ETV Bharat / bharat

'ಯುಪಿಎಸ್​ಸಿ ಆಕಾಂಕ್ಷಿಗಳ ಕೊಲೆ': ದೆಹಲಿ ಸರ್ಕಾರದ ವಿರುದ್ಧ ಆಪ್ ಸಂಸದೆ ಮಲಿವಾಲ್ ಆಕ್ರೋಶ - Swati Maliwal

author img

By ANI

Published : Jul 28, 2024, 2:18 PM IST

ಮೂವರು ಯುಪಿಎಸ್​ಸಿ ಆಕಾಂಕ್ಷಿಗಳ ಸಾವಿಗೆ ದೆಹಲಿ ಸರ್ಕಾರದ ಅಧಿಕಾರಿಗಳೇ ಕಾರಣ ಎಂದು ಆಪ್ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಆಪ್ ಸಂಸದೆ ಸ್ವಾತಿ ಮಲಿವಾಲ್
ಆಪ್ ಸಂಸದೆ ಸ್ವಾತಿ ಮಲಿವಾಲ್ (IANS)

ನವದೆಹಲಿ: ಪಶ್ಚಿಮ ದಿಲ್ಲಿಯ ಹಳೆ ರಾಜಿಂದರ್ ನಗರದ ಐಎಎಸ್ ಕೋಚಿಂಗ್ ಇನ್​ಸ್ಟಿಟ್ಯೂಟ್​ನಲ್ಲಿ ಮೂವರು ಯುಪಿಎಸ್​ಸಿ ಆಕಾಂಕ್ಷಿಗಳ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿರುವುದಕ್ಕೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ರವಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಿಂದರ್​ ನಗರದಲ್ಲಿ ನಡೆದಿರುವುದು ದುರಂತವಲ್ಲ, ಆ ಸಾವುಗಳನ್ನು ಕೊಲೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಘಟನೆ ನಡೆದು ಹಲವಾರು ಗಂಟೆಗಳ ನಂತರವೂ ದೆಹಲಿ ಸರ್ಕಾರದ ಯಾವುದೇ ಸಚಿವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಅಥವಾ ಇತರ ಯಾವುದೇ ಅಧಿಕಾರಿ ಘಟನಾ ಸ್ಥಳಕ್ಕೆ ಬಂದಿಲ್ಲದ ಕಾರಣ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಎಎಪಿ ಸಂಸದೆ ಮಲಿವಾಲ್ ಆಗ್ರಹಿಸಿದ್ದಾರೆ.

ಹಳೆ ರಾಜಿಂದರ್ ನಗರ ಕೋಚಿಂಗ್ ಸೆಂಟರ್ ಘಟನೆಯ ಬಗ್ಗೆ ಮಾತನಾಡಿದ ಸ್ವಾತಿ ಮಲಿವಾಲ್, "ಇಲ್ಲಿನ ವಿದ್ಯಾರ್ಥಿಗಳು ತುಂಬಾ ದುಃಖಿತರಾಗಿದ್ದಾರೆ ಮತ್ತು ಆಕ್ರೋಶಗೊಂಡಿದ್ದಾರೆ. 12 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದಿದೆ ಮತ್ತು ಇಲ್ಲಿಯವರೆಗೆ ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಎಂಸಿಡಿ ಮೇಯರ್ ಅಥವಾ ಯಾವುದೇ ಅಧಿಕಾರಿ ಇಲ್ಲಿಗೆ ಬಂದಿಲ್ಲ. ಈ ಸಾವುಗಳು ವಿಪತ್ತು ಅಲ್ಲ, ಇದು ಕೊಲೆ. ಈ ಎಲ್ಲಾ ದೊಡ್ಡ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು." ಎಂದು ಅವರು ಒತ್ತಾಯಿಸಿದರು.

"3 ಜನರು ಸಾವನ್ನಪ್ಪಿದ್ದಾರೆಯೇ ಅಥವಾ ಈ ಸಂಖ್ಯೆ ಇನ್ನೂ ಹೆಚ್ಚಾಗಿದೆಯೇ ಎಂಬುದು ತಿಳಿದಿಲ್ಲ. ಮೃತಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ 1 ಕೋಟಿ ರೂ.ಗಳ ಪರಿಹಾರ ನೀಡಬೇಕು. ಸಚಿವರು ಮತ್ತು ಮೇಯರ್ ತಕ್ಷಣ ಇಲ್ಲಿಗೆ ಬಂದು ಕ್ಷಮೆಯಾಚಿಸಬೇಕು. ದೆಹಲಿಯ ಆಡಳಿತವನ್ನು ಹೀಗೆ ನಡೆಸಲಾಗದು. ಈ ವಿಷಯವನ್ನು ನಾನು ಸಂಸತ್ತಿನಲ್ಲಿ ಎತ್ತುತ್ತೇನೆ. ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ನಾನು ಸಂಸತ್ತಿನಲ್ಲಿ ಇಡುತ್ತೇನೆ. ಇಲ್ಲಿನ ಚರಂಡಿ ವ್ಯವಸ್ಥೆ ಹಾಳಾಗಿದೆ ಎಂದು 12 ದಿನಗಳ ಹಿಂದೆಯೇ ವಿದ್ಯಾರ್ಥಿಗಳು ಇಲ್ಲಿನ ಕೌನ್ಸಿಲರ್​ಗೆ ದೂರು ನೀಡಿದ್ದರು. ಹೀಗಾಗಿ ಕೌನ್ಸಿಲರ್ ಮತ್ತು ಅವರ ಮೇಲಧಿಕಾರಿಗಳು ಈ ಘಟನೆಯ ಜವಾಬ್ದಾರಿ ಹೊರಬೇಕಿದೆ" ಎಂದು ಮಲಿವಾಲ್ ಹೇಳಿದರು.

ದೆಹಲಿಯ ಹಳೆ ರಾಜೇಂದರ್ ನಗರದ ಜನಪ್ರಿಯ ಐಎಎಸ್ ಕೋಚಿಂಗ್ ಇನ್​ಸ್ಟಿಟ್ಯೂಟ್​ನ ನೆಲಮಾಳಿಗೆಯಲ್ಲಿ ಮಳೆ ನೀರು ನುಗ್ಗಿದ ನಂತರ ಮೂವರು ಯುಪಿಎಸ್​ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂ ನಿವಾಸಿ ನಿವಿನ್ ಡಾಲ್ವಿನ್ ಎಂದು ಗುರುತಿಸಿರುವುದಾಗಿ ಕೇಂದ್ರ ಡಿಸಿಪಿ ಎಂ.ಹರ್ಷವರ್ಧನ್ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: IAS ಕೋಚಿಂಗ್‌ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded

ನವದೆಹಲಿ: ಪಶ್ಚಿಮ ದಿಲ್ಲಿಯ ಹಳೆ ರಾಜಿಂದರ್ ನಗರದ ಐಎಎಸ್ ಕೋಚಿಂಗ್ ಇನ್​ಸ್ಟಿಟ್ಯೂಟ್​ನಲ್ಲಿ ಮೂವರು ಯುಪಿಎಸ್​ಸಿ ಆಕಾಂಕ್ಷಿಗಳ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿರುವುದಕ್ಕೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ರವಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಿಂದರ್​ ನಗರದಲ್ಲಿ ನಡೆದಿರುವುದು ದುರಂತವಲ್ಲ, ಆ ಸಾವುಗಳನ್ನು ಕೊಲೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಘಟನೆ ನಡೆದು ಹಲವಾರು ಗಂಟೆಗಳ ನಂತರವೂ ದೆಹಲಿ ಸರ್ಕಾರದ ಯಾವುದೇ ಸಚಿವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಅಥವಾ ಇತರ ಯಾವುದೇ ಅಧಿಕಾರಿ ಘಟನಾ ಸ್ಥಳಕ್ಕೆ ಬಂದಿಲ್ಲದ ಕಾರಣ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಎಎಪಿ ಸಂಸದೆ ಮಲಿವಾಲ್ ಆಗ್ರಹಿಸಿದ್ದಾರೆ.

ಹಳೆ ರಾಜಿಂದರ್ ನಗರ ಕೋಚಿಂಗ್ ಸೆಂಟರ್ ಘಟನೆಯ ಬಗ್ಗೆ ಮಾತನಾಡಿದ ಸ್ವಾತಿ ಮಲಿವಾಲ್, "ಇಲ್ಲಿನ ವಿದ್ಯಾರ್ಥಿಗಳು ತುಂಬಾ ದುಃಖಿತರಾಗಿದ್ದಾರೆ ಮತ್ತು ಆಕ್ರೋಶಗೊಂಡಿದ್ದಾರೆ. 12 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದಿದೆ ಮತ್ತು ಇಲ್ಲಿಯವರೆಗೆ ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಎಂಸಿಡಿ ಮೇಯರ್ ಅಥವಾ ಯಾವುದೇ ಅಧಿಕಾರಿ ಇಲ್ಲಿಗೆ ಬಂದಿಲ್ಲ. ಈ ಸಾವುಗಳು ವಿಪತ್ತು ಅಲ್ಲ, ಇದು ಕೊಲೆ. ಈ ಎಲ್ಲಾ ದೊಡ್ಡ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು." ಎಂದು ಅವರು ಒತ್ತಾಯಿಸಿದರು.

"3 ಜನರು ಸಾವನ್ನಪ್ಪಿದ್ದಾರೆಯೇ ಅಥವಾ ಈ ಸಂಖ್ಯೆ ಇನ್ನೂ ಹೆಚ್ಚಾಗಿದೆಯೇ ಎಂಬುದು ತಿಳಿದಿಲ್ಲ. ಮೃತಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ 1 ಕೋಟಿ ರೂ.ಗಳ ಪರಿಹಾರ ನೀಡಬೇಕು. ಸಚಿವರು ಮತ್ತು ಮೇಯರ್ ತಕ್ಷಣ ಇಲ್ಲಿಗೆ ಬಂದು ಕ್ಷಮೆಯಾಚಿಸಬೇಕು. ದೆಹಲಿಯ ಆಡಳಿತವನ್ನು ಹೀಗೆ ನಡೆಸಲಾಗದು. ಈ ವಿಷಯವನ್ನು ನಾನು ಸಂಸತ್ತಿನಲ್ಲಿ ಎತ್ತುತ್ತೇನೆ. ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ನಾನು ಸಂಸತ್ತಿನಲ್ಲಿ ಇಡುತ್ತೇನೆ. ಇಲ್ಲಿನ ಚರಂಡಿ ವ್ಯವಸ್ಥೆ ಹಾಳಾಗಿದೆ ಎಂದು 12 ದಿನಗಳ ಹಿಂದೆಯೇ ವಿದ್ಯಾರ್ಥಿಗಳು ಇಲ್ಲಿನ ಕೌನ್ಸಿಲರ್​ಗೆ ದೂರು ನೀಡಿದ್ದರು. ಹೀಗಾಗಿ ಕೌನ್ಸಿಲರ್ ಮತ್ತು ಅವರ ಮೇಲಧಿಕಾರಿಗಳು ಈ ಘಟನೆಯ ಜವಾಬ್ದಾರಿ ಹೊರಬೇಕಿದೆ" ಎಂದು ಮಲಿವಾಲ್ ಹೇಳಿದರು.

ದೆಹಲಿಯ ಹಳೆ ರಾಜೇಂದರ್ ನಗರದ ಜನಪ್ರಿಯ ಐಎಎಸ್ ಕೋಚಿಂಗ್ ಇನ್​ಸ್ಟಿಟ್ಯೂಟ್​ನ ನೆಲಮಾಳಿಗೆಯಲ್ಲಿ ಮಳೆ ನೀರು ನುಗ್ಗಿದ ನಂತರ ಮೂವರು ಯುಪಿಎಸ್​ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂ ನಿವಾಸಿ ನಿವಿನ್ ಡಾಲ್ವಿನ್ ಎಂದು ಗುರುತಿಸಿರುವುದಾಗಿ ಕೇಂದ್ರ ಡಿಸಿಪಿ ಎಂ.ಹರ್ಷವರ್ಧನ್ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: IAS ಕೋಚಿಂಗ್‌ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded

ETV Bharat Logo

Copyright © 2024 Ushodaya Enterprises Pvt. Ltd., All Rights Reserved.