ETV Bharat / bharat

ಮಾಫಿಯಾ, ಕ್ರಿಮಿನಲ್‌ಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಲು ಯೋಗಿ ಪ್ರತಿಜ್ಞೆ - continue crackdown on mafia

author img

By ETV Bharat Karnataka Team

Published : Jun 14, 2024, 6:35 AM IST

ಲೋಕಸಭಾ ಚುನಾವಣೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್​ ಇದೇ ಮೊದಲ ಬಾರಿಗೆ ಕಾನೂನು ಸುವ್ಯವಸ್ಥೆ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ, ಯಾವುದೇ ಕಾರಣಕ್ಕೂ ಮಾಫಿಯಾ, ಕ್ರಿಮಿನಲ್​​ಗಳ ವಿರುದ್ಧ ಮೃದು ನೀತಿ ಅನುಸರಿಸಲು ಸಾಧ್ಯವೇ ಇಲ್ಲ ಎಂದು ಗುಡುಗಿದ್ದಾರೆ.

UP CM Yogi Adityanath vows to continue crackdown on mafia, criminals
ಮಾಫಿಯಾ, ಕ್ರಿಮಿನಲ್‌ಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಲು ಯೋಗಿ ಪ್ರತಿಜ್ಞೆ (IANS)

ಲಖನೌ, ಉತ್ತರಪ್ರದೇಶ: ರಾಜ್ಯದಲ್ಲಿ ಮಾಫಿಯಾಗಳು ಮತ್ತು ಅಪರಾಧಿಗಳ ವಿರುದ್ಧ ಕ್ರಮ ತೀವ್ರಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಸಂದೇಶ ರವಾನಿಸಿದ್ದಾರೆ. ಪ್ರತಿಯೊಬ್ಬ ಬಡ, ಶೋಷಿತ, ತುಳಿತಕ್ಕೊಳಗಾದ ಮತ್ತು ವಂಚಿತ ವ್ಯಕ್ತಿಯ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಭೂಮಾಫಿಯಾ ಅಥವಾ ಇತರ ಯಾವುದೇ ಮಾಫಿಯಾ ಆಗಿರಲಿ, ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2024ರ ಲೋಕಸಭೆ ಚುನಾವಣೆಯ ನಂತರ ಮೊದಲ ಬಾರಿಗೆ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಸಂವಹನ, ಸಮನ್ವಯ ಮತ್ತು ಜನರ ವಿಶ್ವಾಸ ಗಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ವಲಯ ಮಟ್ಟದಲ್ಲಿ ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು ನೀತಿಗೆ ಅನುಗುಣವಾಗಿ, ರಾಜ್ಯ ಸಚಿವಾಲಯದಿಂದ ಬ್ಲಾಕ್ ಮಟ್ಟದವರೆಗೆ ಅನೈತಿಕ ವಹಿವಾಟುಗಳನ್ನು ಗುರಿಯಾಗಿಟ್ಟುಕೊಂಡು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಎಲ್ಲ ಜಿಲ್ಲೆಗಳ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಪರಿಶೀಲಿಸಿದರು. ಇನ್ನು ವಿಐಪಿ ಸಂಸ್ಕೃತಿಯನ್ನು ಪ್ರಚಾರ ಮಾಡಬಾರದು, ಸರಕಾರಿ ಹಾಗೂ ಖಾಸಗಿ ವಾಹನಗಳಲ್ಲಿ ಹೂಟರ್​ ಹಾಗೂ ಹಾರ್ನ್‌ಗಳನ್ನು ಬಳಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಬ್ಬಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಸಂಪ್ರದಾಯಗಳಿಗೆ ಯಾವುದೇ ಪ್ರೋತ್ಸಾಹ ನೀಡಬಾರದು ಎಂದು ಅವರು ಖಡಕ್​ ಸಂದೇಶ ರವಾನಿಸಿದರು.

ಜೂನ್ 16 ರಂದು ಗಂಗಾ ದಸರಾ, ಜೂನ್ 17 ರಂದು ಬಕ್ರೀದ್, ಜೂನ್ 18 ರಂದು ಜ್ಯೇಷ್ಠ ಮಾಸದ ಮಂಗಲ್ ಹಬ್ಬ ಮತ್ತು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಮೊಹರಂ ಮತ್ತು ಕನ್ವರ್ ಯಾತ್ರೆ ಜುಲೈನಲ್ಲಿ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಡಿಸಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ಮತ್ತು ಆಡಳಿತ ದಿನದ 24 ಗಂಟೆಗಳೂ ಕ್ರಿಯಾಶೀಲವಾಗಿರಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಯಾವುದೇ ಘಟನೆ ರಾಜ್ಯದಲ್ಲಿ ನಡೆಯದಂತೆ ಎಚ್ಚರ ವಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅಂದು ಲೋಕಾಯುಕ್ತ, ಇಂದು ಸಿಐಡಿ: 2ನೇ ಬಾರಿ ಅರೆಸ್ಟ್ ಆಗ್ತಾರಾ ಬಿ.ಎಸ್.ಯಡಿಯೂರಪ್ಪ? - Yediyurappa POCSO Case

ಲಖನೌ, ಉತ್ತರಪ್ರದೇಶ: ರಾಜ್ಯದಲ್ಲಿ ಮಾಫಿಯಾಗಳು ಮತ್ತು ಅಪರಾಧಿಗಳ ವಿರುದ್ಧ ಕ್ರಮ ತೀವ್ರಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಸಂದೇಶ ರವಾನಿಸಿದ್ದಾರೆ. ಪ್ರತಿಯೊಬ್ಬ ಬಡ, ಶೋಷಿತ, ತುಳಿತಕ್ಕೊಳಗಾದ ಮತ್ತು ವಂಚಿತ ವ್ಯಕ್ತಿಯ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಭೂಮಾಫಿಯಾ ಅಥವಾ ಇತರ ಯಾವುದೇ ಮಾಫಿಯಾ ಆಗಿರಲಿ, ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2024ರ ಲೋಕಸಭೆ ಚುನಾವಣೆಯ ನಂತರ ಮೊದಲ ಬಾರಿಗೆ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಸಂವಹನ, ಸಮನ್ವಯ ಮತ್ತು ಜನರ ವಿಶ್ವಾಸ ಗಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ವಲಯ ಮಟ್ಟದಲ್ಲಿ ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು ನೀತಿಗೆ ಅನುಗುಣವಾಗಿ, ರಾಜ್ಯ ಸಚಿವಾಲಯದಿಂದ ಬ್ಲಾಕ್ ಮಟ್ಟದವರೆಗೆ ಅನೈತಿಕ ವಹಿವಾಟುಗಳನ್ನು ಗುರಿಯಾಗಿಟ್ಟುಕೊಂಡು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಎಲ್ಲ ಜಿಲ್ಲೆಗಳ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಪರಿಶೀಲಿಸಿದರು. ಇನ್ನು ವಿಐಪಿ ಸಂಸ್ಕೃತಿಯನ್ನು ಪ್ರಚಾರ ಮಾಡಬಾರದು, ಸರಕಾರಿ ಹಾಗೂ ಖಾಸಗಿ ವಾಹನಗಳಲ್ಲಿ ಹೂಟರ್​ ಹಾಗೂ ಹಾರ್ನ್‌ಗಳನ್ನು ಬಳಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಬ್ಬಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಸಂಪ್ರದಾಯಗಳಿಗೆ ಯಾವುದೇ ಪ್ರೋತ್ಸಾಹ ನೀಡಬಾರದು ಎಂದು ಅವರು ಖಡಕ್​ ಸಂದೇಶ ರವಾನಿಸಿದರು.

ಜೂನ್ 16 ರಂದು ಗಂಗಾ ದಸರಾ, ಜೂನ್ 17 ರಂದು ಬಕ್ರೀದ್, ಜೂನ್ 18 ರಂದು ಜ್ಯೇಷ್ಠ ಮಾಸದ ಮಂಗಲ್ ಹಬ್ಬ ಮತ್ತು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಮೊಹರಂ ಮತ್ತು ಕನ್ವರ್ ಯಾತ್ರೆ ಜುಲೈನಲ್ಲಿ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಡಿಸಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ಮತ್ತು ಆಡಳಿತ ದಿನದ 24 ಗಂಟೆಗಳೂ ಕ್ರಿಯಾಶೀಲವಾಗಿರಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಯಾವುದೇ ಘಟನೆ ರಾಜ್ಯದಲ್ಲಿ ನಡೆಯದಂತೆ ಎಚ್ಚರ ವಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅಂದು ಲೋಕಾಯುಕ್ತ, ಇಂದು ಸಿಐಡಿ: 2ನೇ ಬಾರಿ ಅರೆಸ್ಟ್ ಆಗ್ತಾರಾ ಬಿ.ಎಸ್.ಯಡಿಯೂರಪ್ಪ? - Yediyurappa POCSO Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.