ETV Bharat / entertainment

ಸಿನಿಮಾ ಟಿಕೆಟ್ ಮೇಲೆ ಸೆಸ್: 'ಪ್ರೇಕ್ಷಕರಿಗೆ, ನಿರ್ಮಾಪಕರಿಗೆ ಹೊರೆ' - ಫಿಲ್ಮ್ ಚೇಂಬರ್ ಅಧ್ಯಕ್ಷ - NM Suresh

author img

By ETV Bharat Karnataka Team

Published : Jul 27, 2024, 7:28 PM IST

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಇದೇ ಮಂಗಳವಾರದಂದು ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಪ್ರತಿಪಕ್ಷ ಸದಸ್ಯರೂ ಕೂಡ ಈ ಮಸೂದೆಗೆ ಬೆಂಬಲ ಸೂಚಿಸಿದ್ದಾರೆ. ಇದೀಗ ಈ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

Film Chamber President NM Suresh
ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್ (ETV Bharat)
ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್ (ETV Bharat)

2022ರಲ್ಲಿ ಕೆಜಿಎಫ್​ 2, ಕಾಂತಾರದಂತಹ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂದ ಗಮನ ಸೆಳೆದಿದ್ದ ಕನ್ನಡ ಸಿನಿವಲಯದಲ್ಲೀಗ ಸ್ಟಾರ್ ನಟರ ಸಿನಿಮಾಗಳಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಸಂಖ್ಯೆಯ ಕಡಿಮೆ ಆಗಿದೆ ಎಂಬ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ.

ಹೊಸ ಪ್ರತಿಭೆಗಳು, ಕಂಟೆಂಟ್ ಜೊತೆಗೆ ಎಂಟರ್​​ಟೈನ್ಮೆಂಟ್ ಇದ್ದರೂ ಸಿನಿ ಪ್ರಿಯರು ಥಿಯೇಟರ್ ಕಡೆ ಮುಖ ಮಾಡುತ್ತಿಲ್ಲ ಅನ್ನೋ ವಿಚಾರ ಚಿತ್ರಮಂದಿರದ ಮಾಲೀಕರು, ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ. ಇಂಥ ಪರಿಸ್ಥಿಯಲ್ಲಿ ರಾಜ್ಯ ಸರ್ಕಾರ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆರವಾಗುವ ಉದ್ದೇಶದೊಂದಿಗೆ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ ಸ್ಕ್ರಿಪ್ಷನ್‌ ಮೇಲೆ ಶೇ.2ರಷ್ಟು ಸೆಸ್‌ ವಿಧಿಸುವ ಮಸೂದೆಯನ್ನ ಜಾರಿಗೆ ತರುತ್ತಿದೆ. ಇದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಹಾಗೂ ನಿರ್ಮಾಪಕರಿಗೆ ಹೊರೆಯಾಗಲಿದೆ ಎಂಬುದು ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷರ ಅಭಿಪ್ರಾಯ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಮಾತನಾಡಿ, ಸಿನಿಮಾ ಟಿಕೆಟ್ ದರ ಹಾಗೂ ಓಟಿಟಿ ಸಬ್ಸ್ಕ್ರಿಪ್ಷನ್ ಮೇಲೆ ಶೇ. 2 ರಷ್ಟು ಸೆಸ್ ಅಂದ್ರೆ, ಹೆಚ್ಚುವರಿ ತೆರಿಗೆ ವಿಧಿಸುವುದರಿಂದ ಪ್ರೇಕ್ಷಕರು ಹಾಗೂ ನಿರ್ಮಾಪಕರಿಗೆ ನಷ್ಟ ಆಗುತ್ತದೆ ಎಂದು ಹೇಳಿದ್ದಾರೆ. ಹೆಚ್ಚುವರಿ ತೆರಿಗೆ ಸಿನಿಮಾ ವಿತರಕರಿಗೆ ಲಾಭ ಆಗುತ್ತದೆ, ನಿರ್ಮಾಪಕರಿಗೆ ನಷ್ಟ ಆಗಲಿದೆ. ಇದರ ಜೊತೆಗೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರ ಸಿನಿಮಾಗಳು ಹೆಚ್ಚಾಗಿ ಬರುತ್ತಿಲ್ಲ. ಹೊಸಬರ ಕಥೆ ಚೆನ್ನಾಗಿದ್ದರೂ ಥಿಯೇಟರ್ ಕಡೆ ಜನ ಮುಖ ಮಾಡುತ್ತಿಲ್ಲ. ಹೀಗಾಗಿ ಸದ್ಯ ಚಿತ್ರರಂಗದ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ ಈ ಬಿಲ್ ಪುನರ್ ಪರಿಶೀಲನೆ ಮಾಡುವಂತೆ ಫಿಲ್ಮ್ ಚೇಂಬರ್​ನಿಂದ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಊರ್ವಶಿ ರೌಟೇಲಾರ 'ಘುಸ್ಪೈಥಿಯಾ' ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟ ಕನ್ನಡ ನಿರ್ಮಾಪಕ ರಮೇಶ್ ರೆಡ್ಡಿ - Ghuspaithiya

ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಹೆಚ್ಚುವರಿ ತೆರಿಗೆ (ಶೇ2ರಷ್ಟು) ವಿಧಿಸದಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದರು. ಸದ್ಯ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆರವಾಗುವ ಉದ್ದೇಶದೊಂದಿಗೆ ಈ ಮಸೂದೆ ಸಂಪುಟದಲ್ಲಿ ಅಂಗೀಕಾರ ಆಗಿದೆ.

ಇದನ್ನೂ ಓದಿ: ಸಿನಿಮಾ ಟಿಕೆಟ್ ಮೇಲೆ ಸೆಸ್: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್ - Cine And Cultural Activists Bill

ಮಂಗಳವಾರದಂದು (ಜುಲೈ 23) ಕರ್ನಾಟಕ ಸಿನಿ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಥಿಯೇಟರ್​ಗಳಲ್ಲಿ ಸಿನಿಮಾ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಕೊಡಮಾಡುವ ಟಿಕೆಟ್‌ ಪ್ರೈಸ್​ ಮೇಲೆ ಶೇಕಡ 1ರಿಂದ 2ರಷ್ಟು ಸೆಸ್ ಸಂಗ್ರಹಿಸಿ ಸಿನಿ - ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ವಿಧೇಯಕವಿದು. ಸಾಂಸ್ಕೃತಿಕ, ಸಿನಿ ಕಾರ್ಯಕರ್ತರ ಹೆಸರನ್ನು ನೋಂದಾಯಿಸಿ, ಗುರುತಿನ ಚೀಟಿ ಕೊಟ್ಟು, ಆರೋಗ್ಯ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ ನೀಡುವ ಅಂಶಗಳನ್ನು ಈ ಮಸೂದೆ ಒಳಗೊಂಡಿದೆ. ಕ್ಷೇಮಾಭಿವೃದ್ಧಿ ಮಂಡಳಿ ರಚನೆ ಆಗಲಿದೆ. ಈ ವಿಧೇಯಕಕ್ಕೆ ಪ್ರತಿಪಕ್ಷದ ಸದಸ್ಯರೂ ತಮ್ಮ ಬೆಂಬಲ ಸೂಚಿಸಿದ್ದಾರೆ.

ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್ (ETV Bharat)

2022ರಲ್ಲಿ ಕೆಜಿಎಫ್​ 2, ಕಾಂತಾರದಂತಹ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂದ ಗಮನ ಸೆಳೆದಿದ್ದ ಕನ್ನಡ ಸಿನಿವಲಯದಲ್ಲೀಗ ಸ್ಟಾರ್ ನಟರ ಸಿನಿಮಾಗಳಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಸಂಖ್ಯೆಯ ಕಡಿಮೆ ಆಗಿದೆ ಎಂಬ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ.

ಹೊಸ ಪ್ರತಿಭೆಗಳು, ಕಂಟೆಂಟ್ ಜೊತೆಗೆ ಎಂಟರ್​​ಟೈನ್ಮೆಂಟ್ ಇದ್ದರೂ ಸಿನಿ ಪ್ರಿಯರು ಥಿಯೇಟರ್ ಕಡೆ ಮುಖ ಮಾಡುತ್ತಿಲ್ಲ ಅನ್ನೋ ವಿಚಾರ ಚಿತ್ರಮಂದಿರದ ಮಾಲೀಕರು, ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ. ಇಂಥ ಪರಿಸ್ಥಿಯಲ್ಲಿ ರಾಜ್ಯ ಸರ್ಕಾರ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆರವಾಗುವ ಉದ್ದೇಶದೊಂದಿಗೆ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ ಸ್ಕ್ರಿಪ್ಷನ್‌ ಮೇಲೆ ಶೇ.2ರಷ್ಟು ಸೆಸ್‌ ವಿಧಿಸುವ ಮಸೂದೆಯನ್ನ ಜಾರಿಗೆ ತರುತ್ತಿದೆ. ಇದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಹಾಗೂ ನಿರ್ಮಾಪಕರಿಗೆ ಹೊರೆಯಾಗಲಿದೆ ಎಂಬುದು ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷರ ಅಭಿಪ್ರಾಯ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಮಾತನಾಡಿ, ಸಿನಿಮಾ ಟಿಕೆಟ್ ದರ ಹಾಗೂ ಓಟಿಟಿ ಸಬ್ಸ್ಕ್ರಿಪ್ಷನ್ ಮೇಲೆ ಶೇ. 2 ರಷ್ಟು ಸೆಸ್ ಅಂದ್ರೆ, ಹೆಚ್ಚುವರಿ ತೆರಿಗೆ ವಿಧಿಸುವುದರಿಂದ ಪ್ರೇಕ್ಷಕರು ಹಾಗೂ ನಿರ್ಮಾಪಕರಿಗೆ ನಷ್ಟ ಆಗುತ್ತದೆ ಎಂದು ಹೇಳಿದ್ದಾರೆ. ಹೆಚ್ಚುವರಿ ತೆರಿಗೆ ಸಿನಿಮಾ ವಿತರಕರಿಗೆ ಲಾಭ ಆಗುತ್ತದೆ, ನಿರ್ಮಾಪಕರಿಗೆ ನಷ್ಟ ಆಗಲಿದೆ. ಇದರ ಜೊತೆಗೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರ ಸಿನಿಮಾಗಳು ಹೆಚ್ಚಾಗಿ ಬರುತ್ತಿಲ್ಲ. ಹೊಸಬರ ಕಥೆ ಚೆನ್ನಾಗಿದ್ದರೂ ಥಿಯೇಟರ್ ಕಡೆ ಜನ ಮುಖ ಮಾಡುತ್ತಿಲ್ಲ. ಹೀಗಾಗಿ ಸದ್ಯ ಚಿತ್ರರಂಗದ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ ಈ ಬಿಲ್ ಪುನರ್ ಪರಿಶೀಲನೆ ಮಾಡುವಂತೆ ಫಿಲ್ಮ್ ಚೇಂಬರ್​ನಿಂದ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಊರ್ವಶಿ ರೌಟೇಲಾರ 'ಘುಸ್ಪೈಥಿಯಾ' ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟ ಕನ್ನಡ ನಿರ್ಮಾಪಕ ರಮೇಶ್ ರೆಡ್ಡಿ - Ghuspaithiya

ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಹೆಚ್ಚುವರಿ ತೆರಿಗೆ (ಶೇ2ರಷ್ಟು) ವಿಧಿಸದಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದರು. ಸದ್ಯ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆರವಾಗುವ ಉದ್ದೇಶದೊಂದಿಗೆ ಈ ಮಸೂದೆ ಸಂಪುಟದಲ್ಲಿ ಅಂಗೀಕಾರ ಆಗಿದೆ.

ಇದನ್ನೂ ಓದಿ: ಸಿನಿಮಾ ಟಿಕೆಟ್ ಮೇಲೆ ಸೆಸ್: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್ - Cine And Cultural Activists Bill

ಮಂಗಳವಾರದಂದು (ಜುಲೈ 23) ಕರ್ನಾಟಕ ಸಿನಿ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಥಿಯೇಟರ್​ಗಳಲ್ಲಿ ಸಿನಿಮಾ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಕೊಡಮಾಡುವ ಟಿಕೆಟ್‌ ಪ್ರೈಸ್​ ಮೇಲೆ ಶೇಕಡ 1ರಿಂದ 2ರಷ್ಟು ಸೆಸ್ ಸಂಗ್ರಹಿಸಿ ಸಿನಿ - ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ವಿಧೇಯಕವಿದು. ಸಾಂಸ್ಕೃತಿಕ, ಸಿನಿ ಕಾರ್ಯಕರ್ತರ ಹೆಸರನ್ನು ನೋಂದಾಯಿಸಿ, ಗುರುತಿನ ಚೀಟಿ ಕೊಟ್ಟು, ಆರೋಗ್ಯ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ ನೀಡುವ ಅಂಶಗಳನ್ನು ಈ ಮಸೂದೆ ಒಳಗೊಂಡಿದೆ. ಕ್ಷೇಮಾಭಿವೃದ್ಧಿ ಮಂಡಳಿ ರಚನೆ ಆಗಲಿದೆ. ಈ ವಿಧೇಯಕಕ್ಕೆ ಪ್ರತಿಪಕ್ಷದ ಸದಸ್ಯರೂ ತಮ್ಮ ಬೆಂಬಲ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.