ETV Bharat / entertainment

''ಕಾಲಾಪತ್ಥರ್'' ಸಿನಿಮಾಗೆ ಗೃಹಿಣಿಯರ ಬೆಂಬಲ: ವಿಕ್ಕಿ ವರಣ್, ಧನ್ಯಾ ರಾಮ್​​ಕುಮಾರ್ ಸಿನಿಮಾ ಸಾಂಗ್​​ ರಿಲೀಸ್ - Baandli Stoveu song

author img

By ETV Bharat Karnataka Team

Published : Aug 31, 2024, 8:53 PM IST

ಬಾಂಡ್ಲಿ, ಸ್ವವ್ ಹಾಗೂ ಸೌಟ್ ಅನ್ನು ಹೆಚ್ಚಾಗಿ ಗೃಹಿಣಿಯರು ಬಳಸುತ್ತಾರೆ. ಹಾಗಾಗಿ ಈ "ಬಾಂಡ್ಲಿ ಸ್ಟವ್​​" ಹಾಡನ್ನು ಅವರಿಂದ ಬಿಡುಗಡೆ ಮಾಡಿಸಿದ್ದೇವೆ ಎಂದು ''ಕಾಲಾಪತ್ಥರ್'' ಸಿನಿಮಾ ಸಾಂಗ್​ ಈವೆಂಟ್​ನಲ್ಲಿ ನಾಯಕ ನಟ ವಿಕ್ಕಿ ವರಣ್ ತಿಳಿಸಿದರು.

Kaala Patthar song released by Housewives
ಗೃಹಿಣಿಯರಿಂದ ''ಕಾಲಾಪತ್ಥರ್'' ಸಾಂಗ್​ ರಿಲೀಸ್​​ (ETV Bharat)

ಕನ್ನಡ ಚಿತ್ರರಂಗದಲ್ಲಿ ಕೆಂಡಸಂಪಿಗೆ ಹಾಗೂ ಕಾಲೇಜ್​​ ಕುಮಾರ ಸಿನಿಮಾಗಳ ಮೂಲಕ ಭರವಸೆ ಹುಟ್ಟಿಸಿರುವ ನಟ ವಿಕ್ಕಿ ವರಣ್. ಧನ್ಯಾ ರಾಮ್​​ಕುಮಾರ್ ಸದ್ಯ ತಮ್ಮ ಪೌಡರ್​ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಇವರಿಬ್ಬರು ತೆರೆಹಂಚಿಕೊಂಡಿರುವ ಮುಂದಿನ ಬಹುನಿರಿಕ್ಷಿತ ಚಿತ್ರ ''ಕಾಲಾಪತ್ಥರ್''. ಇತ್ತೀಚೆಗೆ ಸಿನಿಮಾದ ಸಾಂಗ್​​ ರಿಲೀಸ್​​ ಆಗಿದೆ.

ವಿಕ್ಕಿ ವರಣ್ ಅವರು ಈ ಚಿತ್ರದಲ್ಲಿ ನಟನೆ ಜೊತೆ ಜೊತೆಗೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ತನ್ನ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಸಿನಿಮಾ ಭರ್ಜರಿ ಪ್ರಚಾರ ಆರಂಭಿಸಿದೆ. ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸ್ಟವ್​​" ಹಾಡು ಇತ್ತೀಚೆಗೆ ಅನಾವರಣಗೊಂಡಿದೆ. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿರೋದು ವಿಶೇಷ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ಸದ್ದು ಮಾಡುತ್ತಿದೆ "ಬಾಂಡ್ಲಿ ಸ್ಟವ್​​".

Kaala Patthar stars
ವಿಕ್ಕಿ ವರಣ್ - ಧನ್ಯಾ ರಾಮ್​​ಕುಮಾರ್ (ETV Bharat)

ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗುವಾಗ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು‌. ಈಗ ಹಾಗಲ್ಲ‌. ಆದ್ರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಮೂಡಿ ಬಂದಿದೆ ಅಂದ್ರೆ ಅದಕ್ಕೆ ಅವರು ಕಾರಣ ಎಂದು ತಿಳಿಸಿದರು.

Kaala Patthar film team
''ಕಾಲಾಪತ್ಥರ್'' ಚಿತ್ರತಂಡ (ETV Bharat)

ಇದನ್ನೂ ಓದಿ: ಚಿತ್ರದಲ್ಲಿ ವಿಕ್ಕಿ ವರಣ್ ಜೋಡಿಯಾಗಿ ಕಾಣಿಸಿಕೊಂಡಿರುವ ಧನ್ಯಾ ರಾಮ್​​ಕುಮಾರ್ ಮಾತನಾಡಿ, ಇದೀಗ ಬಿಡುಗಡೆಯಾಗಿರುವ ಹಾಡು ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಜೂ.​ಎನ್​​ಟಿಆರ್; ಅಮ್ಮನ ಆಸೆ ಈಡೇರಿಸಿದ ಆರ್​ಆರ್​ಆರ್​ ಸ್ಟಾರ್​ - Jr NTR Visits Udupi Temple

ಬಳಿಕ ವಿಕ್ಕಿ ವರುಣ್ ಮಾತನಾಡಿ, ಬಾಂಡ್ಲಿ, ಸ್ಟವ್ ಹಾಗೂ ಸೌಟ್ ಅನ್ನು ಹೆಚ್ಚಾಗಿ ಗೃಹಿಣಿಯರು ಬಳಸುತ್ತಾರೆ. ಹಾಗಾಗಿ ಈ ಹಾಡನ್ನು ಅವರಿಂದ ಬಿಡುಗಡೆ ಮಾಡಿಸಿದ್ದೇವೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ಬಹಳ ಚೆನ್ನಾಗಿದೆ‌. ನೃತ್ಯ ಬಾರದ ನನ್ನಿಂದ ಧನು ಮಾಸ್ಟರ್ ಚೆನ್ನಾಗಿ ನೃತ್ಯ ಮಾಡಿಸಿದ್ದಾರೆ. ನಿರ್ಮಾಪಕರು ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ: ಹಗಲು ಸೂರ್ಯ, ರಾತ್ರಿ ಚಂದ್ರ ಬರಬೇಕು.. ಎರಡೂ ಒಟ್ಟಿಗೆ ಬಂದರೆ ಸಮಸ್ಯೆ: ಕಿಚ್ಚನ ಮಾರ್ಮಿಕ ಉತ್ತರ - Sudeep on Darshan

ಇವರ ಜೊತೆ ನಾಗಾಭರಣ ಹಾಗೂ ಅಚ್ಯುತ್ ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ಸಿನಿಮಾ ನಿರ್ಮಾಣ ಮಾಡಿದ್ದು, ಸದ್ಯದಲ್ಲೇ ಟ್ರೇಲರ್ ಅನಾವರಣಗೊಳ್ಳಲಿದೆ. ಸೆಪ್ಟೆಂಬರ್ 13ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಕನ್ನಡ ಚಿತ್ರರಂಗದಲ್ಲಿ ಕೆಂಡಸಂಪಿಗೆ ಹಾಗೂ ಕಾಲೇಜ್​​ ಕುಮಾರ ಸಿನಿಮಾಗಳ ಮೂಲಕ ಭರವಸೆ ಹುಟ್ಟಿಸಿರುವ ನಟ ವಿಕ್ಕಿ ವರಣ್. ಧನ್ಯಾ ರಾಮ್​​ಕುಮಾರ್ ಸದ್ಯ ತಮ್ಮ ಪೌಡರ್​ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಇವರಿಬ್ಬರು ತೆರೆಹಂಚಿಕೊಂಡಿರುವ ಮುಂದಿನ ಬಹುನಿರಿಕ್ಷಿತ ಚಿತ್ರ ''ಕಾಲಾಪತ್ಥರ್''. ಇತ್ತೀಚೆಗೆ ಸಿನಿಮಾದ ಸಾಂಗ್​​ ರಿಲೀಸ್​​ ಆಗಿದೆ.

ವಿಕ್ಕಿ ವರಣ್ ಅವರು ಈ ಚಿತ್ರದಲ್ಲಿ ನಟನೆ ಜೊತೆ ಜೊತೆಗೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ತನ್ನ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಸಿನಿಮಾ ಭರ್ಜರಿ ಪ್ರಚಾರ ಆರಂಭಿಸಿದೆ. ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸ್ಟವ್​​" ಹಾಡು ಇತ್ತೀಚೆಗೆ ಅನಾವರಣಗೊಂಡಿದೆ. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿರೋದು ವಿಶೇಷ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ಸದ್ದು ಮಾಡುತ್ತಿದೆ "ಬಾಂಡ್ಲಿ ಸ್ಟವ್​​".

Kaala Patthar stars
ವಿಕ್ಕಿ ವರಣ್ - ಧನ್ಯಾ ರಾಮ್​​ಕುಮಾರ್ (ETV Bharat)

ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗುವಾಗ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು‌. ಈಗ ಹಾಗಲ್ಲ‌. ಆದ್ರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಮೂಡಿ ಬಂದಿದೆ ಅಂದ್ರೆ ಅದಕ್ಕೆ ಅವರು ಕಾರಣ ಎಂದು ತಿಳಿಸಿದರು.

Kaala Patthar film team
''ಕಾಲಾಪತ್ಥರ್'' ಚಿತ್ರತಂಡ (ETV Bharat)

ಇದನ್ನೂ ಓದಿ: ಚಿತ್ರದಲ್ಲಿ ವಿಕ್ಕಿ ವರಣ್ ಜೋಡಿಯಾಗಿ ಕಾಣಿಸಿಕೊಂಡಿರುವ ಧನ್ಯಾ ರಾಮ್​​ಕುಮಾರ್ ಮಾತನಾಡಿ, ಇದೀಗ ಬಿಡುಗಡೆಯಾಗಿರುವ ಹಾಡು ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಜೂ.​ಎನ್​​ಟಿಆರ್; ಅಮ್ಮನ ಆಸೆ ಈಡೇರಿಸಿದ ಆರ್​ಆರ್​ಆರ್​ ಸ್ಟಾರ್​ - Jr NTR Visits Udupi Temple

ಬಳಿಕ ವಿಕ್ಕಿ ವರುಣ್ ಮಾತನಾಡಿ, ಬಾಂಡ್ಲಿ, ಸ್ಟವ್ ಹಾಗೂ ಸೌಟ್ ಅನ್ನು ಹೆಚ್ಚಾಗಿ ಗೃಹಿಣಿಯರು ಬಳಸುತ್ತಾರೆ. ಹಾಗಾಗಿ ಈ ಹಾಡನ್ನು ಅವರಿಂದ ಬಿಡುಗಡೆ ಮಾಡಿಸಿದ್ದೇವೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ಬಹಳ ಚೆನ್ನಾಗಿದೆ‌. ನೃತ್ಯ ಬಾರದ ನನ್ನಿಂದ ಧನು ಮಾಸ್ಟರ್ ಚೆನ್ನಾಗಿ ನೃತ್ಯ ಮಾಡಿಸಿದ್ದಾರೆ. ನಿರ್ಮಾಪಕರು ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ: ಹಗಲು ಸೂರ್ಯ, ರಾತ್ರಿ ಚಂದ್ರ ಬರಬೇಕು.. ಎರಡೂ ಒಟ್ಟಿಗೆ ಬಂದರೆ ಸಮಸ್ಯೆ: ಕಿಚ್ಚನ ಮಾರ್ಮಿಕ ಉತ್ತರ - Sudeep on Darshan

ಇವರ ಜೊತೆ ನಾಗಾಭರಣ ಹಾಗೂ ಅಚ್ಯುತ್ ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ಸಿನಿಮಾ ನಿರ್ಮಾಣ ಮಾಡಿದ್ದು, ಸದ್ಯದಲ್ಲೇ ಟ್ರೇಲರ್ ಅನಾವರಣಗೊಳ್ಳಲಿದೆ. ಸೆಪ್ಟೆಂಬರ್ 13ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.