ETV Bharat / bharat

ನಕ್ಸಲರು ನೆಲದಡಿ ಹೂತಿಟ್ಟ ಐಇಡಿ ಸ್ಫೋಟ: ಛತ್ತೀಸ್​ಗಢದಲ್ಲಿ ಇಬ್ಬರು ಯೋಧರು ಹುತಾತ್ಮ

ಛತ್ತೀಸ್​ಗಢ ಮಾವೋವಾದಿಗಳ ಅಟ್ಟಹಾಸ ಮುಂದುವರಿದಿದೆ. ಐಇಡಿ ಸ್ಫೋಟಗೊಂಡು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

author img

By ETV Bharat Karnataka Team

Published : 3 hours ago

ಛತ್ತೀಸ್​ಗಢದಲ್ಲಿ ಇಬ್ಬರು ಯೋಧರು ಹುತಾತ್ಮ
ಛತ್ತೀಸ್​ಗಢದಲ್ಲಿ ಇಬ್ಬರು ಯೋಧರು ಹುತಾತ್ಮ (ETV Bharat)

ನಾರಾಯಣಪುರ (ಛತ್ತೀಸ್​ಗಢ): ಛತ್ತೀಸ್​ಗಢದಲ್ಲಿ ಮಾವೋವಾದಿಗಳು ಭೂಮಿಯಲ್ಲಿ ಅಡಗಿಸಿ ಇಟ್ಟಿದ್ದ ಸುಧಾರಿತ ಸ್ಫೋಟಕ ವಸ್ತು (ಐಇಡಿ) ಸಿಡಿದು ಇಬ್ಬರು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ. ಯೋಧರಿಬ್ಬರು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದವರಾಗಿದ್ದಾರೆ.

ನಕ್ಸಲೀಯರು ಅಡಗಿರುವ ಬಗ್ಗೆ ಶೋಧ ಕಾರ್ಯಾಚರಣೆ ಮಾಡುತ್ತಿದ್ದಾಗ ನಾರಾಯಣಪುರ ಜಿಲ್ಲೆಯ ಅಬುಜ್ಮದ್‌ನ ಕೊಡಲಿಯಾರ್ ಗ್ರಾಮದ ಬಳಿಯ ಅರಣ್ಯದಲ್ಲಿ ಇಟ್ಟಿದ್ದ ಬಾಂಬ್​ ಸ್ಫೋಟಗೊಂಡಿದೆ. ದುರಂತದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್‌ ಪಡೆಯ ಯೋಧರಾದ ಅಮರ್​​ ಪವಾರ್​ ಮತ್ತು ರಾಜೇಶ್​ ಸ್ಥಳದಲ್ಲೇ ಹುತಾತ್ಮರಾದರು. ಜೊತೆಗೆ ಇನ್ನಿಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

36 ವರ್ಷದ ಹುತಾತ್ಮ ಯೋಧ ಅಮರ್ ಪವಾರ್ ಅವರು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ನಿವಾಸಿಯಾಗಿದ್ದರೆ, ಇನ್ನೊಬ್ಬ ಹುತಾತ್ಮ ಯೋಧ ರಾಜೇಶ್ (36) ಆಂಧ್ರಪ್ರದೇಶದ ಕಡಪಾ ಜಿಲ್ಲೆಯವರಾಗಿದ್ದಾರೆ. ಇಬ್ಬರೂ ಐಟಿಬಿಪಿಯ 53ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿದ್ದರು.

ಪೊಲೀಸರ ಪ್ರಕಾರ, ಗಡಿ ಭದ್ರತಾ ಪಡೆ, ಐಟಿಬಿಪಿ ಮತ್ತು ಜಿಲ್ಲಾ ಮೀಸಲು ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದವು. ಕೊಡಲಿಯಾರ್ ಗ್ರಾಮದ ಬಳಿ ಶೋಧ ನಡೆಸುತ್ತಿದ್ದಾಗ ನಕ್ಸಲೀಯರು ಭೂಮಿಯಡಿ ಅಡಗಿಸಿ ಇಟ್ಟಿದ್ದ ಐಇಡಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.

ಸಿಎಂ ಸಂತಾಪ: ನಾರಾಯಣಪುರ ಜಿಲ್ಲೆಯ ಕೊಡ್ಲಿಯಾರ್ ಗ್ರಾಮದ ಬಳಿಯ ಅರಣ್ಯದಲ್ಲಿ ಐಇಡಿ ಸ್ಫೋಟದಿಂದ ಇಬ್ಬರು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ. ಸ್ಫೋಟದಲ್ಲಿ ಇನ್ನಿಬ್ಬರು ಪೊಲೀಸರು ಗಾಯಗೊಂಡಿರುವ ಮಾಹಿತಿ ಸಿಕ್ಕಿದೆ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಮತ್ತು ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಜಪಾನಿನಂತೆ ಭೂಗರ್ಭದಲ್ಲಿ ಬೃಹತ್ ಸುರಂಗ ಕೊರೆಯಲು ಮುಂದಾದ ಹೈದರಾಬಾದ್‌!

ನಾರಾಯಣಪುರ (ಛತ್ತೀಸ್​ಗಢ): ಛತ್ತೀಸ್​ಗಢದಲ್ಲಿ ಮಾವೋವಾದಿಗಳು ಭೂಮಿಯಲ್ಲಿ ಅಡಗಿಸಿ ಇಟ್ಟಿದ್ದ ಸುಧಾರಿತ ಸ್ಫೋಟಕ ವಸ್ತು (ಐಇಡಿ) ಸಿಡಿದು ಇಬ್ಬರು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ. ಯೋಧರಿಬ್ಬರು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದವರಾಗಿದ್ದಾರೆ.

ನಕ್ಸಲೀಯರು ಅಡಗಿರುವ ಬಗ್ಗೆ ಶೋಧ ಕಾರ್ಯಾಚರಣೆ ಮಾಡುತ್ತಿದ್ದಾಗ ನಾರಾಯಣಪುರ ಜಿಲ್ಲೆಯ ಅಬುಜ್ಮದ್‌ನ ಕೊಡಲಿಯಾರ್ ಗ್ರಾಮದ ಬಳಿಯ ಅರಣ್ಯದಲ್ಲಿ ಇಟ್ಟಿದ್ದ ಬಾಂಬ್​ ಸ್ಫೋಟಗೊಂಡಿದೆ. ದುರಂತದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್‌ ಪಡೆಯ ಯೋಧರಾದ ಅಮರ್​​ ಪವಾರ್​ ಮತ್ತು ರಾಜೇಶ್​ ಸ್ಥಳದಲ್ಲೇ ಹುತಾತ್ಮರಾದರು. ಜೊತೆಗೆ ಇನ್ನಿಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

36 ವರ್ಷದ ಹುತಾತ್ಮ ಯೋಧ ಅಮರ್ ಪವಾರ್ ಅವರು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ನಿವಾಸಿಯಾಗಿದ್ದರೆ, ಇನ್ನೊಬ್ಬ ಹುತಾತ್ಮ ಯೋಧ ರಾಜೇಶ್ (36) ಆಂಧ್ರಪ್ರದೇಶದ ಕಡಪಾ ಜಿಲ್ಲೆಯವರಾಗಿದ್ದಾರೆ. ಇಬ್ಬರೂ ಐಟಿಬಿಪಿಯ 53ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿದ್ದರು.

ಪೊಲೀಸರ ಪ್ರಕಾರ, ಗಡಿ ಭದ್ರತಾ ಪಡೆ, ಐಟಿಬಿಪಿ ಮತ್ತು ಜಿಲ್ಲಾ ಮೀಸಲು ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದವು. ಕೊಡಲಿಯಾರ್ ಗ್ರಾಮದ ಬಳಿ ಶೋಧ ನಡೆಸುತ್ತಿದ್ದಾಗ ನಕ್ಸಲೀಯರು ಭೂಮಿಯಡಿ ಅಡಗಿಸಿ ಇಟ್ಟಿದ್ದ ಐಇಡಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.

ಸಿಎಂ ಸಂತಾಪ: ನಾರಾಯಣಪುರ ಜಿಲ್ಲೆಯ ಕೊಡ್ಲಿಯಾರ್ ಗ್ರಾಮದ ಬಳಿಯ ಅರಣ್ಯದಲ್ಲಿ ಐಇಡಿ ಸ್ಫೋಟದಿಂದ ಇಬ್ಬರು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ. ಸ್ಫೋಟದಲ್ಲಿ ಇನ್ನಿಬ್ಬರು ಪೊಲೀಸರು ಗಾಯಗೊಂಡಿರುವ ಮಾಹಿತಿ ಸಿಕ್ಕಿದೆ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಮತ್ತು ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಜಪಾನಿನಂತೆ ಭೂಗರ್ಭದಲ್ಲಿ ಬೃಹತ್ ಸುರಂಗ ಕೊರೆಯಲು ಮುಂದಾದ ಹೈದರಾಬಾದ್‌!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.