ETV Bharat / entertainment

ಚೆಕ್​ಬೌನ್ಸ್ ಪ್ರಕರಣ: 'ರಂಗನಾಯಕ' ಬಿಡುಗಡೆಗೆ ತಡೆ ಕೋರಿ ಕೋರ್ಟ್​ಗೆ ಅರ್ಜಿ

author img

By ETV Bharat Karnataka Team

Published : Mar 7, 2024, 10:49 AM IST

ಗುರುಪ್ರಸಾದ್ ನಿರ್ದೇಶನದ ರಂಗನಾಯಕ ಚಿತ್ರದ ರಿಲೀಸ್​ಗೆ ತಡೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ.

ranganayaka movie
ಚೆಕ್​ಬೌನ್ಸ್ ಪ್ರಕರಣ: 'ರಂಗನಾಯಕ' ಬಿಡುಗಡೆಗೆ ತಡೆ ಕೋರಿ ಕೋರ್ಟ್​ಗೆ ಅರ್ಜಿ

ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ 'ರಂಗನಾಯಕ' ಸಿನಿಮಾ ಬಿಡುಗಡೆಗೆ ತಡೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರೊಂದಿಗೆ ತಕಾರಾರು ಇರುವುದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ, ಸಿಟಿ ಸಿವಿಲ್ ಕೋರ್ಟ್​​ಗೆ ಶ್ರೀನಿವಾಸ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರು 2015-16 ರಲ್ಲಿ ನನ್ನ ಬಳಿ 30 ಲಕ್ಷ ರೂ. ಸಾಲ ಪಡೆದಿದ್ದಾರೆ. ಆದರೆ, ಬಹಳ ವರ್ಷಗಳಾದರೂ ಅವರು ಸಾಲ ಮರು ಪಾವತಿ ಮಾಡಿಲ್ಲ ಎಂದು ಶ್ರೀನಿವಾಸ್‌ ಆರೋಪಿಸಿದ್ದರು. ನಿರ್ದೇಶಕ ಗುರುಪ್ರಸಾದ್‌, ಸಾಲ ಪಡೆಯುವಾಗ ಶ್ರೀನಿವಾಸ್​ಗೆ ಮೂರು ಚೆಕ್‌ಗಳನ್ನು ನೀಡಿದ್ದರು. ಆದರೆ ಚೆಕ್‌ಗಳು ಬೌನ್ಸ್‌ ಆಗಿವೆ ಎಂದು ಆರೋಪಿಸಿ ಶ್ರೀನಿವಾಸ್‌ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಗಿರಿನಗರ ಠಾಣೆ ಪೊಲೀಸರು ಗುರುಪ್ರಸಾದ್‌ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ 21 ನೇ ಎಸಿಎಂಎಂ ನ್ಯಾಯಾಲಯವು ಗುರುಪ್ರಸಾದ್‌ಗೆ ಜಾಮೀನು ಮಂಜೂರು ಮಾಡಿತ್ತು‌.

''ಬಂಧನವಾದ ಸಂದರ್ಭದಲ್ಲಿ 'ರಂಗನಾಯಕ' ಸಿನಿಮಾದ ಕಾರ್ಯಗಳಲ್ಲಿ ತೊಡಗಿದ್ದೇನೆ, ಸಿನಿಮಾ ಬಿಡುಗಡೆಯಾಗುವ ಮುನ್ನವೇ ಹಣ ಮರುಪಾವತಿ ಮಾಡುತ್ತೇನೆ ಎಂದು ಗುರುಪ್ರಸಾದ್ ಅವರೇ ಹೇಳಿದ್ದರು. ಆದರೆ ಈಗಲೂ ಸಹ ಹಣ ಕೇಳಿದರೆ ಅವರಿಂದ ಅದೇ ಹಳೆಯ ಧೋರಣೆ ವ್ಯಕ್ತವಾಗುತ್ತಿದೆ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದೇನೆ'' ಎಂದು ದೂರುದಾರ ಶ್ರೀನಿವಾಸ್ ಅವರು 'ಈಟಿವಿ‌ ಭಾರತ'ಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: 'ಕೆರೆಬೇಟೆ' ಚಿತ್ರತಂಡದ ಬಳಿ ಕ್ಷಮೆಯಾಚಿಸಿದ ಸುದೀಪ್​: ಸಿನಿಮಾ ಯಶಸ್ಸಿಗೆ ಶುಭಹಾರೈಕೆ

ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ 'ರಂಗನಾಯಕ' ಸಿನಿಮಾ ಬಿಡುಗಡೆಗೆ ತಡೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರೊಂದಿಗೆ ತಕಾರಾರು ಇರುವುದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ, ಸಿಟಿ ಸಿವಿಲ್ ಕೋರ್ಟ್​​ಗೆ ಶ್ರೀನಿವಾಸ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರು 2015-16 ರಲ್ಲಿ ನನ್ನ ಬಳಿ 30 ಲಕ್ಷ ರೂ. ಸಾಲ ಪಡೆದಿದ್ದಾರೆ. ಆದರೆ, ಬಹಳ ವರ್ಷಗಳಾದರೂ ಅವರು ಸಾಲ ಮರು ಪಾವತಿ ಮಾಡಿಲ್ಲ ಎಂದು ಶ್ರೀನಿವಾಸ್‌ ಆರೋಪಿಸಿದ್ದರು. ನಿರ್ದೇಶಕ ಗುರುಪ್ರಸಾದ್‌, ಸಾಲ ಪಡೆಯುವಾಗ ಶ್ರೀನಿವಾಸ್​ಗೆ ಮೂರು ಚೆಕ್‌ಗಳನ್ನು ನೀಡಿದ್ದರು. ಆದರೆ ಚೆಕ್‌ಗಳು ಬೌನ್ಸ್‌ ಆಗಿವೆ ಎಂದು ಆರೋಪಿಸಿ ಶ್ರೀನಿವಾಸ್‌ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಗಿರಿನಗರ ಠಾಣೆ ಪೊಲೀಸರು ಗುರುಪ್ರಸಾದ್‌ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ 21 ನೇ ಎಸಿಎಂಎಂ ನ್ಯಾಯಾಲಯವು ಗುರುಪ್ರಸಾದ್‌ಗೆ ಜಾಮೀನು ಮಂಜೂರು ಮಾಡಿತ್ತು‌.

''ಬಂಧನವಾದ ಸಂದರ್ಭದಲ್ಲಿ 'ರಂಗನಾಯಕ' ಸಿನಿಮಾದ ಕಾರ್ಯಗಳಲ್ಲಿ ತೊಡಗಿದ್ದೇನೆ, ಸಿನಿಮಾ ಬಿಡುಗಡೆಯಾಗುವ ಮುನ್ನವೇ ಹಣ ಮರುಪಾವತಿ ಮಾಡುತ್ತೇನೆ ಎಂದು ಗುರುಪ್ರಸಾದ್ ಅವರೇ ಹೇಳಿದ್ದರು. ಆದರೆ ಈಗಲೂ ಸಹ ಹಣ ಕೇಳಿದರೆ ಅವರಿಂದ ಅದೇ ಹಳೆಯ ಧೋರಣೆ ವ್ಯಕ್ತವಾಗುತ್ತಿದೆ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದೇನೆ'' ಎಂದು ದೂರುದಾರ ಶ್ರೀನಿವಾಸ್ ಅವರು 'ಈಟಿವಿ‌ ಭಾರತ'ಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: 'ಕೆರೆಬೇಟೆ' ಚಿತ್ರತಂಡದ ಬಳಿ ಕ್ಷಮೆಯಾಚಿಸಿದ ಸುದೀಪ್​: ಸಿನಿಮಾ ಯಶಸ್ಸಿಗೆ ಶುಭಹಾರೈಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.