ETV Bharat / bharat

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಲಿ; ಶಾಂತಿ ಸ್ಥಾಪನೆಗೆ ಸಹಕರಿಸಲು ಕಾಂಗ್ರೆಸ್‌ ಸಿದ್ಧ: ರಾಹುಲ್ ಗಾಂಧಿ - Rahul Gandhi Manipur Visit

ಮಣಿಪುರದಲ್ಲಿ ನಡೆದಿರುವುದು ದೊಡ್ಡ ದುರಂತ ಎಂದು ಬಣ್ಣಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಕಾಂಗ್ರೆಸ್ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದ್ದಾರೆ.

author img

By PTI

Published : Jul 9, 2024, 9:19 AM IST

Manipur  Rahul Gandhi  Manipur violence case  Manipur violence
ಮಣಿಪುರದಲ್ಲಿ ರಾಹುಲ್ ಗಾಂಧಿ (ANI)

ಇಂಫಾಲ(ಮಣಿಪುರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮಣಿಪುರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, ಜನಾಂಗೀಯ ಕಲಹಪೀಡಿತ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿ ಜನರಿಗೆ ಸಾಂತ್ವನ ಹೇಳಬೇಕು ಎಂದು ಒತ್ತಾಯಿಸಿದರು.

ಮಣಿಪುರದಲ್ಲಿ ಶಾಂತಿ ನೆಲೆಸುವಂತಾಗಲು ಎಲ್ಲ ರೀತಿಯ ಸಹಾಯ ನೀಡಲು ಕಾಂಗ್ರೆಸ್ ಸಿದ್ಧವಿದೆ. ಈ ನಿಟ್ಟಿನಲ್ಲಿ ಸರ್ಕಾರದ ಯಾವುದೇ ಕ್ರಮವನ್ನು ಪಕ್ಷ ಬೆಂಬಲಿಸುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ವರ್ಷದ ಮೇ ತಿಂಗಳಿನಲ್ಲಿ ಹಿಂಸಾಚಾರ ಪ್ರಾರಂಭವಾದ ನಂತರ ಮಣಿಪುರಕ್ಕಿದು ನನ್ನ ಮೂರನೇ ಭೇಟಿ. ಆದರೆ, ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ 200ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿದೆ'' ಎಂದು ತಿಳಿಸಿದರು.

ಇದಕ್ಕೂ ಮುನ್ನ ಮೂರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ರಾಹುಲ್, ಹಿಂಸಾಚಾರದಿಂದ ನಿರಾಶ್ರಿತರಾದ ಎರಡೂ ಜನಾಂಗೀಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದರು.

"ಪ್ರಧಾನಿ ಬಹಳ ಹಿಂದೆಯೇ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಅವರು ಇಲ್ಲಿಗೆ ಬರುವುದರಿಂದ ಜನರಿಗೆ ಧೈರ್ಯ ಬರುತ್ತದೆ" ಎಂದು ರಾಹುಲ್ ಗಾಂಧಿ ತಿಳಿಸಿದರು.

ಇದನ್ನೂ ಓದಿ: ಜಮ್ಮುವಿನ ಕಥುವಾದಲ್ಲಿ ಭೀಕರ ಉಗ್ರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ - MILITANTS ATTACKED

ಇಂಫಾಲ(ಮಣಿಪುರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮಣಿಪುರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, ಜನಾಂಗೀಯ ಕಲಹಪೀಡಿತ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿ ಜನರಿಗೆ ಸಾಂತ್ವನ ಹೇಳಬೇಕು ಎಂದು ಒತ್ತಾಯಿಸಿದರು.

ಮಣಿಪುರದಲ್ಲಿ ಶಾಂತಿ ನೆಲೆಸುವಂತಾಗಲು ಎಲ್ಲ ರೀತಿಯ ಸಹಾಯ ನೀಡಲು ಕಾಂಗ್ರೆಸ್ ಸಿದ್ಧವಿದೆ. ಈ ನಿಟ್ಟಿನಲ್ಲಿ ಸರ್ಕಾರದ ಯಾವುದೇ ಕ್ರಮವನ್ನು ಪಕ್ಷ ಬೆಂಬಲಿಸುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ವರ್ಷದ ಮೇ ತಿಂಗಳಿನಲ್ಲಿ ಹಿಂಸಾಚಾರ ಪ್ರಾರಂಭವಾದ ನಂತರ ಮಣಿಪುರಕ್ಕಿದು ನನ್ನ ಮೂರನೇ ಭೇಟಿ. ಆದರೆ, ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ 200ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿದೆ'' ಎಂದು ತಿಳಿಸಿದರು.

ಇದಕ್ಕೂ ಮುನ್ನ ಮೂರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ರಾಹುಲ್, ಹಿಂಸಾಚಾರದಿಂದ ನಿರಾಶ್ರಿತರಾದ ಎರಡೂ ಜನಾಂಗೀಯ ಗುಂಪುಗಳ ಸದಸ್ಯರೊಂದಿಗೆ ಸಂವಾದ ನಡೆಸಿದರು.

"ಪ್ರಧಾನಿ ಬಹಳ ಹಿಂದೆಯೇ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಅವರು ಇಲ್ಲಿಗೆ ಬರುವುದರಿಂದ ಜನರಿಗೆ ಧೈರ್ಯ ಬರುತ್ತದೆ" ಎಂದು ರಾಹುಲ್ ಗಾಂಧಿ ತಿಳಿಸಿದರು.

ಇದನ್ನೂ ಓದಿ: ಜಮ್ಮುವಿನ ಕಥುವಾದಲ್ಲಿ ಭೀಕರ ಉಗ್ರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ - MILITANTS ATTACKED

ETV Bharat Logo

Copyright © 2024 Ushodaya Enterprises Pvt. Ltd., All Rights Reserved.