ETV Bharat / bharat

ಲೋಕ ಕದನದಲ್ಲಿ ಹಿನ್ನಡೆ: ಸರ್ಕಾರದ ಮಟ್ಟದಲ್ಲಿ ಬದಲಾವಣೆಗೆ ಸಿಎಂ ಯೋಗಿ ಚಿಂತನೆ - cm yogi meetings

author img

By ETV Bharat Karnataka Team

Published : Jun 6, 2024, 12:53 PM IST

ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಉಂಟಾಗಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಕೋಪಕ್ಕೆ ಕಾರಣವಾಗಿದೆ. ಇದರಿಂದ ಸರ್ಕಾರದ ಮಟ್ಟದಲ್ಲಿ ಬದಲಾವಣೆ ಮಾಡಲು ಸಜ್ಜಾಗಿದ್ದಾರೆ.

ಸರ್ಕಾರಕ್ಕೆ ವೇಗ ನೀಡಲು ಸಿಎಂ ಯೋಗಿ ಚಿಂತನೆ
ಸರ್ಕಾರಕ್ಕೆ ವೇಗ ನೀಡಲು ಸಿಎಂ ಯೋಗಿ ಚಿಂತನೆ (ETV Bharat)

ಲಖನೌ (ಉತ್ತರಪ್ರದೇಶ): ದೆಹಲಿ ಗದ್ದುಗೆಗೆ ಬುನಾದಿ ಹಾಕಿಕೊಡುವ ರಾಜ್ಯವಾದ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಇದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಕಂಗೆಡೆಸಿದ್ದಲ್ಲದೇ, ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ. ಸರ್ಕಾರದ ಮಟ್ಟದಲ್ಲಿ ಆದ ಲೋಪಗಳ ಬಗ್ಗೆ ಅಧಿಕಾರಿಗಳ ಚಳಿ ಬಿಡಿಸಲು ಹಿರಿಯ ಅಧಿಕಾರಿಗಳ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದವರಿಗೆ ಶಿಕ್ಷೆ ವಿಧಿಸಲೂ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಕರೆಸಿ ಇಲಾಖಾ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನೂ ಸಭೆಗೆ ಕರೆದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಪ್ರಮುಖ ಸಭೆ ಇದಾಗಿದೆ. ಇತ್ತ ಬುಲಂದ್‌ಶಹರ್‌ನಲ್ಲಿ ಆಹಾರ ಧಾನ್ಯ ವಿತರಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.

ಸಿಟ್ಟಿನಲ್ಲಿರುವ ಸಿಎಂ ಯೋಗಿ: ರಾಜ್ಯದಲ್ಲಿ ಅಭಿವೃದ್ಧಿ ಪರ್ವವೇ ತಂದಿದ್ದರೂ, ಪಕ್ಷಕ್ಕೆ ತೀವ್ರ ಆಘಾತ ನೀಡುವ ಫಲಿತಾಂಶ ಬಂದಿರುವುದು ಸಿಎಂ ಯೋಗಿ ಅವರ ಕೋಪಕ್ಕೆ ಕಾರಣವಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಲು ಸಭೆಯಲ್ಲಿ ವಿಭಿನ್ನವಾಗಿ ವರ್ತಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು, ಬಿಜೆಪಿ ಕಾರ್ಯಕರ್ತರ ಅಹವಾಲುಗಳಿಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಮಾತುಗಳು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಪಕ್ಷದ ಕಾರ್ಯಕರ್ತರು ಕೂಡ ಅಧಿಕಾರಿಗಳ ಅವ್ಯವಹಾರದ ಬಗ್ಗೆ ಸರ್ಕಾರಕ್ಕೆ ಈಗಾಗಲೇ ದೂರುಗಳನ್ನು ಸಲ್ಲಿಸಿದ್ದಾರೆ.

ಇದರಿಂದಾಗಿ ಚುನಾವಣೆ ಮುಗಿದ ಬೆನ್ನಲ್ಲೇ, ಅಲರ್ಟ್​ ಆಗಿರುವ ಸಿಎಂ ಯೋಗಿ, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲ ಇಲಾಖೆಗಳ ಕಾಮಗಾರಿಗಳ ಸಂಪೂರ್ಣ ವಿವರ ಕೇಳಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ, ಯೋಜನೆಗಳ ಪ್ರಗತಿ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಹೇಗಿದೆ ಎಂಬುದರ ಪೂರ್ಣ ಮಾಹಿತಿ ಸಮೇತ ಸಭೆಗೆ ಬರಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಧಿಕಾರಿಗಳು ಆಯಾ ಇಲಾಖೆಗಳಲ್ಲಿ ಮಾಡಿದ ಸಾಧನೆಗಳ ವಿಮರ್ಶೆ ನಡೆಸಲಿದ್ದಾರೆ. ನಿರ್ಲಕ್ಷ್ಯ ವಹಿಸಿದವರಿಗೆ ನೋಟಿಸ್, ಅಮಾನತು ಮಾಡುವ ಸಾಧ್ಯತೆಯೂ ಇದೆ. ಜೊತೆಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಸಾಮರ್ಥ್ಯದ ಆಧಾರದ ಮೇಲೆ ಪುನಾರಚನೆ ಕೂಡ ನಡೆಯಲಿದೆ.

ಅವ್ಯವಹಾರ, ಅಧಿಕಾರಿಗಳ ಅಮಾನತು: ಬುಲಂದ್‌ಶಹರ್‌ನಲ್ಲಿ ಆಹಾರ ಧಾನ್ಯಗಳ ವಿತರಣೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೆಲ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಆಹಾರ ಮತ್ತು ಲಾಜಿಸ್ಟಿಕ್ಸ್ ಆಯುಕ್ತ ಸೌರಭ್ ಬಾಬು ಅವರು ಜಿಲ್ಲಾ ಸರಬರಾಜು ಅಧಿಕಾರಿ ಸುನಿಲ್ ಸಿಂಗ್, ಜಿಲ್ಲಾ ಆಹಾರ ಮಾರುಕಟ್ಟೆ ಅಧಿಕಾರಿ ಜಿಯಾ ಅಹ್ಮದ್, ಮಾರ್ಕೆಟಿಂಗ್ ಇನ್ಸ್​ಪೆಕ್ಟರ್ ಸುಧೀರ್ ಕುಮಾರ್, ಸರಬರಾಜು ನಿರೀಕ್ಷಕ ವಿವೇಕ್ ಶ್ರೀವಾಸ್ತವ್ ಅವರನ್ನು ಅಮಾನತುಗೊಳಿಸಿದ್ದಾರೆ. ಇದೇ ವೇಳೆ ಸಾರಿಗೆ ಸಂಸ್ಥೆಯ ಎಂ.ಎಸ್, ರವೀಂದ್ರ ಸಿಂಗ್ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ಆಹಾರ ಇಲಾಖೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿಗೆ ಆಘಾತ ನೀಡಿದ ವೋಟ್​ ಶೇರ್​​: ಜಸ್ಟ್​ ಶೇ 0.7ರಷ್ಟು ಕಡಿಮೆ, ಬರೋಬ್ಬರಿ 63 ಸ್ಥಾನ ಖೋತಾ, ಕಾಂಗ್ರೆಸ್​​​ಗೆ ಡಬಲ್ ಧಮಾಕಾ! - VOTE SHARE EFFECT ON BJP

ಲಖನೌ (ಉತ್ತರಪ್ರದೇಶ): ದೆಹಲಿ ಗದ್ದುಗೆಗೆ ಬುನಾದಿ ಹಾಕಿಕೊಡುವ ರಾಜ್ಯವಾದ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಇದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಕಂಗೆಡೆಸಿದ್ದಲ್ಲದೇ, ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ. ಸರ್ಕಾರದ ಮಟ್ಟದಲ್ಲಿ ಆದ ಲೋಪಗಳ ಬಗ್ಗೆ ಅಧಿಕಾರಿಗಳ ಚಳಿ ಬಿಡಿಸಲು ಹಿರಿಯ ಅಧಿಕಾರಿಗಳ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದವರಿಗೆ ಶಿಕ್ಷೆ ವಿಧಿಸಲೂ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಕರೆಸಿ ಇಲಾಖಾ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನೂ ಸಭೆಗೆ ಕರೆದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಪ್ರಮುಖ ಸಭೆ ಇದಾಗಿದೆ. ಇತ್ತ ಬುಲಂದ್‌ಶಹರ್‌ನಲ್ಲಿ ಆಹಾರ ಧಾನ್ಯ ವಿತರಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.

ಸಿಟ್ಟಿನಲ್ಲಿರುವ ಸಿಎಂ ಯೋಗಿ: ರಾಜ್ಯದಲ್ಲಿ ಅಭಿವೃದ್ಧಿ ಪರ್ವವೇ ತಂದಿದ್ದರೂ, ಪಕ್ಷಕ್ಕೆ ತೀವ್ರ ಆಘಾತ ನೀಡುವ ಫಲಿತಾಂಶ ಬಂದಿರುವುದು ಸಿಎಂ ಯೋಗಿ ಅವರ ಕೋಪಕ್ಕೆ ಕಾರಣವಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಲು ಸಭೆಯಲ್ಲಿ ವಿಭಿನ್ನವಾಗಿ ವರ್ತಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು, ಬಿಜೆಪಿ ಕಾರ್ಯಕರ್ತರ ಅಹವಾಲುಗಳಿಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಮಾತುಗಳು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಪಕ್ಷದ ಕಾರ್ಯಕರ್ತರು ಕೂಡ ಅಧಿಕಾರಿಗಳ ಅವ್ಯವಹಾರದ ಬಗ್ಗೆ ಸರ್ಕಾರಕ್ಕೆ ಈಗಾಗಲೇ ದೂರುಗಳನ್ನು ಸಲ್ಲಿಸಿದ್ದಾರೆ.

ಇದರಿಂದಾಗಿ ಚುನಾವಣೆ ಮುಗಿದ ಬೆನ್ನಲ್ಲೇ, ಅಲರ್ಟ್​ ಆಗಿರುವ ಸಿಎಂ ಯೋಗಿ, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲ ಇಲಾಖೆಗಳ ಕಾಮಗಾರಿಗಳ ಸಂಪೂರ್ಣ ವಿವರ ಕೇಳಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ, ಯೋಜನೆಗಳ ಪ್ರಗತಿ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಹೇಗಿದೆ ಎಂಬುದರ ಪೂರ್ಣ ಮಾಹಿತಿ ಸಮೇತ ಸಭೆಗೆ ಬರಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಧಿಕಾರಿಗಳು ಆಯಾ ಇಲಾಖೆಗಳಲ್ಲಿ ಮಾಡಿದ ಸಾಧನೆಗಳ ವಿಮರ್ಶೆ ನಡೆಸಲಿದ್ದಾರೆ. ನಿರ್ಲಕ್ಷ್ಯ ವಹಿಸಿದವರಿಗೆ ನೋಟಿಸ್, ಅಮಾನತು ಮಾಡುವ ಸಾಧ್ಯತೆಯೂ ಇದೆ. ಜೊತೆಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಸಾಮರ್ಥ್ಯದ ಆಧಾರದ ಮೇಲೆ ಪುನಾರಚನೆ ಕೂಡ ನಡೆಯಲಿದೆ.

ಅವ್ಯವಹಾರ, ಅಧಿಕಾರಿಗಳ ಅಮಾನತು: ಬುಲಂದ್‌ಶಹರ್‌ನಲ್ಲಿ ಆಹಾರ ಧಾನ್ಯಗಳ ವಿತರಣೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೆಲ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಆಹಾರ ಮತ್ತು ಲಾಜಿಸ್ಟಿಕ್ಸ್ ಆಯುಕ್ತ ಸೌರಭ್ ಬಾಬು ಅವರು ಜಿಲ್ಲಾ ಸರಬರಾಜು ಅಧಿಕಾರಿ ಸುನಿಲ್ ಸಿಂಗ್, ಜಿಲ್ಲಾ ಆಹಾರ ಮಾರುಕಟ್ಟೆ ಅಧಿಕಾರಿ ಜಿಯಾ ಅಹ್ಮದ್, ಮಾರ್ಕೆಟಿಂಗ್ ಇನ್ಸ್​ಪೆಕ್ಟರ್ ಸುಧೀರ್ ಕುಮಾರ್, ಸರಬರಾಜು ನಿರೀಕ್ಷಕ ವಿವೇಕ್ ಶ್ರೀವಾಸ್ತವ್ ಅವರನ್ನು ಅಮಾನತುಗೊಳಿಸಿದ್ದಾರೆ. ಇದೇ ವೇಳೆ ಸಾರಿಗೆ ಸಂಸ್ಥೆಯ ಎಂ.ಎಸ್, ರವೀಂದ್ರ ಸಿಂಗ್ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ಆಹಾರ ಇಲಾಖೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿಗೆ ಆಘಾತ ನೀಡಿದ ವೋಟ್​ ಶೇರ್​​: ಜಸ್ಟ್​ ಶೇ 0.7ರಷ್ಟು ಕಡಿಮೆ, ಬರೋಬ್ಬರಿ 63 ಸ್ಥಾನ ಖೋತಾ, ಕಾಂಗ್ರೆಸ್​​​ಗೆ ಡಬಲ್ ಧಮಾಕಾ! - VOTE SHARE EFFECT ON BJP

ETV Bharat Logo

Copyright © 2024 Ushodaya Enterprises Pvt. Ltd., All Rights Reserved.