ETV Bharat / entertainment

'ಪ್ರಣಯಂ' ಟ್ರೈಲರ್​ ಅನಾವರಣ... ಅದ್ಭುತ ಪ್ರೇಮಕಥೆ ಹೇಳಲು ಸಜ್ಜಾದ ಚಿತ್ರತಂಡ

author img

By ETV Bharat Karnataka Team

Published : Jan 19, 2024, 11:47 PM IST

ಬಿಚ್ಚುಗತ್ತಿ' ಖ್ಯಾತಿಯ ರಾಜವರ್ಧನ್ ಹಾಗೂ ನೈನಾ ಗಂಗೂಲಿ ಮುಖ್ಯಭೂಮಿಕೆಯಲ್ಲಿರೋ ಪ್ರಣಯಂ ಚಿತ್ರದ ಟ್ರೈಲರ್ ಅನಾವರಣಗೊಂಡಿದೆ.

ಪ್ರಣಯಂ ಚಿತ್ರ ತಂಡ
ಪ್ರಣಯಂ ಚಿತ್ರ ತಂಡ

ಕನ್ನಡ ಚಿತ್ರರಂಗದಲ್ಲಿ ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನಿರ್ದೇಶಿಸಿರೋ ಪರಮೇಶ್ ಬಹಳ ದಿನಗಳ ಬಳಿಕ ಮತ್ತೊಂದು ಇನ್​​ಟೆನ್ಸ್​ ಲವ್ ಸ್ಟೋರಿಯೊಂದಿಗೆ ಪ್ರೇಕ್ಷಕರೆದುರು ಬರಲು (ನಿರ್ಮಾಪಕನಾಗಿ) ಸಜ್ಜಾಗಿದ್ದಾರೆ. ಈ ಪ್ರೇಮಕಥೆಗೆ 'ಪ್ರಣಯಂ' ಎಂಬ ಶೀರ್ಷಿಕೆ ಇಡಲಾಗಿದೆ. 'ಬಿಚ್ಚುಗತ್ತಿ' ಖ್ಯಾತಿಯ ರಾಜವರ್ಧನ್ ಹಾಗೂ ನೈನಾ ಗಂಗೂಲಿ ಮುಖ್ಯಭೂಮಿಕೆಯಲ್ಲಿರೋ ಪ್ರಣಯಂ ಚಿತ್ರದ ಟ್ರೈಲರ್ ಅನ್ನು ಮಾಜಿ ಉಪ ಮೇಯರ್ ಮೋಹನ್ ರಾಜು ಬಿಡುಗಡೆ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಟೈಟಲ್ ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಹೇಳಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

  • " class="align-text-top noRightClick twitterSection" data="">

ನಿರ್ದೇಶಕ ದತ್ತಾತ್ರೇಯ ಮಾತನಾಡಿ, ನಾನು ಈ ಸ್ಕ್ರಿಪ್ಟ್ ರೆಡಿ ಮಾಡಿಕೊಂಡು ಬಂದಾಗ ನಿರ್ಮಾಪಕರು ತುಂಬಾ ಚೆನ್ನಾಗಿದೆ ಎಂದು ಖುಷಿಯಿಂದ ಅಪ್ಪಿಕೊಂಡರು. ಸುಮಾರು ಲೊಕೇಶನ್​​ಗಳನ್ನು ನೋಡಿ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ ಲೊಕೇಶನ್ ಸಿಕ್ತು. ಎಲ್ಲ ಲೆಜೆಂಡರಿಗಳ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಬಂದಿದೆ. ನಾಗೇಶ್ ನನಗೆ ಇನ್ನೊಂದು ಕಣ್ಣಿದ್ದ ಹಾಗೆ. ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇನ್ನು ನಾಯಕ ರಾಜವರ್ಧನ್ ಮಾತನಾಡಿ ಬಿಚ್ಚುಗತ್ತಿಗೂ ಮುನ್ನ ಪರಮೇಶ್ ಈ ಕಥೆಯನ್ನು ಹೇಳಿದ್ದರು. ಇಂದಿನ ಕುಟುಂಬಗಳಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಅಂಥ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ನಾವು ಈ ಸಿನಿಮಾ ಮಾಡಿದ್ದೇವೆ. ಆಡಿಯನ್ಸ್​​ಗೆ ಬೇಕಾದ ಕಾನ್ಸೆಪ್ಟ್ ಚಿತ್ರದಲ್ಲಿದೆ. ಆಗಿನ್ನೂ ವಿದೇಶದಿಂದ ಬರುವ ಗೌತಂ ಎಂಬ ಪಾತ್ರ ನಿರ್ವಹಿಸಿದ್ದೇನೆ. ಆತ 5-10 ದಿನಗಳಲ್ಲಿ ಸಂಬಂಧಿ ಹುಡುಗಿಯೊಬ್ಬಳನ್ನು ಮದುವೆಯಾಗುತ್ತಾನೆ. ಆನಂತರ 15-20 ದಿನಗಳಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಮನೋಮೂರ್ತಿ, ಜಯಂತ್ ಕಾಯ್ಕಿಣಿ ಅವರಂಥ ಲೆಜೆಂಡರಿಗಳ‌ ಜೊತೆ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದು ತಿಳಿಸಿದರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಚಿತ್ರದಲ್ಲಿ 5 ಹಾಡುಗಳಿವೆ. ಕ್ಯಾಮರಾ ವರ್ಕ್ ಅದ್ಭುತವಾಗಿ ಮೂಡಿಬಂದಿದೆ. ಪ್ರಣಯಂ ಅಂದ್ರೆ ಪ್ರೀತಿ. ಅದನ್ನಿಲ್ಲಿ ಬಹಳ ವಿಭಿನ್ನವಾಗಿ ಹೇಳಿದ್ದಾರೆ. ಖಂಡಿತ ಈ ವರ್ಷದ ಮೊದಲ ಹಿಟ್ ಸಿನಿಮಾ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಜಯಂತ್ ಕಾಯ್ಕಿಣಿ ಮಾತನಾಡಿ, ಪರಮೇಶ್ ಬಹಳ ಜೋಷ್ ಇರುವಂಥ ಪ್ರೊಡ್ಯೂಸರ್. ಸಿನಿಮಾಗಾಗಿ ಬಹಳ ಕಷ್ಟಪಡುತ್ತಾರೆ. ಹಿಂದೆ ಪರಮೇಶ್ ಅವರ ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೂ ನಾನೇ ಸಾಂಗ್ ಬರೆದಿದ್ದೆ. ಇದರಲ್ಲಿ 3 ಹಾಡುಗಳನ್ನು ಬರೆದಿದ್ದೇನೆ ಎಂದು ತಿಳಿಸಿದರು.

ನಿರ್ಮಾಪಕ ಪರಮೇಶ್ ಮಾತನಾಡಿ, ನಾನು ಈವರೆಗೆ 9 ಸಿನಿಮಾ ಮಾಡಿದ್ದೇನೆ. ಆದರೂ ಗಾಂಧಿನಗರದಲ್ಲಿ ಪ್ರೊಡ್ಯೂಸರ್​ಗೆ ನೆಲೆಯೆ ಇಲ್ಲದಾಗಿದೆ. ನಮ್ಮದು ತುಂಬಾ ಕ್ರಿಟಿಕಲ್ ಫೀಲ್ಡ್. ಈಗ ಸಿನಿಮಾ ಹೇಗೋ ಮಾಡಿಬಿಡಬಹುದು. ರಿಲೀಸ್ ಮಾಡೋದು ತುಂಬಾ ಕಷ್ಟ. ರಿಲೀಸ್ ಡೇಟ್ ಅನೌನ್ಸ್ ಮಾಡಲಿಕ್ಕೇನೆ ಭಯವಾಗುತ್ತದೆ. ಬಿಡುಗಡೆಗೆ 2 ಕೋಟಿ ರೂ. ಬೇಕಾಗುತ್ತದೆ. ಅಷ್ಟು ಹಣವನ್ನು ಎಲ್ಲಿಂದ ತರೋದು. ಈ ಸಿನಿಮಾ ಬಿಡುಗಡೆ ಮಾಡಲು ಮೂರು ಬಾರಿ ಟ್ರೈ ಮಾಡಿದೆ. ಆಗಲಿಲ್ಲ. ಈಗ ಧೈರ್ಯ ಮಾಡಿದ್ದೇನೆ. ಇಂಡಸ್ಟ್ರಿಗೆ ಒಂದೊಳ್ಳೆ ಸಿನಿಮಾ ಕೊಡುತ್ತಿದ್ದೇನೆ. ಜನ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಿದೆ ಎಂದರು.

ರಾಜವರ್ಧನ್ ಅಲ್ಲದೇ ಈ ಚಿತ್ರದಲ್ಲಿ ಗೋವಿಂದೇಗೌಡ, ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್​ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ, ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ ಟ್ರೇಲರ್​ನಿಂದ ಸದ್ದು ಮಾಡುತ್ತಿರುವ ಪ್ರಣಯಂ ಸಿನಿಮಾ ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಕಾಣಲಿದೆ.

ಕನ್ನಡ ಚಿತ್ರರಂಗದಲ್ಲಿ ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನಿರ್ದೇಶಿಸಿರೋ ಪರಮೇಶ್ ಬಹಳ ದಿನಗಳ ಬಳಿಕ ಮತ್ತೊಂದು ಇನ್​​ಟೆನ್ಸ್​ ಲವ್ ಸ್ಟೋರಿಯೊಂದಿಗೆ ಪ್ರೇಕ್ಷಕರೆದುರು ಬರಲು (ನಿರ್ಮಾಪಕನಾಗಿ) ಸಜ್ಜಾಗಿದ್ದಾರೆ. ಈ ಪ್ರೇಮಕಥೆಗೆ 'ಪ್ರಣಯಂ' ಎಂಬ ಶೀರ್ಷಿಕೆ ಇಡಲಾಗಿದೆ. 'ಬಿಚ್ಚುಗತ್ತಿ' ಖ್ಯಾತಿಯ ರಾಜವರ್ಧನ್ ಹಾಗೂ ನೈನಾ ಗಂಗೂಲಿ ಮುಖ್ಯಭೂಮಿಕೆಯಲ್ಲಿರೋ ಪ್ರಣಯಂ ಚಿತ್ರದ ಟ್ರೈಲರ್ ಅನ್ನು ಮಾಜಿ ಉಪ ಮೇಯರ್ ಮೋಹನ್ ರಾಜು ಬಿಡುಗಡೆ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಟೈಟಲ್ ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಹೇಳಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

  • " class="align-text-top noRightClick twitterSection" data="">

ನಿರ್ದೇಶಕ ದತ್ತಾತ್ರೇಯ ಮಾತನಾಡಿ, ನಾನು ಈ ಸ್ಕ್ರಿಪ್ಟ್ ರೆಡಿ ಮಾಡಿಕೊಂಡು ಬಂದಾಗ ನಿರ್ಮಾಪಕರು ತುಂಬಾ ಚೆನ್ನಾಗಿದೆ ಎಂದು ಖುಷಿಯಿಂದ ಅಪ್ಪಿಕೊಂಡರು. ಸುಮಾರು ಲೊಕೇಶನ್​​ಗಳನ್ನು ನೋಡಿ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ ಲೊಕೇಶನ್ ಸಿಕ್ತು. ಎಲ್ಲ ಲೆಜೆಂಡರಿಗಳ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಬಂದಿದೆ. ನಾಗೇಶ್ ನನಗೆ ಇನ್ನೊಂದು ಕಣ್ಣಿದ್ದ ಹಾಗೆ. ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇನ್ನು ನಾಯಕ ರಾಜವರ್ಧನ್ ಮಾತನಾಡಿ ಬಿಚ್ಚುಗತ್ತಿಗೂ ಮುನ್ನ ಪರಮೇಶ್ ಈ ಕಥೆಯನ್ನು ಹೇಳಿದ್ದರು. ಇಂದಿನ ಕುಟುಂಬಗಳಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಅಂಥ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ನಾವು ಈ ಸಿನಿಮಾ ಮಾಡಿದ್ದೇವೆ. ಆಡಿಯನ್ಸ್​​ಗೆ ಬೇಕಾದ ಕಾನ್ಸೆಪ್ಟ್ ಚಿತ್ರದಲ್ಲಿದೆ. ಆಗಿನ್ನೂ ವಿದೇಶದಿಂದ ಬರುವ ಗೌತಂ ಎಂಬ ಪಾತ್ರ ನಿರ್ವಹಿಸಿದ್ದೇನೆ. ಆತ 5-10 ದಿನಗಳಲ್ಲಿ ಸಂಬಂಧಿ ಹುಡುಗಿಯೊಬ್ಬಳನ್ನು ಮದುವೆಯಾಗುತ್ತಾನೆ. ಆನಂತರ 15-20 ದಿನಗಳಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಮನೋಮೂರ್ತಿ, ಜಯಂತ್ ಕಾಯ್ಕಿಣಿ ಅವರಂಥ ಲೆಜೆಂಡರಿಗಳ‌ ಜೊತೆ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದು ತಿಳಿಸಿದರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಚಿತ್ರದಲ್ಲಿ 5 ಹಾಡುಗಳಿವೆ. ಕ್ಯಾಮರಾ ವರ್ಕ್ ಅದ್ಭುತವಾಗಿ ಮೂಡಿಬಂದಿದೆ. ಪ್ರಣಯಂ ಅಂದ್ರೆ ಪ್ರೀತಿ. ಅದನ್ನಿಲ್ಲಿ ಬಹಳ ವಿಭಿನ್ನವಾಗಿ ಹೇಳಿದ್ದಾರೆ. ಖಂಡಿತ ಈ ವರ್ಷದ ಮೊದಲ ಹಿಟ್ ಸಿನಿಮಾ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಜಯಂತ್ ಕಾಯ್ಕಿಣಿ ಮಾತನಾಡಿ, ಪರಮೇಶ್ ಬಹಳ ಜೋಷ್ ಇರುವಂಥ ಪ್ರೊಡ್ಯೂಸರ್. ಸಿನಿಮಾಗಾಗಿ ಬಹಳ ಕಷ್ಟಪಡುತ್ತಾರೆ. ಹಿಂದೆ ಪರಮೇಶ್ ಅವರ ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೂ ನಾನೇ ಸಾಂಗ್ ಬರೆದಿದ್ದೆ. ಇದರಲ್ಲಿ 3 ಹಾಡುಗಳನ್ನು ಬರೆದಿದ್ದೇನೆ ಎಂದು ತಿಳಿಸಿದರು.

ನಿರ್ಮಾಪಕ ಪರಮೇಶ್ ಮಾತನಾಡಿ, ನಾನು ಈವರೆಗೆ 9 ಸಿನಿಮಾ ಮಾಡಿದ್ದೇನೆ. ಆದರೂ ಗಾಂಧಿನಗರದಲ್ಲಿ ಪ್ರೊಡ್ಯೂಸರ್​ಗೆ ನೆಲೆಯೆ ಇಲ್ಲದಾಗಿದೆ. ನಮ್ಮದು ತುಂಬಾ ಕ್ರಿಟಿಕಲ್ ಫೀಲ್ಡ್. ಈಗ ಸಿನಿಮಾ ಹೇಗೋ ಮಾಡಿಬಿಡಬಹುದು. ರಿಲೀಸ್ ಮಾಡೋದು ತುಂಬಾ ಕಷ್ಟ. ರಿಲೀಸ್ ಡೇಟ್ ಅನೌನ್ಸ್ ಮಾಡಲಿಕ್ಕೇನೆ ಭಯವಾಗುತ್ತದೆ. ಬಿಡುಗಡೆಗೆ 2 ಕೋಟಿ ರೂ. ಬೇಕಾಗುತ್ತದೆ. ಅಷ್ಟು ಹಣವನ್ನು ಎಲ್ಲಿಂದ ತರೋದು. ಈ ಸಿನಿಮಾ ಬಿಡುಗಡೆ ಮಾಡಲು ಮೂರು ಬಾರಿ ಟ್ರೈ ಮಾಡಿದೆ. ಆಗಲಿಲ್ಲ. ಈಗ ಧೈರ್ಯ ಮಾಡಿದ್ದೇನೆ. ಇಂಡಸ್ಟ್ರಿಗೆ ಒಂದೊಳ್ಳೆ ಸಿನಿಮಾ ಕೊಡುತ್ತಿದ್ದೇನೆ. ಜನ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಿದೆ ಎಂದರು.

ರಾಜವರ್ಧನ್ ಅಲ್ಲದೇ ಈ ಚಿತ್ರದಲ್ಲಿ ಗೋವಿಂದೇಗೌಡ, ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್​ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ, ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ ಟ್ರೇಲರ್​ನಿಂದ ಸದ್ದು ಮಾಡುತ್ತಿರುವ ಪ್ರಣಯಂ ಸಿನಿಮಾ ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಕಾಣಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.