ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ (42) ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಹೋದರ ದೀಪಕ್ ಅರಸ್ ನಿಧನದ ಬಗ್ಗೆ ಅಮೂಲ್ಯ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿದ್ದು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರಂನ ನಿವಾಸದಲ್ಲಿ ಮುಂಜಾನೆ 6 ಗಂಟೆ ಸುಮಾರಿಗೆ ಕಿಡ್ನಿ ವೈಫಲ್ಯದಿಂದ ದೀಪಕ್ ನಿಧನರಾಗಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿಯ ರುದ್ರಭೂಮಿಯಲ್ಲಿ ದೀಪಕ್ ಅರಸ್ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
''ನನ್ನ ಪ್ರೀತಿಯ ಸಹೋದರ ದೀಪಣ್ಣ ಇಂದು ಬೆಳಗ್ಗೆ 6 ಗಂಟೆಗೆ ನಮ್ಮನ್ನು ಅಗಲಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ನಿನ್ನನ್ನು ಕಳೆದುಕೊಂಡು ನಾವು ತೀವ್ರ ನೋವಿನಲ್ಲಿದ್ದೇವೆ. ನೀವು ಎಂದೆಂದಿಗೂ ನಮ್ಮೊಂದಿಗೆ ಇರುತ್ತೀರಿ'' ಎಂದು ಅಮೂಲ್ಯ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: 'ಬಘೀರ' ಚಿತ್ರದಲ್ಲಿ 'ರುಧಿರ'ನಾಗಿ ಎಂಟ್ರಿ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರಳಿ
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ದೀಪಕ್ ಅರಸ್, ಕುಟುಂಬ ಸಮೇತ ವಾಸವಾಗಿದ್ದರು. ದೀಪಕ್ ಅರಸ್ 'ಮನಸಾಲಜಿ', 'ಶುಗರ್ ಫ್ಯಾಕ್ಟರಿ' ಸಿನಿಮಾಗಳನ್ನು ನಿರ್ದೇಶಿಸಿದ್ದರು.
— Amulya (@nimmaamulya) October 18, 2024
ಪಾರ್ಥೀವ ಶರೀರದ ಅಂತಿಮ ದರ್ಶನ: ಮಲ್ಲೇಶ್ವರಂ ಸಮೀಪದ ನಿವಾಸದಲ್ಲಿ ದೀಪಕ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಗಣೇಶ್, ನೆನಪಿರಲಿ ಪ್ರೇಮ್ ಹಾಗೂ ಇತರರು ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ: ಕನ್ನಡ ಬಿಗ್ ಬಾಸ್ ಶೋಗೆ ಮತ್ತೊಂದು ಸಂಕಷ್ಟ: ಸಾಗರದ ನ್ಯಾಯಾಲಯದಿಂದ ತುರ್ತು ನೋಟಿಸ್