ನವದೆಹಲಿ: ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಅವರು, ಸೋಮವಾರ ಬೆಳಗ್ಗೆ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದರು. ಸುಮಾರು 9.3 ಕೋಟಿ ರೈತರಿಗೆ ಅನುಕೂಲವಾಗಲಿರುವ ಸುಮಾರು 20,000 ಕೋಟಿ ರೂಪಾಯಿ ಮೊತ್ತದ 'ಪಿಎಂ ಕಿಸಾನ್ ನಿಧಿ'ಯ 17 ನೇ ಕಂತಿನ ಬಿಡುಗಡೆಗೆ ಅನುಮೋದನೆ ನೀಡಿದರು.
ಹಣ ಬಿಡುಗಡೆಗೆ ಸಹಿ ಹಾಕಿದ ಬಳಿಕ ಮಾತನಾಡಿದ ಮೋದಿ ಅವರು, ''ನಮ್ಮದು ‘ಕಿಸಾನ್ ಕಲ್ಯಾಣ’ (ರೈತರ ಕಲ್ಯಾಣ)ಕ್ಕೆ ಸಂಪೂರ್ಣ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ರೈತರಿಗೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಮಹತ್ವದ ಕೆಲಸ ಮಾಡಲು ನಿರ್ಧರಿಸಿದ್ದೇವೆ'' ಎಂದು ಅವರು ತಿಳಿಸಿದರು.
On first day in office as 3rd time PM, Modi signs file on Kisan Welfare
Read @ANI Story | https://t.co/A2aNhy8aK2#PMModi #KisanWelfare #NDA pic.twitter.com/4LjDHsNKfj
''ಈ ನಿರ್ಧಾರವು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಚುನಾವಣೆಯ ಗೆಲುವಿನ ನಂತರ ರೈತರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯನ್ನು ಸೂಚಿಸುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು. 72 ಸದಸ್ಯರ ಕೇಂದ್ರ ಸಚಿವರ ಸಮ್ಮುಖದಲ್ಲಿ ದಾಖಲೆಯ ಮೂರನೇ ಅವಧಿಗೆ ಮೋದಿ ಅವರು ಭಾನುವಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.