ETV Bharat / bharat

ಮಹಾಪ್ರಸಾದ ಸೇವಿಸಿದ ಸಾವಿರಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

author img

By ETV Bharat Karnataka Team

Published : Feb 7, 2024, 1:05 PM IST

ನಾಂದೇಡ್‌ನಲ್ಲಿ ವಿಷಪೂರಿತ ಮಹಾಪ್ರಸಾದ ಸೇವಿಸಿ 1000 ಭಕ್ತರು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಅಸ್ವಸ್ಥಗೊಂಡ ಭಕ್ತರು
ಅಸ್ವಸ್ಥಗೊಂಡ ಭಕ್ತರು

ನಾಂದೇಡ್ (ಮಹಾರಾಷ್ಟ್ರ): ನಾಂದೇಡ್​​ನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಭಕ್ತರು ವಿಷಪೂರಿತ ಮಹಾಪ್ರಸಾದ ಸೇವಿಸಿದ ಆಘಾತಕಾರಿ ಘಟನೆ ನಡೆದಿದೆ. ಲೋಹಾ ತಾಲೂಕಿನ ಕೋಷ್ಟವಾಡಿ ಗ್ರಾಮದಲ್ಲಿ ಸಂತ ಬಾಳುಮಾಮರ ಧಾರ್ಮಿಕ ಕಾರ್ಯಕ್ರಮವಾದ ಪಲ್ಲಕಿ ಉತ್ಸವದಲ್ಲಿ ಮಂಗಳವಾರ ಈ ದುರಂತ ಸಂಭವಿಸಿದೆ. ಅಸ್ವಸ್ಥಗೊಂಡ ಎಲ್ಲ ಭಕ್ತರನ್ನು ರಾತ್ರಿಯೇ ನಾಂದೇಡ್‌ನ ಲೋಹಾ ಸರ್ಕಾರಿ ಆಸ್ಪತ್ರೆ ಸೇರಿದಂತೆ ಸ್ಥಳೀಯ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಆಯಾ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.

ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ವಿಷ: ಪ್ರತಿವರ್ಷದಂತೆ ಈ ವರ್ಷವೂ ಕೋಷ್ಟವಾಡಿ ಗ್ರಾಮದಲ್ಲಿ ಪವಾಡ ಪುರುಷ ಬಾಳುಮಾಮ ಅವರ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ಬಂದ ಭಕ್ತರಿಗೆ ಭಗರ್ ಎಂಬ ಮಹಾಪ್ರಸಾದ ಏರ್ಪಡಿಸಲಾಗಿತ್ತು. ಆದರೆ, ಈ ಮಹಾಪ್ರಸಾದ ಸೇವಿಸಿದ ಸಾವಿರಕ್ಕೂ ಹೆಚ್ಚು ಭಕ್ತರಲ್ಲಿ ವಾಂತಿ - ಭೇದಿ ಕಾಣಿಸಿಕೊಂಡಿತ್ತು.

ರೋಗಿಗಳ ಸ್ಥಿತಿ ಸ್ಥಿರ: ಅಸ್ವಸ್ಥಗೊಂಡವರನ್ನು ತಕ್ಷಣ ಲೋಹಾ ಸರ್ಕಾರಿ ಆಸ್ಪತ್ರೆ, ಗ್ರಾಮಾಂತರ ಆಸ್ಪತ್ರೆ, ಲಾತೂರ್​ನ ಅಹಮದ್‌ಪುರದ ಆಸ್ಪತ್ರೆ, ಗುರು ಗೋಬಿಂದ್ ಸಿಂಗ್ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಪೂರಿತ ಮಹಾಪ್ರಸಾದ ಸೇವನೆಯಿಂದ ಭಕ್ತರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ನೀಲಕಂಠ ಭೋಸಿಕರ್ ತಿಳಿಸಿದ್ದಾರೆ.

ರಾತ್ರಿ ಮೂರರ ನಂತರ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಸರ್ಕಾರಿ ಆಸ್ಪತ್ರೆಯ ಎಮರ್ಜೆನ್ಸಿ ಬೆಲ್ ಬಾರಿಸಲಾಯಿತು. ತಕ್ಷಣ ವೈದ್ಯರು ಆಸ್ಪತ್ರೆಗೆ ಆಗಮಿಸಿದರು. ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲ ಭಕ್ತರ ಆರೋಗ್ಯ ಸ್ಥಿರವಾಗಿದೆ ಎಂದು ಡಾ. ಭೋಸಿಕರ್ ತಿಳಿಸಿದ್ದಾರೆ.

ಭಕ್ತರ ಆರೋಗ್ಯ ವಿಚಾರಿಸಿದ ಚವ್ಹಾಣ್: ಕಾಂಗ್ರೆಸ್ ನಾಯಕ ಅಶೋಕ್ ಚವ್ಹಾಣ್​ ಅವರು ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಳುಮಾಮ ಯಾತ್ರೆ ಉತ್ಸವದಲ್ಲಿ ಭಕ್ತರು ವಿಷಪೂರಿತ ಮಹಾಪ್ರಸಾದ ಸೇವಿಸಿದ ಘಟನೆ ನಡೆದಿದೆ. ವೈದ್ಯರಿಂದ ಮಾಹಿತಿ ಪಡೆದಿರುವೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ. ನಾನು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸಿದೆ. ಅಲ್ಲದೇ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪತ್ನಿ ಮೇಲಿನ ಕೋಪಕ್ಕೆ ಮಗನಿ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: 3 ವರ್ಷದ ಬಾಲಕ ಸಾವು

ನಾಂದೇಡ್ (ಮಹಾರಾಷ್ಟ್ರ): ನಾಂದೇಡ್​​ನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಭಕ್ತರು ವಿಷಪೂರಿತ ಮಹಾಪ್ರಸಾದ ಸೇವಿಸಿದ ಆಘಾತಕಾರಿ ಘಟನೆ ನಡೆದಿದೆ. ಲೋಹಾ ತಾಲೂಕಿನ ಕೋಷ್ಟವಾಡಿ ಗ್ರಾಮದಲ್ಲಿ ಸಂತ ಬಾಳುಮಾಮರ ಧಾರ್ಮಿಕ ಕಾರ್ಯಕ್ರಮವಾದ ಪಲ್ಲಕಿ ಉತ್ಸವದಲ್ಲಿ ಮಂಗಳವಾರ ಈ ದುರಂತ ಸಂಭವಿಸಿದೆ. ಅಸ್ವಸ್ಥಗೊಂಡ ಎಲ್ಲ ಭಕ್ತರನ್ನು ರಾತ್ರಿಯೇ ನಾಂದೇಡ್‌ನ ಲೋಹಾ ಸರ್ಕಾರಿ ಆಸ್ಪತ್ರೆ ಸೇರಿದಂತೆ ಸ್ಥಳೀಯ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಆಯಾ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.

ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ವಿಷ: ಪ್ರತಿವರ್ಷದಂತೆ ಈ ವರ್ಷವೂ ಕೋಷ್ಟವಾಡಿ ಗ್ರಾಮದಲ್ಲಿ ಪವಾಡ ಪುರುಷ ಬಾಳುಮಾಮ ಅವರ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ಬಂದ ಭಕ್ತರಿಗೆ ಭಗರ್ ಎಂಬ ಮಹಾಪ್ರಸಾದ ಏರ್ಪಡಿಸಲಾಗಿತ್ತು. ಆದರೆ, ಈ ಮಹಾಪ್ರಸಾದ ಸೇವಿಸಿದ ಸಾವಿರಕ್ಕೂ ಹೆಚ್ಚು ಭಕ್ತರಲ್ಲಿ ವಾಂತಿ - ಭೇದಿ ಕಾಣಿಸಿಕೊಂಡಿತ್ತು.

ರೋಗಿಗಳ ಸ್ಥಿತಿ ಸ್ಥಿರ: ಅಸ್ವಸ್ಥಗೊಂಡವರನ್ನು ತಕ್ಷಣ ಲೋಹಾ ಸರ್ಕಾರಿ ಆಸ್ಪತ್ರೆ, ಗ್ರಾಮಾಂತರ ಆಸ್ಪತ್ರೆ, ಲಾತೂರ್​ನ ಅಹಮದ್‌ಪುರದ ಆಸ್ಪತ್ರೆ, ಗುರು ಗೋಬಿಂದ್ ಸಿಂಗ್ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಪೂರಿತ ಮಹಾಪ್ರಸಾದ ಸೇವನೆಯಿಂದ ಭಕ್ತರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ನೀಲಕಂಠ ಭೋಸಿಕರ್ ತಿಳಿಸಿದ್ದಾರೆ.

ರಾತ್ರಿ ಮೂರರ ನಂತರ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಸರ್ಕಾರಿ ಆಸ್ಪತ್ರೆಯ ಎಮರ್ಜೆನ್ಸಿ ಬೆಲ್ ಬಾರಿಸಲಾಯಿತು. ತಕ್ಷಣ ವೈದ್ಯರು ಆಸ್ಪತ್ರೆಗೆ ಆಗಮಿಸಿದರು. ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲ ಭಕ್ತರ ಆರೋಗ್ಯ ಸ್ಥಿರವಾಗಿದೆ ಎಂದು ಡಾ. ಭೋಸಿಕರ್ ತಿಳಿಸಿದ್ದಾರೆ.

ಭಕ್ತರ ಆರೋಗ್ಯ ವಿಚಾರಿಸಿದ ಚವ್ಹಾಣ್: ಕಾಂಗ್ರೆಸ್ ನಾಯಕ ಅಶೋಕ್ ಚವ್ಹಾಣ್​ ಅವರು ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಳುಮಾಮ ಯಾತ್ರೆ ಉತ್ಸವದಲ್ಲಿ ಭಕ್ತರು ವಿಷಪೂರಿತ ಮಹಾಪ್ರಸಾದ ಸೇವಿಸಿದ ಘಟನೆ ನಡೆದಿದೆ. ವೈದ್ಯರಿಂದ ಮಾಹಿತಿ ಪಡೆದಿರುವೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ. ನಾನು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸಿದೆ. ಅಲ್ಲದೇ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪತ್ನಿ ಮೇಲಿನ ಕೋಪಕ್ಕೆ ಮಗನಿ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: 3 ವರ್ಷದ ಬಾಲಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.