ETV Bharat / entertainment

''ರಾಷ್ಟ್ರ ಪ್ರಶಸ್ತಿಯನ್ನು ಕನ್ನಡಿಗರು, ದೈವ ನರ್ತಕರು, ಅಪ್ಪು​​ ಸರ್​​ಗೆ ಅರ್ಪಿಸುತ್ತೇನೆ'': ರಿಷಬ್​ ಶೆಟ್ಟಿ - Rishab Shetty

author img

By ETV Bharat Karnataka Team

Published : Aug 17, 2024, 1:42 PM IST

2022ರ ಸೆಪ್ಟೆಂಬರ್​​​​​ ಕೊನೆಯಲ್ಲಿ ಬಿಡುಗಡೆ ಅಗಿ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸನ್ನು ಕಂಡಿರುವ 'ಕಾಂತಾರ' ಸಿನಿಮಾ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ಬಗ್ಗೆ ಡಿವೈನ್​ ಸ್ಟಾರ್​​ ಹೃದಯತುಂಬಿ ಸರ್ವರಿಗೂ ಕೃತಜ್ಞತೆ ಅರ್ಪಿಸಿದ್ದಾರೆ.

National award winner Rishab Shetty
ರಾಷ್ಟ್ರಪ್ರಶಸ್ತಿ ವಿಜೇತ ನಟ ರಿಷಬ್​ ಶೆಟ್ಟಿ (ANI/Film Poster/ETV Bharat)
ರಿಷಬ್​ ಶೆಟ್ಟಿ (ETV Bharat)

ಹೈದರಾಬಾದ್: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಹೆಸರನ್ನು ಶುಕ್ರವಾರದಂದು (ಆಗಸ್ಟ್ 16) ನವದೆಹಲಿಯಲ್ಲಿ ಘೋಷಿಸಲಾಯಿತು. ಕನ್ನಡದ ಮೂರು ಚಿತ್ರಗಳು ಆರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದು, ಚಿತ್ರರಂಗ ಮತ್ತು ಕನ್ನಡಿಗರ ಹೆಮ್ಮೆಯ ಕ್ಷಣವಾಗಿತ್ತು. 2022ರ ಸೆಪ್ಟೆಂಬರ್​​​​​ನಲ್ಲಿ ತೆರೆಕಂಡು ಅಭೂತಪೂರ್ವ ಯಶಸ್ಸನ್ನು ಕಂಡಿರುವ 'ಕಾಂತಾರ' ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ಸಾಧನೆ ಹಾಗೂ ಅಭಿಮಾನಿಗಳ ಅಪಾರ ಪ್ರೀತಿಗೆ ಚಿತ್ರದ ನಟ-ನಿರ್ದೇಶಕ ರಿಷಬ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಶೇರ್ ಮಾಡುವ ಮೂಲಕ ಕೃತಜ್ಞತೆ ಅರ್ಪಿಸಿದ್ದಾರೆ.

ಡಿವೈನ್​​ ಸ್ಟಾರ್​ ಸ್ಪೆಷಲ್​​ ಪೋಸ್ಟ್​​: ''ಕಾಂತಾರಕ್ಕೆ ಸಿಕ್ಕಿರುವ ರಾಷ್ಟ್ರೀಯ ಪ್ರಶಸ್ತಿಯ ಗೌರವಕ್ಕೆ ನಾನು ನಿಜವಾಗಿಯೂ ಆಭಾರಿಯಾಗಿದ್ದೇನೆ. ನನ್ನ ಈ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ಮತ್ತು ವಿಶೇಷವಾಗಿ ಹೊಂಬಾಳೆ ಫಿಲ್ಮ್ಸ್​​​ ತಂಡಕ್ಕೆ ನಾನು ನನ್ನ ಹೃತ್ಫೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರೇಕ್ಷಕರು ಈ ಚಿತ್ರಕ್ಕೆ ಕೊಟ್ಟಿರುವ ಬೆಂಬಲವು ನನ್ನಲ್ಲಿ ಇನ್ನಷ್ಟು ಜವಾಬ್ದಾರಿ ತುಂಬಿದೆ. ನಮ್ಮ ವೀಕ್ಷಕರಿಗೆ ಇನ್ನೂ ಉತ್ತಮ ಚಿತ್ರ ನೀಡಲು ಇನ್ನೂ ಹೆಚ್ಚು ಶ್ರಮಿಸಲು ನಾನು ಬದ್ಧನಾಗಿದ್ದೇನೆ. ಅತ್ಯಂತ ಗೌರವದಿಂದ ನಾನು ಈ ಪ್ರಶಸ್ತಿಯನ್ನು ಕನ್ನಡ ಪ್ರೇಕ್ಷಕರು, ದೈವ ನರ್ತಕರು, ಅಪ್ಪು ಸರ್​​ಗೆ ಅರ್ಪಿಸುತ್ತೇನೆ. ದೈವದ ಆಶೀರ್ವಾದದಿಂದ ನಾವು ಈ ಕ್ಷಣ ತಲುಪಿದ್ದೇವೆ'' ಎಂದು ಬರೆದುಕೊಂಡಿದ್ದಾರೆ. ಪೋಸ್ಟ್​​ಗೆ ನನ್ನ ಹೃದಯ ಕೃತಜ್ಞತಾ ಭಾವದಿಂದ ತುಂಬಿದೆ ಎಂಬ ಕ್ಯಾಪ್ಷನ್​​ ಕೊಟ್ಟಿದ್ದಾರೆ.

ಇದನ್ನೂ ಓದಿ: 'ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ';​ ಯಶ್, ವಿಕ್ರಮ್​​ ಕರೆಮಾಡಿ ವಿಶ್ ಮಾಡಿದ್ರು: ರಿಷಬ್ ಶೆಟ್ಟಿ - Rishab Shetty

ಕಳೆದ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಟ, ನನಗೆ ಸಾಥ್ ಕೊಟ್ಟಿರುವ ಎಲ್ಲಾ ಸ್ನೇಹಿತರಿಗೂ ಧನ್ಯವಾದಗಳು. ಹೊಂಬಾಳೆ ಫಿಲ್ಮ್ಸ್​​ ನಮ್ಮ ಸಿನಿಮಾದ ಬಿಗ್ಗೆಸ್ಟ್​​ ಸಪೋರ್ಟ್​. ತಂಡದ ಎಲ್ಲರಿಗೂ ಥ್ಯಾಂಕ್ಸ್​ ಹೇಳಲಿಚ್ಛಿಸುತ್ತೇನೆ. ಜನರು ಸಿನಿಮಾ ವೀಕ್ಷಿಸಿ ಸಕ್ಸಸ್​ ತಂದುಕೊಟ್ಟಾಗಲೇ ಜವಾಬ್ದಾರಿ ಹೆಚ್ಚುತ್ತದೆ. ಪ್ರಶಸ್ತಿಗಳು ಕೂಡಾ ಅದೇ ರೀತಿ ಜವಾಬ್ದಾರಿಗಳನ್ನು ಹೆಚ್ಚಿಸುತ್ತದೆ. ಕೆಲಸವನ್ನು ಮತ್ತಷ್ಟು ಬೆಟರ್​ ಮಾಡಿಕೊಳ್ಳುತ್ತಾ ಹೋಗಬೇಕು. ಆ ಪ್ರಯತ್ನಕ್ಕೆ ಒಂದೊಳ್ಳೆ ತಂಡದ ಸಾಥ್ ಕೂಡ ಬೇಕು. ಎಲ್ಲವೂ ಕೂಡಿ ಬಂದಾಗ ಹೀಗೆ ಏನಾದರೂ ಸಾಧಿಸಲು ಸಾಧ್ಯ. ಒಬ್ಬರಿಂದಲೇ ಏನನ್ನೂ ಮಾಡಲಾಗುವುದಿಲ್ಲ. ಹೆಚ್ಚಿನವರು ವಿಶ್​ ಮಾಡಿದ್ದು, ಎಲ್ಲರಿಗೂ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲ ಹೀಗೆಯೇ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: 'ಕಾಂತಾರ ಶೂಟಿಂಗ್ ಬಹಳ ನಿಗೂಢವಾಗಿರುತ್ತಿತ್ತು': ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರದ ಪೋಷಕ ನಟರು ಅಚ್ಯುತ್, ಪ್ರಮೋದ್ - Achyuth Kumar Pramod Shetty

'ಕಾಂತಾರ' 2022ರ ಸೆಪ್ಟೆಂಬರ್​​​ 30ರಂದು ಬಿಡುಗಡೆ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ರಿಷಬ್​​ ಶೆಟ್ಟಿ ನಾಯಕನಾಗಿ ನಟನೆ ಜೊತೆಗೆ, ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದರು. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾ ಕನ್ನಡ ಮಾತ್ರವಲ್ಲದೇ, ಭಾರತೀಯ ಚಿತ್ರರಂಗದಲ್ಲೇ ಅಭೂತಪೂರ್ವ ಮೆಚ್ಚುಗೆ ಸಾಧಿಸಿತ್ತು. ನಂತರ ಬಹುಭಾಷೆಗಳಲ್ಲೂ ಸಿನಿಮಾ ಬಿಡುಗಡೆ ಆಗಿ ರಿಷಬ್ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ರಿಷಬ್​ ಶೆಟ್ಟಿ (ETV Bharat)

ಹೈದರಾಬಾದ್: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಹೆಸರನ್ನು ಶುಕ್ರವಾರದಂದು (ಆಗಸ್ಟ್ 16) ನವದೆಹಲಿಯಲ್ಲಿ ಘೋಷಿಸಲಾಯಿತು. ಕನ್ನಡದ ಮೂರು ಚಿತ್ರಗಳು ಆರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದು, ಚಿತ್ರರಂಗ ಮತ್ತು ಕನ್ನಡಿಗರ ಹೆಮ್ಮೆಯ ಕ್ಷಣವಾಗಿತ್ತು. 2022ರ ಸೆಪ್ಟೆಂಬರ್​​​​​ನಲ್ಲಿ ತೆರೆಕಂಡು ಅಭೂತಪೂರ್ವ ಯಶಸ್ಸನ್ನು ಕಂಡಿರುವ 'ಕಾಂತಾರ' ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ಸಾಧನೆ ಹಾಗೂ ಅಭಿಮಾನಿಗಳ ಅಪಾರ ಪ್ರೀತಿಗೆ ಚಿತ್ರದ ನಟ-ನಿರ್ದೇಶಕ ರಿಷಬ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಶೇರ್ ಮಾಡುವ ಮೂಲಕ ಕೃತಜ್ಞತೆ ಅರ್ಪಿಸಿದ್ದಾರೆ.

ಡಿವೈನ್​​ ಸ್ಟಾರ್​ ಸ್ಪೆಷಲ್​​ ಪೋಸ್ಟ್​​: ''ಕಾಂತಾರಕ್ಕೆ ಸಿಕ್ಕಿರುವ ರಾಷ್ಟ್ರೀಯ ಪ್ರಶಸ್ತಿಯ ಗೌರವಕ್ಕೆ ನಾನು ನಿಜವಾಗಿಯೂ ಆಭಾರಿಯಾಗಿದ್ದೇನೆ. ನನ್ನ ಈ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ಮತ್ತು ವಿಶೇಷವಾಗಿ ಹೊಂಬಾಳೆ ಫಿಲ್ಮ್ಸ್​​​ ತಂಡಕ್ಕೆ ನಾನು ನನ್ನ ಹೃತ್ಫೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರೇಕ್ಷಕರು ಈ ಚಿತ್ರಕ್ಕೆ ಕೊಟ್ಟಿರುವ ಬೆಂಬಲವು ನನ್ನಲ್ಲಿ ಇನ್ನಷ್ಟು ಜವಾಬ್ದಾರಿ ತುಂಬಿದೆ. ನಮ್ಮ ವೀಕ್ಷಕರಿಗೆ ಇನ್ನೂ ಉತ್ತಮ ಚಿತ್ರ ನೀಡಲು ಇನ್ನೂ ಹೆಚ್ಚು ಶ್ರಮಿಸಲು ನಾನು ಬದ್ಧನಾಗಿದ್ದೇನೆ. ಅತ್ಯಂತ ಗೌರವದಿಂದ ನಾನು ಈ ಪ್ರಶಸ್ತಿಯನ್ನು ಕನ್ನಡ ಪ್ರೇಕ್ಷಕರು, ದೈವ ನರ್ತಕರು, ಅಪ್ಪು ಸರ್​​ಗೆ ಅರ್ಪಿಸುತ್ತೇನೆ. ದೈವದ ಆಶೀರ್ವಾದದಿಂದ ನಾವು ಈ ಕ್ಷಣ ತಲುಪಿದ್ದೇವೆ'' ಎಂದು ಬರೆದುಕೊಂಡಿದ್ದಾರೆ. ಪೋಸ್ಟ್​​ಗೆ ನನ್ನ ಹೃದಯ ಕೃತಜ್ಞತಾ ಭಾವದಿಂದ ತುಂಬಿದೆ ಎಂಬ ಕ್ಯಾಪ್ಷನ್​​ ಕೊಟ್ಟಿದ್ದಾರೆ.

ಇದನ್ನೂ ಓದಿ: 'ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ';​ ಯಶ್, ವಿಕ್ರಮ್​​ ಕರೆಮಾಡಿ ವಿಶ್ ಮಾಡಿದ್ರು: ರಿಷಬ್ ಶೆಟ್ಟಿ - Rishab Shetty

ಕಳೆದ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಟ, ನನಗೆ ಸಾಥ್ ಕೊಟ್ಟಿರುವ ಎಲ್ಲಾ ಸ್ನೇಹಿತರಿಗೂ ಧನ್ಯವಾದಗಳು. ಹೊಂಬಾಳೆ ಫಿಲ್ಮ್ಸ್​​ ನಮ್ಮ ಸಿನಿಮಾದ ಬಿಗ್ಗೆಸ್ಟ್​​ ಸಪೋರ್ಟ್​. ತಂಡದ ಎಲ್ಲರಿಗೂ ಥ್ಯಾಂಕ್ಸ್​ ಹೇಳಲಿಚ್ಛಿಸುತ್ತೇನೆ. ಜನರು ಸಿನಿಮಾ ವೀಕ್ಷಿಸಿ ಸಕ್ಸಸ್​ ತಂದುಕೊಟ್ಟಾಗಲೇ ಜವಾಬ್ದಾರಿ ಹೆಚ್ಚುತ್ತದೆ. ಪ್ರಶಸ್ತಿಗಳು ಕೂಡಾ ಅದೇ ರೀತಿ ಜವಾಬ್ದಾರಿಗಳನ್ನು ಹೆಚ್ಚಿಸುತ್ತದೆ. ಕೆಲಸವನ್ನು ಮತ್ತಷ್ಟು ಬೆಟರ್​ ಮಾಡಿಕೊಳ್ಳುತ್ತಾ ಹೋಗಬೇಕು. ಆ ಪ್ರಯತ್ನಕ್ಕೆ ಒಂದೊಳ್ಳೆ ತಂಡದ ಸಾಥ್ ಕೂಡ ಬೇಕು. ಎಲ್ಲವೂ ಕೂಡಿ ಬಂದಾಗ ಹೀಗೆ ಏನಾದರೂ ಸಾಧಿಸಲು ಸಾಧ್ಯ. ಒಬ್ಬರಿಂದಲೇ ಏನನ್ನೂ ಮಾಡಲಾಗುವುದಿಲ್ಲ. ಹೆಚ್ಚಿನವರು ವಿಶ್​ ಮಾಡಿದ್ದು, ಎಲ್ಲರಿಗೂ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲ ಹೀಗೆಯೇ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: 'ಕಾಂತಾರ ಶೂಟಿಂಗ್ ಬಹಳ ನಿಗೂಢವಾಗಿರುತ್ತಿತ್ತು': ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರದ ಪೋಷಕ ನಟರು ಅಚ್ಯುತ್, ಪ್ರಮೋದ್ - Achyuth Kumar Pramod Shetty

'ಕಾಂತಾರ' 2022ರ ಸೆಪ್ಟೆಂಬರ್​​​ 30ರಂದು ಬಿಡುಗಡೆ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ರಿಷಬ್​​ ಶೆಟ್ಟಿ ನಾಯಕನಾಗಿ ನಟನೆ ಜೊತೆಗೆ, ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದರು. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾ ಕನ್ನಡ ಮಾತ್ರವಲ್ಲದೇ, ಭಾರತೀಯ ಚಿತ್ರರಂಗದಲ್ಲೇ ಅಭೂತಪೂರ್ವ ಮೆಚ್ಚುಗೆ ಸಾಧಿಸಿತ್ತು. ನಂತರ ಬಹುಭಾಷೆಗಳಲ್ಲೂ ಸಿನಿಮಾ ಬಿಡುಗಡೆ ಆಗಿ ರಿಷಬ್ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.