ETV Bharat / entertainment

ಮುತ್ತಣ್ಣನ ಮಗನಾಗಿ ಅದೃಷ್ಟ ಪರೀಕ್ಷೆಗಿಳಿದ ಪ್ರಣಂ ದೇವರಾಜ್

author img

By ETV Bharat Karnataka Team

Published : Jan 29, 2024, 7:25 PM IST

ಕುಮಾರಿ 21 ಎಫ್ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪ್ರಣಂ ದೇವರಾಜ್ ಇದೀಗ 'S/O ಮುತ್ತಣ್ಣ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಸಿನಿ ರಸಿಕರ ಗಮನ ಸೆಳೆಯುತ್ತಿದೆ.

'S/O ಮುತ್ತಣ್ಣ' ಚಿತ್ರದ ಪೋಸ್ಟರ್​
'S/O ಮುತ್ತಣ್ಣ' ಚಿತ್ರದ ಪೋಸ್ಟರ್​

ಸ್ಯಾಂಡಲ್​ವುಡ್​ನ ಡೈನಾಮಿಕ್​ ಸ್ಟಾರ್​ ದೇವರಾಜ್​ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಟನೆಯ 'S/O ಮುತ್ತಣ್ಣ' ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪ್ರಣಂ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನ್ನು ಅನಾವರಣ ಮಾಡುವ ಮೂಲಕ ಚಿತ್ರತಂಡ ಅವರಿಗೆ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್​​ನಲ್ಲಿರುವ ಎಂಎಂ ಲೆಗಸಿಯಲ್ಲಿ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಕೆಲವೊಂದು ಇಂಟ್ರೆಸ್ಟಿಂಗ್​ ವಿಚಾರಗಳನ್ನು ಹಂಚಿಕೊಂಡಿತು.

ಮೊದಲು ಮಾತನಾಡಿದ ನಾಯಕ ನಟ ಪ್ರಣಂ ದೇವರಾಜ್, 'S/o ಮುತ್ತಣ್ಣ' ಹೆಸರೇ ಆಕರ್ಷಕವಾಗಿದೆ. ಶ್ರೀಕಾಂತ್ ಸರ್ ಫಸ್ಟ್ ಟೈಮ್ ನಮ್ಮ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ, ಹೇಳಿದ ಕಥೆಯ ಮೇಲೆ ತುಂಬಾ ನಂಬಿಕೆ ಬಂತು. ಅಂದು ಅವರು ನೀಡಿದ ಭಾಷೆಗಿಂತ ಸಖತ್ ಆಗಿ ಸಿನಿಮಾ ತೆಗೆದಿದ್ದಾರೆ. ಶ್ರೀಕಾಂತ್ ಅವರ ಯೋಚನೆಯೇ ಬೇರೆ. ಇಡೀ ಚಿತ್ರತಂಡ ಅಣ್ಣ ತಮ್ಮಂದಿರ ತರಹ ಕೆಲಸ ಮಾಡಿದೆ. ನಿರ್ಮಾಪಕರು ಸಹ ಎಲ್ಲದಕ್ಕೂ ಬೆಂಬಲ ಕೊಟ್ಟಿದ್ದಾರೆ. ತಾರೆ ಖುಷಿ ರವಿ ಅವರು ಎಂಥಾ ನಟಿ ಅನ್ನೋದು 'ದಿಯಾ' ಚಿತ್ರದಿಂದ ಗೊತ್ತಾಗಿದೆ. ಅವರ ಜೊತೆ ಕೆಲಸ ಮಾಡಿದ್ದು, ಮತ್ತಷ್ಟು ಖುಷಿ ಕೊಟ್ಟಿದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ನಾಯಕಿ ನಟಿ ಖುಷಿ ರವಿ ಮಾತನಾಡಿ, 'S/o ಮುತ್ತಣ್ಣ' ಅಂತಾ ಹೇಳಿದ ತಕ್ಷಣ ಪಾಸಿಟಿವ್ ವೈಬ್ಸ್ ಬರುತ್ತದೆ. ಟೈಟಲ್ ತುಂಬಾ ಪವರ್​ಫುಲ್ ಆಗಿದೆ. ಟೈಟಲ್ ಕೇಳಿಯೇ ಸಿನಿಮಾ ಒಪ್ಪಿಕೊಂಡೆ. ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಕೊಟ್ಟಿದೆ. ರಂಗಾಯಣ ರಘು ಸರ್ ಕ್ಯಾಮರಾ ಹೇಗೆ ಫೇಸ್ ಮಾಡಬೇಕು ಅನ್ನೋದನ್ನು ಹೇಳಿ ಕೊಟ್ಟರು. ಪ್ರಣಂ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಚಿತ್ರೀಕರಣ ಸಮಯದಲ್ಲಿ ಎಲ್ಲರೂ ಸಖತ್​ ಎಂಜಾಯ್​ ಮಾಡಿದೆವು ಎಂದು ಚಿತ್ರತಂಡದವನ್ನು ಬಣ್ಣಿಸಿದರು.

ನಿರ್ದೇಶಕ ಶ್ರೀಕಾಂತ್ ಮಾತನಾಡಿ, ದೇವರಾಜ್ ಸರ್ ಮುಂದೆ ಕಥೆ ಹೇಳಲು ಹೋದಾಗ ಎಲ್ಲಿ ಕೆಲಸ ಮಾಡಿದ್ದೀಯಾ? ನಿನ್ನ ಪ್ರೊಫೈಲ್ ಕೊಡು? ಅಂತ ಹೀಗೆ ಒಂದು ಮಾತು ಹೇಳದೆ ನಾನು ಹೇಳಿದ ಕಥೆಗೆ ಏನ್ ಮಾಡುತ್ತೀರಾ ಮಾಡಿ ಎಂದು ಬೆಂಬಲ ಕೊಟ್ಟರು. ಟೈಟಲ್ ಹೇಳುವಂತೆ ಇದು ಅಪ್ಪ - ಮಗನ ಬಾಂಧವ್ಯದ ಕಥೆ. ಸದ್ಯ ವಾರಾಣಸಿ ಭಾಗದ ಶೂಟಿಂಗ್ ಮುಗಿಸಿಕೊಂಡು ಬಂದಿದ್ದೇವೆ. ಸಾಂಗ್ ಬಾಕಿ ಇದೆ. ಪಾಂಡಿಚೆರಿಯಲ್ಲಿ ಶೂಟ್ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ. ಫೆಬ್ರವರಿಯಲ್ಲಿ ಕುಂಬಳಕಾಯಿ ಒಡೆಯಲು ಪ್ಲಾನ್ ಮಾಡಿಕೊಂಡಿದ್ದೇವೆ. ಆ ನಂತರ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು. ನಿರ್ಮಾಪಕರು ಮಾತನಾಡಿ, ಕಥೆ ಬಗ್ಗೆ ತುಂಬಾ ಚರ್ಚೆ ಮಾಡಿ ಈ ಸಿನಿಮಾ ಮಾಡಿದ್ದೇವೆ. ಪ್ರಣಮ್​​ಗೆ ಇದೇ ಕಥೆ ಮಾಡಬೇಕೆಂದು ಮಾಡಿದ್ದೇವೆ. ಕಥೆ ತುಂಬಾ ಚೆನ್ನಾಗಿ ಬಂದಿದೆ. ಮೇಕಿಂಗ್ ನಾವು ಅಂದುಕೊಂಡಂತೆ ಬಂದಿದೆ ಎಂದರು.

ಶ್ರೀಕಾಂತ್ ಹುಣಸೂರು ನಿರ್ದೇಶಿಸುತ್ತಿರುವ ‘S/o ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸುತ್ತಿದ್ದು, ಖುಷಿ ರವಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲಾ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರ ತಾರಾಬಳಗವಿದೆ.

ಪುರಾತನ ಫಿಲಂಸ್ ಬ್ಯಾನರ್ ಅಡಿ ಎಸ್​​ಆರ್​ಕೆ ಫಿಲ್ಮಂಸ್ ಸಹಕಾರದೊಂದಿಗೆ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್​ನಲ್ಲಿ ಬ್ಯುಸಿಯಾಗಿದೆ.

ಇದನ್ನೂ ಓದಿ: ರಾಗಿಣಿ ದ್ವಿವೇದಿ‌ 'ಇ-ಮೇಲ್' ಚಿತ್ರದ ಟೀಸರ್‌ ಬಿಡುಗಡೆಗೊಳಿಸಿದ ಶಿವ ರಾಜ್‌ಕುಮಾರ್

ಸ್ಯಾಂಡಲ್​ವುಡ್​ನ ಡೈನಾಮಿಕ್​ ಸ್ಟಾರ್​ ದೇವರಾಜ್​ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಟನೆಯ 'S/O ಮುತ್ತಣ್ಣ' ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪ್ರಣಂ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನ್ನು ಅನಾವರಣ ಮಾಡುವ ಮೂಲಕ ಚಿತ್ರತಂಡ ಅವರಿಗೆ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್​​ನಲ್ಲಿರುವ ಎಂಎಂ ಲೆಗಸಿಯಲ್ಲಿ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಕೆಲವೊಂದು ಇಂಟ್ರೆಸ್ಟಿಂಗ್​ ವಿಚಾರಗಳನ್ನು ಹಂಚಿಕೊಂಡಿತು.

ಮೊದಲು ಮಾತನಾಡಿದ ನಾಯಕ ನಟ ಪ್ರಣಂ ದೇವರಾಜ್, 'S/o ಮುತ್ತಣ್ಣ' ಹೆಸರೇ ಆಕರ್ಷಕವಾಗಿದೆ. ಶ್ರೀಕಾಂತ್ ಸರ್ ಫಸ್ಟ್ ಟೈಮ್ ನಮ್ಮ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ, ಹೇಳಿದ ಕಥೆಯ ಮೇಲೆ ತುಂಬಾ ನಂಬಿಕೆ ಬಂತು. ಅಂದು ಅವರು ನೀಡಿದ ಭಾಷೆಗಿಂತ ಸಖತ್ ಆಗಿ ಸಿನಿಮಾ ತೆಗೆದಿದ್ದಾರೆ. ಶ್ರೀಕಾಂತ್ ಅವರ ಯೋಚನೆಯೇ ಬೇರೆ. ಇಡೀ ಚಿತ್ರತಂಡ ಅಣ್ಣ ತಮ್ಮಂದಿರ ತರಹ ಕೆಲಸ ಮಾಡಿದೆ. ನಿರ್ಮಾಪಕರು ಸಹ ಎಲ್ಲದಕ್ಕೂ ಬೆಂಬಲ ಕೊಟ್ಟಿದ್ದಾರೆ. ತಾರೆ ಖುಷಿ ರವಿ ಅವರು ಎಂಥಾ ನಟಿ ಅನ್ನೋದು 'ದಿಯಾ' ಚಿತ್ರದಿಂದ ಗೊತ್ತಾಗಿದೆ. ಅವರ ಜೊತೆ ಕೆಲಸ ಮಾಡಿದ್ದು, ಮತ್ತಷ್ಟು ಖುಷಿ ಕೊಟ್ಟಿದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ನಾಯಕಿ ನಟಿ ಖುಷಿ ರವಿ ಮಾತನಾಡಿ, 'S/o ಮುತ್ತಣ್ಣ' ಅಂತಾ ಹೇಳಿದ ತಕ್ಷಣ ಪಾಸಿಟಿವ್ ವೈಬ್ಸ್ ಬರುತ್ತದೆ. ಟೈಟಲ್ ತುಂಬಾ ಪವರ್​ಫುಲ್ ಆಗಿದೆ. ಟೈಟಲ್ ಕೇಳಿಯೇ ಸಿನಿಮಾ ಒಪ್ಪಿಕೊಂಡೆ. ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಕೊಟ್ಟಿದೆ. ರಂಗಾಯಣ ರಘು ಸರ್ ಕ್ಯಾಮರಾ ಹೇಗೆ ಫೇಸ್ ಮಾಡಬೇಕು ಅನ್ನೋದನ್ನು ಹೇಳಿ ಕೊಟ್ಟರು. ಪ್ರಣಂ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಚಿತ್ರೀಕರಣ ಸಮಯದಲ್ಲಿ ಎಲ್ಲರೂ ಸಖತ್​ ಎಂಜಾಯ್​ ಮಾಡಿದೆವು ಎಂದು ಚಿತ್ರತಂಡದವನ್ನು ಬಣ್ಣಿಸಿದರು.

ನಿರ್ದೇಶಕ ಶ್ರೀಕಾಂತ್ ಮಾತನಾಡಿ, ದೇವರಾಜ್ ಸರ್ ಮುಂದೆ ಕಥೆ ಹೇಳಲು ಹೋದಾಗ ಎಲ್ಲಿ ಕೆಲಸ ಮಾಡಿದ್ದೀಯಾ? ನಿನ್ನ ಪ್ರೊಫೈಲ್ ಕೊಡು? ಅಂತ ಹೀಗೆ ಒಂದು ಮಾತು ಹೇಳದೆ ನಾನು ಹೇಳಿದ ಕಥೆಗೆ ಏನ್ ಮಾಡುತ್ತೀರಾ ಮಾಡಿ ಎಂದು ಬೆಂಬಲ ಕೊಟ್ಟರು. ಟೈಟಲ್ ಹೇಳುವಂತೆ ಇದು ಅಪ್ಪ - ಮಗನ ಬಾಂಧವ್ಯದ ಕಥೆ. ಸದ್ಯ ವಾರಾಣಸಿ ಭಾಗದ ಶೂಟಿಂಗ್ ಮುಗಿಸಿಕೊಂಡು ಬಂದಿದ್ದೇವೆ. ಸಾಂಗ್ ಬಾಕಿ ಇದೆ. ಪಾಂಡಿಚೆರಿಯಲ್ಲಿ ಶೂಟ್ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ. ಫೆಬ್ರವರಿಯಲ್ಲಿ ಕುಂಬಳಕಾಯಿ ಒಡೆಯಲು ಪ್ಲಾನ್ ಮಾಡಿಕೊಂಡಿದ್ದೇವೆ. ಆ ನಂತರ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು. ನಿರ್ಮಾಪಕರು ಮಾತನಾಡಿ, ಕಥೆ ಬಗ್ಗೆ ತುಂಬಾ ಚರ್ಚೆ ಮಾಡಿ ಈ ಸಿನಿಮಾ ಮಾಡಿದ್ದೇವೆ. ಪ್ರಣಮ್​​ಗೆ ಇದೇ ಕಥೆ ಮಾಡಬೇಕೆಂದು ಮಾಡಿದ್ದೇವೆ. ಕಥೆ ತುಂಬಾ ಚೆನ್ನಾಗಿ ಬಂದಿದೆ. ಮೇಕಿಂಗ್ ನಾವು ಅಂದುಕೊಂಡಂತೆ ಬಂದಿದೆ ಎಂದರು.

ಶ್ರೀಕಾಂತ್ ಹುಣಸೂರು ನಿರ್ದೇಶಿಸುತ್ತಿರುವ ‘S/o ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸುತ್ತಿದ್ದು, ಖುಷಿ ರವಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲಾ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರ ತಾರಾಬಳಗವಿದೆ.

ಪುರಾತನ ಫಿಲಂಸ್ ಬ್ಯಾನರ್ ಅಡಿ ಎಸ್​​ಆರ್​ಕೆ ಫಿಲ್ಮಂಸ್ ಸಹಕಾರದೊಂದಿಗೆ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್​ನಲ್ಲಿ ಬ್ಯುಸಿಯಾಗಿದೆ.

ಇದನ್ನೂ ಓದಿ: ರಾಗಿಣಿ ದ್ವಿವೇದಿ‌ 'ಇ-ಮೇಲ್' ಚಿತ್ರದ ಟೀಸರ್‌ ಬಿಡುಗಡೆಗೊಳಿಸಿದ ಶಿವ ರಾಜ್‌ಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.