ETV Bharat / bharat

ಎನ್‌ಸಿಪಿ ನಾಯಕ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಬಂಧಿತ ಆರೋಪಿ ಮಹಾರಾಷ್ಟ್ರದ ಪುಣೆಯಲ್ಲಿ ಸ್ಕ್ರಾಪ್​ ಡೀಲರ್​ ಆಗಿ ಕೆಲಸ ಮಾಡುತ್ತಿದ್ದ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

author img

By PTI

Published : 2 hours ago

one-more-person-arrested-in-baba-siddique-murder-case
ಬಾಬಾ ಸಿದ್ಧಿಕಿ ಮೃತದೇಹದ ಮೆರವಣಿಗೆ (ANI)

ಮುಂಬೈ: ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂದೇಹದ ಮೇರೆಗೆ ಮತ್ತೋರ್ವ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಬಹ್ರೈಚ್​​ ನಿವಾಸಿ ಹರೀಶ್​ ಕುಮಾರ್​​ ಬಾಲಕ್ರಮ್​ (23) ಎಂದು ಗುರುತಿಸಲಾಗಿದೆ. ಈತ ಪುಣೆಯಲ್ಲಿ ಸ್ಕ್ರಾಪ್​ ಡೀಲರ್​ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.

ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಇದುವರೆಗೆ ನಾಲ್ವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಈ ಮೊದಲು ಹರಿಯಾಣ ನಿವಾಸಿ ಗುರ್ಮೈಲ್​ ಬಲ್ಜಿತ್​ ಸಿಂಗ್​ (23) ಮತ್ತು ಉತ್ತರ ಪ್ರದೇಶ ಮೂಲದ ರಾಜೇಶ್​ ಕಶ್ಯಪ್​ (19) ಎಂಬವರನ್ನು ಬಂಧಿಸಲಾಗಿತ್ತು. ಈ ಇಬ್ಬರೂ ಶೂಟರ್​ಗಳು. ಕೊಲೆ ಪಿತೂರಿಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪುಣೆಯ ಪ್ರವೀಣ್​ ಲೊನ್ಕರ್​ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಶೂಟರ್​​ ಶಿವಕುಮಾರ್​ ಗೌತಮ್​ಗೆ ಹುಡುಕಾಟ ನಡೆಯುತ್ತಿದೆ. ಪ್ರಕರಣದಲ್ಲಿ ಇದುವರೆಗೆ 6 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತಲೆಮರೆಸಿಕೊಂಡಿರುವ ಇತರರಿಗೆ ತೀವ್ರ ಶೋಧ ನಡೆಯುತ್ತಿದೆ.

ಬಾಬಾ ಸಿದ್ದಿಕಿ​ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾದಲ್ಲಿ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತು. ಹತ್ಯೆಯ ಹೊಣೆಯನ್ನು ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್​ ಹೊತ್ತುಕೊಂಡಿದೆ. ಈಗಾಗಲೇ ಸೆರೆಸಿಕ್ಕ ಆರೋಪಿಗಳಾದ ಗುರ್ಮೈಲ್​ ಸಿಂಗ್​ ಮತ್ತು ರಾಜೇಶ್​ ಎಂಬವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗೆ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಿಷ್ಣೋಯ್​ ಹಿಟ್​ಲಿಸ್ಟ್​ನಲ್ಲಿ ಬಾಬಾ ಸಿದ್ದಿಕಿ ಪುತ್ರ: ಯಾರೇ ಸಿಕ್ಕರೂ ಹತ್ಯೆ ಮಾಡಲು ಬಂದಿತ್ತು ಆದೇಶ!

ಮುಂಬೈ: ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂದೇಹದ ಮೇರೆಗೆ ಮತ್ತೋರ್ವ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಬಹ್ರೈಚ್​​ ನಿವಾಸಿ ಹರೀಶ್​ ಕುಮಾರ್​​ ಬಾಲಕ್ರಮ್​ (23) ಎಂದು ಗುರುತಿಸಲಾಗಿದೆ. ಈತ ಪುಣೆಯಲ್ಲಿ ಸ್ಕ್ರಾಪ್​ ಡೀಲರ್​ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.

ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಇದುವರೆಗೆ ನಾಲ್ವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಈ ಮೊದಲು ಹರಿಯಾಣ ನಿವಾಸಿ ಗುರ್ಮೈಲ್​ ಬಲ್ಜಿತ್​ ಸಿಂಗ್​ (23) ಮತ್ತು ಉತ್ತರ ಪ್ರದೇಶ ಮೂಲದ ರಾಜೇಶ್​ ಕಶ್ಯಪ್​ (19) ಎಂಬವರನ್ನು ಬಂಧಿಸಲಾಗಿತ್ತು. ಈ ಇಬ್ಬರೂ ಶೂಟರ್​ಗಳು. ಕೊಲೆ ಪಿತೂರಿಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪುಣೆಯ ಪ್ರವೀಣ್​ ಲೊನ್ಕರ್​ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಶೂಟರ್​​ ಶಿವಕುಮಾರ್​ ಗೌತಮ್​ಗೆ ಹುಡುಕಾಟ ನಡೆಯುತ್ತಿದೆ. ಪ್ರಕರಣದಲ್ಲಿ ಇದುವರೆಗೆ 6 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತಲೆಮರೆಸಿಕೊಂಡಿರುವ ಇತರರಿಗೆ ತೀವ್ರ ಶೋಧ ನಡೆಯುತ್ತಿದೆ.

ಬಾಬಾ ಸಿದ್ದಿಕಿ​ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾದಲ್ಲಿ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತು. ಹತ್ಯೆಯ ಹೊಣೆಯನ್ನು ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್​ ಹೊತ್ತುಕೊಂಡಿದೆ. ಈಗಾಗಲೇ ಸೆರೆಸಿಕ್ಕ ಆರೋಪಿಗಳಾದ ಗುರ್ಮೈಲ್​ ಸಿಂಗ್​ ಮತ್ತು ರಾಜೇಶ್​ ಎಂಬವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗೆ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಿಷ್ಣೋಯ್​ ಹಿಟ್​ಲಿಸ್ಟ್​ನಲ್ಲಿ ಬಾಬಾ ಸಿದ್ದಿಕಿ ಪುತ್ರ: ಯಾರೇ ಸಿಕ್ಕರೂ ಹತ್ಯೆ ಮಾಡಲು ಬಂದಿತ್ತು ಆದೇಶ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.