ETV Bharat / entertainment

ಚಾನಲ್​ನೊಂದಿಗಿನ ನನ್ನ ಸಂಬಂಧ ಅದ್ಭುತ, ನನ್ನವರು ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕೂರುವವನಲ್ಲ: ಸುದೀಪ್​​

ಬಿಗ್​ ಬಾಸ್​​ನ ಮುಂದಿನ ಸೀಸನ್​ಗಳನ್ನು ನಾನು ನಡೆಸಿಕೊಡುವುದಿಲ್ಲ ಎಂದು ಕಿಚ್ಚ ಸುದೀಪ್​ ತಿಳಿಸಿದ್ದಾರೆ. ಈ ಬೆನ್ನಲ್ಲೇ ಹಲವು ಅಂತೆ - ಕಂತೆಗಳು ಕೇಳಿಬಂದವು. ಕೆಲ ಆರೋಪಗಳನ್ನುದ್ದೇಶಿಸಿ, ಸ್ವತಃ ಸುದೀಪ್​ ಅವರಿಂದು ಟ್ವೀಟ್​ ಮಾಡಿದ್ದಾರೆ.

author img

By ETV Bharat Entertainment Team

Published : 4 hours ago

Actor Sudeep
ನಟ ಸುದೀಪ್​ (Photo Source: ETV Bharat)

ಕನ್ನಡದ ಜನಪ್ರಿಯ ಕಿರುತೆರೆ ಕಾರ್ಯಕ್ರಮ 'ಬಿಗ್​ ಬಾಸ್​​'ಗೆ ಅಭಿನಯ ಚಕ್ರವರ್ತಿ ಸುದೀಪ್​​ ಅವರು ವಿದಾಯ ಘೋಷಿಸಿದ್ದಾರೆ. ಮುಂದಿನ ಸೀಸನ್​ಗಳನ್ನು ನಾನು ನಡೆಸಿಕೊಡುವುದಿಲ್ಲ ಎಂದು ತಮ್ಮ ಅಧಿಕೃತ ಸೋಷಿಯಲ್​​ ಮೀಡಿಯಾ ಪ್ಲ್ಯಾಟ್​ಫಾರ್ಮ್​ ಎಕ್ಸ್​​​ನಲ್ಲಿ ತಿಳಿಸಿದ್ದಾರೆ.

ಈ ನಿರ್ಧಾರದ ಹಿಂದಿನ ಕಾರಣ ಏನಿರಬಹುದು ಎಂದು ಅಭಿಮಾನಿಗಳು ಊಹಿಸತೊಡಗಿದ್ದರು. ಈ ಬಗ್ಗೆ ಸೋಷಿಯಲ್​ ಮೀಡಿಯಾಗಳಲ್ಲಿ ಅಂತೆ - ಕಂತೆಗಳು ಹರಿದಾಡಿದ್ದವು. ಎಲ್ಲದಕ್ಕೂ ಕಿಚ್ಚ ಇಂದು ಸೂಕ್ತ ಉತ್ತರ ಕೊಟ್ಟಿದ್ದಾರೆ.

ಸುದೀಪ್​ ಎಕ್ಸ್ ಪೋಸ್ಟ್​: ಇತ್ತೀಚೆಗೆ ನಾನು ಮಾಡಿದ ಟ್ವೀಟ್​ಗೆ ಸಂಬಂಧಿಸಿದಂತೆ ನಿಮ್ಮೆಲ್ಲಾ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಈ ವಾತ್ಸಲ್ಯ ನಿಜವಾಗಿಯೂ ಮನಮುಟ್ಟುವಂತಿದೆ. ಅದಾಗ್ಯೂ, ಚಾನಲ್ ಮತ್ತು ನನ್ನ ನಡುವೆ ಮನಸ್ತಾಪಗಳಿವೆ ಎಂದು ಯಾವುದೇ ತರಹದ ಊಹೆಗಳನ್ನು ಮಾಡದಂತೆ ಕಾಮೆಂಟ್‌ಗಳು ಮತ್ತು ವಿಡಿಯೋಗಳನ್ನು ಮಾಡುವವರಲ್ಲಿ ವಿನಂತಿಸುತ್ತಿದ್ದೇನೆ. ನಾವು ಸುದೀರ್ಘ ಮತ್ತು ಸಕಾರಾತ್ಮಕ ಪ್ರಯಾಣವನ್ನು ನಡೆಸಿದ್ದೇವೆ. "ಅಗೌರವ" ಎಂಬ ಪದವನ್ನು ಅದರೊಂದಿಗೆ ಸೇರಿಸಬೇಡಿ. ಈ ವಿಷಯದ ಸುತ್ತಲಿನ ಊಹಾಪೋಹಗಳು ಆಧಾರರಹಿತವಾಗಿವೆ. ನನ್ನ ಟ್ವೀಟ್ ನೇರ ಮತ್ತು ಪ್ರಾಮಾಣಿಕವಾಗಿದೆ. ಕಲರ್ಸ್​​ನೊಂದಿಗಿನ ನನ್ನ ಸಂಬಂಧ ಅದ್ಭುತವಾಗಿದೆ. ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ನಿರ್ದೇಶಕ ಪ್ರಕಾಶ್ ಅವರು ಪ್ರತಿಭಾವಂತ ಮತ್ತು ಎನರ್ಜಿಟಿಕ್​​ ವ್ಯಕ್ತಿತ್ವ. ನಾನು ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಅನಗತ್ಯ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿ ನಾನಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 'ನಾನು ಅನ್​​​ಫಿಟ್​​ ಅನಿಸ್ತಿದೆ': ಬಿಗ್​ ಬಾಸ್​ ಮನೆಯಲ್ಲಿ ಧನರಾಜ್​ ಕಣ್ಣೀರು; ಬ್ಯಾಗ್​ ಪ್ಯಾಕ್ ಮಾಡಲು ಸಲಹೆ

ಭಾನುವಾರ ರಾತ್ರಿ 9:22ಕ್ಕೆ ಟ್ವೀಟ್​ ಮಾಡಿದ್ದ ಕಿಚ್ಚ ಸುದೀಪ್​​, ಬಿಗ್​ ಬಾಸ್​​ ಕನ್ನಡ ಸೀಸನ್​​ 11ಕ್ಕೆ ನೀವು ತೋರಿರುವ ಅದ್ಭುತ ಪ್ರತಿಕ್ರಿಯೆಗಾಗಿ ಧನ್ಯವಾದಗಳು. ಟಿವಿಆರ್ (ಸಂಖ್ಯೆ) ಬಿಗ್​ ಬಾಸ್​ ಶೋ ಹಾಗೂ ನನ್ನ ಬಗ್ಗೆ ನೀವೆಲ್ಲರೂ ತೋರಿದ ಪ್ರೀತಿಯ ಬಗ್ಗೆ ಸದ್ದು ಮಾಡುತ್ತಿದೆ. ಇದು ನಾವೆಲ್ಲರೂ ಜೊತೆಯಾಗಿ 10+1 ವರ್ಷಗಳ ಪ್ರಯಾಣ. ನಾನು ಮಾಡಬೇಕಿರುವ ಕೆಲಸಗಳನ್ನು ಮುಂದುವರಿಸಲು ಇದು ಸೂಕ್ತ ಸಮಯ. ಇದು ಬಿಗ್​ ಬಾಸ್​ ಕನ್ನಡಕ್ಕೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್​ ಬಾಸ್​ ​ಅನ್ನು ಫಾಲೋ ಮಾಡಿದ ಎಲ್ಲರೂ ಗೌರವಿಸುತ್ತಾರೆಂದು ನಾನು ನಿಜವಾಗಿಯೂ ನಂಬಿದ್ದೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ. ನಾನು ಕೂಡಾ ನಿಮ್ಮೆಲ್ಲರನ್ನು ರಂಜಿಸುತ್ತೇನೆ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ಸುದೀಪ್​ ಗುಡ್​ ಬೈ ಬೆನ್ನಲ್ಲೇ ಮನೆಯಿಂದ ಹೊರನಡೆದ ಬಿಗ್​ ಬಾಸ್​​! ಸ್ಪರ್ಧಿಗಳ ಉಡಾಫೆತನದ ವಿರುದ್ಧ ರೊಚ್ಚಿಗೆದ್ದ Bigg Boss

ಇದು ಅಪಾರ ಸಂಖ್ಯೆಯ ಅಭಿಮಾನಿಗಳು, ಪ್ರೇಕ್ಷಕರಿಗೆ ಕಹಿಸತ್ಯ. ಬಿಗ್​ ಬಾಸ್​ ಜನಪ್ರಿಯತೆಯಲ್ಲಿ ಸುದೀಪ್​ ಪಾತ್ರ ಬಹಳ ದೊಡ್ಡದಿದೆ. ವೀಕೆಂಡ್​ ಶೋಗಳಿಗಾಗಿಯೇ ಕಾದು ಕೂರುವ ಪ್ರೇಕ್ಷಕರ ಸಂಖ್ಯೆಯೂ ದೊಡ್ಡದಿದೆ. ಇದೀಗ ಈ ಕಾರ್ಯಕ್ರಮವನ್ನು ಸುದೀಪ್​​ ನಿರೂಪಿಸುತ್ತಿಲ್ಲ ಅನ್ನೋ ವಿಚಾರವನ್ನು ನಂಬಲಾಗದ ಸ್ಥಿತಿಯಲ್ಲಿ ಹಲವರಿದ್ದಾರೆ.

ಕನ್ನಡದ ಜನಪ್ರಿಯ ಕಿರುತೆರೆ ಕಾರ್ಯಕ್ರಮ 'ಬಿಗ್​ ಬಾಸ್​​'ಗೆ ಅಭಿನಯ ಚಕ್ರವರ್ತಿ ಸುದೀಪ್​​ ಅವರು ವಿದಾಯ ಘೋಷಿಸಿದ್ದಾರೆ. ಮುಂದಿನ ಸೀಸನ್​ಗಳನ್ನು ನಾನು ನಡೆಸಿಕೊಡುವುದಿಲ್ಲ ಎಂದು ತಮ್ಮ ಅಧಿಕೃತ ಸೋಷಿಯಲ್​​ ಮೀಡಿಯಾ ಪ್ಲ್ಯಾಟ್​ಫಾರ್ಮ್​ ಎಕ್ಸ್​​​ನಲ್ಲಿ ತಿಳಿಸಿದ್ದಾರೆ.

ಈ ನಿರ್ಧಾರದ ಹಿಂದಿನ ಕಾರಣ ಏನಿರಬಹುದು ಎಂದು ಅಭಿಮಾನಿಗಳು ಊಹಿಸತೊಡಗಿದ್ದರು. ಈ ಬಗ್ಗೆ ಸೋಷಿಯಲ್​ ಮೀಡಿಯಾಗಳಲ್ಲಿ ಅಂತೆ - ಕಂತೆಗಳು ಹರಿದಾಡಿದ್ದವು. ಎಲ್ಲದಕ್ಕೂ ಕಿಚ್ಚ ಇಂದು ಸೂಕ್ತ ಉತ್ತರ ಕೊಟ್ಟಿದ್ದಾರೆ.

ಸುದೀಪ್​ ಎಕ್ಸ್ ಪೋಸ್ಟ್​: ಇತ್ತೀಚೆಗೆ ನಾನು ಮಾಡಿದ ಟ್ವೀಟ್​ಗೆ ಸಂಬಂಧಿಸಿದಂತೆ ನಿಮ್ಮೆಲ್ಲಾ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಈ ವಾತ್ಸಲ್ಯ ನಿಜವಾಗಿಯೂ ಮನಮುಟ್ಟುವಂತಿದೆ. ಅದಾಗ್ಯೂ, ಚಾನಲ್ ಮತ್ತು ನನ್ನ ನಡುವೆ ಮನಸ್ತಾಪಗಳಿವೆ ಎಂದು ಯಾವುದೇ ತರಹದ ಊಹೆಗಳನ್ನು ಮಾಡದಂತೆ ಕಾಮೆಂಟ್‌ಗಳು ಮತ್ತು ವಿಡಿಯೋಗಳನ್ನು ಮಾಡುವವರಲ್ಲಿ ವಿನಂತಿಸುತ್ತಿದ್ದೇನೆ. ನಾವು ಸುದೀರ್ಘ ಮತ್ತು ಸಕಾರಾತ್ಮಕ ಪ್ರಯಾಣವನ್ನು ನಡೆಸಿದ್ದೇವೆ. "ಅಗೌರವ" ಎಂಬ ಪದವನ್ನು ಅದರೊಂದಿಗೆ ಸೇರಿಸಬೇಡಿ. ಈ ವಿಷಯದ ಸುತ್ತಲಿನ ಊಹಾಪೋಹಗಳು ಆಧಾರರಹಿತವಾಗಿವೆ. ನನ್ನ ಟ್ವೀಟ್ ನೇರ ಮತ್ತು ಪ್ರಾಮಾಣಿಕವಾಗಿದೆ. ಕಲರ್ಸ್​​ನೊಂದಿಗಿನ ನನ್ನ ಸಂಬಂಧ ಅದ್ಭುತವಾಗಿದೆ. ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ನಿರ್ದೇಶಕ ಪ್ರಕಾಶ್ ಅವರು ಪ್ರತಿಭಾವಂತ ಮತ್ತು ಎನರ್ಜಿಟಿಕ್​​ ವ್ಯಕ್ತಿತ್ವ. ನಾನು ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಅನಗತ್ಯ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿ ನಾನಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 'ನಾನು ಅನ್​​​ಫಿಟ್​​ ಅನಿಸ್ತಿದೆ': ಬಿಗ್​ ಬಾಸ್​ ಮನೆಯಲ್ಲಿ ಧನರಾಜ್​ ಕಣ್ಣೀರು; ಬ್ಯಾಗ್​ ಪ್ಯಾಕ್ ಮಾಡಲು ಸಲಹೆ

ಭಾನುವಾರ ರಾತ್ರಿ 9:22ಕ್ಕೆ ಟ್ವೀಟ್​ ಮಾಡಿದ್ದ ಕಿಚ್ಚ ಸುದೀಪ್​​, ಬಿಗ್​ ಬಾಸ್​​ ಕನ್ನಡ ಸೀಸನ್​​ 11ಕ್ಕೆ ನೀವು ತೋರಿರುವ ಅದ್ಭುತ ಪ್ರತಿಕ್ರಿಯೆಗಾಗಿ ಧನ್ಯವಾದಗಳು. ಟಿವಿಆರ್ (ಸಂಖ್ಯೆ) ಬಿಗ್​ ಬಾಸ್​ ಶೋ ಹಾಗೂ ನನ್ನ ಬಗ್ಗೆ ನೀವೆಲ್ಲರೂ ತೋರಿದ ಪ್ರೀತಿಯ ಬಗ್ಗೆ ಸದ್ದು ಮಾಡುತ್ತಿದೆ. ಇದು ನಾವೆಲ್ಲರೂ ಜೊತೆಯಾಗಿ 10+1 ವರ್ಷಗಳ ಪ್ರಯಾಣ. ನಾನು ಮಾಡಬೇಕಿರುವ ಕೆಲಸಗಳನ್ನು ಮುಂದುವರಿಸಲು ಇದು ಸೂಕ್ತ ಸಮಯ. ಇದು ಬಿಗ್​ ಬಾಸ್​ ಕನ್ನಡಕ್ಕೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್​ ಬಾಸ್​ ​ಅನ್ನು ಫಾಲೋ ಮಾಡಿದ ಎಲ್ಲರೂ ಗೌರವಿಸುತ್ತಾರೆಂದು ನಾನು ನಿಜವಾಗಿಯೂ ನಂಬಿದ್ದೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ. ನಾನು ಕೂಡಾ ನಿಮ್ಮೆಲ್ಲರನ್ನು ರಂಜಿಸುತ್ತೇನೆ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ಸುದೀಪ್​ ಗುಡ್​ ಬೈ ಬೆನ್ನಲ್ಲೇ ಮನೆಯಿಂದ ಹೊರನಡೆದ ಬಿಗ್​ ಬಾಸ್​​! ಸ್ಪರ್ಧಿಗಳ ಉಡಾಫೆತನದ ವಿರುದ್ಧ ರೊಚ್ಚಿಗೆದ್ದ Bigg Boss

ಇದು ಅಪಾರ ಸಂಖ್ಯೆಯ ಅಭಿಮಾನಿಗಳು, ಪ್ರೇಕ್ಷಕರಿಗೆ ಕಹಿಸತ್ಯ. ಬಿಗ್​ ಬಾಸ್​ ಜನಪ್ರಿಯತೆಯಲ್ಲಿ ಸುದೀಪ್​ ಪಾತ್ರ ಬಹಳ ದೊಡ್ಡದಿದೆ. ವೀಕೆಂಡ್​ ಶೋಗಳಿಗಾಗಿಯೇ ಕಾದು ಕೂರುವ ಪ್ರೇಕ್ಷಕರ ಸಂಖ್ಯೆಯೂ ದೊಡ್ಡದಿದೆ. ಇದೀಗ ಈ ಕಾರ್ಯಕ್ರಮವನ್ನು ಸುದೀಪ್​​ ನಿರೂಪಿಸುತ್ತಿಲ್ಲ ಅನ್ನೋ ವಿಚಾರವನ್ನು ನಂಬಲಾಗದ ಸ್ಥಿತಿಯಲ್ಲಿ ಹಲವರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.