ETV Bharat / bharat

ಸಿಎಂ ಕೇಜ್ರಿವಾಲ್ ಜೈಲಿನಿಂದ ಕರ್ತವ್ಯ ನಿರ್ವಹಿಸುವುದಕ್ಕೆ ಯಾವುದೇ ನಿರ್ಬಂಧವಿದೆಯೇ?: ಸಾಲಿಸಿಟರ್​ ಜನರಲ್​ಗೆ ಪ್ರಶ್ನಿಸಿದ ಸುಪ್ರೀಂ - Supreme Court On KEJRIWAL

author img

By ETV Bharat Karnataka Team

Published : Sep 6, 2024, 10:46 PM IST

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಹಾರ್​ ಜೈಲಿನಲ್ಲಿದ್ದಾರೆ. ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಇಡಿ ಮತ್ತು ಜೂನ್ 26 ರಂದು ಕೇಂದ್ರ ತನಿಖಾ ದಳ ಸಿಬಿಐ ಅವರನ್ನು ಬಂಧಿಸಿತ್ತು.

Supreme Court
ಸಿಎಂ ಕೇಜ್ರಿವಾಲ್ ಜೈಲಿನಿಂದ ಕರ್ತವ್ಯ ನಿರ್ವಹಿಸುವುದಕ್ಕೆ ಯಾವುದೇ ನಿರ್ಬಂಧವಿದೆಯೇ? ಸಾಲಿಸಿಟರ್​ ಜನರಲ್​ಗೆ ಪ್ರಶ್ನಿಸಿದ ಸುಪ್ರೀಂ (ETV Bharat)

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಜೈಲಿನಿಂದ ಕರ್ತವ್ಯ ನಿರ್ವಹಿಸುವುದಕ್ಕೆ ಯಾವುದೇ ನಿರ್ಬಂಧವಿದೆಯೇ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ, ಹೆಚ್ಚುವರ ಸಾಲಿಸಿಟರ್​ ಜನರಲ್​ ಐಶ್ವರ್ಯ ಬಾಟಿ ಅವರನ್ನು ಪ್ರಶ್ನಿಸಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಮತ್ತು ಜೂನ್ 26 ರಂದು ಕೇಂದ್ರೀಯ ತನಿಖಾ ದಳ ಬಂಧನಕ್ಕೊಳಪಡಿಸಿದೆ. ಸದ್ಯ ಅವರು ಸಿಬಿಐ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು, ಕೇಜ್ರಿವಾಲ್​​​ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ತಾವು ಜೈಲಿನಲ್ಲಿರುವುದರಿಂದ, ತಮ್ಮ ಸಹಿ ಇಲ್ಲದ ಕಾರಣ ಅರ್ಹ ಅಪರಾಧಿಗಳ ಶಿಕ್ಷೆಯ ವಿನಾಯತಿಗೆ ಸಂಬಂಧಿಸಿದ ಕಡತಗಳು ವಿಳಂಬವಾಗುತ್ತಿವೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಜೈಲಿನಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಯಾವುದೇ ನಿರ್ಬಂಧದ ಆದೇಶವಿದೆಯೇ? ನೂರಾರು ಪ್ರಕರಣಗಳ ಮೇಲೆ ಪರಿಣಾಮ ಬೀರುವುದರಿಂದ ಅದನ್ನು ಪರಿಶೀಲಿಸಲು ಬಯಸುವುದಾಗಿ ಪೀಠ ಹೇಳಿದೆ.

ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ವಿವಿಧ ಆದೇಶಗಳು ಜಾರಿಯಾಗುವುದರಿಂದ, ಸಹಿ ಮಾಡಬೇಕಾದ ಹಲವು ಕಡತಗಳು ಇರುತ್ತವೆ ಎಂದು ಪೀಠ ಹೇಳಿದೆ. ಇಂತಹ ಮಹತ್ವದ ಕಡತಗಳಿಗೆ ಮುಖ್ಯಮಂತ್ರಿ ಸಹಿ ಹಾಕುವುದಕ್ಕೆ ಯಾವುದೇ ನಿರ್ಬಂಧವಿದೆಯೇ? ಎಂಬುದಾಗಿ ಸಾಲಿಸಿಟರ್​ ಜನರಲ್​ ಅವರನ್ನು ಪೀಠ ಪ್ರಶ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಭಾಟಿ, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಕೋರ್ಟ್​​ಗೆ ನೀಡಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರಗಳು, CrPC ಯ ಸೆಕ್ಷನ್ 432 ರ ಅಡಿಯಲ್ಲಿ, ಯಾವುದೇ ವ್ಯಕ್ತಿಯು ಅಪರಾಧಕ್ಕಾಗಿ ಶಿಕ್ಷೆಗೆ ಗುರಿಯಾದಾಗ ಸರ್ಕಾರವು ಯಾವುದೇ ಷರತ್ತುಗಳಿಲ್ಲದೆ ಅಥವಾ ಷರತ್ತುಗಳ ಮೇಲೆ ಅವನ ಶಿಕ್ಷೆಯ ಮರಣದಂಡನೆಯನ್ನು ಅಮಾನತುಗೊಳಿಸಬಹುದು. ಅಥವಾ ಶಿಕ್ಷೆಯ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ತಿದ್ದುಪಡಿ ಕೋರ್ಟ್​ಗೆ ವಾಪಸ್​ ಮಾಡಬಹುದು.

ಇದನ್ನು ಓದಿ: ಎತ್ತಿನಹೊಳೆ ಯೋಜನೆಯಿಂದ 7 ಜಿಲ್ಲೆಗಳಿಗೆ ನೀರು ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ - CM Siddaramaiah

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಜೈಲಿನಿಂದ ಕರ್ತವ್ಯ ನಿರ್ವಹಿಸುವುದಕ್ಕೆ ಯಾವುದೇ ನಿರ್ಬಂಧವಿದೆಯೇ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ, ಹೆಚ್ಚುವರ ಸಾಲಿಸಿಟರ್​ ಜನರಲ್​ ಐಶ್ವರ್ಯ ಬಾಟಿ ಅವರನ್ನು ಪ್ರಶ್ನಿಸಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಮತ್ತು ಜೂನ್ 26 ರಂದು ಕೇಂದ್ರೀಯ ತನಿಖಾ ದಳ ಬಂಧನಕ್ಕೊಳಪಡಿಸಿದೆ. ಸದ್ಯ ಅವರು ಸಿಬಿಐ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು, ಕೇಜ್ರಿವಾಲ್​​​ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ತಾವು ಜೈಲಿನಲ್ಲಿರುವುದರಿಂದ, ತಮ್ಮ ಸಹಿ ಇಲ್ಲದ ಕಾರಣ ಅರ್ಹ ಅಪರಾಧಿಗಳ ಶಿಕ್ಷೆಯ ವಿನಾಯತಿಗೆ ಸಂಬಂಧಿಸಿದ ಕಡತಗಳು ವಿಳಂಬವಾಗುತ್ತಿವೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಜೈಲಿನಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಯಾವುದೇ ನಿರ್ಬಂಧದ ಆದೇಶವಿದೆಯೇ? ನೂರಾರು ಪ್ರಕರಣಗಳ ಮೇಲೆ ಪರಿಣಾಮ ಬೀರುವುದರಿಂದ ಅದನ್ನು ಪರಿಶೀಲಿಸಲು ಬಯಸುವುದಾಗಿ ಪೀಠ ಹೇಳಿದೆ.

ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ವಿವಿಧ ಆದೇಶಗಳು ಜಾರಿಯಾಗುವುದರಿಂದ, ಸಹಿ ಮಾಡಬೇಕಾದ ಹಲವು ಕಡತಗಳು ಇರುತ್ತವೆ ಎಂದು ಪೀಠ ಹೇಳಿದೆ. ಇಂತಹ ಮಹತ್ವದ ಕಡತಗಳಿಗೆ ಮುಖ್ಯಮಂತ್ರಿ ಸಹಿ ಹಾಕುವುದಕ್ಕೆ ಯಾವುದೇ ನಿರ್ಬಂಧವಿದೆಯೇ? ಎಂಬುದಾಗಿ ಸಾಲಿಸಿಟರ್​ ಜನರಲ್​ ಅವರನ್ನು ಪೀಠ ಪ್ರಶ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಭಾಟಿ, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಕೋರ್ಟ್​​ಗೆ ನೀಡಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರಗಳು, CrPC ಯ ಸೆಕ್ಷನ್ 432 ರ ಅಡಿಯಲ್ಲಿ, ಯಾವುದೇ ವ್ಯಕ್ತಿಯು ಅಪರಾಧಕ್ಕಾಗಿ ಶಿಕ್ಷೆಗೆ ಗುರಿಯಾದಾಗ ಸರ್ಕಾರವು ಯಾವುದೇ ಷರತ್ತುಗಳಿಲ್ಲದೆ ಅಥವಾ ಷರತ್ತುಗಳ ಮೇಲೆ ಅವನ ಶಿಕ್ಷೆಯ ಮರಣದಂಡನೆಯನ್ನು ಅಮಾನತುಗೊಳಿಸಬಹುದು. ಅಥವಾ ಶಿಕ್ಷೆಯ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ತಿದ್ದುಪಡಿ ಕೋರ್ಟ್​ಗೆ ವಾಪಸ್​ ಮಾಡಬಹುದು.

ಇದನ್ನು ಓದಿ: ಎತ್ತಿನಹೊಳೆ ಯೋಜನೆಯಿಂದ 7 ಜಿಲ್ಲೆಗಳಿಗೆ ನೀರು ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.