ETV Bharat / bharat

ಪ್ರತಿಪಕ್ಷ ನಾಯಕರ ಟೀಕೆಗಳಿಗೆ ಇಂದು ಸಂಜೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ - PM Modi

author img

By ANI

Published : Jul 2, 2024, 11:10 AM IST

ರಾಹುಲ್​ ಗಾಂಧಿ ಮತ್ತು ಪ್ರತಿಪಕ್ಷ ನಾಯಕರ ಟೀಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದ್ದು, ಏಳನೇ ದಿನಕ್ಕೆ ಕಾಲಿಟ್ಟಿದೆ.

PM Modi arrives in Parliament for NDA parliamentary party meeting
ಪ್ರಧಾನಿ ನರೇಂದ್ರ ಮೋದಿ (IANS)

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಲೋಕಸಭೆ ಕಲಾಪದಲ್ಲಿ ಉತ್ತರ ನೀಡಲಿದ್ದಾರೆ. ಅಗ್ನಿವೀರ್‌, ನೀಟ್​, ನೆಟ್ ಪರೀಕ್ಷಾ ಅಕ್ರಮಗಳು, ಹೊಸ ಅಪರಾಧ ಕಾನೂನುಗಳ ಜಾರಿ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವುದರ ಜೊತೆಗೆ ಪ್ರತಿಪಕ್ಷಗಳ ನಾಯಕರ ಟೀಕೆಗಳಿಗೂ ಅವರು ಉತ್ತರಿಸುವ ನಿರೀಕ್ಷೆ ಇದೆ.

ಸೋಮವಾರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ 100 ನಿಮಿಷಗಳ ಭಾಷಣದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಧರ್ಮದೊಂದಿಗೆ ರಾಜಕೀಯ ಬೆರೆಸುವುದು, ರೈತರನ್ನು ನಿರ್ಲಕ್ಷಿಸುವುದು, ನೋಟು ಅಮಾನ್ಯೀಕರಣ, ಜಿಎಸ್‌ಟಿ ಮತ್ತು ಅಗ್ನಿಪಥ್‌ನಂತಹ ದೋಷಪೂರಿತ ನೀತಿಗಳ ಕುರಿತು ಎನ್‌ಡಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ರಾಹುಲ್‌ ಭಾಷಣದ ಮಧ್ಯೆ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಬಿಜೆಪಿ ನಾಯಕರು ಎದ್ದು ನಿಂತು ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ರಾಹುಲ್‌ ತಮ್ಮ ಭಾಷಣ ಮುಂದುವರೆಸಿ ಟೀಕಾಪ್ರಹಾರ ಮಾಡಿದ್ದರು. ಪ್ರಧಾನಿ ಮೋದಿ ಇಂದು ಈ ಎಲ್ಲ ವಿಚಾರಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡುವ ಸಾಧ್ಯತೆ ದಟ್ಟವಾಗಿದೆ.

ಇಂದಿನ ಕಲಾಪಕ್ಕೂ ಮುನ್ನ, ಸಂಸತ್ತಿನ ಗ್ರಂಥಾಲಯ ಕಟ್ಟಡದ (ಪಿಎಲ್‌ಬಿ) ಜಿಎಂಸಿ ಬಾಲಯೋಗಿ ಆಡಿಟೋರಿಯಂನಲ್ಲಿ ಎನ್​ಡಿಎ ನಾಯಕರ ಸಭೆ ನಡೆಯಿತು. ಪ್ರಧಾನಿ ಮೋದಿ ಸಭೆಯ ನೇತೃತ್ವ ವಹಿಸಿಕೊಂಡಿದ್ದರು. ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ನಡೆಸಿದ ಮೊದಲ ಸಭೆ ಇದಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ರಾಮದಾಸ್ ಅಠವಳೆ, ಶಿವರಾಜ್ ಸಿಂಗ್ ಚೌಹಾಣ್, ಸಂಜಯ್ ಸೇಠ್ ಸೇರಿದಂತೆ ಇತರೆ ಸಚಿವರು ಮತ್ತು ಸಂಸದರು ಹಾಜರಿದ್ದರು.

ಇದನ್ನೂ ಓದಿ: ಲೋಕಸಭೆಲ್ಲಿ 100 ನಿಮಿಷಗಳ ನಿರರ್ಗಳ ಭಾಷಣ: ಎನ್‌ಡಿಎ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ - Rahul Gandhi slammed NDA

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಲೋಕಸಭೆ ಕಲಾಪದಲ್ಲಿ ಉತ್ತರ ನೀಡಲಿದ್ದಾರೆ. ಅಗ್ನಿವೀರ್‌, ನೀಟ್​, ನೆಟ್ ಪರೀಕ್ಷಾ ಅಕ್ರಮಗಳು, ಹೊಸ ಅಪರಾಧ ಕಾನೂನುಗಳ ಜಾರಿ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವುದರ ಜೊತೆಗೆ ಪ್ರತಿಪಕ್ಷಗಳ ನಾಯಕರ ಟೀಕೆಗಳಿಗೂ ಅವರು ಉತ್ತರಿಸುವ ನಿರೀಕ್ಷೆ ಇದೆ.

ಸೋಮವಾರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ 100 ನಿಮಿಷಗಳ ಭಾಷಣದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಧರ್ಮದೊಂದಿಗೆ ರಾಜಕೀಯ ಬೆರೆಸುವುದು, ರೈತರನ್ನು ನಿರ್ಲಕ್ಷಿಸುವುದು, ನೋಟು ಅಮಾನ್ಯೀಕರಣ, ಜಿಎಸ್‌ಟಿ ಮತ್ತು ಅಗ್ನಿಪಥ್‌ನಂತಹ ದೋಷಪೂರಿತ ನೀತಿಗಳ ಕುರಿತು ಎನ್‌ಡಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ರಾಹುಲ್‌ ಭಾಷಣದ ಮಧ್ಯೆ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಬಿಜೆಪಿ ನಾಯಕರು ಎದ್ದು ನಿಂತು ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ರಾಹುಲ್‌ ತಮ್ಮ ಭಾಷಣ ಮುಂದುವರೆಸಿ ಟೀಕಾಪ್ರಹಾರ ಮಾಡಿದ್ದರು. ಪ್ರಧಾನಿ ಮೋದಿ ಇಂದು ಈ ಎಲ್ಲ ವಿಚಾರಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡುವ ಸಾಧ್ಯತೆ ದಟ್ಟವಾಗಿದೆ.

ಇಂದಿನ ಕಲಾಪಕ್ಕೂ ಮುನ್ನ, ಸಂಸತ್ತಿನ ಗ್ರಂಥಾಲಯ ಕಟ್ಟಡದ (ಪಿಎಲ್‌ಬಿ) ಜಿಎಂಸಿ ಬಾಲಯೋಗಿ ಆಡಿಟೋರಿಯಂನಲ್ಲಿ ಎನ್​ಡಿಎ ನಾಯಕರ ಸಭೆ ನಡೆಯಿತು. ಪ್ರಧಾನಿ ಮೋದಿ ಸಭೆಯ ನೇತೃತ್ವ ವಹಿಸಿಕೊಂಡಿದ್ದರು. ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ನಡೆಸಿದ ಮೊದಲ ಸಭೆ ಇದಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ರಾಮದಾಸ್ ಅಠವಳೆ, ಶಿವರಾಜ್ ಸಿಂಗ್ ಚೌಹಾಣ್, ಸಂಜಯ್ ಸೇಠ್ ಸೇರಿದಂತೆ ಇತರೆ ಸಚಿವರು ಮತ್ತು ಸಂಸದರು ಹಾಜರಿದ್ದರು.

ಇದನ್ನೂ ಓದಿ: ಲೋಕಸಭೆಲ್ಲಿ 100 ನಿಮಿಷಗಳ ನಿರರ್ಗಳ ಭಾಷಣ: ಎನ್‌ಡಿಎ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ - Rahul Gandhi slammed NDA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.