ETV Bharat / bharat

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಕೆ - PM Modi Pay Tributes to Vajpayee

author img

By PTI

Published : Aug 16, 2024, 10:40 AM IST

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು.

PM Modi pay tributes to Vajpayee
ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಕೆ (ANI)

ನವದೆಹಲಿ: ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು. ವಾಜಪೇಯಿ ಅವರ ಸ್ಮಾರಕ 'ಸದೈವ್ ಅಟಲ್'ಗೆ ಕೇಂದ್ರ ಸಚಿವರು ಸೇರಿದಂತೆ ಇತರ ಗಣ್ಯರು ಮತ್ತು ವಿವಿಧ ಪಕ್ಷಗಳ ಮುಖಂಡರು ನಮನ ಸಲ್ಲಿಸಿದರು.

"ಅಟಲ್ ಜಿ ಅವರಿಗೆ ಪುಣ್ಯ ತಿಥಿಯಂದು ನಮನಗಳು. ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಳಿಂದ ಅಸಂಖ್ಯಾತ ಜನರು ಅವರನ್ನು ಸ್ಮರಿಸುತ್ತಿದ್ದಾರೆ. ಜನರಿಗೆ ಉತ್ತಮ ಗುಣಮಟ್ಟದ ಜೀವನ ನೀಡಲು ಅವರು ತಮ್ಮ ಇಡೀ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿದ್ದರು. ದೇಶದ ಬಗ್ಗೆ ಹೊಂದಿದ್ದ ದೃಷ್ಟಿಕೋನದ ಈಡೇರಿಕೆಗೆ ನಾವು ಕೆಲಸ ಮಾಡುತ್ತೇವೆ. ಇಂದು ಬೆಳಗ್ಗೆ 'ಸದೈವ್ ಅಟಲ್' ನಲ್ಲಿ ಇತರ ಗಣ್ಯರೊಂದಿಗೆ ಅವರಿಗೆ ನಮನ ಸಲ್ಲಿಸಲಾಯಿತು'' ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅತ್ಯುತ್ತಮ ವಾಗ್ಮಿಗಳೆಂದು ಹೆಸರಾಗಿದ್ದ ಗೌರವಾನ್ವಿತ ರಾಜಕಾರಣಿ, ಮಾಜಿ ಪ್ರಧಾನಿ ವಾಜಪೇಯಿ ಅವರು 90ರ ದಶಕದಲ್ಲಿ ಬಿಜೆಪಿಯ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಿಂದ ಮೊದಲ ಪ್ರಧಾನಿಯಾದರು. 1998-2004ರ ನಡುವೆ ಅವರ ಮುಂದಾಳತ್ವದಲ್ಲಿ ದೇಶವು ಹಲವು ಕ್ಷೇತ್ರಗಳಲ್ಲಿ ಸುಧಾರಣೆ ಮತ್ತು ಮೂಲಸೌಕರ್ಯಗಳ ಬೆಳವಣಿಗೆ ಕಂಡಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರು 2018ರಲ್ಲಿ 93ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ: ಇಸ್ರೋ ಮತ್ತೊಂದು ಮೈಲಿಗಲ್ಲು: ಭೂ ವೀಕ್ಷಣಾ ಉಪಗ್ರಹ-8 ಯಶಸ್ವಿ ಉಡಾವಣೆ - Successful launch of EOS 08

ನವದೆಹಲಿ: ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು. ವಾಜಪೇಯಿ ಅವರ ಸ್ಮಾರಕ 'ಸದೈವ್ ಅಟಲ್'ಗೆ ಕೇಂದ್ರ ಸಚಿವರು ಸೇರಿದಂತೆ ಇತರ ಗಣ್ಯರು ಮತ್ತು ವಿವಿಧ ಪಕ್ಷಗಳ ಮುಖಂಡರು ನಮನ ಸಲ್ಲಿಸಿದರು.

"ಅಟಲ್ ಜಿ ಅವರಿಗೆ ಪುಣ್ಯ ತಿಥಿಯಂದು ನಮನಗಳು. ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಳಿಂದ ಅಸಂಖ್ಯಾತ ಜನರು ಅವರನ್ನು ಸ್ಮರಿಸುತ್ತಿದ್ದಾರೆ. ಜನರಿಗೆ ಉತ್ತಮ ಗುಣಮಟ್ಟದ ಜೀವನ ನೀಡಲು ಅವರು ತಮ್ಮ ಇಡೀ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿದ್ದರು. ದೇಶದ ಬಗ್ಗೆ ಹೊಂದಿದ್ದ ದೃಷ್ಟಿಕೋನದ ಈಡೇರಿಕೆಗೆ ನಾವು ಕೆಲಸ ಮಾಡುತ್ತೇವೆ. ಇಂದು ಬೆಳಗ್ಗೆ 'ಸದೈವ್ ಅಟಲ್' ನಲ್ಲಿ ಇತರ ಗಣ್ಯರೊಂದಿಗೆ ಅವರಿಗೆ ನಮನ ಸಲ್ಲಿಸಲಾಯಿತು'' ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅತ್ಯುತ್ತಮ ವಾಗ್ಮಿಗಳೆಂದು ಹೆಸರಾಗಿದ್ದ ಗೌರವಾನ್ವಿತ ರಾಜಕಾರಣಿ, ಮಾಜಿ ಪ್ರಧಾನಿ ವಾಜಪೇಯಿ ಅವರು 90ರ ದಶಕದಲ್ಲಿ ಬಿಜೆಪಿಯ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಿಂದ ಮೊದಲ ಪ್ರಧಾನಿಯಾದರು. 1998-2004ರ ನಡುವೆ ಅವರ ಮುಂದಾಳತ್ವದಲ್ಲಿ ದೇಶವು ಹಲವು ಕ್ಷೇತ್ರಗಳಲ್ಲಿ ಸುಧಾರಣೆ ಮತ್ತು ಮೂಲಸೌಕರ್ಯಗಳ ಬೆಳವಣಿಗೆ ಕಂಡಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರು 2018ರಲ್ಲಿ 93ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ: ಇಸ್ರೋ ಮತ್ತೊಂದು ಮೈಲಿಗಲ್ಲು: ಭೂ ವೀಕ್ಷಣಾ ಉಪಗ್ರಹ-8 ಯಶಸ್ವಿ ಉಡಾವಣೆ - Successful launch of EOS 08

ETV Bharat Logo

Copyright © 2024 Ushodaya Enterprises Pvt. Ltd., All Rights Reserved.