ETV Bharat / bharat

'ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ': ಬಾಳಾಸಾಹೇಬ್ ಠಾಕ್ರೆಯವರಿಗೆ ಪಿಎಂ ಮೋದಿ ಗೌರವ ನಮನ - BALASAHEB THACKERAY

ಬಾಳಾಸಾಹೇಬ್ ಠಾಕ್ರೆ ಅವರ ಜನ್ಮದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

'ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ': ಬಾಳಾಸಾಹೇಬ್ ಠಾಕ್ರೆಯವರಿಗೆ ಪಿಎಂ ಮೋದಿ ಗೌರವ ನಮನ
'ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ': ಬಾಳಾಸಾಹೇಬ್ ಠಾಕ್ರೆಯವರಿಗೆ ಪಿಎಂ ಮೋದಿ ಗೌರವ ನಮನ (ians)
author img

By ETV Bharat Karnataka Team

Published : Jan 23, 2025, 12:20 PM IST

ನವದೆಹಲಿ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ ಠಾಕ್ರೆ ತಮ್ಮ ಮೂಲ ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಠಾಕ್ರೆ ಅವರ ಜನ್ಮದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಜನರ ಕಲ್ಯಾಣ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ಅವರ ಬದ್ಧತೆಗಾಗಿ ಅವರನ್ನು ಗೌರವಿಸಲಾಗುತ್ತದೆ ಮತ್ತು ನೆನಪಿಸಿಕೊಳ್ಳಲಾಗುತ್ತದೆ. ಅವರು ತಮ್ಮ ಮೂಲ ನಂಬಿಕೆಗಳ ವಿಷಯಕ್ಕೆ ಬಂದಾಗ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ನಿರಂತರವಾಗಿ ಕೊಡುಗೆ ನೀಡಿದರು." ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯು ಆರಂಭದಲ್ಲಿ ಮರಾಠಿ ಮಾಣೂಸ್ ಅಥವಾ ಮರಾಠಿ ಭಾಷಿಕರ ಶ್ರೇಯೋಭಿವೃದ್ಧಿಗಾಗಿ ಹೋರಾಡುವ ಪಕ್ಷವಾಗಿತ್ತು. ಆದರೆ ನಂತರದ ವರ್ಷಗಳಲ್ಲಿ ಇದು ಉಗ್ರ ಹಿಂದೂ ಪರ ಸಂಘಟನೆಯಾಗಿ ಬೆಳೆಯಿತು. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಅನುಯಾಯಿಗಳನ್ನು ಹೊಂದಿದ್ದ ಬಾಳಾಸಾಹೇಬ್ ಠಾಕ್ರೆ ಅವರ ವರ್ಚಸ್ಸು ನಂತರದ ದಿನಗಳಲ್ಲಿ ದೇಶಾದ್ಯಂತ ಬೆಳೆಯಿತು.

ಬಾಳಾಸಾಹೇಬ್ ಜನವರಿ 23, 1926 ರಂದು ಪುಣೆಯಲ್ಲಿ ಜನಿಸಿದರು ಮತ್ತು ನವೆಂಬರ್ 17, 2012 ರಂದು ಮುಂಬೈನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು.

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಠಾಕ್ರೆ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. "ಪೂಜ್ಯ ಹಿಂದೂ ಹೃದಯ ಸಾಮ್ರಾಟ್, ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ವಿನಮ್ರ ಗೌರವಗಳು" ಎಂದು ಅವರು ಎಕ್ಸ್​ನಲ್ಲಿ ಮರಾಠಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಠಾಕ್ರೆ ನಿಧನದ ನಂತರ ಅವರು ಸ್ಥಾಪಿಸಿದ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಶಿಂಧೆ ಅಂದಿನ ಪಕ್ಷದ ನಾಯಕತ್ವದ ವಿರುದ್ಧ ದಂಗೆ ಎದ್ದ ನಂತರ 2022 ರಲ್ಲಿ ಶಿವಸೇನೆ ವಿಭಜನೆಯಾಯಿತು. ಇದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಮತ್ತು ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನಂತರ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದರು. ನಂತರ, ಚುನಾವಣಾ ಆಯೋಗವು ಶಿಂಧೆ ನೇತೃತ್ವದ ಬಣವನ್ನು 'ನಿಜವಾದ' ಶಿವಸೇನೆ ಎಂದು ಗುರುತಿಸಿತು.

ಇದನ್ನೂ ಓದಿ : ಗಡೀಪಾರು ಆತಂಕದಲ್ಲಿ 18,000 ಭಾರತೀಯರು; ಕಾನೂನುಬದ್ಧ ವಾಪಸಾತಿ ಭರವಸೆ ನೀಡಿದ ಜೈಶಂಕರ್​​ - INDIANS FACE DEPORTATION

ನವದೆಹಲಿ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ ಠಾಕ್ರೆ ತಮ್ಮ ಮೂಲ ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಠಾಕ್ರೆ ಅವರ ಜನ್ಮದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಜನರ ಕಲ್ಯಾಣ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ಅವರ ಬದ್ಧತೆಗಾಗಿ ಅವರನ್ನು ಗೌರವಿಸಲಾಗುತ್ತದೆ ಮತ್ತು ನೆನಪಿಸಿಕೊಳ್ಳಲಾಗುತ್ತದೆ. ಅವರು ತಮ್ಮ ಮೂಲ ನಂಬಿಕೆಗಳ ವಿಷಯಕ್ಕೆ ಬಂದಾಗ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ನಿರಂತರವಾಗಿ ಕೊಡುಗೆ ನೀಡಿದರು." ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯು ಆರಂಭದಲ್ಲಿ ಮರಾಠಿ ಮಾಣೂಸ್ ಅಥವಾ ಮರಾಠಿ ಭಾಷಿಕರ ಶ್ರೇಯೋಭಿವೃದ್ಧಿಗಾಗಿ ಹೋರಾಡುವ ಪಕ್ಷವಾಗಿತ್ತು. ಆದರೆ ನಂತರದ ವರ್ಷಗಳಲ್ಲಿ ಇದು ಉಗ್ರ ಹಿಂದೂ ಪರ ಸಂಘಟನೆಯಾಗಿ ಬೆಳೆಯಿತು. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಅನುಯಾಯಿಗಳನ್ನು ಹೊಂದಿದ್ದ ಬಾಳಾಸಾಹೇಬ್ ಠಾಕ್ರೆ ಅವರ ವರ್ಚಸ್ಸು ನಂತರದ ದಿನಗಳಲ್ಲಿ ದೇಶಾದ್ಯಂತ ಬೆಳೆಯಿತು.

ಬಾಳಾಸಾಹೇಬ್ ಜನವರಿ 23, 1926 ರಂದು ಪುಣೆಯಲ್ಲಿ ಜನಿಸಿದರು ಮತ್ತು ನವೆಂಬರ್ 17, 2012 ರಂದು ಮುಂಬೈನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು.

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಠಾಕ್ರೆ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. "ಪೂಜ್ಯ ಹಿಂದೂ ಹೃದಯ ಸಾಮ್ರಾಟ್, ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ವಿನಮ್ರ ಗೌರವಗಳು" ಎಂದು ಅವರು ಎಕ್ಸ್​ನಲ್ಲಿ ಮರಾಠಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಠಾಕ್ರೆ ನಿಧನದ ನಂತರ ಅವರು ಸ್ಥಾಪಿಸಿದ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಶಿಂಧೆ ಅಂದಿನ ಪಕ್ಷದ ನಾಯಕತ್ವದ ವಿರುದ್ಧ ದಂಗೆ ಎದ್ದ ನಂತರ 2022 ರಲ್ಲಿ ಶಿವಸೇನೆ ವಿಭಜನೆಯಾಯಿತು. ಇದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಮತ್ತು ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನಂತರ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದರು. ನಂತರ, ಚುನಾವಣಾ ಆಯೋಗವು ಶಿಂಧೆ ನೇತೃತ್ವದ ಬಣವನ್ನು 'ನಿಜವಾದ' ಶಿವಸೇನೆ ಎಂದು ಗುರುತಿಸಿತು.

ಇದನ್ನೂ ಓದಿ : ಗಡೀಪಾರು ಆತಂಕದಲ್ಲಿ 18,000 ಭಾರತೀಯರು; ಕಾನೂನುಬದ್ಧ ವಾಪಸಾತಿ ಭರವಸೆ ನೀಡಿದ ಜೈಶಂಕರ್​​ - INDIANS FACE DEPORTATION

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.