ETV Bharat / bharat

'ಒಂದು ರಾಷ್ಟ್ರ, ಒಂದು ಚುನಾವಣೆ‘ ವರದಿಗೆ ಕೇಂದ್ರ ಅನುಮೋದನೆ: ಖರ್ಗೆ ವಿರೋಧ - One Nation One Election

author img

By ANI

Published : Sep 18, 2024, 4:53 PM IST

Updated : Sep 18, 2024, 5:27 PM IST

ಒಂದು ರಾಷ್ಟ್ರ ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಪ್ರಸ್ತಾಪವನ್ನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ (ETV Bharat)

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಈ ವರದಿ ಸಲ್ಲಿಕೆ ಮಾಡಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಮಾಡುವ ಉದ್ದೇಶ ಎಂದರೆ, ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವುದಾಗಿದೆ. ಇದರಿಂದ ಸಮಯ, ಹಣ ಮತ್ತು ವರ್ಷದ ಎಲ್ಲ ಸಮಯದಲ್ಲಿ ಚುನಾವಣೆಗಳನ್ನು ನಡೆಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ನೀತಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಧಾನಿ ಮೋದಿ ಅವರ ಈ ಮಹತ್ವಾಕಾಂಕ್ಷಿ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಳೆದ ಸೆಪ್ಟೆಂಬರ್​ನಲ್ಲಿ ಸಮಿತಿ ರಚನೆ ಮಾಡಲಾಗಿತ್ತು. 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗದೊಂದಿಗೆ ಸಮಿತಿ ಸಮಾಲೋಚನೆ ನಡೆಸಿ ವರದಿ ತಯಾರಿಸಿದೆ. “ಸಮಿತಿ ವರದಿಯಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂಬ ಸರ್ವಾನುಮತದ ಅಭಿಪ್ರಾಯವನ್ನು ಹೊಂದಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ. ಅಲ್ಲದೆ, 100 ದಿನಗಳ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೊಂದಿಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಸಹ ನಡೆಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ಇದು ಕಾರ್ಯಸಾಧುವಲ್ಲ ಎಂದ ಖರ್ಗೆ: ಪ್ರಜಾಪ್ರಭುತ್ವದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಕಾರ್ಯಸಾಧುವಲ್ಲ. ಈ ಪ್ರಸ್ತಾಪವನ್ನು ನಾನು ವಿರೋಧಿಸುತ್ತೇನೆ. ಪ್ರಜಾಪ್ರಭುತ್ವ ಉಳಿಯಲು ಅಗತ್ಯವಿದ್ದಾಗ ಚುನಾವಣೆಗಳನ್ನು ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಿದ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, "ನಾವು ಇದರೊಂದಿಗೆ ನಿಲ್ಲುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕೆಲಸ ಮಾಡಲು ಸಾಧ್ಯವಿಲ್ಲ" ಎಂದರು.

ಇದು ಪ್ರಾಯೋಗಿಕವಲ್ಲ: ಈ ಬಗ್ಗೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಪ್ರತಿಕ್ರಿಯಿಸಿ, ಈ ಪ್ರಸ್ತಾಪವು ಪ್ರಾಯೋಗಿಕವಲ್ಲ ಮತ್ತು ಈ ದೇಶದಲ್ಲಿ ಇದು ನಡೆಯುವುದಿಲ್ಲ. ಪ್ರಸ್ತುತ ಇರುವ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಾರೆ" ಎಂದು ಬಿಜೆಪಿ ನಾಯಕರನ್ನು ಅವರು ಟೀಕಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ, ಸಮಾಲೋಚನಾ ಪ್ರಕ್ರಿಯೆಯಲ್ಲಿ ಪ್ರತಿಕ್ರಿಯಿಸಿದ ಶೇಕಡಾ 80ಕ್ಕಿಂತ ಜನರು ತಮ್ಮ ಸಕಾರಾತ್ಮಕ ಬೆಂಬಲವನ್ನು ನೀಡಿದ್ದಾರೆ. ವಿಶೇಷವಾಗಿ ಯುವಜನರು ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಹೆಚ್ಚು ಒಲವು ತೋರಿರುವುದರಿಂದ ವಿರೋಧ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಯ ಬಗ್ಗೆ ಆಂತರಿಕ ಒತ್ತಡವನ್ನು ಅನುಭವಿಸಲು ಪ್ರಾರಂಭಿಸಬಹುದು.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿತ್ತು.

18,626 ಪುಟಗಳನ್ನು ಒಳಗೊಂಡಿರುವ ಈ ವರದಿಯು ಜನರ, ತಜ್ಞರ ಪ್ರತಿಕ್ರಿಯೆ ಮತ್ತು ಸಂಶೋಧನಾ ಕಾರ್ಯಗಳೊಂದಿಗೆ ವ್ಯಾಪಕ ಸಮಾಲೋಚನೆಯ ಫಲಿತಾಂಶವಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ದಶಕದ ನಂತರ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ; ಮಧ್ಯಾಹ್ನ 1ಕ್ಕೆ ಶೇ 41.17ರಷ್ಟು ಮತದಾನ - Jammu Kashmir Assembly Election

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಈ ವರದಿ ಸಲ್ಲಿಕೆ ಮಾಡಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಮಾಡುವ ಉದ್ದೇಶ ಎಂದರೆ, ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವುದಾಗಿದೆ. ಇದರಿಂದ ಸಮಯ, ಹಣ ಮತ್ತು ವರ್ಷದ ಎಲ್ಲ ಸಮಯದಲ್ಲಿ ಚುನಾವಣೆಗಳನ್ನು ನಡೆಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ನೀತಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಧಾನಿ ಮೋದಿ ಅವರ ಈ ಮಹತ್ವಾಕಾಂಕ್ಷಿ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಳೆದ ಸೆಪ್ಟೆಂಬರ್​ನಲ್ಲಿ ಸಮಿತಿ ರಚನೆ ಮಾಡಲಾಗಿತ್ತು. 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗದೊಂದಿಗೆ ಸಮಿತಿ ಸಮಾಲೋಚನೆ ನಡೆಸಿ ವರದಿ ತಯಾರಿಸಿದೆ. “ಸಮಿತಿ ವರದಿಯಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂಬ ಸರ್ವಾನುಮತದ ಅಭಿಪ್ರಾಯವನ್ನು ಹೊಂದಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ. ಅಲ್ಲದೆ, 100 ದಿನಗಳ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೊಂದಿಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಸಹ ನಡೆಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ಇದು ಕಾರ್ಯಸಾಧುವಲ್ಲ ಎಂದ ಖರ್ಗೆ: ಪ್ರಜಾಪ್ರಭುತ್ವದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಕಾರ್ಯಸಾಧುವಲ್ಲ. ಈ ಪ್ರಸ್ತಾಪವನ್ನು ನಾನು ವಿರೋಧಿಸುತ್ತೇನೆ. ಪ್ರಜಾಪ್ರಭುತ್ವ ಉಳಿಯಲು ಅಗತ್ಯವಿದ್ದಾಗ ಚುನಾವಣೆಗಳನ್ನು ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಿದ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, "ನಾವು ಇದರೊಂದಿಗೆ ನಿಲ್ಲುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕೆಲಸ ಮಾಡಲು ಸಾಧ್ಯವಿಲ್ಲ" ಎಂದರು.

ಇದು ಪ್ರಾಯೋಗಿಕವಲ್ಲ: ಈ ಬಗ್ಗೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಪ್ರತಿಕ್ರಿಯಿಸಿ, ಈ ಪ್ರಸ್ತಾಪವು ಪ್ರಾಯೋಗಿಕವಲ್ಲ ಮತ್ತು ಈ ದೇಶದಲ್ಲಿ ಇದು ನಡೆಯುವುದಿಲ್ಲ. ಪ್ರಸ್ತುತ ಇರುವ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಾರೆ" ಎಂದು ಬಿಜೆಪಿ ನಾಯಕರನ್ನು ಅವರು ಟೀಕಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ, ಸಮಾಲೋಚನಾ ಪ್ರಕ್ರಿಯೆಯಲ್ಲಿ ಪ್ರತಿಕ್ರಿಯಿಸಿದ ಶೇಕಡಾ 80ಕ್ಕಿಂತ ಜನರು ತಮ್ಮ ಸಕಾರಾತ್ಮಕ ಬೆಂಬಲವನ್ನು ನೀಡಿದ್ದಾರೆ. ವಿಶೇಷವಾಗಿ ಯುವಜನರು ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಹೆಚ್ಚು ಒಲವು ತೋರಿರುವುದರಿಂದ ವಿರೋಧ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಯ ಬಗ್ಗೆ ಆಂತರಿಕ ಒತ್ತಡವನ್ನು ಅನುಭವಿಸಲು ಪ್ರಾರಂಭಿಸಬಹುದು.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿತ್ತು.

18,626 ಪುಟಗಳನ್ನು ಒಳಗೊಂಡಿರುವ ಈ ವರದಿಯು ಜನರ, ತಜ್ಞರ ಪ್ರತಿಕ್ರಿಯೆ ಮತ್ತು ಸಂಶೋಧನಾ ಕಾರ್ಯಗಳೊಂದಿಗೆ ವ್ಯಾಪಕ ಸಮಾಲೋಚನೆಯ ಫಲಿತಾಂಶವಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ದಶಕದ ನಂತರ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ; ಮಧ್ಯಾಹ್ನ 1ಕ್ಕೆ ಶೇ 41.17ರಷ್ಟು ಮತದಾನ - Jammu Kashmir Assembly Election

Last Updated : Sep 18, 2024, 5:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.