ETV Bharat / entertainment

'ರವಿಕೆ ಪ್ರಸಂಗ': ಉಡುಪಿಯ ಖ್ಯಾತ ಬಟ್ಟೆ ಮಳಿಗೆಗೆ ಭೇಟಿ ಕೊಟ್ಟ ಚಿತ್ರತಂಡ - ವಿಡಿಯೋ

ಕನ್ನಡದ ಬಹುನಿರೀಕ್ಷಿತ 'ರವಿಕೆ ಪ್ರಸಂಗ' ಸಿನಿಮಾ ಇದೇ ಶುಕ್ರವಾರ ತೆರೆಗಪ್ಪಳಿಸಲಿದೆ.

author img

By ETV Bharat Karnataka Team

Published : Feb 13, 2024, 6:45 PM IST

Ravike Prasanga
ರವಿಕೆ ಪ್ರಸಂಗ
  • " class="align-text-top noRightClick twitterSection" data="">

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಶೀರ್ಷಿಕೆಯ ಸಿನಿಮಾಗಳು ಮೂಡಿ ಬರುತ್ತಿವೆ. ಸಿನಿ ಪ್ರೇಮಿಗಳಲ್ಲೀಗ ಕುತೂಹಲ ಹುಟ್ಟಿಸಿರೋ ಸಿನಿಮಾ 'ರವಿಕೆ ಪ್ರಸಂಗ'. ಕಥೆ, ಟ್ರೇಲರ್ ಹಾಗು ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಬೇಜಾನ್ ಟಾಕ್ ಆಗುತ್ತಿರುವ 'ರವಿಕೆ ಪ್ರಸಂಗ' ಇದೇ ವಾರ ಚಿತ್ರಮಂದಿರ ಪ್ರವೇಶಿಸಲಿದೆ. ಬ್ರಹ್ಮಗಂಟು ಸೀರಿಯಲ್​​ ಖ್ಯಾತಿಯ ಗೀತಾ ಭಾರತಿ ಭಟ್ ಮುಖ್ಯಭೂಮಿಕೆಯಲ್ಲಿರೋ ಈ ಚಿತ್ರವನ್ನು ಸಂತೋಷ್ ಕೊಡೆಂಕೇರಿ ನಿರ್ದೇಶಿಸಿದ್ದು, ಇದೇ ಶುಕ್ರವಾರದಂದು ತೆರೆಗಪ್ಪಳಿಸಲಿದೆ.

ನಿರ್ದೇಶಕ ಸಂತೋಷ್ ಕೊಡೆಂಕೇರಿ ಹಾಗು ನಟಿ ಗೀತಾ ಭಾರತಿ ಭಟ್ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮೈಸೂರು, ಮಂಡ್ಯ,‌ ಮದ್ದೂರು, ಮಂಗಳೂರು ಅಂತಾ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಉಡುಪಿಯ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಗೆ ಚಿತ್ರತಂಡ ಭೇಟಿ ಕೊಟ್ಟಿದೆ. ಅಲ್ಲಿರುವ 900ಕ್ಕೂ ಹೆಚ್ಚು ಸಿಬ್ಬಂದಿ ಜೊತೆ ರವಿಕೆ ಪ್ರಸಂಗ ಚಿತ್ರಕ್ಕೂ ಬಟ್ಟೆ ಅಂಗಡಿಗಳಿಗೂ ಏನು ಸಂಬಂಧ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಕೆಲಸಗಾರರು ಕೂಡ ರವಿಕೆ ಸರಿ ಆಗಲಿಲ್ಲವೆಂದರೆ ಏನೆಲ್ಲಾ ಸಮಸ್ಯೆ ಆಗುತ್ತೆ ಎಂಬುದರ ಬಗ್ಗೆ ಮಾತನಾಡುತ್ತ, ನಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಜೊತೆಗ, ಇದೇ 16 ರಂದು ಬಿಡುಗಡೆ ಆಗಲಿರುವ ಈ ಸಿನಿಮಾವನ್ನು ವೀಕ್ಷಿಸುವುದಾಗಿಯೂ ತಿಳಿಸಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಿತ್ರತಂಡ ಈ ಮಳಿಗೆಯಲ್ಲಿದ್ದು, ಸಿನಿಮಾವನ್ನು ಏಕೆ ನೋಡಬೇಕು ಎಂಬುದರ ಬಗ್ಗೆ ಸಹ ತಿಳಿಸಿದ್ದಾರೆ.

ರವಿಕೆ ಅಂದರೆ ಬ್ಲೌಸ್​ ಅನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾಹಂದರ ಹೆಣೆಯಲಾಗಿದೆ. ಹಾಸ್ಯಭರಿತವಾಗಿ, ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತ್ನವನ್ನು ನಿರ್ದೇಶಕ ಸಂತೋಷ್ ಕೊಡೆಂಕೇರಿ ಮಾಡಿದ್ದಾರೆ. ಸಿನಿಮಾವನ್ನು ಮಾರ್ಷ್ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ರಾಜ್ಯಾದ್ಯಂತ ಬಿಡುಗಡೆಗೊಳಿಸಲಿದೆ. ಜೊತೆಗೆ, ವಿದೇಶದಲ್ಲೂ ಸಿನಿಮಾ ರಿಲೀಸ್​ ಆಗಲಿದೆ. ಕುಟುಂಬ ಸಮೇತ ವೀಕ್ಷಿಸಬಹುದಾದಂತ ಕಾಮಿಡಿ ಎಂಟರ್​ಟೈನ್ಮೆಂಟ್​​ ಸಿನಿಮಾವಿದು.

ರವಿಕೆ ಪ್ರಸಂಗ

ಇದನ್ನೂ ಓದಿ: 'ರವಿಕೆ ಪ್ರಸಂಗ' ಬಿಡುಗಡೆಗೆ ದಿನಗಣನೆ: ಗೀತಾ ಭಾರತಿ ಭಟ್ ಹೇಳಿದ್ದಿಷ್ಟು

ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ. ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಕೂಡ ಇರಬೇಕು. ಸಾವಿರಾರು ರೂಪಾಯಿ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರುವುದಿಲ್ಲ. ಏನೋ ಒಂದು ಸರಿಯಾಗಿರೋದಿಲ್ಲ. ಇಂಥದ್ದೇ ಸರಿಹೊಂದದ ರವಿಕೆ ರಗಳೆಯ ಕಾಮಿಡಿ ಕಥೆ 'ರವಿಕೆ ಪ್ರಸಂಗ'. ಒಂದು ರವಿಕೆಯಿಂದ ನಾಯಕ ನಟಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಮಂಗಳೂರು ಕನ್ನಡವನ್ನು ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: ನಟಿ ಶ್ರೀಲೀಲಾ ಕೈ ಹಿಡಿಯೋ ಹುಡುಗ ಯಾವ ಗುಣ ಹೊಂದಿರಬೇಕು ಗೊತ್ತಾ?

ಗೀತಾ ಭಾರತಿ ಭಟ್ ಜೊತೆಗೆ ಸುಮನ್ ರಂಗನಾಥ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಪದ್ಮಜಾರಾವ್, ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನ ನಿರ್ವಹಿಸಿದ್ದಾರೆ. ದೃಷ್ಟಿ ಮೀಡಿಯಾ ಆ್ಯಂಡ್​ ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

  • " class="align-text-top noRightClick twitterSection" data="">

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಶೀರ್ಷಿಕೆಯ ಸಿನಿಮಾಗಳು ಮೂಡಿ ಬರುತ್ತಿವೆ. ಸಿನಿ ಪ್ರೇಮಿಗಳಲ್ಲೀಗ ಕುತೂಹಲ ಹುಟ್ಟಿಸಿರೋ ಸಿನಿಮಾ 'ರವಿಕೆ ಪ್ರಸಂಗ'. ಕಥೆ, ಟ್ರೇಲರ್ ಹಾಗು ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಬೇಜಾನ್ ಟಾಕ್ ಆಗುತ್ತಿರುವ 'ರವಿಕೆ ಪ್ರಸಂಗ' ಇದೇ ವಾರ ಚಿತ್ರಮಂದಿರ ಪ್ರವೇಶಿಸಲಿದೆ. ಬ್ರಹ್ಮಗಂಟು ಸೀರಿಯಲ್​​ ಖ್ಯಾತಿಯ ಗೀತಾ ಭಾರತಿ ಭಟ್ ಮುಖ್ಯಭೂಮಿಕೆಯಲ್ಲಿರೋ ಈ ಚಿತ್ರವನ್ನು ಸಂತೋಷ್ ಕೊಡೆಂಕೇರಿ ನಿರ್ದೇಶಿಸಿದ್ದು, ಇದೇ ಶುಕ್ರವಾರದಂದು ತೆರೆಗಪ್ಪಳಿಸಲಿದೆ.

ನಿರ್ದೇಶಕ ಸಂತೋಷ್ ಕೊಡೆಂಕೇರಿ ಹಾಗು ನಟಿ ಗೀತಾ ಭಾರತಿ ಭಟ್ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮೈಸೂರು, ಮಂಡ್ಯ,‌ ಮದ್ದೂರು, ಮಂಗಳೂರು ಅಂತಾ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಉಡುಪಿಯ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಗೆ ಚಿತ್ರತಂಡ ಭೇಟಿ ಕೊಟ್ಟಿದೆ. ಅಲ್ಲಿರುವ 900ಕ್ಕೂ ಹೆಚ್ಚು ಸಿಬ್ಬಂದಿ ಜೊತೆ ರವಿಕೆ ಪ್ರಸಂಗ ಚಿತ್ರಕ್ಕೂ ಬಟ್ಟೆ ಅಂಗಡಿಗಳಿಗೂ ಏನು ಸಂಬಂಧ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಕೆಲಸಗಾರರು ಕೂಡ ರವಿಕೆ ಸರಿ ಆಗಲಿಲ್ಲವೆಂದರೆ ಏನೆಲ್ಲಾ ಸಮಸ್ಯೆ ಆಗುತ್ತೆ ಎಂಬುದರ ಬಗ್ಗೆ ಮಾತನಾಡುತ್ತ, ನಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಜೊತೆಗ, ಇದೇ 16 ರಂದು ಬಿಡುಗಡೆ ಆಗಲಿರುವ ಈ ಸಿನಿಮಾವನ್ನು ವೀಕ್ಷಿಸುವುದಾಗಿಯೂ ತಿಳಿಸಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಿತ್ರತಂಡ ಈ ಮಳಿಗೆಯಲ್ಲಿದ್ದು, ಸಿನಿಮಾವನ್ನು ಏಕೆ ನೋಡಬೇಕು ಎಂಬುದರ ಬಗ್ಗೆ ಸಹ ತಿಳಿಸಿದ್ದಾರೆ.

ರವಿಕೆ ಅಂದರೆ ಬ್ಲೌಸ್​ ಅನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾಹಂದರ ಹೆಣೆಯಲಾಗಿದೆ. ಹಾಸ್ಯಭರಿತವಾಗಿ, ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತ್ನವನ್ನು ನಿರ್ದೇಶಕ ಸಂತೋಷ್ ಕೊಡೆಂಕೇರಿ ಮಾಡಿದ್ದಾರೆ. ಸಿನಿಮಾವನ್ನು ಮಾರ್ಷ್ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ರಾಜ್ಯಾದ್ಯಂತ ಬಿಡುಗಡೆಗೊಳಿಸಲಿದೆ. ಜೊತೆಗೆ, ವಿದೇಶದಲ್ಲೂ ಸಿನಿಮಾ ರಿಲೀಸ್​ ಆಗಲಿದೆ. ಕುಟುಂಬ ಸಮೇತ ವೀಕ್ಷಿಸಬಹುದಾದಂತ ಕಾಮಿಡಿ ಎಂಟರ್​ಟೈನ್ಮೆಂಟ್​​ ಸಿನಿಮಾವಿದು.

ರವಿಕೆ ಪ್ರಸಂಗ

ಇದನ್ನೂ ಓದಿ: 'ರವಿಕೆ ಪ್ರಸಂಗ' ಬಿಡುಗಡೆಗೆ ದಿನಗಣನೆ: ಗೀತಾ ಭಾರತಿ ಭಟ್ ಹೇಳಿದ್ದಿಷ್ಟು

ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ. ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಕೂಡ ಇರಬೇಕು. ಸಾವಿರಾರು ರೂಪಾಯಿ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರುವುದಿಲ್ಲ. ಏನೋ ಒಂದು ಸರಿಯಾಗಿರೋದಿಲ್ಲ. ಇಂಥದ್ದೇ ಸರಿಹೊಂದದ ರವಿಕೆ ರಗಳೆಯ ಕಾಮಿಡಿ ಕಥೆ 'ರವಿಕೆ ಪ್ರಸಂಗ'. ಒಂದು ರವಿಕೆಯಿಂದ ನಾಯಕ ನಟಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಮಂಗಳೂರು ಕನ್ನಡವನ್ನು ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: ನಟಿ ಶ್ರೀಲೀಲಾ ಕೈ ಹಿಡಿಯೋ ಹುಡುಗ ಯಾವ ಗುಣ ಹೊಂದಿರಬೇಕು ಗೊತ್ತಾ?

ಗೀತಾ ಭಾರತಿ ಭಟ್ ಜೊತೆಗೆ ಸುಮನ್ ರಂಗನಾಥ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಪದ್ಮಜಾರಾವ್, ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನ ನಿರ್ವಹಿಸಿದ್ದಾರೆ. ದೃಷ್ಟಿ ಮೀಡಿಯಾ ಆ್ಯಂಡ್​ ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.