ETV Bharat / entertainment

ಅಂದು 'ಮುಂಗಾರು ಮಳೆ' ಇಂದು 'ಕೃಷ್ಣಂ ಪ್ರಣಯ ಸಖಿ': ಬಾಕ್ಸ್ ಆಫೀಸ್‌ನಲ್ಲಿ 'ಗಣಿ'ಗಾರಿಕೆಗೆ ರೆಡಿ - Krishnam Pranaya Sakhi

author img

By ETV Bharat Entertainment Team

Published : Aug 14, 2024, 5:02 PM IST

ಆಗಸ್ಟ್​​ನಲ್ಲಿ ಸಾಲು ಸಾಲು ಕನ್ನಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದು, ನಾಳೆ ಬಹುನಿರೀಕ್ಷಿತ ಚಿತ್ರಗಳಾದ 'ಕೃಷ್ಣಂ ಪ್ರಣಯ ಸಖಿ' ಮತ್ತು 'ಗೌರಿ' ಅದ್ಧೂರಿಯಾಗಿ ತೆರೆಗಪ್ಪಳಿಸಲಿದೆ. ಈಗಾಗಲೇ ಬಿಡುಗಡೆಯಾಗಿರುವ 'ಭೀಮ' ಉತ್ತಮ ಪ್ರದರ್ಶನ ಮುಂದುವರಿಸಿದೆ.

Krishnam Pranaya Sakhi
'ಕೃಷ್ಣಂ ಪ್ರಣಯ ಸಖಿ' ಪಿಕ್ಚರ್ (ETV Bharat)

ಬೆಂಗಳೂರು: ಸ್ಯಾಂಡಲ್​ವುಡ್​ನ ಖ್ಯಾತ ನಟ ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ 'ಭೀಮ' ಸಿನಿಮಾ ಕಳೆದ ವಾರ ತೆರೆಕಂಡು ಭರ್ಜರಿ ಪ್ರದರ್ಶನವಾಗಿದೆ. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಮುಂದುವರಿದಿದ್ದು, ಸಿನಿಮಾ ಸಕ್ಸಸ್ ಕನ್ನಡ ಚಿತ್ರರಂಗದಲ್ಲಿ ಭರವಸೆಯ ಕಿರಣ ಮೂಡಿಸಿದೆ. ಸಾಲು ಸಾಲು ಕನ್ನಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದು, ನಾಳೆ ಬಹುನಿರೀಕ್ಷಿತ ಚಿತ್ರಗಳಾದ 'ಕೃಷ್ಣಂ ಪ್ರಣಯ ಸಖಿ' ಮತ್ತು 'ಗೌರಿ' ಅದ್ಧೂರಿಯಾಗಿ ತೆರೆಗಪ್ಪಳಿಸಲಿದೆ.

ಶೀರ್ಷಿಕೆ ಹಾಗೂ ಹಾಡುಗಳಿಂದಲೇ ಕನ್ನಡ ಚಿತ್ರರಂಗ‌ದಲ್ಲಿ ಸಖತ್​​ ಟಾಕ್ ಆಗುತ್ತಿರುವ ಸಿನಿಮಾ 'ಕೃಷ್ಣಂ ಪ್ರಣಯ ಸಖಿ'. ಗೋಲ್ಡನ್ ಸ್ಡಾರ್ ಗಣೇಶ್ ಎಂಟು ಬ್ಯೂಟಿಫುಲ್ ಹೀರೋಯಿನ್​​ಗಳ ಜೊತೆ ರೊಮ್ಯಾನ್ಸ್ ಮಾಡಿರುವ 'ಕೃಷ್ಣಂ ಪ್ರಣಯ ಸಖಿ' ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿನಿಮಾದ ಕ್ರೇಜ್ ದುಪ್ಪಟ್ಟಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಿರ್ಮಾಪಕ ಪ್ರಶಾಂತ್ ಜಿ.ರುದ್ರಪ್ಪ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸುತ್ತಿದ್ದಾರೆ. ಇಂದು ಮಾಲ್ ಒಂದರಲ್ಲಿ ನಡೆಯಲಿರುವ ಕೃಷ್ಣಂ ಪ್ರಣಯ ಸಖಿ ಪ್ರೀಮಿಯರ್​​ ಶೋನ ಟಿಕೆಟ್​​ಗಳೆಲ್ಲ ಸೋಲ್ಡ್ ಔಟ್ ಆಗಿವೆ.

20006ರಲ್ಲಿ ಮುಂಗಾರು ಮಳೆ ಸಿನಿಮಾ ಹಾಡುಗಳು ಸೂಪರ್ ಹಿಟ್ ಆಗುವುದರ ಜೊತೆಗೆ ಗಣೇಶ್​​ ಅವರಿಗೆ ಗೋಲ್ಡನ್​​​ ಸ್ಟಾರ್‌ಡಮ್ ತಂದುಕೊಟ್ಟಿತ್ತು. ಸದ್ಯ ಕೃಷ್ಣಂ ಪ್ರಣಯ ಸಖಿ ಸಾಂಗ್ಸ್ ಸೂಪರ್ ಡೂಪರ್​​ ಹಿಟ್ ಆಗಿದ್ದು, ಬಾಕ್ಸ್ ಆಫೀಸ್​ನಲ್ಲಿ ಬಿರುಗಾಳಿ ಎಬ್ಬಿಸುವ ಸೂಚನೆ ಸಿಗುತ್ತಿದೆ. ಸಿನಿಪ್ರೇಮಿಗಳ ಕ್ರೇಜ್ ನೋಡ್ತಿದ್ರೆ ಗೋಲ್ಡನ್ ಸ್ಟಾರ್​​ ಮತ್ತೆ ಗೋಲ್ಡನ್ ಟೈಮ್ ಶುರುವಾಗುವ ಭರವಸೆ ಇದೆ.

ಈಗಾಗಲೇ ಚಿನ್ನಮ್ಮ, ಮೈ ಮ್ಯಾರೇಜ್ ಫಿಕ್ಸ್ ಹಾಡುಗಳು ಯೂಟ್ಯೂಬ್​​ನಲ್ಲಿ ಮಿಲಿಯನ್​​ಗಟ್ಟಲೆ ವೀಕ್ಷಣೆಯಾಗಿ, ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. 'ದ್ವಾಪರ' ಹಾಡಂತೂ ಸಖತ್​​ ಟ್ರೆಂಡ್​ ಆಗಿದೆ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರವರೆಗೂ ಹಾಟ್ ಫೇವರೆಟ್ ಆಗಿದೆ. ಇಷ್ಟು ಕ್ರೇಜ್ ಹುಟ್ಟಿಸಿರೋ ಕೃಷ್ಣಂ ಪ್ರಣಯ ಸಖಿ ಚಿತ್ರದ ಅಡ್ವಾನ್ಸ್​​ ಟಿಕೆಟ್ ಬುಕ್ಕಿಂಗ್ ವಿಚಾರದಲ್ಲೂ ಮುನ್ನಡೆ ಸಾಧಿಸಿದ್ದು, ಹೌಸ್​​ಫುಲ್ ಆಗಿದೆ.

ಕೃಷ್ಣಂ ಪ್ರಣಯ ಸಖಿ ಚಿತ್ರದ ಕಥೆಯ ಬಗ್ಗೆ ಚಿತ್ರತಂಡ ಎಲ್ಲೂ ಸುಳಿವು ಬಿಟ್ಟು ಕೊಟ್ಟಿಲ್ಲ. ಸೆನ್ಸಾರ್ ಮಂಡಳಿಯಲ್ಲಿ ಸಿನಿಮಾ ವೀಕ್ಷಿಸಿರುವ ಸದಸ್ಯರು ಹೇಳುವ ಹಾಗೇ ಒಬ್ಬ ಆಗರ್ಭ ಶ್ರೀಮಂತನ ಮಗ ಸಾಮಾನ್ಯ ಹುಡುಗನಂತೆ ಹುಡುಗಿಯ ಮನಸ್ಸು ಗೆಲ್ಲಲು ಬಯಸುತ್ತಾನೆ ಅನ್ನೋದು ಕಥೆ. ಬಹಳ ಎಂಟರ್​ಟೈನಿಂಗ್ ಆಗಿದೆ. ಗಣೇಶ್ ಸಿನಿಮಾ ಕೆರಿಯರ್​ನಲ್ಲಿ ವಿಶಿಷ್ಠವಾದ ಚಿತ್ರ. ನಿರ್ಮಾಪಕರು ಈ ಚಿತ್ರವನ್ನು ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇದೊಂದು ಫ್ಯಾಮಿಲಿ ಸಿನಿಮಾ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಸಿನಿಸುಗ್ಗಿ: ಒಂದೇ ದಿನ 10ಕ್ಕೂ ಹೆಚ್ಚು ಚಿತ್ರಗಳು ತೆರೆಗೆ; ಬಾಕ್ಸ್​ ಆಫೀಸ್​​ ಫೈಟ್​ ಪಕ್ಕಾ - Independence Day Box Office Clash

ಇದು ಗಣೇಶ್ ಅಭಿನಯದ 41ನೇ ಸಿನಿಮಾ. ಗಣಿ ಜೋಡಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಇವರ ಜೊತೆ ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಸೇರಿದಂತೆ ಮೊದಲಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ: ತಾರೆಯರು ಭಾಗಿ, ವಿಡಿಯೋ ನೋಡಿ - Pooja for Prosperity of Sandalwood

ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ.ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಕನ್ನಡದ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರೋ ಶ್ರೀನಿವಾಸರಾಜು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗಣಿ ಹೊಸ ಅವತಾರಕ್ಕೆ ಪ್ರೇಕ್ಷಕರು ಏನು ಹೇಳ್ತಾರೆ ಎಂಬುದು ನಾಳೆ ತಿಳಿಯಲಿದೆ.

ಬೆಂಗಳೂರು: ಸ್ಯಾಂಡಲ್​ವುಡ್​ನ ಖ್ಯಾತ ನಟ ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ 'ಭೀಮ' ಸಿನಿಮಾ ಕಳೆದ ವಾರ ತೆರೆಕಂಡು ಭರ್ಜರಿ ಪ್ರದರ್ಶನವಾಗಿದೆ. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಮುಂದುವರಿದಿದ್ದು, ಸಿನಿಮಾ ಸಕ್ಸಸ್ ಕನ್ನಡ ಚಿತ್ರರಂಗದಲ್ಲಿ ಭರವಸೆಯ ಕಿರಣ ಮೂಡಿಸಿದೆ. ಸಾಲು ಸಾಲು ಕನ್ನಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದು, ನಾಳೆ ಬಹುನಿರೀಕ್ಷಿತ ಚಿತ್ರಗಳಾದ 'ಕೃಷ್ಣಂ ಪ್ರಣಯ ಸಖಿ' ಮತ್ತು 'ಗೌರಿ' ಅದ್ಧೂರಿಯಾಗಿ ತೆರೆಗಪ್ಪಳಿಸಲಿದೆ.

ಶೀರ್ಷಿಕೆ ಹಾಗೂ ಹಾಡುಗಳಿಂದಲೇ ಕನ್ನಡ ಚಿತ್ರರಂಗ‌ದಲ್ಲಿ ಸಖತ್​​ ಟಾಕ್ ಆಗುತ್ತಿರುವ ಸಿನಿಮಾ 'ಕೃಷ್ಣಂ ಪ್ರಣಯ ಸಖಿ'. ಗೋಲ್ಡನ್ ಸ್ಡಾರ್ ಗಣೇಶ್ ಎಂಟು ಬ್ಯೂಟಿಫುಲ್ ಹೀರೋಯಿನ್​​ಗಳ ಜೊತೆ ರೊಮ್ಯಾನ್ಸ್ ಮಾಡಿರುವ 'ಕೃಷ್ಣಂ ಪ್ರಣಯ ಸಖಿ' ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿನಿಮಾದ ಕ್ರೇಜ್ ದುಪ್ಪಟ್ಟಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಿರ್ಮಾಪಕ ಪ್ರಶಾಂತ್ ಜಿ.ರುದ್ರಪ್ಪ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸುತ್ತಿದ್ದಾರೆ. ಇಂದು ಮಾಲ್ ಒಂದರಲ್ಲಿ ನಡೆಯಲಿರುವ ಕೃಷ್ಣಂ ಪ್ರಣಯ ಸಖಿ ಪ್ರೀಮಿಯರ್​​ ಶೋನ ಟಿಕೆಟ್​​ಗಳೆಲ್ಲ ಸೋಲ್ಡ್ ಔಟ್ ಆಗಿವೆ.

20006ರಲ್ಲಿ ಮುಂಗಾರು ಮಳೆ ಸಿನಿಮಾ ಹಾಡುಗಳು ಸೂಪರ್ ಹಿಟ್ ಆಗುವುದರ ಜೊತೆಗೆ ಗಣೇಶ್​​ ಅವರಿಗೆ ಗೋಲ್ಡನ್​​​ ಸ್ಟಾರ್‌ಡಮ್ ತಂದುಕೊಟ್ಟಿತ್ತು. ಸದ್ಯ ಕೃಷ್ಣಂ ಪ್ರಣಯ ಸಖಿ ಸಾಂಗ್ಸ್ ಸೂಪರ್ ಡೂಪರ್​​ ಹಿಟ್ ಆಗಿದ್ದು, ಬಾಕ್ಸ್ ಆಫೀಸ್​ನಲ್ಲಿ ಬಿರುಗಾಳಿ ಎಬ್ಬಿಸುವ ಸೂಚನೆ ಸಿಗುತ್ತಿದೆ. ಸಿನಿಪ್ರೇಮಿಗಳ ಕ್ರೇಜ್ ನೋಡ್ತಿದ್ರೆ ಗೋಲ್ಡನ್ ಸ್ಟಾರ್​​ ಮತ್ತೆ ಗೋಲ್ಡನ್ ಟೈಮ್ ಶುರುವಾಗುವ ಭರವಸೆ ಇದೆ.

ಈಗಾಗಲೇ ಚಿನ್ನಮ್ಮ, ಮೈ ಮ್ಯಾರೇಜ್ ಫಿಕ್ಸ್ ಹಾಡುಗಳು ಯೂಟ್ಯೂಬ್​​ನಲ್ಲಿ ಮಿಲಿಯನ್​​ಗಟ್ಟಲೆ ವೀಕ್ಷಣೆಯಾಗಿ, ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. 'ದ್ವಾಪರ' ಹಾಡಂತೂ ಸಖತ್​​ ಟ್ರೆಂಡ್​ ಆಗಿದೆ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರವರೆಗೂ ಹಾಟ್ ಫೇವರೆಟ್ ಆಗಿದೆ. ಇಷ್ಟು ಕ್ರೇಜ್ ಹುಟ್ಟಿಸಿರೋ ಕೃಷ್ಣಂ ಪ್ರಣಯ ಸಖಿ ಚಿತ್ರದ ಅಡ್ವಾನ್ಸ್​​ ಟಿಕೆಟ್ ಬುಕ್ಕಿಂಗ್ ವಿಚಾರದಲ್ಲೂ ಮುನ್ನಡೆ ಸಾಧಿಸಿದ್ದು, ಹೌಸ್​​ಫುಲ್ ಆಗಿದೆ.

ಕೃಷ್ಣಂ ಪ್ರಣಯ ಸಖಿ ಚಿತ್ರದ ಕಥೆಯ ಬಗ್ಗೆ ಚಿತ್ರತಂಡ ಎಲ್ಲೂ ಸುಳಿವು ಬಿಟ್ಟು ಕೊಟ್ಟಿಲ್ಲ. ಸೆನ್ಸಾರ್ ಮಂಡಳಿಯಲ್ಲಿ ಸಿನಿಮಾ ವೀಕ್ಷಿಸಿರುವ ಸದಸ್ಯರು ಹೇಳುವ ಹಾಗೇ ಒಬ್ಬ ಆಗರ್ಭ ಶ್ರೀಮಂತನ ಮಗ ಸಾಮಾನ್ಯ ಹುಡುಗನಂತೆ ಹುಡುಗಿಯ ಮನಸ್ಸು ಗೆಲ್ಲಲು ಬಯಸುತ್ತಾನೆ ಅನ್ನೋದು ಕಥೆ. ಬಹಳ ಎಂಟರ್​ಟೈನಿಂಗ್ ಆಗಿದೆ. ಗಣೇಶ್ ಸಿನಿಮಾ ಕೆರಿಯರ್​ನಲ್ಲಿ ವಿಶಿಷ್ಠವಾದ ಚಿತ್ರ. ನಿರ್ಮಾಪಕರು ಈ ಚಿತ್ರವನ್ನು ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇದೊಂದು ಫ್ಯಾಮಿಲಿ ಸಿನಿಮಾ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಸಿನಿಸುಗ್ಗಿ: ಒಂದೇ ದಿನ 10ಕ್ಕೂ ಹೆಚ್ಚು ಚಿತ್ರಗಳು ತೆರೆಗೆ; ಬಾಕ್ಸ್​ ಆಫೀಸ್​​ ಫೈಟ್​ ಪಕ್ಕಾ - Independence Day Box Office Clash

ಇದು ಗಣೇಶ್ ಅಭಿನಯದ 41ನೇ ಸಿನಿಮಾ. ಗಣಿ ಜೋಡಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಇವರ ಜೊತೆ ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಸೇರಿದಂತೆ ಮೊದಲಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ: ತಾರೆಯರು ಭಾಗಿ, ವಿಡಿಯೋ ನೋಡಿ - Pooja for Prosperity of Sandalwood

ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ.ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಕನ್ನಡದ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರೋ ಶ್ರೀನಿವಾಸರಾಜು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗಣಿ ಹೊಸ ಅವತಾರಕ್ಕೆ ಪ್ರೇಕ್ಷಕರು ಏನು ಹೇಳ್ತಾರೆ ಎಂಬುದು ನಾಳೆ ತಿಳಿಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.