ETV Bharat / entertainment

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ; ಪೊಲೀಸರು ನೀಡಿದ ಕಾರಣಗಳೇನು? - Darshan Judicial Custody Extended

author img

By ETV Bharat Karnataka Team

Published : Jul 18, 2024, 4:22 PM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ.

Darshan Judicial Custody Extended
ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ (ETV Bharat)

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ ಆದೇಶ ಹೊರಡಿಸಿದ್ದಾರೆ.

ದರ್ಶನ್​ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಸಹ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನ ಮುಂದುವರೆದಿರುವುದರಿಂದ ಆಗಸ್ಟ್​ 1ರ ವರೆಗೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಇರಬೇಕಿದೆ.

ಜಾಮೀನು ನೀಡದಂತೆ ಪೊಲೀಸರು ನೀಡಿರುವ ಕಾರಣಗಳೇನು? ಆರೋಪಿಗಳು ಅಪಹರಣ, ಹತ್ಯೆ, ಒಳಸಂಚು ಮತ್ತು ಸಾಕ್ಷ್ಯನಾಶದಂತಹ ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈವರೆಗೆ ಸಂಗ್ರಹಿಸಿರುವ ಪ್ರತ್ಯಕ್ಷ ಸಾಕ್ಷಿದಾರರರ ಹೇಳಿಕೆ, ತಾಂತ್ರಿಕ ಮತ್ತು ಇತರೆ ಸಾಕ್ಷ್ಯಾಧಾರಗಳಲ್ಲಿ ದೃಢಪಟ್ಟಿದೆ. ಪ್ರಕರಣದಲ್ಲಿ ಈವರೆಗೆ 83 ಲಕ್ಷ ರೂ.ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲ ವ್ಯಕ್ತಿಗಳನ್ನು ವಿಚಾರಣೆ ಮಾಡಿ ಮಾಹಿತಿ ಸಂಗ್ರಹಿಸಬೇಕಾಗಿದೆ. ಪ್ರಕರಣದ ತನಿಖಾ ಅವಧಿಯಲ್ಲಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನಗಳ ಪೈಕಿ ಕೆಲ ವಾಹನಗಳು ಬೇರೆಯವರ ಹೆಸರಿನಲ್ಲಿರುವುದು ತಿಳಿದುಬಂದಿದ್ದು, ಅವುಗಳ ಮಾಲೀಕರನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.

ಇದನ್ನೂ ಓದಿ: ಮನೆಯೂಟ ಕೇಳಿದ್ದ ದರ್ಶನ್​​​: ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್‌ - Darshan Application Hearing

ಆರೋಪಿಗಳ ಪೈಕಿ ಕೆಲವರು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಬೇರೆಯವರ ಹೆಸರಿನಲ್ಲಿ ಖರೀದಿ ಮಾಡಿದ್ದು, ಆ ಪೈಕಿ ಇನ್ನೂ ಕೆಲ ಸಿಮ್ ಕಾರ್ಡ್ ಖರೀದಿದಾರರ ವಿಳಾಸವನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್ ಫೋನ್‌ಗಳಲ್ಲಿನ ಪೂರಕವಾದ ಡೇಟಾ ಸಂಗ್ರಹಿಸಲು ಮತ್ತು ಡೇಟಾದ ಅಸಲಿತನದ ಪರೀಕ್ಷೆಗಾಗಿ ಮೊಬೈಲ್​ಗಳನ್ನು ಸಿಎಫ್ಎಸ್ಎಲ್ ಹೈದರಾಬಾದ್‌ಗೆ ಕಳುಹಿಸಲಾಗಿದ್ದು, ವರದಿಯನ್ನು ಪಡೆದುಕೊಳ್ಳಬೇಕಾಗಿದೆ.

ಸಾಕ್ಷಿದಾರರಿಗೆ ಬೆದರಿಕೆ: ಅಲ್ಲದೇ, ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಲ್ಲದೇ, ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಹಾಕಿರುವ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆ‌ರ್ ಸಹ ದಾಖಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 76ನೇ ಎಮ್ಮಿ ಅವಾರ್ಡ್ಸ್: ದಿನಾಂಕ, ಸ್ಥಳ, ನಾಮನಿರ್ದೇಶನದ ಪಟ್ಟಿ ಬಿಡುಗಡೆ - Emmy Awards 2024

ಇನ್ನು ಜೈಲುವಾಸದಲ್ಲಿರುವ ದರ್ಶನ್​​ ಮನೆ ಊಟ, ಹಾಸಿಗೆ, ಪುಸ್ತಕ ಪಡೆಯಲು ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನಾಳೆ (ಶುಕ್ರವಾರ) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ ಆದೇಶ ಹೊರಡಿಸಿದ್ದಾರೆ.

ದರ್ಶನ್​ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಸಹ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನ ಮುಂದುವರೆದಿರುವುದರಿಂದ ಆಗಸ್ಟ್​ 1ರ ವರೆಗೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಇರಬೇಕಿದೆ.

ಜಾಮೀನು ನೀಡದಂತೆ ಪೊಲೀಸರು ನೀಡಿರುವ ಕಾರಣಗಳೇನು? ಆರೋಪಿಗಳು ಅಪಹರಣ, ಹತ್ಯೆ, ಒಳಸಂಚು ಮತ್ತು ಸಾಕ್ಷ್ಯನಾಶದಂತಹ ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈವರೆಗೆ ಸಂಗ್ರಹಿಸಿರುವ ಪ್ರತ್ಯಕ್ಷ ಸಾಕ್ಷಿದಾರರರ ಹೇಳಿಕೆ, ತಾಂತ್ರಿಕ ಮತ್ತು ಇತರೆ ಸಾಕ್ಷ್ಯಾಧಾರಗಳಲ್ಲಿ ದೃಢಪಟ್ಟಿದೆ. ಪ್ರಕರಣದಲ್ಲಿ ಈವರೆಗೆ 83 ಲಕ್ಷ ರೂ.ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲ ವ್ಯಕ್ತಿಗಳನ್ನು ವಿಚಾರಣೆ ಮಾಡಿ ಮಾಹಿತಿ ಸಂಗ್ರಹಿಸಬೇಕಾಗಿದೆ. ಪ್ರಕರಣದ ತನಿಖಾ ಅವಧಿಯಲ್ಲಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನಗಳ ಪೈಕಿ ಕೆಲ ವಾಹನಗಳು ಬೇರೆಯವರ ಹೆಸರಿನಲ್ಲಿರುವುದು ತಿಳಿದುಬಂದಿದ್ದು, ಅವುಗಳ ಮಾಲೀಕರನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.

ಇದನ್ನೂ ಓದಿ: ಮನೆಯೂಟ ಕೇಳಿದ್ದ ದರ್ಶನ್​​​: ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್‌ - Darshan Application Hearing

ಆರೋಪಿಗಳ ಪೈಕಿ ಕೆಲವರು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಬೇರೆಯವರ ಹೆಸರಿನಲ್ಲಿ ಖರೀದಿ ಮಾಡಿದ್ದು, ಆ ಪೈಕಿ ಇನ್ನೂ ಕೆಲ ಸಿಮ್ ಕಾರ್ಡ್ ಖರೀದಿದಾರರ ವಿಳಾಸವನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್ ಫೋನ್‌ಗಳಲ್ಲಿನ ಪೂರಕವಾದ ಡೇಟಾ ಸಂಗ್ರಹಿಸಲು ಮತ್ತು ಡೇಟಾದ ಅಸಲಿತನದ ಪರೀಕ್ಷೆಗಾಗಿ ಮೊಬೈಲ್​ಗಳನ್ನು ಸಿಎಫ್ಎಸ್ಎಲ್ ಹೈದರಾಬಾದ್‌ಗೆ ಕಳುಹಿಸಲಾಗಿದ್ದು, ವರದಿಯನ್ನು ಪಡೆದುಕೊಳ್ಳಬೇಕಾಗಿದೆ.

ಸಾಕ್ಷಿದಾರರಿಗೆ ಬೆದರಿಕೆ: ಅಲ್ಲದೇ, ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಲ್ಲದೇ, ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಹಾಕಿರುವ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆ‌ರ್ ಸಹ ದಾಖಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 76ನೇ ಎಮ್ಮಿ ಅವಾರ್ಡ್ಸ್: ದಿನಾಂಕ, ಸ್ಥಳ, ನಾಮನಿರ್ದೇಶನದ ಪಟ್ಟಿ ಬಿಡುಗಡೆ - Emmy Awards 2024

ಇನ್ನು ಜೈಲುವಾಸದಲ್ಲಿರುವ ದರ್ಶನ್​​ ಮನೆ ಊಟ, ಹಾಸಿಗೆ, ಪುಸ್ತಕ ಪಡೆಯಲು ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನಾಳೆ (ಶುಕ್ರವಾರ) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.