ETV Bharat / entertainment

ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಸೂಪರ್​ ಸ್ಟಾರ್​ ರಜನಿಕಾಂತ್​ - Rajinikanth Hospitalised

author img

By ETV Bharat Karnataka Team

Published : 3 hours ago

Updated : 3 hours ago

ನಟ ರಜನಿಕಾಂತ್​ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದು, ನಟ ಶೀಘ್ರ ಗುಣಮುಖರಾಗುವಂತೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.

Actor Rajinikanth
ನಟ ರಜನಿಕಾಂತ್​ (ANI)

ಚೆನ್ನೈ(ತಮಿಳುನಾಡು): ಹಿರಿಯ ತಮಿಳು ನಟ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಯರ್​ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

76 ವರ್ಷದ ನಟ ಸದ್ಯ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಜ್ಞಾನವೇಲ್​ ರಾಜಾ ಅವರ ವೇಟ್ಟೈಯಾನ್​ ಸಿನಿಮಾ ಅಕ್ಟೋಬರ್​ 10 ರಂದು ಬಿಡುಗಡೆಗೆ ತಯಾರಾಗಿದೆ. ಇನ್ನು ನಿರ್ದೇಶ ಲೋಕೇಶ್​ ಕನಕರಾಜ್​ ಅವರ ಕೂಲಿ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ವೇಳೆ ಹಠಾತ್​ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದೆ ಎಂದೂ ವರದಿಯಾಗಿದೆ.

ಇನ್ನೊಂದೆಡೆ ಈಗಾಗಲೇ ನಿಗದಿಯಾಗಿರುವ ಹೃದಯ ಸಂಬಂಧಿ ಪರೀಕ್ಷೆಗಾಗಿ ರಜನಿಕಾಂತ್​ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವ ಕಾರಣ ಹೃದ್ರೋಗ ತಜ್ಞರ ಅಪಾಯಿಂಟ್​ಮೆಂಟ್​ ಇದ್ದು, ಅಕ್ಟೋಬರ್ 1 ರಂದು (ಇಂದು) ಬೆಳಗ್ಗೆ ಪ್ರಮುಖ ಪರೀಕ್ಷೆಗೆ ಒಳಗಾಗಲಿದ್ದಾರೆ. ವೈದ್ಯಕೀಯ ಪರೀಕ್ಷೆ ಮುಗಿಸಿ ಶೀಘ್ರದಲ್ಲೇ ಮನೆಗೆ ಮರಳಲಿದ್ದಾರೆ ಎನ್ನಲಾಗಿದೆ.

ಆದರೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ರಜನಿಕಾಂತ್​ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹಬ್ಬುತ್ತಿದ್ದಂತೆ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: 'ಅವಾರ್ಡ್ ಕೊಡುತ್ತೇವೆಂದು ಕರೆಸಿ, ಕೊಡಲಿಲ್ಲ': ಐಫಾ ಬಗ್ಗೆ ನಿರ್ದೇಶಕ ಹೇಮಂತ್ ಅಸಮಾಧಾನ - Hemanth Rao IIFA Experience

ಚೆನ್ನೈ(ತಮಿಳುನಾಡು): ಹಿರಿಯ ತಮಿಳು ನಟ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಯರ್​ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

76 ವರ್ಷದ ನಟ ಸದ್ಯ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಜ್ಞಾನವೇಲ್​ ರಾಜಾ ಅವರ ವೇಟ್ಟೈಯಾನ್​ ಸಿನಿಮಾ ಅಕ್ಟೋಬರ್​ 10 ರಂದು ಬಿಡುಗಡೆಗೆ ತಯಾರಾಗಿದೆ. ಇನ್ನು ನಿರ್ದೇಶ ಲೋಕೇಶ್​ ಕನಕರಾಜ್​ ಅವರ ಕೂಲಿ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ವೇಳೆ ಹಠಾತ್​ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದೆ ಎಂದೂ ವರದಿಯಾಗಿದೆ.

ಇನ್ನೊಂದೆಡೆ ಈಗಾಗಲೇ ನಿಗದಿಯಾಗಿರುವ ಹೃದಯ ಸಂಬಂಧಿ ಪರೀಕ್ಷೆಗಾಗಿ ರಜನಿಕಾಂತ್​ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವ ಕಾರಣ ಹೃದ್ರೋಗ ತಜ್ಞರ ಅಪಾಯಿಂಟ್​ಮೆಂಟ್​ ಇದ್ದು, ಅಕ್ಟೋಬರ್ 1 ರಂದು (ಇಂದು) ಬೆಳಗ್ಗೆ ಪ್ರಮುಖ ಪರೀಕ್ಷೆಗೆ ಒಳಗಾಗಲಿದ್ದಾರೆ. ವೈದ್ಯಕೀಯ ಪರೀಕ್ಷೆ ಮುಗಿಸಿ ಶೀಘ್ರದಲ್ಲೇ ಮನೆಗೆ ಮರಳಲಿದ್ದಾರೆ ಎನ್ನಲಾಗಿದೆ.

ಆದರೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ರಜನಿಕಾಂತ್​ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹಬ್ಬುತ್ತಿದ್ದಂತೆ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: 'ಅವಾರ್ಡ್ ಕೊಡುತ್ತೇವೆಂದು ಕರೆಸಿ, ಕೊಡಲಿಲ್ಲ': ಐಫಾ ಬಗ್ಗೆ ನಿರ್ದೇಶಕ ಹೇಮಂತ್ ಅಸಮಾಧಾನ - Hemanth Rao IIFA Experience

Last Updated : 3 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.