ETV Bharat / entertainment

ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ನಿರ್ಮಾಪಕ‌ ಹೆಚ್ಎಂಕೆ ಮೂರ್ತಿ ಮೊಮ್ಮಗ ಯಶಸ್ವ

author img

By ETV Bharat Karnataka Team

Published : Jan 30, 2024, 6:36 PM IST

ಛಾಯಾಗ್ರಾಹಕ, ನಿರ್ಮಾಪಕ, ನಿರ್ದೇಶಕ ಹೆಚ್.ಎಂ.ಕೆ ಮೂರ್ತಿ ಅವರ ಮೊಮ್ಮಗ ಯಶಸ್ವ ಅಗ್ನಿಲೋಕ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಲು ಸಜ್ಜಾಗಿದ್ದಾರೆ.

Agniloka movie
ಅಗ್ನಿಲೋಕ ಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಾಹಕ, ನಿರ್ಮಾಪಕ, ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಪ್ರಥಮ ಅಧ್ಯಕ್ಷರೂ ಆಗಿದ್ದ ಹೆಚ್.ಎಂ.ಕೆ ಮೂರ್ತಿ ಅವರ ಮೊಮ್ಮಗ ಯಶಸ್ವ ಈಗ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಅಣಿಯಾಗಿದ್ದಾರೆ. ಎಮೋಷನಲ್ ಹಾಗೂ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ 'ಅಗ್ನಿಲೋಕ' ಎಂಬ ಚಿತ್ರದ ಮೂಲಕ ಸ್ಯಾಂಡಲ್​ವುಡ್​ ಪ್ರವೇಶಿಸುತ್ತಿದ್ದಾರೆ. ಹೆಚ್.ಎಂ.ಕೆ. ಮೂರ್ತಿ ಅವರ ಮಗ ರಾಜೇಶ್ ಮೂರ್ತಿ ಕೂಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಇವರ ಮಗ ಯಶಸ್ವ ಅವರನ್ನು ಆ್ಯಕ್ಷನ್ ಹೀರೋ ಆಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

Yashaswa - Manjushree
ಯಶಸ್ವ - ಮಂಜುಶ್ರೀ

ಈ ಕುರಿತು ಉದಯೋನ್ಮುಖ ನಟ ಯಶಸ್ವ ಮಾತನಾಡಿ, ನನ್ನ ತಾತ - ತಂದೆಯಂತೆಯೇ ಚಿತ್ರರಂಗದಲ್ಲಿ ಕಲಾವಿದ, ತಂತ್ರಜ್ಞನಾಗಿ ಮುಂದುವರಿಯಬೇಕೆಂಬ ಮಹದಾಸೆ ಇದೆ. ಅದರಂತೆ, ಮಾಸ್ ಕಮ್ಯುನಿಕೇಶನ್​ನಲ್ಲಿ ಡಿಗ್ರಿ ಮುಗಿಸಿಕೊಂಡು ವೆಲ್ ಪ್ರಿಪೇರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ನಾನು ತಾತ ಹಾಗೂ ತಂದೆಯಂತೆ ಚಿತ್ರರಂಗದಲ್ಲಿ ಆ್ಯಕ್ಟಿಂಗ್ ಜೊತೆಗೆ ರೈಟಿಂಗ್, ಪ್ರೊಡಕ್ಷನ್ ವಿಭಾಗದಲ್ಲೂ ತೊಡಗಿಸಿಕೊಂಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು‌.

Agniloka movie team
ಅಗ್ನಿಲೋಕ ಚಿತ್ರತಂಡ

ಮಗನ ಚಿತ್ರಕ್ಕೆ ರಾಜೇಶ್ ಮೂರ್ತಿ ಅವರೇ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಂಕಲನವನ್ನೂ ಸಹ ನಿರ್ವಹಿಸಿದ್ದಾರೆ. ಬೆಂಗಳೂರು, ಕೆಜಿಎಫ್, ಮಂಡ್ಯ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ತನ್ನ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿಕೊಂಡಿರುವ ಅಗ್ನಿಲೋಕ ಚಿತ್ರವೀಗ ಸೆನ್ಸಾರ್ ಟೇಬಲ್‌ ಮೇಲೆ‌ ಇದೆ ಅಂತಾರೆ ಚಿತ್ರತಂಡದವರು.

Yashaswa - Manjushree
ಯಶಸ್ವ - ಮಂಜುಶ್ರೀ

ಇದನ್ನೂ ಓದಿ: ಚಿರಂಜೀವಿ ಭೇಟಿಯಾದ ಅನೀಶ್ ತೇಜೇಶ್ವರ್: ಆರಾಮ್ ಅರವಿಂದ್ ಸ್ವಾಮಿ ಕಂಟೆಂಟ್ ಮೆಚ್ಚಿದ ಮೆಗಾಸ್ಟಾರ್

ಇನ್ನು ಯಶಸ್ವ ಅವರಿಗೆ ಜೋಡಿಯಾಗಿ ಮಂಜುಶ್ರೀ ಕಾಣಿಸಿಕೊಳ್ಳಲಿದ್ದಾರೆ. ಬಹಳ ವರ್ಷಗಳ ನಂತರ ನೆ. ಲ. ನರೇಂದ್ರಬಾಬು ಅವರ ಸಹೋದರ ನೆ. ಲ. ಮಹೇಶ್ ಅವರು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಬಿ ಎಸ್ ಮಂಜುನಾಥ್, ಅಜಿತ್ ಕುಮಾರ್, ಪ್ರಮೋದ್ ಹಿರೇಮಠ್ ಉಳಿದ ತಾರಾಗಣದಲ್ಲಿದ್ದಾರೆ.

Yashaswa - Manjushree
ಯಶಸ್ವ - ಮಂಜುಶ್ರೀ

ಇದನ್ನೂ ಓದಿ: 'ಕರಟಕ ದಮನಕ' ಟೈಟಲ್​​ ಸಾಂಗ್​ ರಿಲೀಸ್​: 'ಅಂಬಿ' ವಿಶೇಷ ವಿಡಿಯೋ ಅನಾವರಣ

ವಿಷ್ಣು ಪುಷ್ಪ ಫಿಲಂಸ್ ಮೂಲಕ ಪುಷ್ಪ ಮಂಜುನಾಥ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿನೋದ್ ಅವರ ಛಾಯಾಗ್ರಹಣ, ನಿತೀಶ್ ಕುಮಾರ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಮುಂದಿನ ತಿಂಗಳು ಚಿತ್ರದ ಟ್ರೇಲರ್ ರಿಲೀಸ್ ಮಾಡುವ ಪ್ಲಾನ್​ ಇದ್ದು, ಫೆಬ್ರವರಿ ಕೊನೆಗೆ ಅಥವಾ ಮಾರ್ಚ್ ಮೊದಲ ವಾರ ಅಗ್ನಿಲೋಕ ಚಿತ್ರವನ್ನು ತೆರೆಗೆ ತರುವ ಯೋಜನೆ ಚಿತ್ರತಂಡಕ್ಕಿದೆ.

ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಾಹಕ, ನಿರ್ಮಾಪಕ, ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಪ್ರಥಮ ಅಧ್ಯಕ್ಷರೂ ಆಗಿದ್ದ ಹೆಚ್.ಎಂ.ಕೆ ಮೂರ್ತಿ ಅವರ ಮೊಮ್ಮಗ ಯಶಸ್ವ ಈಗ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಅಣಿಯಾಗಿದ್ದಾರೆ. ಎಮೋಷನಲ್ ಹಾಗೂ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ 'ಅಗ್ನಿಲೋಕ' ಎಂಬ ಚಿತ್ರದ ಮೂಲಕ ಸ್ಯಾಂಡಲ್​ವುಡ್​ ಪ್ರವೇಶಿಸುತ್ತಿದ್ದಾರೆ. ಹೆಚ್.ಎಂ.ಕೆ. ಮೂರ್ತಿ ಅವರ ಮಗ ರಾಜೇಶ್ ಮೂರ್ತಿ ಕೂಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಇವರ ಮಗ ಯಶಸ್ವ ಅವರನ್ನು ಆ್ಯಕ್ಷನ್ ಹೀರೋ ಆಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

Yashaswa - Manjushree
ಯಶಸ್ವ - ಮಂಜುಶ್ರೀ

ಈ ಕುರಿತು ಉದಯೋನ್ಮುಖ ನಟ ಯಶಸ್ವ ಮಾತನಾಡಿ, ನನ್ನ ತಾತ - ತಂದೆಯಂತೆಯೇ ಚಿತ್ರರಂಗದಲ್ಲಿ ಕಲಾವಿದ, ತಂತ್ರಜ್ಞನಾಗಿ ಮುಂದುವರಿಯಬೇಕೆಂಬ ಮಹದಾಸೆ ಇದೆ. ಅದರಂತೆ, ಮಾಸ್ ಕಮ್ಯುನಿಕೇಶನ್​ನಲ್ಲಿ ಡಿಗ್ರಿ ಮುಗಿಸಿಕೊಂಡು ವೆಲ್ ಪ್ರಿಪೇರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ನಾನು ತಾತ ಹಾಗೂ ತಂದೆಯಂತೆ ಚಿತ್ರರಂಗದಲ್ಲಿ ಆ್ಯಕ್ಟಿಂಗ್ ಜೊತೆಗೆ ರೈಟಿಂಗ್, ಪ್ರೊಡಕ್ಷನ್ ವಿಭಾಗದಲ್ಲೂ ತೊಡಗಿಸಿಕೊಂಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು‌.

Agniloka movie team
ಅಗ್ನಿಲೋಕ ಚಿತ್ರತಂಡ

ಮಗನ ಚಿತ್ರಕ್ಕೆ ರಾಜೇಶ್ ಮೂರ್ತಿ ಅವರೇ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಂಕಲನವನ್ನೂ ಸಹ ನಿರ್ವಹಿಸಿದ್ದಾರೆ. ಬೆಂಗಳೂರು, ಕೆಜಿಎಫ್, ಮಂಡ್ಯ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ತನ್ನ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿಕೊಂಡಿರುವ ಅಗ್ನಿಲೋಕ ಚಿತ್ರವೀಗ ಸೆನ್ಸಾರ್ ಟೇಬಲ್‌ ಮೇಲೆ‌ ಇದೆ ಅಂತಾರೆ ಚಿತ್ರತಂಡದವರು.

Yashaswa - Manjushree
ಯಶಸ್ವ - ಮಂಜುಶ್ರೀ

ಇದನ್ನೂ ಓದಿ: ಚಿರಂಜೀವಿ ಭೇಟಿಯಾದ ಅನೀಶ್ ತೇಜೇಶ್ವರ್: ಆರಾಮ್ ಅರವಿಂದ್ ಸ್ವಾಮಿ ಕಂಟೆಂಟ್ ಮೆಚ್ಚಿದ ಮೆಗಾಸ್ಟಾರ್

ಇನ್ನು ಯಶಸ್ವ ಅವರಿಗೆ ಜೋಡಿಯಾಗಿ ಮಂಜುಶ್ರೀ ಕಾಣಿಸಿಕೊಳ್ಳಲಿದ್ದಾರೆ. ಬಹಳ ವರ್ಷಗಳ ನಂತರ ನೆ. ಲ. ನರೇಂದ್ರಬಾಬು ಅವರ ಸಹೋದರ ನೆ. ಲ. ಮಹೇಶ್ ಅವರು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಬಿ ಎಸ್ ಮಂಜುನಾಥ್, ಅಜಿತ್ ಕುಮಾರ್, ಪ್ರಮೋದ್ ಹಿರೇಮಠ್ ಉಳಿದ ತಾರಾಗಣದಲ್ಲಿದ್ದಾರೆ.

Yashaswa - Manjushree
ಯಶಸ್ವ - ಮಂಜುಶ್ರೀ

ಇದನ್ನೂ ಓದಿ: 'ಕರಟಕ ದಮನಕ' ಟೈಟಲ್​​ ಸಾಂಗ್​ ರಿಲೀಸ್​: 'ಅಂಬಿ' ವಿಶೇಷ ವಿಡಿಯೋ ಅನಾವರಣ

ವಿಷ್ಣು ಪುಷ್ಪ ಫಿಲಂಸ್ ಮೂಲಕ ಪುಷ್ಪ ಮಂಜುನಾಥ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿನೋದ್ ಅವರ ಛಾಯಾಗ್ರಹಣ, ನಿತೀಶ್ ಕುಮಾರ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಮುಂದಿನ ತಿಂಗಳು ಚಿತ್ರದ ಟ್ರೇಲರ್ ರಿಲೀಸ್ ಮಾಡುವ ಪ್ಲಾನ್​ ಇದ್ದು, ಫೆಬ್ರವರಿ ಕೊನೆಗೆ ಅಥವಾ ಮಾರ್ಚ್ ಮೊದಲ ವಾರ ಅಗ್ನಿಲೋಕ ಚಿತ್ರವನ್ನು ತೆರೆಗೆ ತರುವ ಯೋಜನೆ ಚಿತ್ರತಂಡಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.