ETV Bharat / entertainment

ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ: ವಿಶೇಷ ಗೌರವಕ್ಕೆ ಪಾತ್ರರಾದ ದಕ್ಷಿಣ ಭಾರತದ ಮೊದಲ ನಟ - Allu Arjun Wax Statue

ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಅನಾವರಣಗೊಂಡಿದೆ.

author img

By ETV Bharat Karnataka Team

Published : Mar 30, 2024, 7:07 AM IST

Allu Arjun Wax Statue
ಅಲ್ಲು ಅರ್ಜುನ್ ಮೇಣದ ಪ್ರತಿಮೆ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷಗಳು ಕಳೆದಿವೆ. 2003ರ ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ 'ಬನ್ನಿ' ಚಿತ್ರರಂಗಕ್ಕೆ ಪ್ರವೇಶಿಸಿದರು. ಸದ್ಯ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕಳೆದ ವರ್ಷವಷ್ಟೇ ತಮ್ಮ ನಟನಾ ಕೌಶಲ್ಯಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಅನಾವರಣಗೊಂಡಿದೆ.

ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಅಲವೈಕುಂಠಪುರಂಲೋ ಚಿತ್ರದ ಅಲ್ಲು ಅರ್ಜುನ್ ಅವರ ಜಾಕೆಟ್​​ ಲುಕ್ ಮತ್ತು ತಮ್ಮ ಬ್ಲಾಕ್​ಬಸ್ಟರ್ ಸಿನಿಮಾದ 'ತಗ್ಗೆದೆ ಲೆ' ಐಕಾನಿಕ್ ಪೋಸ್ ಅನ್ನು ಈ ಮೇಣದ ಪ್ರತಿಮೆ ಒಳಗೊಂಡಿದ್ದು, ಮಾರ್ಚ್ 28ರ ರಾತ್ರಿ ಅನಾವರಣ ಮಾಡಲಾಯ್ತು. ತಮ್ಮದೇ ಮೇಣದ ಪ್ರತಿಮೆ ಹೋಲುವಂತೆ ಕೆಂಪು ಬಣ್ಣದ ಸೂಟ್ ಧರಿಸಿ ಅಲ್ಲು ಅರ್ಜುನ್​​ ಕಾಣಿಸಿಕೊಂಡಿದ್ದಾರೆ. ವ್ಯಾಕ್ಸ್ ಸ್ಟ್ಯಾಚೂ ಪಕ್ಕ ನಿಂತು ಅದರಂತೆ ಪೋಸ್ ಕೂಡ ಕೊಟ್ಟಿದ್ದಾರೆ.

ಮೇಣದ ಪ್ರತಿಮೆ ಲೋಕಾರ್ಪಣೆ ವೇಳೆ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ ಸಂಭ್ರಮ ಮುಗಿಲು ಮುಟ್ಟಿತ್ತು. ಅಪ್ಪನ ಪ್ರತಿಮೆ ಪಕ್ಕದಲ್ಲಿ ನಿಂತು ಅರ್ಹಾ ಕೂಡಾ ಅದರಂತೆಯೇ ಪೋಸ್ ಕೊಟ್ಟಿದ್ದಾಳೆ. ಮತ್ತೊಂದೆಡೆ ಪತ್ನಿ ಸ್ನೇಹಾ ರೆಡ್ಡಿ ಅಲ್ಲು ಅರ್ಜುನ್​ಗೆ ಮುತ್ತಿಕ್ಕಿ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ. ಸ್ಟೈಲಿಶ್ ಸ್ಟಾರ್ ಕೂಡ ತಮ್ಮದೇ ಮೇಣದ ಪ್ರತಿಮೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ, ತಗ್ಗೆದೆ ಲೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 'ಬನ್ನಿ'ಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಕೆರೆಬೇಟೆ ಸಿನಿಮಾ ನೋಡಿ ಮೆಚ್ಚಿದ ವಸಿಷ್ಠ ಸಿಂಹ, ಅಜಯ್ ರಾವ್, ಚೇತನ್ - Kerebete Movie

ಭಾರತೀಯ ಚಿತ್ರರಂಗದ ಹಲವು ತಾರೆಯರ ಮೇಣದ ಪ್ರತಿಮೆಗಳು ಲಂಡನ್​ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿವೆ. ಆದ್ರೆ ಅಲ್ಲು ಅರ್ಜುನ್ ಪ್ರತಿಮೆ ಮಾತ್ರ ದುಬೈ ಮ್ಯೂಸಿಯಂನಲ್ಲಿದೆ. ದುಬೈನಲ್ಲಿ ಮೇಣದ ಪ್ರತಿಮೆ ಗೌರವಕ್ಕೆ ಭಾಜನರಾಗಿರುವ ದಕ್ಷಿಣ ಭಾರತದ ಮೊದಲ ನಟ ಎಂಬ ಖ್ಯಾತಿಯನ್ನು ಅಲ್ಲು ಅರ್ಜುನ್ ತಮ್ಮದಾಗಿಸಿಕೊಂಡಿದ್ದಾರೆ. ಅಂದಹಾಗೆ ಲಂಡನ್ ಮ್ಯೂಸಿಯಂನಲ್ಲಿ ಸೌತ್ ಸೂಪರ್​ ಸ್ಟಾರ್​​ಗಳಾದ ಪ್ರಭಾಸ್, ಮಹೇಶ್ ಬಾಬು ಹಾಗೂ ಕಾಜಲ್ ಅವರ ಮೇಣದ ಪ್ರತಿಮೆಗಳಿವೆ.

ಇದನ್ನೂ ಓದಿ: ರಾಜ್ಯಾದ್ಯಂತ 'ಯುವ'​ ಬಿಡುಗಡೆ: ಅಭಿಮಾನಿಗಳ ಸಂಭ್ರಮ - Yuva

ಪುಷ್ಪ: ದಿ ರೈಸ್ ಮೂಲಕ ಅಲ್ಲು ಅರ್ಜುನ್ ಖ್ಯಾತಿ ದುಪ್ಪಟ್ಟಾಗಿದೆ. ಈ ಚಿತ್ರಕ್ಕಾಗಿ 2023ರಲ್ಲಿ ಅತ್ಯುತ್ತಮ ನಟ, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಸದ್ಯ 'ಪುಷ್ಪಾ 2: ದಿ ರೂಲ್' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ಚಿತ್ರಮಂದಿರ ಪ್ರವೇಶಿಸಲಿರುವ ಪುಷ್ಪ ಸೀಕ್ವೆಲ್​ ಮೇಲೆ ಸಿನಿಪ್ರಿಯರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷಗಳು ಕಳೆದಿವೆ. 2003ರ ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ 'ಬನ್ನಿ' ಚಿತ್ರರಂಗಕ್ಕೆ ಪ್ರವೇಶಿಸಿದರು. ಸದ್ಯ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕಳೆದ ವರ್ಷವಷ್ಟೇ ತಮ್ಮ ನಟನಾ ಕೌಶಲ್ಯಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಅನಾವರಣಗೊಂಡಿದೆ.

ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಅವರ ಮೇಣದ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಅಲವೈಕುಂಠಪುರಂಲೋ ಚಿತ್ರದ ಅಲ್ಲು ಅರ್ಜುನ್ ಅವರ ಜಾಕೆಟ್​​ ಲುಕ್ ಮತ್ತು ತಮ್ಮ ಬ್ಲಾಕ್​ಬಸ್ಟರ್ ಸಿನಿಮಾದ 'ತಗ್ಗೆದೆ ಲೆ' ಐಕಾನಿಕ್ ಪೋಸ್ ಅನ್ನು ಈ ಮೇಣದ ಪ್ರತಿಮೆ ಒಳಗೊಂಡಿದ್ದು, ಮಾರ್ಚ್ 28ರ ರಾತ್ರಿ ಅನಾವರಣ ಮಾಡಲಾಯ್ತು. ತಮ್ಮದೇ ಮೇಣದ ಪ್ರತಿಮೆ ಹೋಲುವಂತೆ ಕೆಂಪು ಬಣ್ಣದ ಸೂಟ್ ಧರಿಸಿ ಅಲ್ಲು ಅರ್ಜುನ್​​ ಕಾಣಿಸಿಕೊಂಡಿದ್ದಾರೆ. ವ್ಯಾಕ್ಸ್ ಸ್ಟ್ಯಾಚೂ ಪಕ್ಕ ನಿಂತು ಅದರಂತೆ ಪೋಸ್ ಕೂಡ ಕೊಟ್ಟಿದ್ದಾರೆ.

ಮೇಣದ ಪ್ರತಿಮೆ ಲೋಕಾರ್ಪಣೆ ವೇಳೆ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ ಸಂಭ್ರಮ ಮುಗಿಲು ಮುಟ್ಟಿತ್ತು. ಅಪ್ಪನ ಪ್ರತಿಮೆ ಪಕ್ಕದಲ್ಲಿ ನಿಂತು ಅರ್ಹಾ ಕೂಡಾ ಅದರಂತೆಯೇ ಪೋಸ್ ಕೊಟ್ಟಿದ್ದಾಳೆ. ಮತ್ತೊಂದೆಡೆ ಪತ್ನಿ ಸ್ನೇಹಾ ರೆಡ್ಡಿ ಅಲ್ಲು ಅರ್ಜುನ್​ಗೆ ಮುತ್ತಿಕ್ಕಿ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ. ಸ್ಟೈಲಿಶ್ ಸ್ಟಾರ್ ಕೂಡ ತಮ್ಮದೇ ಮೇಣದ ಪ್ರತಿಮೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ, ತಗ್ಗೆದೆ ಲೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 'ಬನ್ನಿ'ಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಕೆರೆಬೇಟೆ ಸಿನಿಮಾ ನೋಡಿ ಮೆಚ್ಚಿದ ವಸಿಷ್ಠ ಸಿಂಹ, ಅಜಯ್ ರಾವ್, ಚೇತನ್ - Kerebete Movie

ಭಾರತೀಯ ಚಿತ್ರರಂಗದ ಹಲವು ತಾರೆಯರ ಮೇಣದ ಪ್ರತಿಮೆಗಳು ಲಂಡನ್​ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿವೆ. ಆದ್ರೆ ಅಲ್ಲು ಅರ್ಜುನ್ ಪ್ರತಿಮೆ ಮಾತ್ರ ದುಬೈ ಮ್ಯೂಸಿಯಂನಲ್ಲಿದೆ. ದುಬೈನಲ್ಲಿ ಮೇಣದ ಪ್ರತಿಮೆ ಗೌರವಕ್ಕೆ ಭಾಜನರಾಗಿರುವ ದಕ್ಷಿಣ ಭಾರತದ ಮೊದಲ ನಟ ಎಂಬ ಖ್ಯಾತಿಯನ್ನು ಅಲ್ಲು ಅರ್ಜುನ್ ತಮ್ಮದಾಗಿಸಿಕೊಂಡಿದ್ದಾರೆ. ಅಂದಹಾಗೆ ಲಂಡನ್ ಮ್ಯೂಸಿಯಂನಲ್ಲಿ ಸೌತ್ ಸೂಪರ್​ ಸ್ಟಾರ್​​ಗಳಾದ ಪ್ರಭಾಸ್, ಮಹೇಶ್ ಬಾಬು ಹಾಗೂ ಕಾಜಲ್ ಅವರ ಮೇಣದ ಪ್ರತಿಮೆಗಳಿವೆ.

ಇದನ್ನೂ ಓದಿ: ರಾಜ್ಯಾದ್ಯಂತ 'ಯುವ'​ ಬಿಡುಗಡೆ: ಅಭಿಮಾನಿಗಳ ಸಂಭ್ರಮ - Yuva

ಪುಷ್ಪ: ದಿ ರೈಸ್ ಮೂಲಕ ಅಲ್ಲು ಅರ್ಜುನ್ ಖ್ಯಾತಿ ದುಪ್ಪಟ್ಟಾಗಿದೆ. ಈ ಚಿತ್ರಕ್ಕಾಗಿ 2023ರಲ್ಲಿ ಅತ್ಯುತ್ತಮ ನಟ, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಸದ್ಯ 'ಪುಷ್ಪಾ 2: ದಿ ರೂಲ್' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ಚಿತ್ರಮಂದಿರ ಪ್ರವೇಶಿಸಲಿರುವ ಪುಷ್ಪ ಸೀಕ್ವೆಲ್​ ಮೇಲೆ ಸಿನಿಪ್ರಿಯರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.