ETV Bharat / entertainment

ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ: ಬಳ್ಳಾರಿ ಜೈಲಿಗೆ ಸ್ಥಳಾಂತರ ಹಿನ್ನೆಲೆ ಬಿಗಿ ಬಂದೋಬಸ್ತ್ - DARSHAN JUDICIAL CUSTODY

author img

By ETV Bharat Karnataka Team

Published : Aug 28, 2024, 2:48 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಇಂದು ಸಂಜೆ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಲಿರುವ ಹಿನ್ನೆಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Actor Darshan
ನಟ ದರ್ಶನ್ (ETV Bharat)

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಅವರ ಸಹಚರರ ಸೆರೆವಾಸ ಮುಂದುವರೆದಿದೆ. ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯ ಹಿನ್ನೆಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆದ ಸಂಬಂಧ ಆರೋಪಿ ದರ್ಶನ್ ಸೇರಿ 10 ಮಂದಿಯನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ ದೊರೆತಿದೆ. ಈ ಹಿನ್ನೆಲೆ ಇಂದು ಸಂಜೆ ವೇಳೆಗೆ ಶಿಫ್ಟ್ ಮಾಡಲು ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ಪವನ್, ರಾಘವೇಂದ್ರ, ಜಗದೀಶ್, ನಂದೀಶ್, ಪ್ರದೂಶ್, ವಿನಯ್, ಲಕ್ಷ್ಮಣ್, ನಾಗರಾಜ್ ಹಾಗೂ ಧನರಾಜ್ ಎಂಬ 10 ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲು ನಿನ್ನೆ ನ್ಯಾಯಾಲಯ ಅನುಮತಿ ನೀಡಿತ್ತು. ನ್ಯಾಯಾಲಯದ ಆದೇಶ ಪ್ರತಿ ಸ್ವೀಕರಿಸಿರುವ ಜೈಲಾಧಿಕಾರಿಗಳು ಜೈಲಿನ ನಿಯಾಮವಳಿ ಪ್ರಕ್ರಿಯೆ ಮುಗಿಸಿ ಇಂದು ಸಂಜೆಯೊಳಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ದರ್ಶನ್ ಸಹಚರರ ಸ್ಥಳಾಂತರ ಹಿನ್ನೆಲೆ, ಮಾರ್ಗಮಧ್ಯೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಹಾಗಾಗಿ ರಾಜ್ಯ ಪೊಲೀಸ್ ಇಲಾಖೆಯ ಲಾ ಆ್ಯಂಡ್ ಆರ್ಡರ್ ಎಡಿಜಿಪಿ ಆರ್ ಹಿತೇಂದ್ರ ಅವರು ಸಂಬಂಧಿಸಿದ ಜಿಲ್ಲಾ ಎಸ್ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಜಯಸೂರ್ಯ, ಸಿದ್ದಿಕ್​ ವಿರುದ್ಧ ದೂರು: ಮಲಯಾಳಂ ಫಿಲ್ಮ್ ಪಾಲಿಸಿ ಕಮಿಟಿಯಿಂದ ಕೆಳಗಿಳಿದ ಶಾಸಕ ಮುಖೇಶ್​​ - Case Against Actor Jayasurya

ಬಿಗಿ ಬಂದೋಬಸ್ತ್: ಪ್ರಮುಖವಾಗಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆದೊಯ್ಯುವಾಗ ಅಭಿಮಾನಿಗಳ ಅತಿರೇಖದ ವರ್ತನೆ, ವಾಹನಕ್ಕೆ ಅಡ್ಡಿ ಸಾಧ್ಯತೆಗಳಿರುವ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಎಸ್ಪಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ - DARSHAN JAIL SHIFT

ಬೆಂಗಳೂರು ಟು ಬಳ್ಳಾರಿ ರೂಟ್ ಮ್ಯಾಪ್: ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಅಂತಿಮ ಸಿದ್ಧತೆ ಮಾಡಿಕೊಳ್ಳುತ್ತಿರುವ ಜೈಲಾಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬಳ್ಳಾರಿ ಜೈಲಿಗೆ ಹೋಗಲು ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊಸೂರು ಮುಖ್ಯರಸ್ತೆ, ನೈಸ್ ರಸ್ತೆ- ನೆಲಮಂಗಲದ ಮೂಲಕ ಹೋಗಲಿದ್ದಾರೆ. ನೆಲಮಂಗಲ - ತುಮಕೂರು - ಶಿರಾ - ಹಿರಿಯೂರು - ಚಳ್ಳಕೆರೆ - ಹಲಕುಂದಿ ಮಾರ್ಗವಾಗಿ ಬಳ್ಳಾರಿ ಜೈಲು ತಲುಪಲಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಅವರ ಸಹಚರರ ಸೆರೆವಾಸ ಮುಂದುವರೆದಿದೆ. ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯ ಹಿನ್ನೆಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆದ ಸಂಬಂಧ ಆರೋಪಿ ದರ್ಶನ್ ಸೇರಿ 10 ಮಂದಿಯನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ ದೊರೆತಿದೆ. ಈ ಹಿನ್ನೆಲೆ ಇಂದು ಸಂಜೆ ವೇಳೆಗೆ ಶಿಫ್ಟ್ ಮಾಡಲು ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ಪವನ್, ರಾಘವೇಂದ್ರ, ಜಗದೀಶ್, ನಂದೀಶ್, ಪ್ರದೂಶ್, ವಿನಯ್, ಲಕ್ಷ್ಮಣ್, ನಾಗರಾಜ್ ಹಾಗೂ ಧನರಾಜ್ ಎಂಬ 10 ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲು ನಿನ್ನೆ ನ್ಯಾಯಾಲಯ ಅನುಮತಿ ನೀಡಿತ್ತು. ನ್ಯಾಯಾಲಯದ ಆದೇಶ ಪ್ರತಿ ಸ್ವೀಕರಿಸಿರುವ ಜೈಲಾಧಿಕಾರಿಗಳು ಜೈಲಿನ ನಿಯಾಮವಳಿ ಪ್ರಕ್ರಿಯೆ ಮುಗಿಸಿ ಇಂದು ಸಂಜೆಯೊಳಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ದರ್ಶನ್ ಸಹಚರರ ಸ್ಥಳಾಂತರ ಹಿನ್ನೆಲೆ, ಮಾರ್ಗಮಧ್ಯೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಹಾಗಾಗಿ ರಾಜ್ಯ ಪೊಲೀಸ್ ಇಲಾಖೆಯ ಲಾ ಆ್ಯಂಡ್ ಆರ್ಡರ್ ಎಡಿಜಿಪಿ ಆರ್ ಹಿತೇಂದ್ರ ಅವರು ಸಂಬಂಧಿಸಿದ ಜಿಲ್ಲಾ ಎಸ್ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಜಯಸೂರ್ಯ, ಸಿದ್ದಿಕ್​ ವಿರುದ್ಧ ದೂರು: ಮಲಯಾಳಂ ಫಿಲ್ಮ್ ಪಾಲಿಸಿ ಕಮಿಟಿಯಿಂದ ಕೆಳಗಿಳಿದ ಶಾಸಕ ಮುಖೇಶ್​​ - Case Against Actor Jayasurya

ಬಿಗಿ ಬಂದೋಬಸ್ತ್: ಪ್ರಮುಖವಾಗಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆದೊಯ್ಯುವಾಗ ಅಭಿಮಾನಿಗಳ ಅತಿರೇಖದ ವರ್ತನೆ, ವಾಹನಕ್ಕೆ ಅಡ್ಡಿ ಸಾಧ್ಯತೆಗಳಿರುವ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಎಸ್ಪಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ - DARSHAN JAIL SHIFT

ಬೆಂಗಳೂರು ಟು ಬಳ್ಳಾರಿ ರೂಟ್ ಮ್ಯಾಪ್: ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಅಂತಿಮ ಸಿದ್ಧತೆ ಮಾಡಿಕೊಳ್ಳುತ್ತಿರುವ ಜೈಲಾಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬಳ್ಳಾರಿ ಜೈಲಿಗೆ ಹೋಗಲು ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊಸೂರು ಮುಖ್ಯರಸ್ತೆ, ನೈಸ್ ರಸ್ತೆ- ನೆಲಮಂಗಲದ ಮೂಲಕ ಹೋಗಲಿದ್ದಾರೆ. ನೆಲಮಂಗಲ - ತುಮಕೂರು - ಶಿರಾ - ಹಿರಿಯೂರು - ಚಳ್ಳಕೆರೆ - ಹಲಕುಂದಿ ಮಾರ್ಗವಾಗಿ ಬಳ್ಳಾರಿ ಜೈಲು ತಲುಪಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.