ETV Bharat / bharat

ಜಮ್ಮು- ಕಾಶ್ಮೀರದ ನೂತನ ಸಿಎಂ ಒಮರ್ ಅಬ್ದುಲ್ಲಾ: ಫಾರೂಕ್ ಅಬ್ದುಲ್ಲಾ ಘೋಷಣೆ

ಕಾಂಗ್ರೆಸ್​ ಮತ್ತು ನ್ಯಾಷನಲ್​​ ಕಾನ್ಫ್​​ರೆನ್ಸ್​ ಮೈತ್ರಿಕೂಟ ಜಮ್ಮು- ಕಾಶ್ಮೀರದಲ್ಲಿ ಅಧಿಕಾರದ ಗದ್ದುಗೆಗೇರಲು ಸಜ್ಜಾಗಿದೆ. ಫಲಿತಾಂಶ ಪ್ರಕಟಕ್ಕೂ ಮೊದಲೇ ನೂತನ ಸಿಎಂ ಯಾರೆಂಬುದನ್ನು ಘೋಷಿಸಲಾಗಿದೆ.

author img

By PTI

Published : 3 hours ago

Omar will be chief minister
ಒಮರ್ ಅಬ್ದುಲ್ಲಾ (ETV Bharat)

ಶ್ರೀನಗರ: ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ನ್ಯಾಷನಲ್​ ಕಾನ್ಫ್​ರೆನ್ಸ್​ ಮತ್ತು ಕಾಂಗ್ರೆಸ್​ ಮೈತ್ರಿ ಬಹುಮತದತ್ತ ದಾಪುಗಾಲಿಡುತ್ತಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸ್ಪಷ್ಟ ಬಹುಮತದ ನಿರೀಕ್ಷೆಯಲ್ಲಿರುವ ನ್ಯಾಷನಲ್​​ ಕಾನ್ಫ್​​ರೆನ್ಸ್​ 'ಮುಂದಿನ ಸಿಎಂ ಒಮರ್​ ಅಬ್ದುಲ್ಲಾ' ಎಂದು ಘೋಷಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎನ್​ಸಿ ಪಕ್ಷದ ನೇತಾರ ಫಾರೂಕ್​ ಅಬ್ದುಲ್ಲಾ, 370ನೇ ವಿಧಿ ರದ್ದತಿಯ ವಿರುದ್ಧ ಕಣಿವೆಯ ಜನರು ಮತ ಹಾಕಿದ್ದಾರೆ ಎಂಬುದಕ್ಕೆ ಈ ತೀರ್ಪು ಸಾಕ್ಷಿ ಎಂದು ಹೇಳಿದರು.

ಮೈತ್ರಿಕೂಟದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಮಿತ್ರ ಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಎನ್​​ಸಿ ಅಧಿಕಾರಕ್ಕೆ ಬರಲಿದೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ 2019ರ ಆಗಸ್ಟ್ 5ರಂದು 370ನೇ ವಿಧಿಯ ರದ್ದು ಮಾಡಿದ್ದು ಸರಿಯಲ್ಲ ಎಂಬುದನ್ನು ಈ ತೀರ್ಪು ಸಾಬೀತು ಮಾಡಿದೆ. ಜನರು ದೊಡ್ಡ ಮಟ್ಟದಲ್ಲಿ ಮತದಾನದಲ್ಲಿ ಭಾಗವಹಿಸಿ ಮುಕ್ತವಾಗಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ, ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಇಂತಹ ಫಲಿತಾಂಶ ಬಂದಿದ್ದಕ್ಕಾಗಿ ದೇವರಿಗೂ ಕೃತಜ್ಞ ಎಂದು ತಿಳಿಸಿದರು.

ಚುನಾಯಿತ ಸರ್ಕಾರವು ಜನರ ಕಷ್ಟಗಳನ್ನು ಕೊನೆಗೊಳಿಸಲು ಕೆಲಸ ಮಾಡಲಿದೆ. ನಿರುದ್ಯೋಗವನ್ನು ಕೊನೆಗೊಳಿಸಬೇಕು. ಹಣದುಬ್ಬರ ಮತ್ತು ಡ್ರಗ್ಸ್ ದಂಧೆಯನ್ನು ನಿಯಂತ್ರಿಸಬೇಕಿದೆ. ಸರ್ಕಾರ ರಚನೆಯಾದ ಬಳಿಕ ಲೆಫ್ಟಿನೆಂಟ್​ ಗವರ್ನರ್​ ಮತ್ತು ಅವರ ಸಲಹೆಗಾರರು ಇರುವುದಿಲ್ಲ. ಈಗ, ಜನರ ಕೆಲಸ ಮಾಡಲು ಅವರಿಂದಲೇ ಆಯ್ಕೆಯಾದ 90 ಶಾಸಕರು ಇರಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕುಟುಂಬ ರಾಜಕಾರಣದ ಟೀಕೆಯ ಮಧ್ಯೆ ಜಮ್ಮು ಕಾಶ್ಮೀರದಲ್ಲಿ ಗೆದ್ದ ನ್ಯಾಷನಲ್​ ಕಾನ್ಫರೆನ್ಸ್

ಶ್ರೀನಗರ: ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ನ್ಯಾಷನಲ್​ ಕಾನ್ಫ್​ರೆನ್ಸ್​ ಮತ್ತು ಕಾಂಗ್ರೆಸ್​ ಮೈತ್ರಿ ಬಹುಮತದತ್ತ ದಾಪುಗಾಲಿಡುತ್ತಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸ್ಪಷ್ಟ ಬಹುಮತದ ನಿರೀಕ್ಷೆಯಲ್ಲಿರುವ ನ್ಯಾಷನಲ್​​ ಕಾನ್ಫ್​​ರೆನ್ಸ್​ 'ಮುಂದಿನ ಸಿಎಂ ಒಮರ್​ ಅಬ್ದುಲ್ಲಾ' ಎಂದು ಘೋಷಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎನ್​ಸಿ ಪಕ್ಷದ ನೇತಾರ ಫಾರೂಕ್​ ಅಬ್ದುಲ್ಲಾ, 370ನೇ ವಿಧಿ ರದ್ದತಿಯ ವಿರುದ್ಧ ಕಣಿವೆಯ ಜನರು ಮತ ಹಾಕಿದ್ದಾರೆ ಎಂಬುದಕ್ಕೆ ಈ ತೀರ್ಪು ಸಾಕ್ಷಿ ಎಂದು ಹೇಳಿದರು.

ಮೈತ್ರಿಕೂಟದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಮಿತ್ರ ಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಎನ್​​ಸಿ ಅಧಿಕಾರಕ್ಕೆ ಬರಲಿದೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ 2019ರ ಆಗಸ್ಟ್ 5ರಂದು 370ನೇ ವಿಧಿಯ ರದ್ದು ಮಾಡಿದ್ದು ಸರಿಯಲ್ಲ ಎಂಬುದನ್ನು ಈ ತೀರ್ಪು ಸಾಬೀತು ಮಾಡಿದೆ. ಜನರು ದೊಡ್ಡ ಮಟ್ಟದಲ್ಲಿ ಮತದಾನದಲ್ಲಿ ಭಾಗವಹಿಸಿ ಮುಕ್ತವಾಗಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ, ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಇಂತಹ ಫಲಿತಾಂಶ ಬಂದಿದ್ದಕ್ಕಾಗಿ ದೇವರಿಗೂ ಕೃತಜ್ಞ ಎಂದು ತಿಳಿಸಿದರು.

ಚುನಾಯಿತ ಸರ್ಕಾರವು ಜನರ ಕಷ್ಟಗಳನ್ನು ಕೊನೆಗೊಳಿಸಲು ಕೆಲಸ ಮಾಡಲಿದೆ. ನಿರುದ್ಯೋಗವನ್ನು ಕೊನೆಗೊಳಿಸಬೇಕು. ಹಣದುಬ್ಬರ ಮತ್ತು ಡ್ರಗ್ಸ್ ದಂಧೆಯನ್ನು ನಿಯಂತ್ರಿಸಬೇಕಿದೆ. ಸರ್ಕಾರ ರಚನೆಯಾದ ಬಳಿಕ ಲೆಫ್ಟಿನೆಂಟ್​ ಗವರ್ನರ್​ ಮತ್ತು ಅವರ ಸಲಹೆಗಾರರು ಇರುವುದಿಲ್ಲ. ಈಗ, ಜನರ ಕೆಲಸ ಮಾಡಲು ಅವರಿಂದಲೇ ಆಯ್ಕೆಯಾದ 90 ಶಾಸಕರು ಇರಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕುಟುಂಬ ರಾಜಕಾರಣದ ಟೀಕೆಯ ಮಧ್ಯೆ ಜಮ್ಮು ಕಾಶ್ಮೀರದಲ್ಲಿ ಗೆದ್ದ ನ್ಯಾಷನಲ್​ ಕಾನ್ಫರೆನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.