ETV Bharat / bharat

ದೆಹಲಿ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವು - DELHI STAMPEDE

ನವದೆಹಲಿಯ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಮಹಾ ಕುಂಭಮೇಳದಲ್ಲಿ ಭಾಗಿಯಾಗಲು ಪ್ರಯಾಗ್​ರಾಜ್​ಗೆ ಹೊರಟಿದ್ದ ಭಕ್ತರ ನಡುವೆ ಭಾರೀ ಕಾಲ್ತುಳಿತ ಉಂಟಾಗಿದೆ.

ರೈಲು ಹತ್ತಲು ದೆಹಲಿ ನಿಲ್ದಾಣದಲ್ಲಿ ಕಿಕ್ಕಿರಿದು ತುಂಬಿರುವ ಜನರು
ರೈಲು ಹತ್ತಲು ದೆಹಲಿ ನಿಲ್ದಾಣದಲ್ಲಿ ಕಿಕ್ಕಿರಿದು ತುಂಬಿರುವ ಜನರು (PTI)
author img

By ETV Bharat Karnataka Team

Published : Feb 16, 2025, 6:58 AM IST

Updated : Feb 16, 2025, 11:16 AM IST

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹೊರಟ ಭಕ್ತಸಮೂಹದಲ್ಲಿ ಮತ್ತೊಂದು ಕಾಲ್ತುಳಿತ ದುರಂತ ಸಂಭವಿಸಿದೆ. ನವದೆಹಲಿಯ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಉಂಟಾದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಪೈಕಿ ಬಹುತೇಕ, 14 ಮಂದಿ ಮಹಿಳೆಯರು ಎಂದು ವರದಿಯಾಗಿದೆ. ಮೃತರು ಬಿಹಾರ , ದೆಹಲಿ ಮತ್ತು ಹರಿಯಾಣದವರೆಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ದೆಹಲಿಯ ಕೇಂದ್ರ ರೈಲು ನಿಲ್ದಾಣದ 14, 15ನೇ ಪ್ಲಾರ್ಟ್​ಫಾರ್ಮ್​ನಲ್ಲಿ ಘಟನೆ ನಡೆದಿದೆ. ಸಾವಿರಾರು ಜನರು ಎರಡೂ ಪ್ಲಾರ್ಟ್​ಫಾರ್ಮ್​ಗಳಲ್ಲಿ ಕಿಕ್ಕಿರಿದು ತುಂಬಿದ್ದರು. ರೈಲು ಹತ್ತಲು ಪ್ರಯತ್ನಿಸುತ್ತಿರುವ ವೇಳೆ ಕಾಲ್ತುಳಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 ರೈಲುಗಳು ತಡವಾಗಿದ್ದೇ ಕಾರಣವೇ?: ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ರಾತ್ರಿ 9.55ರ ಸುಮಾರಿನಲ್ಲಿ ಪ್ರಯಾಗ್​​ರಾಜ್​​ಗೆ ಹೊರಡಬೇಕಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್‌ಪ್ರೆಸ್‌ ರೈಲುಗಳ ಪ್ರಯಾಣ ನಿಗದಿತ ಸಮಯಕ್ಕಿಂತ ವಿಳಂಬ ಮಾಡಿದ್ದವು. ಇದರಿಂದ, ನಿಲ್ದಾಣವು ಸಾವಿರಾರು ಭಕ್ತರಿಂದ ತುಂಬಿ ತುಳುಕುತ್ತಿತ್ತು.

12, 13, 14ನೇ ಪ್ಲಾರ್ಟ್​ಫಾರ್ಮ್​ ಮೇಲೆ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ತುಂಬಿದ್ದರು. ಇನ್ನಷ್ಟು ಭಕ್ತರು ನಿಲ್ದಾಣದೊಳಗೆ ಬರುತ್ತಿರುವಾಗ ಎಸ್ಕಲೇಟರ್​​ ಬಳಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಸಾವು ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತರ ತಿಳಿಸಿದಂತೆ, "ಪ್ರತಿ ಗಂಟೆಗೆ 1,500 ಸಾಮಾನ್ಯ ಪ್ರಯಾಣ ಟಿಕೆಟ್‌ಗಳು ಮಾರಾಟವಾಗುತ್ತಿತ್ತು. ಇದರಿಂದಾಗಿ ನಿಲ್ದಾಣ ಜನರಿಂದ ಭರ್ತಿಯಾಗಿತ್ತು. ಎರಡು ರೈಲುಗಳು ತಡವಾಗಿ ಬಂದಿದ್ದಕ್ಕೆ ಮೂರು ಪ್ಲಾರ್ಟ್​ಫಾರ್ಮ್​ಗಳು ಜನರಿಂದ ತುಂಬಿದ್ದವು. 14 ಮತ್ತು 16ನೇ ಪ್ಲಾರ್ಟ್​ಫಾರ್ಮ್​ನ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ" ಎಂದರು.

ಕುಟುಂಬಸ್ಥರ ರೋದನ: ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರು ರೋದಿಸುತ್ತಿರುವುದು ರೈಲು ನಿಲ್ದಾಣದಲ್ಲಿ ಮನಕಲುಕುತ್ತಿತ್ತು. ಎಷ್ಟೋ ಜನರು ಟಿಕೆಟ್​ ಕಾಯ್ದಿರಿಸಿದ್ದರೂ, ಭಾರೀ ಜನಸಂದಣಿಯಿಂದಾಗಿ ರೈಲು ಹತ್ತಲೂ ಸಾಧ್ಯವಾಗಲಿಲ್ಲ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ರೈಲ್ವೆ ಅಧಿಕಾರಿಗಳು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿ, ಜನರನ್ನು ನಿಯಂತ್ರಿಸಿದ್ದಾರೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ದೆಹಲಿ ಅಗ್ನಿಶಾಮಕ ದಳ ಮುಖ್ಯಸ್ಥರು ತಿಳಿಸಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಆದೇಶ, ಹೆಚ್ಚುವರಿ ರೈಲುಗಳ ವ್ಯವಸ್ಥೆ: ರೈಲು ನಿಲ್ದಾಣದಲ್ಲಿ ಸಂಭವಿಸಿದ ದುರಂತಕ್ಕೆ ಸಂಭವಿಸಿದಂತೆ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಇಲಾಖೆ ಸೂಚಿಸಿದೆ. ಜೊತೆಗೆ, 4 ಹೆಚ್ಚುವರಿ ರೈಲುಗಳನ್ನು ಪ್ರಯಾಗ್​ರಾಜ್​​ಗೆ ಬಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ತಿಳಿಸಿದ್ದಾರೆ.

ಪ್ರಧಾನಿ ಮೋದಿ, ರಾಜನಾಥ್​​ ಸಿಂಗ್ ಸಂತಾಪ: ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್​ ಸಿಂಗ್​, ದೆಹಲಿ ಲೆಫ್ಟಿನೆಂಟ್ ಜನರಲ್ ವಿ.ಕೆ. ಸಕ್ಸೇನಾ, ಹಂಗಾಮಿ ಸಿಎಂ ಅತಿಶಿ ಸಂತಾಪ ಸೂಚಿಸಿದ್ದಾರೆ. "ಘಟನೆಯು ತೀವ್ರ ದುಃಖ ತರಿಸಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಜೊತೆ ನಾವಿರುತ್ತೇವೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ" ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ: ಕಾಲ್ತುಳಿತದಲ್ಲಿ ಮೃತಪಟ್ಟ ಜನರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಹಾಗು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರವನ್ನು ಭಾರತೀಯ ರೈಲ್ವೇ ಘೋಷಿಸಿದೆ.

ಇದನ್ನೂ ಓದಿ: 41 ಘಾಟ್​ಗಳಿದ್ದರೂ ಸಂಗಮ್​ ಘಾಟ್​ಗೆ ಭಕ್ತರು ನುಗ್ಗಿದ್ದು ಕಾಲ್ತುಳಿತಕ್ಕೆ ಪ್ರಮುಖ ಕಾರಣವಾಯ್ತೆ!?

ಕಾಲ್ತುಳಿತದ ನಂತರ ಮಹಾಕುಂಭದಲ್ಲಿ ಜನದಟ್ಟಣೆ ನಿರ್ವಹಣೆಗೆ ಹಲವು ಬದಲಾವಣೆ; ವಿವಿಐಪಿ ಪಾಸ್​ ರದ್ದು

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹೊರಟ ಭಕ್ತಸಮೂಹದಲ್ಲಿ ಮತ್ತೊಂದು ಕಾಲ್ತುಳಿತ ದುರಂತ ಸಂಭವಿಸಿದೆ. ನವದೆಹಲಿಯ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಉಂಟಾದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಪೈಕಿ ಬಹುತೇಕ, 14 ಮಂದಿ ಮಹಿಳೆಯರು ಎಂದು ವರದಿಯಾಗಿದೆ. ಮೃತರು ಬಿಹಾರ , ದೆಹಲಿ ಮತ್ತು ಹರಿಯಾಣದವರೆಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ದೆಹಲಿಯ ಕೇಂದ್ರ ರೈಲು ನಿಲ್ದಾಣದ 14, 15ನೇ ಪ್ಲಾರ್ಟ್​ಫಾರ್ಮ್​ನಲ್ಲಿ ಘಟನೆ ನಡೆದಿದೆ. ಸಾವಿರಾರು ಜನರು ಎರಡೂ ಪ್ಲಾರ್ಟ್​ಫಾರ್ಮ್​ಗಳಲ್ಲಿ ಕಿಕ್ಕಿರಿದು ತುಂಬಿದ್ದರು. ರೈಲು ಹತ್ತಲು ಪ್ರಯತ್ನಿಸುತ್ತಿರುವ ವೇಳೆ ಕಾಲ್ತುಳಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 ರೈಲುಗಳು ತಡವಾಗಿದ್ದೇ ಕಾರಣವೇ?: ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ರಾತ್ರಿ 9.55ರ ಸುಮಾರಿನಲ್ಲಿ ಪ್ರಯಾಗ್​​ರಾಜ್​​ಗೆ ಹೊರಡಬೇಕಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್‌ಪ್ರೆಸ್‌ ರೈಲುಗಳ ಪ್ರಯಾಣ ನಿಗದಿತ ಸಮಯಕ್ಕಿಂತ ವಿಳಂಬ ಮಾಡಿದ್ದವು. ಇದರಿಂದ, ನಿಲ್ದಾಣವು ಸಾವಿರಾರು ಭಕ್ತರಿಂದ ತುಂಬಿ ತುಳುಕುತ್ತಿತ್ತು.

12, 13, 14ನೇ ಪ್ಲಾರ್ಟ್​ಫಾರ್ಮ್​ ಮೇಲೆ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ತುಂಬಿದ್ದರು. ಇನ್ನಷ್ಟು ಭಕ್ತರು ನಿಲ್ದಾಣದೊಳಗೆ ಬರುತ್ತಿರುವಾಗ ಎಸ್ಕಲೇಟರ್​​ ಬಳಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಸಾವು ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತರ ತಿಳಿಸಿದಂತೆ, "ಪ್ರತಿ ಗಂಟೆಗೆ 1,500 ಸಾಮಾನ್ಯ ಪ್ರಯಾಣ ಟಿಕೆಟ್‌ಗಳು ಮಾರಾಟವಾಗುತ್ತಿತ್ತು. ಇದರಿಂದಾಗಿ ನಿಲ್ದಾಣ ಜನರಿಂದ ಭರ್ತಿಯಾಗಿತ್ತು. ಎರಡು ರೈಲುಗಳು ತಡವಾಗಿ ಬಂದಿದ್ದಕ್ಕೆ ಮೂರು ಪ್ಲಾರ್ಟ್​ಫಾರ್ಮ್​ಗಳು ಜನರಿಂದ ತುಂಬಿದ್ದವು. 14 ಮತ್ತು 16ನೇ ಪ್ಲಾರ್ಟ್​ಫಾರ್ಮ್​ನ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ" ಎಂದರು.

ಕುಟುಂಬಸ್ಥರ ರೋದನ: ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರು ರೋದಿಸುತ್ತಿರುವುದು ರೈಲು ನಿಲ್ದಾಣದಲ್ಲಿ ಮನಕಲುಕುತ್ತಿತ್ತು. ಎಷ್ಟೋ ಜನರು ಟಿಕೆಟ್​ ಕಾಯ್ದಿರಿಸಿದ್ದರೂ, ಭಾರೀ ಜನಸಂದಣಿಯಿಂದಾಗಿ ರೈಲು ಹತ್ತಲೂ ಸಾಧ್ಯವಾಗಲಿಲ್ಲ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ರೈಲ್ವೆ ಅಧಿಕಾರಿಗಳು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿ, ಜನರನ್ನು ನಿಯಂತ್ರಿಸಿದ್ದಾರೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ದೆಹಲಿ ಅಗ್ನಿಶಾಮಕ ದಳ ಮುಖ್ಯಸ್ಥರು ತಿಳಿಸಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಆದೇಶ, ಹೆಚ್ಚುವರಿ ರೈಲುಗಳ ವ್ಯವಸ್ಥೆ: ರೈಲು ನಿಲ್ದಾಣದಲ್ಲಿ ಸಂಭವಿಸಿದ ದುರಂತಕ್ಕೆ ಸಂಭವಿಸಿದಂತೆ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಇಲಾಖೆ ಸೂಚಿಸಿದೆ. ಜೊತೆಗೆ, 4 ಹೆಚ್ಚುವರಿ ರೈಲುಗಳನ್ನು ಪ್ರಯಾಗ್​ರಾಜ್​​ಗೆ ಬಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ತಿಳಿಸಿದ್ದಾರೆ.

ಪ್ರಧಾನಿ ಮೋದಿ, ರಾಜನಾಥ್​​ ಸಿಂಗ್ ಸಂತಾಪ: ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್​ ಸಿಂಗ್​, ದೆಹಲಿ ಲೆಫ್ಟಿನೆಂಟ್ ಜನರಲ್ ವಿ.ಕೆ. ಸಕ್ಸೇನಾ, ಹಂಗಾಮಿ ಸಿಎಂ ಅತಿಶಿ ಸಂತಾಪ ಸೂಚಿಸಿದ್ದಾರೆ. "ಘಟನೆಯು ತೀವ್ರ ದುಃಖ ತರಿಸಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಜೊತೆ ನಾವಿರುತ್ತೇವೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ" ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ: ಕಾಲ್ತುಳಿತದಲ್ಲಿ ಮೃತಪಟ್ಟ ಜನರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಹಾಗು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರವನ್ನು ಭಾರತೀಯ ರೈಲ್ವೇ ಘೋಷಿಸಿದೆ.

ಇದನ್ನೂ ಓದಿ: 41 ಘಾಟ್​ಗಳಿದ್ದರೂ ಸಂಗಮ್​ ಘಾಟ್​ಗೆ ಭಕ್ತರು ನುಗ್ಗಿದ್ದು ಕಾಲ್ತುಳಿತಕ್ಕೆ ಪ್ರಮುಖ ಕಾರಣವಾಯ್ತೆ!?

ಕಾಲ್ತುಳಿತದ ನಂತರ ಮಹಾಕುಂಭದಲ್ಲಿ ಜನದಟ್ಟಣೆ ನಿರ್ವಹಣೆಗೆ ಹಲವು ಬದಲಾವಣೆ; ವಿವಿಐಪಿ ಪಾಸ್​ ರದ್ದು

Last Updated : Feb 16, 2025, 11:16 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.