ETV Bharat / bharat

ಸಂಪರ್ಕಕ್ಕೆ ಸಿಗದ ಸೂರತ್‌ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ 6 ವರ್ಷ ಅಮಾನತು - Kumbhani Suspended

author img

By PTI

Published : Apr 26, 2024, 6:13 PM IST

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರನ್ನು ಕಾಂಗ್ರೆಸ್‌ ಅಮಾನತುಗೊಳಿಸಿದೆ.

NOMINATION REJECTED  GUJARAT CONGRESS  SURAT LOK SABHA CANDIDATE  NILESH KUMBHANI SUSPEND
ಏಳು ದಿನಗಳಿಂದ ಸಂಪರ್ಕಕ್ಕೆ ಸಿಗದ ನೀಲೇಶ್ ಕುಂಭಾನಿ ಆರು ವರ್ಷಗಳ ಅಮಾನತು: ಕಾಂಗ್ರೆಸ್​

ಅಹಮದಾಬಾದ್(ಗುಜರಾತ್​): ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ಇತ್ತೀಚಿಗೆ ತಿರಸ್ಕೃತಗೊಂಡಿತ್ತು. ಇದಾದ ನಂತರ ಕಣದಲ್ಲಿದ್ದ ಇತರ ಅಭ್ಯರ್ಥಿಗಳೂ ಕೂಡಾ ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಈ ಸ್ಥಾನದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಕಾಂಗ್ರೆಸ್ ಮಾತನಾಡಿತ್ತು. ಇದೀಗ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲುವು ತಳೆದಿದೆ. ನೀಲೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.

ನೀಲೇಶ್‌ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್‌ ಕ್ಷೇತ್ರದಿಂದ ನಾಮಪತ್ರ ರದ್ದತಿ ಹೊಣೆಯನ್ನು ನೀಲೇಶ್‌ ಮೇಲೆಯೇ ಸಮಿತಿ ಹೊರಿಸಿದೆ. ನಾಮಪತ್ರ ರದ್ದತಿ ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜೊತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಸಮಿತಿ ಹೇಳಿದೆ.

ಸೂರತ್‌ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್‌ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ ಎಂಬುದು ಗಮನಾರ್ಹ. ಕಾಂಗ್ರೆಸ್ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಕುಂಭಾಣಿ ಮನೆ ಮುಂದೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್ ಬಿಜೆಪಿಯವರ ಒತ್ತಾಯಕ್ಕೆ ಮಣಿದು ಅಥವಾ ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎಂಬುದು ಕಾಂಗ್ರೆಸ್ ಆರೋಪ. ಇದರ ನಡುವೆ ನೀಲೇಶ್ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ. ಆದರೆ ಪತ್ನಿ ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಇವಿಎಂಗಳ ಕುರಿತು ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಮೋದಿ ಪ್ರಶಂಸೆ; ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ - PM Modi

ಅಹಮದಾಬಾದ್(ಗುಜರಾತ್​): ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ಇತ್ತೀಚಿಗೆ ತಿರಸ್ಕೃತಗೊಂಡಿತ್ತು. ಇದಾದ ನಂತರ ಕಣದಲ್ಲಿದ್ದ ಇತರ ಅಭ್ಯರ್ಥಿಗಳೂ ಕೂಡಾ ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಈ ಸ್ಥಾನದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಕಾಂಗ್ರೆಸ್ ಮಾತನಾಡಿತ್ತು. ಇದೀಗ ಕುಂಭಾಣಿ ಬಗ್ಗೆಯೂ ಪಕ್ಷ ಕಟ್ಟುನಿಟ್ಟಿನ ನಿಲುವು ತಳೆದಿದೆ. ನೀಲೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.

ನೀಲೇಶ್‌ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್‌ ಕ್ಷೇತ್ರದಿಂದ ನಾಮಪತ್ರ ರದ್ದತಿ ಹೊಣೆಯನ್ನು ನೀಲೇಶ್‌ ಮೇಲೆಯೇ ಸಮಿತಿ ಹೊರಿಸಿದೆ. ನಾಮಪತ್ರ ರದ್ದತಿ ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜೊತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಸಮಿತಿ ಹೇಳಿದೆ.

ಸೂರತ್‌ ಕ್ಷೇತ್ರದಿಂದ ನಾಮಪತ್ರ ರದ್ದಾದ ಬಳಿಕ ನೀಲೇಶ್‌ ಕುಂಭಾಣಿ ಮಾಧ್ಯಮಗಳ ಮುಂದೆ ಬಂದಿಲ್ಲ ಎಂಬುದು ಗಮನಾರ್ಹ. ಕಾಂಗ್ರೆಸ್ ನಾಯಕರು ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಕುಂಭಾಣಿ ಮನೆ ಮುಂದೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್ ಬಿಜೆಪಿಯವರ ಒತ್ತಾಯಕ್ಕೆ ಮಣಿದು ಅಥವಾ ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎಂಬುದು ಕಾಂಗ್ರೆಸ್ ಆರೋಪ. ಇದರ ನಡುವೆ ನೀಲೇಶ್ ಯಾವಾಗ ಬೇಕಾದರೂ ಬಿಜೆಪಿ ಸೇರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ. ಆದರೆ ಪತ್ನಿ ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಇವಿಎಂಗಳ ಕುರಿತು ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಮೋದಿ ಪ್ರಶಂಸೆ; ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ - PM Modi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.