ETV Bharat / entertainment

ದುನಿಯಾ ವಿಜಯ್ 'ಭೀಮ' ಸಿನಿಮಾಗೆ ಸಿಎಂ ಸಾಥ್ - Bheema movie

author img

By ETV Bharat Karnataka Team

Published : Aug 1, 2024, 6:01 PM IST

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ 'ಭೀಮ'ನ ಪ್ರಮೋಶನ್​ನಲ್ಲಿ ನಾಯಕ ನಟ - ನಿರ್ದೇಶಕ ದುನಿಯಾ ವಿಜಯ್​​ ಬ್ಯುಸಿಯಾಗಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಿನಿಮಾ ನೋಡುವಂತೆ ಆಹ್ವಾನ ನೀಡಿದ್ದಾರೆ. 'ಭೀಮ' ಇದೇ ಆಗಸ್ಟ್ 9ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಿದ್ಧತೆ ನಡೆಸುತ್ತಿದೆ.

Duniya Vijay with CM Siddaramaiah
ಸಿಎಂ ಸಿದ್ದರಾಮಯ್ಯ ಜೊತೆ ದುನಿಯಾ ವಿಜಯ್​​ (ETV Bharat)
ರೆಡಿಯಾಗುತ್ತಿವೆ ಕಟೌಟ್​​ಗಳು (ETV Bharat)

'ಭೀಮ', ಕನ್ನಡ ಚಿತ್ರರಂಗದಲ್ಲಿ ಗ್ಲಿಂಪ್ಸ್, ಪೋಸ್ಟರ್, ಹಾಡುಗಳಿಂದಲೇ ಸಿನಿಪ್ರಿಯರಲ್ಲಿ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ. 'ಸಲಗ' ಸಕ್ಸಸ್ ಬಳಿಕ ದುನಿಯಾ ವಿಜಯ್ ಅಭಿನಯಿಸಿ, ಆ್ಯಕ್ಷನ್ ಕಟ್ ಹೇಳಿರುವ 'ಭೀಮ' ಸಿನಿಮಾ ಬಿಡುಗಡೆಗೆ ಇನ್ನೊಂದು ವಾರ ಬಾಕಿ. ತಮ್ಮ ಸಿನಿಮಾದ ಗೆಲುವಿಗಾಗಿ ನಾಯಕ ನಟ ದುನಿಯಾ ವಿಜಯ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಚಿತ್ರಮಂದಿರಗಳ ಎದುರು ರಾರಾಜಿಸಲು ಕಟೌಟ್​​ಗಳು ರೆಡಿಯಾಗುತ್ತಿವೆ. ಇದೀಗ ಈ ಬಹುನಿರೀಕ್ಷಿತ ಚಿತ್ರತಂಡದಿಂದ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.

ಅದೇನಪ್ಪಾ ಅಂದ್ರೆ ರಾಜ್ಯದ ಸಿಎಂಗೆ ಚಿತ್ರತಂಡದ ಕಡೆಯಿಂದ ಆಹ್ವಾನ ಸಿಕ್ಕಿದೆ. ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಭೀಮ ಸಿನಿಮಾ ನೋಡುವಂತೆ ಆಹ್ವಾನ ನೀಡಿದ್ದಾರೆ. ಇಂದು ಖುದ್ದಾಗಿ ವಿಜಯ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಿನಿಮಾ ನೋಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಚಿತ್ರ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ್ದಾರೆ. ಆದ್ರೆ ಸಿನಿಮಾ ಬಿಡುಗಡೆಗೂ‌ ಮುನ್ನ ಸಿಎಂ ಸಿನಿಮಾ ವೀಕ್ಷಿಸುತ್ತಾರೋ ಅಥವಾ ಬಿಡುಗಡೆ ಆದ್ಮಲೇ ನೋಡುತ್ತಾರೋ ಗೊತ್ತಿಲ್ಲ. ಸಿಎಂ ತಮ್ಮ ರಾಜಕೀಯ ಕೆಲಸಗಳನ್ನು ಬಿಡುವು ಮಾಡಿಕೊಂಡು ಸಿನಿಮಾ ನೋಡಲಿದ್ದಾರಂತೆ.

ಸ್ಯಾಂಡಲ್​ವುಡ್​ನಲ್ಲಿ ಸಖತ್​​ ಸದ್ದು ಮಾಡುತ್ತಿರುವ 'ಭೀಮ'ನಿಗೆ ಸೆನ್ಸಾರ್ ಮಂಡಳಿಯಿಂದ 'ಎ' ಸರ್ಟಿಫಿಕೆಟ್ ಸಿಕ್ಕಿದೆ. ಸದ್ಯ ಸಮಾಜದಲ್ಲಿ ನಡೆಯುತ್ತಿರುವ ಡ್ರಗ್ಸ್ ವಿಚಾರ, ಇಂದಿನ ಯುವಕರು ಏಕೆ ರೌಡಿಸಂಗೆ ಎಂಟ್ರಿ ಕೊಡುತ್ತಾರೆ ಅನ್ನೋದನ್ನ ತೋರಿಸುವ ಜೊತೆಗೆ ಒಂದು ಸಾಮಾಜಿಕ ಸಂದೇಶದ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ನೈಜ ಘಟನೆ ಆಧಾರಿತ ಕಥೆಯಾಗಿರುವ 'ಭೀಮ' ಸಹಜವಾಗಿ ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿಸಿದೆ. ವಿಜಯ್ ಜೊತೆಗೆ ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ, ಡ್ರಾಗನ್ ಮಂಜು ಸೇರಿದಂತೆ ದೊಡ್ಡ ತಾರಾಬಳಗ ಇಲ್ಲಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ‌ ಕೊಲೆ‌ ಪ್ರಕರಣ: ಆ.14ರ ವರೆಗೆ‌ ನಟ ದರ್ಶನ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ - Darshan Judicial Custody Extended

ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 'ಐ ಲವ್ ಯೂ ಕಣೆ', 'ಡೋಂಟ್ ವರಿ ಬೇಬಿ ಚಿನ್ನಮ್ಮ' ಹಾಡುಗಳು ಉತ್ತಮ ಸಂಖ್ಯೆಯಲ್ಲಿ ವೀಕ್ಷಣೆಗೊಂಡಿದೆ. ಬಹುನಿರೀಕ್ಷಿತ ಚಿತ್ರದ ಟ್ರೇಲರ್​ ಬಿಡುಗಡೆಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಆಗಸ್ಟ್ 3ರಂದು ಅಂದರೆ ಇದೇ ಶನಿವಾರ ಟ್ರೇಲರ್​ ಅನಾವರಣಗೊಳ್ಳಲಿದ್ದು, ಮುಂದಿನ ಶುಕ್ರವಾರ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಟಾಕ್ಸಿಕ್ ಸಿನಿಮಾಗಾಗಿ ಯಶ್‌ 'ಪಾಂಪಡೋರ್' ಹೇರ್‌ಸ್ಟೈಲ್‌; ಸೋಷಿಯಲ್ ಮೀಡಿಯಾದಲ್ಲಿ ಸದ್ದು - Yash New Hairstyle

ಚಿತ್ರದಲ್ಲಿ ಶಿವಸೇನಾ ಅವರ ಕ್ಯಾಮರಾ ಕೈಚಳಕವಿದೆ. ಚರಣ್ ರಾಜ್ ಅವರ ಸಂಗೀತ ಮತ್ತು ಮಾಸ್ತಿ ಡೈಲಾಗ್ಸ್ ಈ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ ನಿರ್ವಹಿಸಿದ್ರೆ, ಚೇತನ್ ಡಿಸೋಜಾ, ವಿನೋದ್, ಗೌತಮ್ ಅವರ ಸಾಹಸ ಮತ್ತು ಧನು ನೃತ್ಯ ನಿರ್ದೇಶನ 'ಭೀಮ'ನಿಗಿದೆ. ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿರೋ 'ಭೀಮ' ಎಲ್ಲಾ ಆ್ಯಂಗಲ್​ನಿಂದಲೂ‌ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಇದೇ ಆಗಸ್ಟ್ 9 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭೀಮನ ಅಬ್ಬರ ಶುರುವಾಗಲಿದ್ದು, ಪ್ರೇಕ್ಷಕರು ಭೀಮನಿಗೆ ಎಷ್ಟು ಮಾರ್ಕ್ಸ್ ಕೊಡ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ರೆಡಿಯಾಗುತ್ತಿವೆ ಕಟೌಟ್​​ಗಳು (ETV Bharat)

'ಭೀಮ', ಕನ್ನಡ ಚಿತ್ರರಂಗದಲ್ಲಿ ಗ್ಲಿಂಪ್ಸ್, ಪೋಸ್ಟರ್, ಹಾಡುಗಳಿಂದಲೇ ಸಿನಿಪ್ರಿಯರಲ್ಲಿ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ. 'ಸಲಗ' ಸಕ್ಸಸ್ ಬಳಿಕ ದುನಿಯಾ ವಿಜಯ್ ಅಭಿನಯಿಸಿ, ಆ್ಯಕ್ಷನ್ ಕಟ್ ಹೇಳಿರುವ 'ಭೀಮ' ಸಿನಿಮಾ ಬಿಡುಗಡೆಗೆ ಇನ್ನೊಂದು ವಾರ ಬಾಕಿ. ತಮ್ಮ ಸಿನಿಮಾದ ಗೆಲುವಿಗಾಗಿ ನಾಯಕ ನಟ ದುನಿಯಾ ವಿಜಯ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಚಿತ್ರಮಂದಿರಗಳ ಎದುರು ರಾರಾಜಿಸಲು ಕಟೌಟ್​​ಗಳು ರೆಡಿಯಾಗುತ್ತಿವೆ. ಇದೀಗ ಈ ಬಹುನಿರೀಕ್ಷಿತ ಚಿತ್ರತಂಡದಿಂದ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.

ಅದೇನಪ್ಪಾ ಅಂದ್ರೆ ರಾಜ್ಯದ ಸಿಎಂಗೆ ಚಿತ್ರತಂಡದ ಕಡೆಯಿಂದ ಆಹ್ವಾನ ಸಿಕ್ಕಿದೆ. ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಭೀಮ ಸಿನಿಮಾ ನೋಡುವಂತೆ ಆಹ್ವಾನ ನೀಡಿದ್ದಾರೆ. ಇಂದು ಖುದ್ದಾಗಿ ವಿಜಯ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಿನಿಮಾ ನೋಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಚಿತ್ರ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ್ದಾರೆ. ಆದ್ರೆ ಸಿನಿಮಾ ಬಿಡುಗಡೆಗೂ‌ ಮುನ್ನ ಸಿಎಂ ಸಿನಿಮಾ ವೀಕ್ಷಿಸುತ್ತಾರೋ ಅಥವಾ ಬಿಡುಗಡೆ ಆದ್ಮಲೇ ನೋಡುತ್ತಾರೋ ಗೊತ್ತಿಲ್ಲ. ಸಿಎಂ ತಮ್ಮ ರಾಜಕೀಯ ಕೆಲಸಗಳನ್ನು ಬಿಡುವು ಮಾಡಿಕೊಂಡು ಸಿನಿಮಾ ನೋಡಲಿದ್ದಾರಂತೆ.

ಸ್ಯಾಂಡಲ್​ವುಡ್​ನಲ್ಲಿ ಸಖತ್​​ ಸದ್ದು ಮಾಡುತ್ತಿರುವ 'ಭೀಮ'ನಿಗೆ ಸೆನ್ಸಾರ್ ಮಂಡಳಿಯಿಂದ 'ಎ' ಸರ್ಟಿಫಿಕೆಟ್ ಸಿಕ್ಕಿದೆ. ಸದ್ಯ ಸಮಾಜದಲ್ಲಿ ನಡೆಯುತ್ತಿರುವ ಡ್ರಗ್ಸ್ ವಿಚಾರ, ಇಂದಿನ ಯುವಕರು ಏಕೆ ರೌಡಿಸಂಗೆ ಎಂಟ್ರಿ ಕೊಡುತ್ತಾರೆ ಅನ್ನೋದನ್ನ ತೋರಿಸುವ ಜೊತೆಗೆ ಒಂದು ಸಾಮಾಜಿಕ ಸಂದೇಶದ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ನೈಜ ಘಟನೆ ಆಧಾರಿತ ಕಥೆಯಾಗಿರುವ 'ಭೀಮ' ಸಹಜವಾಗಿ ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿಸಿದೆ. ವಿಜಯ್ ಜೊತೆಗೆ ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ, ಡ್ರಾಗನ್ ಮಂಜು ಸೇರಿದಂತೆ ದೊಡ್ಡ ತಾರಾಬಳಗ ಇಲ್ಲಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ‌ ಕೊಲೆ‌ ಪ್ರಕರಣ: ಆ.14ರ ವರೆಗೆ‌ ನಟ ದರ್ಶನ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ - Darshan Judicial Custody Extended

ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 'ಐ ಲವ್ ಯೂ ಕಣೆ', 'ಡೋಂಟ್ ವರಿ ಬೇಬಿ ಚಿನ್ನಮ್ಮ' ಹಾಡುಗಳು ಉತ್ತಮ ಸಂಖ್ಯೆಯಲ್ಲಿ ವೀಕ್ಷಣೆಗೊಂಡಿದೆ. ಬಹುನಿರೀಕ್ಷಿತ ಚಿತ್ರದ ಟ್ರೇಲರ್​ ಬಿಡುಗಡೆಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಆಗಸ್ಟ್ 3ರಂದು ಅಂದರೆ ಇದೇ ಶನಿವಾರ ಟ್ರೇಲರ್​ ಅನಾವರಣಗೊಳ್ಳಲಿದ್ದು, ಮುಂದಿನ ಶುಕ್ರವಾರ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಟಾಕ್ಸಿಕ್ ಸಿನಿಮಾಗಾಗಿ ಯಶ್‌ 'ಪಾಂಪಡೋರ್' ಹೇರ್‌ಸ್ಟೈಲ್‌; ಸೋಷಿಯಲ್ ಮೀಡಿಯಾದಲ್ಲಿ ಸದ್ದು - Yash New Hairstyle

ಚಿತ್ರದಲ್ಲಿ ಶಿವಸೇನಾ ಅವರ ಕ್ಯಾಮರಾ ಕೈಚಳಕವಿದೆ. ಚರಣ್ ರಾಜ್ ಅವರ ಸಂಗೀತ ಮತ್ತು ಮಾಸ್ತಿ ಡೈಲಾಗ್ಸ್ ಈ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ ನಿರ್ವಹಿಸಿದ್ರೆ, ಚೇತನ್ ಡಿಸೋಜಾ, ವಿನೋದ್, ಗೌತಮ್ ಅವರ ಸಾಹಸ ಮತ್ತು ಧನು ನೃತ್ಯ ನಿರ್ದೇಶನ 'ಭೀಮ'ನಿಗಿದೆ. ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿರೋ 'ಭೀಮ' ಎಲ್ಲಾ ಆ್ಯಂಗಲ್​ನಿಂದಲೂ‌ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಇದೇ ಆಗಸ್ಟ್ 9 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭೀಮನ ಅಬ್ಬರ ಶುರುವಾಗಲಿದ್ದು, ಪ್ರೇಕ್ಷಕರು ಭೀಮನಿಗೆ ಎಷ್ಟು ಮಾರ್ಕ್ಸ್ ಕೊಡ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.