ETV Bharat / bharat

ವಯನಾಡ್​​ ಭೂಕುಸಿತ: ಮೃತರ ಸಂಖ್ಯೆ 143ಕ್ಕೇರಿಕೆ, ತಾತ್ಕಾಲಿಕ ಸೇತುವೆ ಕಟ್ಟಿ 1 ಸಾವಿರ ಜನರ ರಕ್ಷಿಸಿದ ಸೇನೆ - Wayanad Landslides

author img

By PTI

Published : Jul 31, 2024, 9:00 AM IST

Updated : Jul 31, 2024, 9:27 AM IST

ಭೀಕರ ಭೂಕುಸಿತ ಸಂಭವಿಸಿರುವ ಕೇರಳದ ವಯನಾಡ್​​ ಜಿಲ್ಲೆಯಲ್ಲಿ ಪರಿಹಾರ ಕಾರ್ಯಕ್ಕೆ ಭಾರತೀಯ ಸೇನೆ ಕೈಜೋಡಿಸಿದೆ. ಮಂಗಳವಾರ 1,000 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸೇರಿಸಲಾಯಿತು.

ವಯನಾಡ್​ನ  ಭೂಕುಸಿತ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್​ಡಿಆರ್​ಎಫ್ ಮತ್ತು ಸೇನೆ
ವಯನಾಡ್​ನ ಭೂಕುಸಿತ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್​ಡಿಆರ್​ಎಫ್ ಮತ್ತು ಸೇನೆ (IANS)

ವಯನಾಡ್(ಕೇರಳ): ವಯನಾಡ್​​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ತಾತ್ಕಾಲಿಕ ಸೇತುವೆಯ ಮೂಲಕ ಸುಮಾರು 1,000 ಜನರನ್ನು ರಕ್ಷಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ನೀರಿನ ಮಧ್ಯ ಮಹಿಳೆಗೆ ಸೇನಾ ಸಿಬ್ಬಂದಿ ನೆರವಾದರು.
ಪ್ರವಾಹದ ನೀರು ದಾಟಲು ಮಹಿಳೆಗೆ ಸೇನಾ ಸಿಬ್ಬಂದಿ ನೆರವಾದರು. (ANI)

ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು. ಅಪಾರ ಪ್ರಮಾಣದಲ್ಲಿ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಮೆಪ್ಪಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು 50 ಮೃತದೇಹಗಳನ್ನು ಇರಿಸಲಾಗಿದೆ. ಗಾಯಗೊಂಡಿರುವ ಕನಿಷ್ಠ 116 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸೇನೆ ಸಿಬ್ಬಂದಿ ಸ್ಥಳಾಂತರಿಸಿದರು.
ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸೇನಾ ಸಿಬ್ಬಂದಿ ಸ್ಥಳಾಂತರಿಸಿದರು. (ANI)

ಸೇನೆಯಿಂದ ರಕ್ಷಣಾ ಕಾರ್ಯ: ''ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ಸೇನೆ ಕಳೆದ 15 ದಿನಗಳಿಂದ ಕಟ್ಟೆಚ್ಚರದಲ್ಲಿದೆ. ವಯನಾಡ್​ನಲ್ಲಿ ಸಂಭವಿಸಿದ ಭೂಕುಸಿತದ ನಂತರ ಮಂಗಳವಾರ ಬೆಳಗ್ಗೆ ಕೇರಳ ಸರ್ಕಾರ ಸೇನೆಯನ್ನು ಸಂಪರ್ಕಿಸಿತು. ಎನ್​ಡಿಆರ್​ಎಫ್​ ಮತ್ತು ರಾಜ್ಯ ತಂಡಗಳೂ ಕೂಡಾ ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ನೌಕಾಪಡೆ ಮತ್ತು ವಾಯುಪಡೆಯೂ ಸಮಾನ ಕೊಡುಗೆ ನೀಡುತ್ತಿವೆ'' ಎಂದು ರಕ್ಷಣಾ ಭದ್ರತಾ ದಳ ಕೇಂದ್ರದ ಕಮಾಂಡೆಂಟ್, ಕರ್ನಲ್ ಪರಮವೀರ್ ಸಿಂಗ್ ನಾಗ್ರಾ ತಿಳಿಸಿದರು.

ಗಾಯಾಳು ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಹೆಗಲ ಮೇಲೆ ಹೊತ್ತು ತಂದರು.
ಗಾಯಾಳು ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಹೆಗಲ ಮೇಲೆ ಹೊತ್ತು ಸಾಗಿಸಿದರು. (ANI)

''ಭೂಕುಸಿತವಾದ ಭಾಗದಲ್ಲಿ ಪ್ರಮುಖ ಸಂಪರ್ಕ ಸೇತುವೆಯೊಂದು ಕೊಚ್ಚಿಹೋಗಿದೆ. ಹೀಗಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದೆ. ಅದರೊಂದಿಗೆ ಸರಿಸುಮಾರು 1,000ಕ್ಕೂ ಹೆಚ್ಚು ಜನರನ್ನು ಈ ಸುರಕ್ಷಿತ ಸ್ಥಳದೆಡೆಗೆ ಕರೆದೊಯ್ಯಲಾಗಿದೆ. ಕೆಲವು ಮೃತದೇಹಗಳನ್ನೂ ಸಾಗಿಸಲಾಗಿದೆ. ಸುಮಾರು 18ರಿಂದ 25 ಜನರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದಾರೆ. ಎಲ್ಲರೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ'' ಎಂದು ಹೇಳಿದರು.

ವಯನಾಡ್​​ ಭೂಕುಸಿತ ನಿರಾಶ್ರಿತರನ್ನು ಏರ್​ಲಿಫ್ಟ್​ ಮಾಡಲಾಯಿತು.
ಭೂಕುಸಿತ ನಿರಾಶ್ರಿತರನ್ನು ಸೇನೆ ಏರ್​ಲಿಫ್ಟ್​ ಮಾಡಿ ಸುರಕ್ಷಿತ ಸ್ಥಳ ತಲುಪಿಸಿತು. (ANI)

ಸಹಾಯವಾಣಿ ಸಂಖ್ಯೆಗಳು: ತಿರುವನಂತಪುರಂನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವಿಶೇಷ 24 ಗಂಟೆಗಳ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರ ನೇರ ನಿಗಾವಣೆಯಲ್ಲಿ ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸುತ್ತಿದೆ. ತುರ್ತು ನೆರವು ಅಗತ್ಯವಿರುವವರು 9497900402 ಮತ್ತು 0471-2721566 ಈ ಎರಡು ಸಂಖ್ಯೆಗಳನ್ನು ಸಂಪರ್ಕಿಸಬಹುದು. ಆರೋಗ್ಯ ಇಲಾಖೆ ಕೂಡಾ ಸಹಾಯವಾಣಿ ಕೇಂದ್ರ ಆರಂಭಿಸಿ, 9656938689 ಮತ್ತು 8086010833 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ. ಮತ್ತೊಂದೆಡೆ, ನಿರಾಶ್ರಿತ ಜನರಿಗಾಗಿ 118 ಪರಿಹಾರ ಕೇಂದ್ರಗಳನ್ನು ರಾಜ್ಯ ಸರ್ಕಾರ ತೆರೆದು, ಅಲ್ಲಿ ತಾತ್ಕಾಲಿಕ ಆಶ್ರಯದ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ವಯನಾಡ್​ನಲ್ಲಿ ರಣಮಳೆಗೆ ಸರಣಿ ಭೂಕುಸಿತ: ಮಕ್ಕಳು ಸೇರಿ 125ಕ್ಕೇರಿದ ಸಾವಿನ ಸಂಖ್ಯೆ, 400ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಕಷ್ಟ

ವಯನಾಡ್(ಕೇರಳ): ವಯನಾಡ್​​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ತಾತ್ಕಾಲಿಕ ಸೇತುವೆಯ ಮೂಲಕ ಸುಮಾರು 1,000 ಜನರನ್ನು ರಕ್ಷಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ನೀರಿನ ಮಧ್ಯ ಮಹಿಳೆಗೆ ಸೇನಾ ಸಿಬ್ಬಂದಿ ನೆರವಾದರು.
ಪ್ರವಾಹದ ನೀರು ದಾಟಲು ಮಹಿಳೆಗೆ ಸೇನಾ ಸಿಬ್ಬಂದಿ ನೆರವಾದರು. (ANI)

ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು. ಅಪಾರ ಪ್ರಮಾಣದಲ್ಲಿ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಮೆಪ್ಪಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು 50 ಮೃತದೇಹಗಳನ್ನು ಇರಿಸಲಾಗಿದೆ. ಗಾಯಗೊಂಡಿರುವ ಕನಿಷ್ಠ 116 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸೇನೆ ಸಿಬ್ಬಂದಿ ಸ್ಥಳಾಂತರಿಸಿದರು.
ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸೇನಾ ಸಿಬ್ಬಂದಿ ಸ್ಥಳಾಂತರಿಸಿದರು. (ANI)

ಸೇನೆಯಿಂದ ರಕ್ಷಣಾ ಕಾರ್ಯ: ''ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ಸೇನೆ ಕಳೆದ 15 ದಿನಗಳಿಂದ ಕಟ್ಟೆಚ್ಚರದಲ್ಲಿದೆ. ವಯನಾಡ್​ನಲ್ಲಿ ಸಂಭವಿಸಿದ ಭೂಕುಸಿತದ ನಂತರ ಮಂಗಳವಾರ ಬೆಳಗ್ಗೆ ಕೇರಳ ಸರ್ಕಾರ ಸೇನೆಯನ್ನು ಸಂಪರ್ಕಿಸಿತು. ಎನ್​ಡಿಆರ್​ಎಫ್​ ಮತ್ತು ರಾಜ್ಯ ತಂಡಗಳೂ ಕೂಡಾ ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ನೌಕಾಪಡೆ ಮತ್ತು ವಾಯುಪಡೆಯೂ ಸಮಾನ ಕೊಡುಗೆ ನೀಡುತ್ತಿವೆ'' ಎಂದು ರಕ್ಷಣಾ ಭದ್ರತಾ ದಳ ಕೇಂದ್ರದ ಕಮಾಂಡೆಂಟ್, ಕರ್ನಲ್ ಪರಮವೀರ್ ಸಿಂಗ್ ನಾಗ್ರಾ ತಿಳಿಸಿದರು.

ಗಾಯಾಳು ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಹೆಗಲ ಮೇಲೆ ಹೊತ್ತು ತಂದರು.
ಗಾಯಾಳು ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಹೆಗಲ ಮೇಲೆ ಹೊತ್ತು ಸಾಗಿಸಿದರು. (ANI)

''ಭೂಕುಸಿತವಾದ ಭಾಗದಲ್ಲಿ ಪ್ರಮುಖ ಸಂಪರ್ಕ ಸೇತುವೆಯೊಂದು ಕೊಚ್ಚಿಹೋಗಿದೆ. ಹೀಗಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದೆ. ಅದರೊಂದಿಗೆ ಸರಿಸುಮಾರು 1,000ಕ್ಕೂ ಹೆಚ್ಚು ಜನರನ್ನು ಈ ಸುರಕ್ಷಿತ ಸ್ಥಳದೆಡೆಗೆ ಕರೆದೊಯ್ಯಲಾಗಿದೆ. ಕೆಲವು ಮೃತದೇಹಗಳನ್ನೂ ಸಾಗಿಸಲಾಗಿದೆ. ಸುಮಾರು 18ರಿಂದ 25 ಜನರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದಾರೆ. ಎಲ್ಲರೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ'' ಎಂದು ಹೇಳಿದರು.

ವಯನಾಡ್​​ ಭೂಕುಸಿತ ನಿರಾಶ್ರಿತರನ್ನು ಏರ್​ಲಿಫ್ಟ್​ ಮಾಡಲಾಯಿತು.
ಭೂಕುಸಿತ ನಿರಾಶ್ರಿತರನ್ನು ಸೇನೆ ಏರ್​ಲಿಫ್ಟ್​ ಮಾಡಿ ಸುರಕ್ಷಿತ ಸ್ಥಳ ತಲುಪಿಸಿತು. (ANI)

ಸಹಾಯವಾಣಿ ಸಂಖ್ಯೆಗಳು: ತಿರುವನಂತಪುರಂನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವಿಶೇಷ 24 ಗಂಟೆಗಳ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರ ನೇರ ನಿಗಾವಣೆಯಲ್ಲಿ ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸುತ್ತಿದೆ. ತುರ್ತು ನೆರವು ಅಗತ್ಯವಿರುವವರು 9497900402 ಮತ್ತು 0471-2721566 ಈ ಎರಡು ಸಂಖ್ಯೆಗಳನ್ನು ಸಂಪರ್ಕಿಸಬಹುದು. ಆರೋಗ್ಯ ಇಲಾಖೆ ಕೂಡಾ ಸಹಾಯವಾಣಿ ಕೇಂದ್ರ ಆರಂಭಿಸಿ, 9656938689 ಮತ್ತು 8086010833 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ. ಮತ್ತೊಂದೆಡೆ, ನಿರಾಶ್ರಿತ ಜನರಿಗಾಗಿ 118 ಪರಿಹಾರ ಕೇಂದ್ರಗಳನ್ನು ರಾಜ್ಯ ಸರ್ಕಾರ ತೆರೆದು, ಅಲ್ಲಿ ತಾತ್ಕಾಲಿಕ ಆಶ್ರಯದ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ವಯನಾಡ್​ನಲ್ಲಿ ರಣಮಳೆಗೆ ಸರಣಿ ಭೂಕುಸಿತ: ಮಕ್ಕಳು ಸೇರಿ 125ಕ್ಕೇರಿದ ಸಾವಿನ ಸಂಖ್ಯೆ, 400ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಕಷ್ಟ

Last Updated : Jul 31, 2024, 9:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.