂಕಿಯನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಗೋದಾಮು ಸಂಪೂರ್ಣವಾಗಿ ನಿಯಮಗಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿ ವೇಳೆ ಗೋದಾಮಿನಲ್ಲಿ ಇಷ್ಟೊಂದು ಮಂದಿ ಇರುವುದೇಕೆ ಎಂದು ತನಿಖೆ ನಡೆಸುತ್ತಿದ್ದಾರೆ. ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ರಾತ್ರಿ ವೇಳೆ 20 ಮಂದಿ ನೌಕರರು ಕೆಲಸ ಮಾಡುತ್ತಿದ್ದರೂ ಸಮರ್ಪಕ ವ್ಯವಸ್ಥೆ ಇಲ್ಲದಿರುವುದನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪತ್ತೆ ಹಚ್ಚಿದರು. ತನಿಖೆಯ ನಂತರ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ಒಂದು ಗಂಟೆಯ ಹೊತ್ತಿಗೆ ಹೊಗೆ ಹೊರಬಿತ್ತು. ತಕ್ಷಣ ಎಚ್ಚೆತ್ತ ನಾವು ಸ್ಥಳೀಯರ ಸಹಾಯಕ್ಕಾಗಿ ಕೂಗಿಕೊಂಡೆವು. ಅಕ್ಕಪಕ್ಕದ ಜನ ಬಂದು ಸೀರೆಯಿಂದ ಕೆಳಗೆ ಇಳಿಸಿದರು. ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತು. ಇಲ್ಲಿ ಪರವಾನಿಗೆ ಇಲ್ಲದೆ ಗೋದಾಮುಗಳನ್ನು ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಹಲವು ಬಾರಿ ಹೋರಾಟಗಳು ನಡೆದಿವೆ. ಆದರೂ ಗೋದಾಮುಗಳ ನಿರ್ವಹಣೆ ಮಾಡಲಾಗುತ್ತಿದೆ ಎಂದು ಬೆಂಕಿ ಅವಘಡದಿಂದ ಪಾರಾದ ಸಂತ್ರಸ್ತರು ಹೇಳಿದ್ದಾರೆ.

ಓದಿ: ಕರೀಂಗಂಜ್‌ನಲ್ಲಿ ಆಟೋ ರಿಕ್ಷಾ , ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; 6 ​​ಮಂದಿ ಸಾವು - Auto Rickshaw and Car accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.