ETV Bharat / bharat

ಕರ್ನಾಟಕಕ್ಕೆ ಬರ ಪರಿಹಾರ ವಿಚಾರ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ - Drought Relief Fund

author img

By ETV Bharat Karnataka Team

Published : Apr 8, 2024, 3:51 PM IST

Updated : Apr 8, 2024, 4:18 PM IST

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರಕ್ಕೆ ನೋಟಿಸ್‌ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ.

supreme-court-notice-to-union-government-over-drought-relief-funds-to-karnataka
ಕರ್ನಾಟಕಕ್ಕೆ ಬರ ಪರಿಹಾರ ವಿಚಾರ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಇದರ ಜತೆಗೆ ಕರ್ನಾಟಕದ ಅರ್ಜಿ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪೈಪೋಟಿ ನಡೆಸದಂತೆ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೂ ತಿಳಿಸಿದೆ.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರವು ಈ ವಿಚಾರವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಒಂದು ಹಂತದಲ್ಲಿ ಸಮಸ್ಯೆಯನ್ನು ಪರಿಹರಿಸಬಹುದಿತ್ತು ಎಂದು ಹೇಳಿದರು. "ಈ ಮಾತುಕತೆ ಸಮಸ್ಯೆಯನ್ನು ಪರಿಹರಿಸುತ್ತವೆಯೇ?" ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠ ಪ್ರಶ್ನಿಸಿತು. ವಿವಿಧ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೊರೆ ಹೋಗುವುದನ್ನು ನ್ಯಾಯಾಲಯ ಗಮನಿಸುತ್ತಿದೆ. ಎರಡು ವಾರಗಳಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಪೀಠ​ ಮೆಹ್ತಾ ಅವರಿಗೆ ಸೂಚಿಸಿತು.

ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, "ಕಾನೂನಿನ ಪ್ರಕಾರ ಈ ವಿಷಯವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸಬೇಕಾಗಿತ್ತು. ಆದರೆ ಅದು 2023ರ ಡಿಸೆಂಬರ್​ನಲ್ಲಿ ಕೊನೆಗೊಂಡಿತು. ಕಾನೂನು ಇಲ್ಲಿದೆ, ಈ ವೇಳೆ ನಾವು ವಿವಾದಕ್ಕೆ ಇಳಿಯಬಾರದು" ಎಂದು ಹೇಳಿದರು.

ಸಂಕ್ಷಿಪ್ತ ವಿಚಾರಣೆ ನಡೆಸಿದ ನ್ಯಾಯಪೀಠ, ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಕೇಂದ್ರಕ್ಕೆ ನೋಟಿಸ್ ನೀಡಲು ನಿರ್ಧರಿಸಿತು. ಆದರೆ ತುಷಾರ್​ ಮೆಹ್ತಾ, ಈ ವಿಷಯದಲ್ಲಿ ನೋಟಿಸ್ ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೇಂದ್ರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ನಾವು ಹಿಂತಿರುಗಿ ಬಂದು ಈ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದು ಪೀಠಕ್ಕೆ ತಿಳಿಸಿದರು.

ನ್ಯಾಯಪೀಠದ ಸೂಚನೆಗಳನ್ನು ಸ್ವೀಕರಿಸುತ್ತೇವೆ ಮತ್ತು ಪ್ರತಿಕ್ರಿಯಿಸುತ್ತೀವೆ ಎಂದು ಮೆಹ್ತಾ ತಿಳಿಸಿದರು. ಮೆಹ್ತಾ ಅವರ ಪ್ರತಿಕ್ರಿಯೆಗೆ ಸಮ್ಮತಿ ಸೂಚಿಸಿದ ನ್ಯಾಯಪೀಠ, ಎರಡು ವಾರಗಳ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು.

ರಾಜ್ಯಕ್ಕೆ ಆರ್ಥಿಕ ನೆರವು ನೀಡದಿರುವ ಕೇಂದ್ರ ಸರ್ಕಾರದ ಕ್ರಮವು ಭಾರತದ ಸಂವಿಧಾನದ 14, 21ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಇದಲ್ಲದೆ, ಕೇಂದ್ರ ಸರ್ಕಾರದ ಕ್ರಮವು ವಿಪತ್ತು ನಿರ್ವಹಣಾ ಕಾಯ್ದೆ, 2005ರ ಶಾಸನಬದ್ಧ ಯೋಜನೆ, ಬರ ನಿರ್ವಹಣೆಯ ಕೈಪಿಡಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿಯ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ ಎಂದು ಕರ್ನಾಟಕ ಸರ್ಕಾರದ ಅರ್ಜಿಯಲ್ಲಿ ತಿಳಿಸಿದೆ.

ಇಂಟೆರ್-ಮಿನಿಸ್ಟರಿಯಲ್ ಸೆಂಟ್ರಲ್ ಟೀಮ್ (ಐಎಂಸಿಟಿ) ವರದಿ ಸಲ್ಲಿಸಿ ಆರು ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಮತ್ತು ಬರ ಪರಿಹಾರಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್​, ಜೈಲೇ ಗತಿ - BRS leader Kavitha

ನವದೆಹಲಿ: ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಇದರ ಜತೆಗೆ ಕರ್ನಾಟಕದ ಅರ್ಜಿ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪೈಪೋಟಿ ನಡೆಸದಂತೆ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೂ ತಿಳಿಸಿದೆ.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರವು ಈ ವಿಚಾರವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಒಂದು ಹಂತದಲ್ಲಿ ಸಮಸ್ಯೆಯನ್ನು ಪರಿಹರಿಸಬಹುದಿತ್ತು ಎಂದು ಹೇಳಿದರು. "ಈ ಮಾತುಕತೆ ಸಮಸ್ಯೆಯನ್ನು ಪರಿಹರಿಸುತ್ತವೆಯೇ?" ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠ ಪ್ರಶ್ನಿಸಿತು. ವಿವಿಧ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೊರೆ ಹೋಗುವುದನ್ನು ನ್ಯಾಯಾಲಯ ಗಮನಿಸುತ್ತಿದೆ. ಎರಡು ವಾರಗಳಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಪೀಠ​ ಮೆಹ್ತಾ ಅವರಿಗೆ ಸೂಚಿಸಿತು.

ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, "ಕಾನೂನಿನ ಪ್ರಕಾರ ಈ ವಿಷಯವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸಬೇಕಾಗಿತ್ತು. ಆದರೆ ಅದು 2023ರ ಡಿಸೆಂಬರ್​ನಲ್ಲಿ ಕೊನೆಗೊಂಡಿತು. ಕಾನೂನು ಇಲ್ಲಿದೆ, ಈ ವೇಳೆ ನಾವು ವಿವಾದಕ್ಕೆ ಇಳಿಯಬಾರದು" ಎಂದು ಹೇಳಿದರು.

ಸಂಕ್ಷಿಪ್ತ ವಿಚಾರಣೆ ನಡೆಸಿದ ನ್ಯಾಯಪೀಠ, ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಕೇಂದ್ರಕ್ಕೆ ನೋಟಿಸ್ ನೀಡಲು ನಿರ್ಧರಿಸಿತು. ಆದರೆ ತುಷಾರ್​ ಮೆಹ್ತಾ, ಈ ವಿಷಯದಲ್ಲಿ ನೋಟಿಸ್ ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೇಂದ್ರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ನಾವು ಹಿಂತಿರುಗಿ ಬಂದು ಈ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದು ಪೀಠಕ್ಕೆ ತಿಳಿಸಿದರು.

ನ್ಯಾಯಪೀಠದ ಸೂಚನೆಗಳನ್ನು ಸ್ವೀಕರಿಸುತ್ತೇವೆ ಮತ್ತು ಪ್ರತಿಕ್ರಿಯಿಸುತ್ತೀವೆ ಎಂದು ಮೆಹ್ತಾ ತಿಳಿಸಿದರು. ಮೆಹ್ತಾ ಅವರ ಪ್ರತಿಕ್ರಿಯೆಗೆ ಸಮ್ಮತಿ ಸೂಚಿಸಿದ ನ್ಯಾಯಪೀಠ, ಎರಡು ವಾರಗಳ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು.

ರಾಜ್ಯಕ್ಕೆ ಆರ್ಥಿಕ ನೆರವು ನೀಡದಿರುವ ಕೇಂದ್ರ ಸರ್ಕಾರದ ಕ್ರಮವು ಭಾರತದ ಸಂವಿಧಾನದ 14, 21ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಇದಲ್ಲದೆ, ಕೇಂದ್ರ ಸರ್ಕಾರದ ಕ್ರಮವು ವಿಪತ್ತು ನಿರ್ವಹಣಾ ಕಾಯ್ದೆ, 2005ರ ಶಾಸನಬದ್ಧ ಯೋಜನೆ, ಬರ ನಿರ್ವಹಣೆಯ ಕೈಪಿಡಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿಯ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ ಎಂದು ಕರ್ನಾಟಕ ಸರ್ಕಾರದ ಅರ್ಜಿಯಲ್ಲಿ ತಿಳಿಸಿದೆ.

ಇಂಟೆರ್-ಮಿನಿಸ್ಟರಿಯಲ್ ಸೆಂಟ್ರಲ್ ಟೀಮ್ (ಐಎಂಸಿಟಿ) ವರದಿ ಸಲ್ಲಿಸಿ ಆರು ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಮತ್ತು ಬರ ಪರಿಹಾರಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್​, ಜೈಲೇ ಗತಿ - BRS leader Kavitha

Last Updated : Apr 8, 2024, 4:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.