ETV Bharat / bharat

ದಾರಿ ತಪ್ಪಿಸುವ ಜಾಹೀರಾತು ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ಬಾಬಾ ರಾಮದೇವ್, ಆಚಾರ್ಯ ಬಾಲಕೃಷ್ಣ - Misleading ads case

author img

By ANI

Published : Apr 9, 2024, 10:04 PM IST

Updated : Apr 9, 2024, 10:21 PM IST

ಪತಂಜಲಿಯ ಔಷಧೀಯ ಉತ್ಪನ್ನಗಳ ತಪ್ಪುದಾರಿ ಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪತಂಜಲಿ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಸಂಸ್ಥಾಪಕ ಬಾಬಾ ರಾಮ್‌ದೇವ್ ಅವರು ಸುಪ್ರೀಂ ಕೋರ್ಟ್ ಮುಂದೆ 'ಬೇಷರತ್ ಕ್ಷಮೆ' ಕೇಳಿದ್ದಾರೆ. ಬುಧವಾರ ವಿಚಾರಣೆ ನಡೆಯಲಿದ್ದು ಅದಕ್ಕೂ ಮುನ್ನ ಕ್ಷಮೆ ಕೇಳಿದ್ದಾರೆ.

ದಾರಿ ತಪ್ಪಿಸುವ ಜಾಹೀರಾತು ಪ್ರಕರಣ
ದಾರಿ ತಪ್ಪಿಸುವ ಜಾಹೀರಾತು ಪ್ರಕರಣ

ನವದೆಹಲಿ: ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಹಾಗೂ ಖ್ಯಾತ ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ ಸುಪ್ರೀಂ ಕೋರ್ಟ್​ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ. ಇಂದು ಸುಪ್ರೀಂ ಕೋರ್ಟ್‌ಗೆ ಹೊಸ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂಕೋರ್ಟ್‌ಗೆ ನೀಡಲಾದ ಭರವಸೆ ಉಲ್ಲಂಘಿಸಿ ತಪ್ಪುದಾರಿ ಗೆಳೆಯುವ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ "ಬೇಷರತ್ ಕ್ಷಮೆಯಾಚನೆ" ವ್ಯಕ್ತಪಡಿಸಿದ್ದಾರೆ. ನಾಳೆ (ಮಾ.10) ವಿಚಾರಣೆಗೆ ನಡೆಯಲಿದ್ದು, ಅದಕ್ಕೂ ಮುನ್ನ ಅವರು ಕ್ಷಮೆ ಕೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರು ಸಲ್ಲಿಕೆ ಮಾಡಿದ್ದ ಅಸ್ಪಷ್ಟ ಮತ್ತು ಅಸಂಬದ್ಧ ಅಫಿಡವಿಟ್​ಗೆ ಬಗ್ಗೆ ಸುಪ್ರೀಂಕೋರ್ಟ್ ಕೆಂಡಾಮಂಡಲವಾಗಿತ್ತು. ಅಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ಇಬ್ಬರಿಗೂ ಛೀಮಾರಿ ಹಾಕಿ ಸೂಕ್ತ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಮತ್ತೊಂದು ಕೊನೆಯ ಅವಕಾಶ ನೀಡಿ ವಿಚಾರಣೆಯನ್ನು ಸಹ ಮುಂದೂಡಿತ್ತು. ಅಲ್ಲದೇ ಈ ಹಿಂದಿನ ವಿಚಾರಣೆಯಲ್ಲಿ ಕೋರ್ಟ್​ ನೀಡಿದ ನಿರ್ದೇಶಗಳನ್ನು ಪಾಲಿಸದೇ ನಿಯಮ ಮೀರಿದ್ದಲ್ಲದೇ, ತಪ್ಪಾದ ಅಫಿಡವಿಟ್​ ಸಲ್ಲಿಸಲಾಗಿದೆ. ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕೇಸ್​ ದಾಖಲಿಸಬಾರದೇಕೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ​ ಪ್ರಶ್ನಿಸಿತ್ತು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಭರವಸೆ ಪಾಲಿಸದಿದ್ದಕ್ಕಾಗಿ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನಿಲಾ ಅವರ ಪೀಠದ ಮುಂದೆ ಹಾಜರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಇಬ್ಬರೂ ಬೇಷರತ್​​ ಕ್ಷಮೆಯಾಚಿಸಿದ್ದಾರೆ. ಈ ಲೋಪಕ್ಕೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ಅದೇ ರೀತಿ ಭವಿಷ್ಯದಲ್ಲಿ ಈ ರೀತಿಯಾಗಿ ಪುನರಾವರ್ತನೆಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಲು ಬಯಸುತ್ತೇವೆ ಮತ್ತು ಕಾನೂನು ಮತ್ತು ನ್ಯಾಯದ ಘನತೆಯನ್ನು ಎತ್ತಿಹಿಡಿಯಲು ಬದ್ಧರಾಗಿದ್ದೇವೆ ಎಂದು ಅವರು ತಮ್ಮ ಅಫಿಡವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಫಿಡವಿಟ್‌ನಲ್ಲಿ ಏನಿದೆ?: ನವೆಂಬರ್ 21, 2023ರ ಈ ನ್ಯಾಯಾಲಯದ ಆದೇಶದ ಪ್ಯಾರಾ 3ರಲ್ಲಿ ದಾಖಲಿಸಲಾದ ಹೇಳಿಕೆಯ ಉಲ್ಲಂಘನೆಗಾಗಿ ನಾನು ಈ ಮೂಲಕ ಬೇಷರತ್ ಕ್ಷಮೆಯಾಚಿಸುತ್ತೇನೆ. ಭವಿಷ್ಯದಲ್ಲಿ ಅಂತಹ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡಲಾಗುವುದಿಲ್ಲ. ನವೆಂಬರ್ 22, 2023 ರಂದು ನಡೆದ ಪತ್ರಿಕಾಗೋಷ್ಠಿಗಾಗಿ ನಾನು ನನ್ನ ಬೇಷರತ್ ಕ್ಷಮೆಯಾಚಿಸುತ್ತೇನೆ. ಈ ಲೋಪಕ್ಕೆ ನಾನು ವಿಷಾದಿಸುತ್ತೇನೆ ಮತ್ತು ಭವಿಷ್ಯದಲ್ಲಿ ಇಂತಹುದ್ದು ಮತ್ತೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡುತ್ತೇನೆ. ಈ ಹೇಳಿಕೆಯ ಮೇಲಿನ ಉಲ್ಲಂಘನೆಗಾಗಿ ನಾನು ಕ್ಷಮೆಯಾಚಿಸುತ್ತೇನೆ. ನಾನು ಯಾವಾಗಲೂ ಕಾನೂನಿನ ಘನತೆ ಮತ್ತು ನ್ಯಾಯದ ಮಹಿಮೆಯನ್ನು ಎತ್ತಿಹಿಡಿಯುತ್ತೇನೆ ಎಂದು ಇಬ್ಬರೂ ತಮ್ಮ ಅಫಿಡವಿಟ್​ನಲ್ಲಿ ಬೇಷರತ್​​ ಕ್ಷಮೆಯಾಚಿಸಿದ್ದಾರೆ. ಬುಧವಾರ ವಿಚಾರಣೆ ನಡೆಯಲಿದ್ದು, ಅದಕ್ಕೂ ಮುನ್ನ ಕ್ಷಮೆ ಕೇಳಿದ್ದಾರೆ.

ಏಪ್ರಿಲ್ 2 ರಂದು, ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಮ್ಮ ಅಫಿಡವಿಟ್‌ನಲ್ಲಿ ಬಳಸಿರುವ ಭಾಷೆಗೆ ಸಂಬಂಧಿಸಿದಂತೆ ಅವರನ್ನು ಟೀಕಿಸಲು ಯಾವುದೇ ಪದಗಳಿಲ್ಲದ ಸುಪ್ರೀಂ ಕೋರ್ಟ್, ಕೋರ್ಟ್​ಗೆ ಸೂಕ್ತ ರೀತಿಯ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಅದರಲ್ಲಿ ಬಳಸಲಾದ ಭಾಷೆ ಮತ್ತು ಪದಗಳು ಸರಿಯಿಲ್ಲ. ನೀವು ನಿಯಮಗಳನ್ನು ಉಲ್ಲಂಘಿಸಿದ್ದೀರಿ. ನಿಮ್ಮ ವಿರುದ್ಧ ಯಾಕೆ ಕೇಸ್​ ದಾಖಲಿಸಿ ವಿಚಾರಣೆ ನಡೆಸಬಾರದು ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಪರ ವಕೀಲರಿಗೆ ಕೇಳಿತ್ತು.

ಅಫಿಡವಿಟ್​ನಲ್ಲಿ ಏನೂ ಬೇಕಾದರೂ ಬರೆದು ಕೋರ್ಟ್​ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸೂಕ್ತವಲ್ಲದ ಅಫಿಡವಿಟ್ ಸಲ್ಲಿಸಿದ್ದಕ್ಕೆ ಆರೋಪಿಗಳು ಮೊದಲು ಕೋರ್ಟ್​ ಮುಂದೆ ಕ್ಷಮೆ ಯಾಚಿಸಬೇಕಿತ್ತು ಎಂದಾಗ ಪತಂಜಲಿ ಪರ ವಕೀಲರು, ಬೇಷರತ್​ ಕ್ಷಮೆಯಾಚಿಸಲು ರಾಮ್​ದೇವ್​ ಮತ್ತು ಬಾಲಕೃಷ್ಣ ಸಿದ್ಧರಿದ್ದಾರೆ ಎಂದು ತಿಳಿಸಿದ್ದರು. ಬಳಿಕ ಬಾಬಾ ರಾಮ್​​ದೇವ್​ ಬೇಷರತ್​​ ಕ್ಷಮೆಯಾಚಿಸಿದ್ದರು. ಆದರೆ, ಕ್ಷಮೆಯನ್ನು ಸ್ವೀಕರಿಸಲು ಪೀಠವು ನಿರಾಕರಿಸಿತ್ತು. ನಿಮ್ಮ ಕ್ಷಮೆಯಾಚನೆ ತುಟಿಯಂಚಿನ ನಡೆಯಾಗಿದೆ. ನಿಮ್ಮ ನಡೆ ಮತ್ತು ಕಾರ್ಯ ಒಂದೇ ಆಗಿರಬೇಕು. ಇದನ್ನು ನೀವು ಪಾಲಿಸದಿದ್ದಕ್ಕಾಗಿ ಕೋರ್ಟ್​ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್​ ದಾಖಲಿಸಲಾಗುತ್ತದೆ. ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಧಿಕ್ಕರಿಸಿದ್ದಕ್ಕಾಗಿ ಇಡೀ ರಾಷ್ಟ್ರಕ್ಕೆ ಕ್ಷಮೆಯಾಚಿಸಬೇಕಾಗಿದೆ ಎಂದು ತಿಳಿಸಿತ್ತು.

ಇನ್ನು ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಉತ್ತರಾಖಂಡ ಸರ್ಕಾರದಿಂದ ವಿವರಣೆ ಸಹ ಕೇಳಿದೆ. ರಾಜ್ಯವು ತನ್ನ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಹ ಛೀಮಾರಿ ಹಾಕಿದೆ. ಆಧುನಿಕ ವೈದ್ಯ ಪದ್ಧತಿಯನ್ನು ಟೀಕಿಸಿದ್ದಕ್ಕಾಗಿ ರಾಮದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಇದನ್ನೂ ಓದಿ: ದಾರಿ ತಪ್ಪಿಸುವ ಜಾಹೀರಾತು ಕೇಸ್​: ಸುಪ್ರೀಂ ಕೋರ್ಟ್​ ಮುಂದೆ ಕ್ಷಮೆ ಕೋರಿದ ಬಾಬಾ ರಾಮ್​ದೇವ್​ - Patanjali

ನವದೆಹಲಿ: ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಹಾಗೂ ಖ್ಯಾತ ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ ಸುಪ್ರೀಂ ಕೋರ್ಟ್​ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ. ಇಂದು ಸುಪ್ರೀಂ ಕೋರ್ಟ್‌ಗೆ ಹೊಸ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂಕೋರ್ಟ್‌ಗೆ ನೀಡಲಾದ ಭರವಸೆ ಉಲ್ಲಂಘಿಸಿ ತಪ್ಪುದಾರಿ ಗೆಳೆಯುವ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ "ಬೇಷರತ್ ಕ್ಷಮೆಯಾಚನೆ" ವ್ಯಕ್ತಪಡಿಸಿದ್ದಾರೆ. ನಾಳೆ (ಮಾ.10) ವಿಚಾರಣೆಗೆ ನಡೆಯಲಿದ್ದು, ಅದಕ್ಕೂ ಮುನ್ನ ಅವರು ಕ್ಷಮೆ ಕೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರು ಸಲ್ಲಿಕೆ ಮಾಡಿದ್ದ ಅಸ್ಪಷ್ಟ ಮತ್ತು ಅಸಂಬದ್ಧ ಅಫಿಡವಿಟ್​ಗೆ ಬಗ್ಗೆ ಸುಪ್ರೀಂಕೋರ್ಟ್ ಕೆಂಡಾಮಂಡಲವಾಗಿತ್ತು. ಅಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ಇಬ್ಬರಿಗೂ ಛೀಮಾರಿ ಹಾಕಿ ಸೂಕ್ತ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಮತ್ತೊಂದು ಕೊನೆಯ ಅವಕಾಶ ನೀಡಿ ವಿಚಾರಣೆಯನ್ನು ಸಹ ಮುಂದೂಡಿತ್ತು. ಅಲ್ಲದೇ ಈ ಹಿಂದಿನ ವಿಚಾರಣೆಯಲ್ಲಿ ಕೋರ್ಟ್​ ನೀಡಿದ ನಿರ್ದೇಶಗಳನ್ನು ಪಾಲಿಸದೇ ನಿಯಮ ಮೀರಿದ್ದಲ್ಲದೇ, ತಪ್ಪಾದ ಅಫಿಡವಿಟ್​ ಸಲ್ಲಿಸಲಾಗಿದೆ. ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕೇಸ್​ ದಾಖಲಿಸಬಾರದೇಕೆ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ​ ಪ್ರಶ್ನಿಸಿತ್ತು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಭರವಸೆ ಪಾಲಿಸದಿದ್ದಕ್ಕಾಗಿ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನಿಲಾ ಅವರ ಪೀಠದ ಮುಂದೆ ಹಾಜರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಇಬ್ಬರೂ ಬೇಷರತ್​​ ಕ್ಷಮೆಯಾಚಿಸಿದ್ದಾರೆ. ಈ ಲೋಪಕ್ಕೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ಅದೇ ರೀತಿ ಭವಿಷ್ಯದಲ್ಲಿ ಈ ರೀತಿಯಾಗಿ ಪುನರಾವರ್ತನೆಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಲು ಬಯಸುತ್ತೇವೆ ಮತ್ತು ಕಾನೂನು ಮತ್ತು ನ್ಯಾಯದ ಘನತೆಯನ್ನು ಎತ್ತಿಹಿಡಿಯಲು ಬದ್ಧರಾಗಿದ್ದೇವೆ ಎಂದು ಅವರು ತಮ್ಮ ಅಫಿಡವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಫಿಡವಿಟ್‌ನಲ್ಲಿ ಏನಿದೆ?: ನವೆಂಬರ್ 21, 2023ರ ಈ ನ್ಯಾಯಾಲಯದ ಆದೇಶದ ಪ್ಯಾರಾ 3ರಲ್ಲಿ ದಾಖಲಿಸಲಾದ ಹೇಳಿಕೆಯ ಉಲ್ಲಂಘನೆಗಾಗಿ ನಾನು ಈ ಮೂಲಕ ಬೇಷರತ್ ಕ್ಷಮೆಯಾಚಿಸುತ್ತೇನೆ. ಭವಿಷ್ಯದಲ್ಲಿ ಅಂತಹ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡಲಾಗುವುದಿಲ್ಲ. ನವೆಂಬರ್ 22, 2023 ರಂದು ನಡೆದ ಪತ್ರಿಕಾಗೋಷ್ಠಿಗಾಗಿ ನಾನು ನನ್ನ ಬೇಷರತ್ ಕ್ಷಮೆಯಾಚಿಸುತ್ತೇನೆ. ಈ ಲೋಪಕ್ಕೆ ನಾನು ವಿಷಾದಿಸುತ್ತೇನೆ ಮತ್ತು ಭವಿಷ್ಯದಲ್ಲಿ ಇಂತಹುದ್ದು ಮತ್ತೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡುತ್ತೇನೆ. ಈ ಹೇಳಿಕೆಯ ಮೇಲಿನ ಉಲ್ಲಂಘನೆಗಾಗಿ ನಾನು ಕ್ಷಮೆಯಾಚಿಸುತ್ತೇನೆ. ನಾನು ಯಾವಾಗಲೂ ಕಾನೂನಿನ ಘನತೆ ಮತ್ತು ನ್ಯಾಯದ ಮಹಿಮೆಯನ್ನು ಎತ್ತಿಹಿಡಿಯುತ್ತೇನೆ ಎಂದು ಇಬ್ಬರೂ ತಮ್ಮ ಅಫಿಡವಿಟ್​ನಲ್ಲಿ ಬೇಷರತ್​​ ಕ್ಷಮೆಯಾಚಿಸಿದ್ದಾರೆ. ಬುಧವಾರ ವಿಚಾರಣೆ ನಡೆಯಲಿದ್ದು, ಅದಕ್ಕೂ ಮುನ್ನ ಕ್ಷಮೆ ಕೇಳಿದ್ದಾರೆ.

ಏಪ್ರಿಲ್ 2 ರಂದು, ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಮ್ಮ ಅಫಿಡವಿಟ್‌ನಲ್ಲಿ ಬಳಸಿರುವ ಭಾಷೆಗೆ ಸಂಬಂಧಿಸಿದಂತೆ ಅವರನ್ನು ಟೀಕಿಸಲು ಯಾವುದೇ ಪದಗಳಿಲ್ಲದ ಸುಪ್ರೀಂ ಕೋರ್ಟ್, ಕೋರ್ಟ್​ಗೆ ಸೂಕ್ತ ರೀತಿಯ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಅದರಲ್ಲಿ ಬಳಸಲಾದ ಭಾಷೆ ಮತ್ತು ಪದಗಳು ಸರಿಯಿಲ್ಲ. ನೀವು ನಿಯಮಗಳನ್ನು ಉಲ್ಲಂಘಿಸಿದ್ದೀರಿ. ನಿಮ್ಮ ವಿರುದ್ಧ ಯಾಕೆ ಕೇಸ್​ ದಾಖಲಿಸಿ ವಿಚಾರಣೆ ನಡೆಸಬಾರದು ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಪರ ವಕೀಲರಿಗೆ ಕೇಳಿತ್ತು.

ಅಫಿಡವಿಟ್​ನಲ್ಲಿ ಏನೂ ಬೇಕಾದರೂ ಬರೆದು ಕೋರ್ಟ್​ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸೂಕ್ತವಲ್ಲದ ಅಫಿಡವಿಟ್ ಸಲ್ಲಿಸಿದ್ದಕ್ಕೆ ಆರೋಪಿಗಳು ಮೊದಲು ಕೋರ್ಟ್​ ಮುಂದೆ ಕ್ಷಮೆ ಯಾಚಿಸಬೇಕಿತ್ತು ಎಂದಾಗ ಪತಂಜಲಿ ಪರ ವಕೀಲರು, ಬೇಷರತ್​ ಕ್ಷಮೆಯಾಚಿಸಲು ರಾಮ್​ದೇವ್​ ಮತ್ತು ಬಾಲಕೃಷ್ಣ ಸಿದ್ಧರಿದ್ದಾರೆ ಎಂದು ತಿಳಿಸಿದ್ದರು. ಬಳಿಕ ಬಾಬಾ ರಾಮ್​​ದೇವ್​ ಬೇಷರತ್​​ ಕ್ಷಮೆಯಾಚಿಸಿದ್ದರು. ಆದರೆ, ಕ್ಷಮೆಯನ್ನು ಸ್ವೀಕರಿಸಲು ಪೀಠವು ನಿರಾಕರಿಸಿತ್ತು. ನಿಮ್ಮ ಕ್ಷಮೆಯಾಚನೆ ತುಟಿಯಂಚಿನ ನಡೆಯಾಗಿದೆ. ನಿಮ್ಮ ನಡೆ ಮತ್ತು ಕಾರ್ಯ ಒಂದೇ ಆಗಿರಬೇಕು. ಇದನ್ನು ನೀವು ಪಾಲಿಸದಿದ್ದಕ್ಕಾಗಿ ಕೋರ್ಟ್​ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್​ ದಾಖಲಿಸಲಾಗುತ್ತದೆ. ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಧಿಕ್ಕರಿಸಿದ್ದಕ್ಕಾಗಿ ಇಡೀ ರಾಷ್ಟ್ರಕ್ಕೆ ಕ್ಷಮೆಯಾಚಿಸಬೇಕಾಗಿದೆ ಎಂದು ತಿಳಿಸಿತ್ತು.

ಇನ್ನು ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಉತ್ತರಾಖಂಡ ಸರ್ಕಾರದಿಂದ ವಿವರಣೆ ಸಹ ಕೇಳಿದೆ. ರಾಜ್ಯವು ತನ್ನ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಹ ಛೀಮಾರಿ ಹಾಕಿದೆ. ಆಧುನಿಕ ವೈದ್ಯ ಪದ್ಧತಿಯನ್ನು ಟೀಕಿಸಿದ್ದಕ್ಕಾಗಿ ರಾಮದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಇದನ್ನೂ ಓದಿ: ದಾರಿ ತಪ್ಪಿಸುವ ಜಾಹೀರಾತು ಕೇಸ್​: ಸುಪ್ರೀಂ ಕೋರ್ಟ್​ ಮುಂದೆ ಕ್ಷಮೆ ಕೋರಿದ ಬಾಬಾ ರಾಮ್​ದೇವ್​ - Patanjali

Last Updated : Apr 9, 2024, 10:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.