ETV Bharat / entertainment

ಅರೆಮಲೆನಾಡಿನ ಕಾಡಲ್ಲೊಂದು ಪ್ರೇಮಕಥೆ, ಅರಣ್ಯದಲ್ಲೇ ಚಿತ್ರೀಕರಣ: ಯಶ್ ಶೆಟ್ಟಿ 'ಜಂಗಲ್ ಮಂಗಲ್'ಗೆ ಸಿಂಪಲ್ ಸುನಿ ಸಾಥ್ - Jungle Mangal

ಯಶ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಜಂಗಲ್ ಮಂಗಲ್' ಸಿನಿಮಾಗೆ ನಿರ್ದೇಶಕ ಸಿಂಪಲ್ ಸುನಿ ಸಾಥ್ ನೀಡಿದ್ದಾರೆ.

author img

By ETV Bharat Entertainment Team

Published : 2 hours ago

Jungle Mangal film team
'ಜಂಗಲ್ ಮಂಗಲ್' ಚಿತ್ರತಂಡ (ETV Bharat)

ಅಭಿನಯ ಹಾಗೂ ತಮ್ಮ ಲುಕ್​​ನಿಂದಲೇ ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆದಿರುವ ಯಶ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಚಿತ್ರ 'ಜಂಗಲ್ ಮಂಗಲ್'. ಈ ಚಿತ್ರಕ್ಕೆ ನಿರ್ದೇಶಕ ಸಿಂಪಲ್ ಸುನಿ ಸಾಥ್ ನೀಡಿದ್ದಾರೆ. ಹೌದು, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿ, ಸಿನಿಮಾ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಈವೆಂಟ್​ನಲ್ಲಿ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ನನ್ನ ಕೆಲ ಚಿತ್ರಗಳಿಗೆ ಈ ಚಿತ್ರದ ಸಂಕಲನಕಾರ ಮಂಜು ಶೇಡ್ಗಾರ್ ಸಂಕಲನ ಮಾಡಿದ್ದಾರೆ. ಅವರಿಂದ ನನಗೆ ಈ ತಂಡದ ಪರಿಚಯವಾಯಿತು. ಈ ಚಿತ್ರಕ್ಕೆ ನಿಮ್ಮ ಸಹಕಾರವಿರಬೇಕು ಎಂದರು. ನಾನು ಸದಾ ನಿಮ್ಮ ಜೊತೆ ಇರುತ್ತೇನೆ ಎಂದೆ. ಏಕೆಂದರೆ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ಸಿಂಪಲ್ ಸುನಿ ತಿಳಿಸಿದರು.

Jungle Mangal film team
'ಜಂಗಲ್ ಮಂಗಲ್' ನಟ-ನಟಿ (ETV Bharat)

ಪುತ್ತೂರು ಮೂಲದ ನಿರ್ದೇಶಕ ರಕ್ಷಿತ್ ಕುಮಾರ್ ಮಾತನಾಡಿ, ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ‌. ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಸುಬ್ರಹ್ಮಣ್ಯ ಬಳಿಯ ಕಾಡಿನಲ್ಲೇ ನಡೆದಿದೆ. ಯಶ್ ಶೆಟ್ಟಿ ನಾಯಕನಾಗಿ, ಹರ್ಷಿತಾ ರಾಮಚಂದ್ರ ನಾಯಕಿಯಾಗಿ ಹಾಗೂ ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ಇನ್ನೂ ನನಗೆ ಹತ್ತು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿದೆ. ನನಗಿರುವ ನಿರ್ದೇಶನದ ಆಸೆಗೆ ನನ್ನ ಸ್ನೇಹಿತರು ಆಸರೆಯಾದರು. ಸಹ್ಯಾದ್ರಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣವಾಗಿದ್ದು, ಸಿಂಪಲ್ ಸುನಿ ನಮ್ಮ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ ಎಂದರು.

Jungle Mangal film team
'ಜಂಗಲ್ ಮಂಗಲ್' ಚಿತ್ರತಂಡ (ETV Bharat)

ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ ಎಂದು ಮಾತನಾಡಿದ ಯಶ್ ಶೆಟ್ಟಿ, ನಿರ್ದೇಶಕರ ಈ ಕಥೆ ಚೆನ್ನಾಗಿದೆ. ವಿಭಿನ್ನ ಕಥೆ ಎನ್ನಬಹುದು. ಮೊದಲು ಉಗ್ರಂ ಮಂಜು ಅವರ ಪಾತ್ರ ನಾನು ಮಾಡಬೇಕಿತ್ತು. ಆನಂತರ ಬದಲಾಗಿ ನಿರ್ದೇಶಕರು ಈ ಪಾತ್ರ ನೀಡಿದರು. ಪಾತ್ರ ಹಾಗೂ ಚಿತ್ರ ಎರಡೂ ಚೆನ್ನಾಗಿದೆ. ತಂಡಕ್ಕೆ ಸಹಕಾರ ನೀಡುತ್ತಿರುವ ಸುನಿ ಅವರಿಗೆ ಧನ್ಯವಾದ ಎಂದರು.

ಇದನ್ನೂ ಓದಿ: 'ರೇಷ್ಮೆ ಬೆಳೆಗಾರನಾಗಿ ಅಭಿನಯಿಸಿರೋದು ಖುಷಿ ಕೊಟ್ಟಿದೆ': ಸಂಜು ವೆಡ್ಸ್ ಗೀತಾ 2 ನಟ ಶ್ರೀನಗರ ಕಿಟ್ಟಿ - Habibi song

ನಟಿ ಹರ್ಷಿತಾ ರಾಮಚಂದ್ರ ಮಾತನಾಡಿ, ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಈ ಹುಡುಗಿಗೆ ಜವಾಬ್ದಾರಿ ಇಲ್ಲದ ಹುಡುಗನ ಜೊತೆ ಪ್ರೀತಿ. ಒಂದು ಕಡೆ ಕುಟುಂಬ, ಮತ್ತೊಂದು ಕಡೆ ಪ್ರೀತಿ. ಈ ಎರಡರಲ್ಲಿ ನನ್ನ ಆಯ್ಕೆ ಏನು? ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು.

ಇದನ್ನೂ ಓದಿ: ಶೈನ್ ಶೆಟ್ಟಿ 'ಜಸ್ಟ್ ಮ್ಯಾರಿಡ್' ಅಂದ್ರು ರಿಯಲ್ ಸ್ಟಾರ್ ಉಪೇಂದ್ರ - Just Married

ಈ ಚಿತ್ರವನ್ನು ಪ್ರಜೀತ್ ಹೆಗಡೆ ನಿರ್ಮಾಣ ಮಾಡಿದ್ದು, ಮಂಜು ಶೇಡ್ಗಾರ್ ಅವರ ಸಂಕಲವಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಇನ್ನೊಂದು ತಿಂಗಳಲ್ಲಿ ಜಂಗಲ್ ಮಂಗಲ್ ಚಿತ್ರ ತೆರೆಕಾಣಲು ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ನಟ ಯಶ್ ಶೆಟ್ಟಿ ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಅಭಿನಯ ಹಾಗೂ ತಮ್ಮ ಲುಕ್​​ನಿಂದಲೇ ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆದಿರುವ ಯಶ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಚಿತ್ರ 'ಜಂಗಲ್ ಮಂಗಲ್'. ಈ ಚಿತ್ರಕ್ಕೆ ನಿರ್ದೇಶಕ ಸಿಂಪಲ್ ಸುನಿ ಸಾಥ್ ನೀಡಿದ್ದಾರೆ. ಹೌದು, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿ, ಸಿನಿಮಾ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಈವೆಂಟ್​ನಲ್ಲಿ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ನನ್ನ ಕೆಲ ಚಿತ್ರಗಳಿಗೆ ಈ ಚಿತ್ರದ ಸಂಕಲನಕಾರ ಮಂಜು ಶೇಡ್ಗಾರ್ ಸಂಕಲನ ಮಾಡಿದ್ದಾರೆ. ಅವರಿಂದ ನನಗೆ ಈ ತಂಡದ ಪರಿಚಯವಾಯಿತು. ಈ ಚಿತ್ರಕ್ಕೆ ನಿಮ್ಮ ಸಹಕಾರವಿರಬೇಕು ಎಂದರು. ನಾನು ಸದಾ ನಿಮ್ಮ ಜೊತೆ ಇರುತ್ತೇನೆ ಎಂದೆ. ಏಕೆಂದರೆ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ಸಿಂಪಲ್ ಸುನಿ ತಿಳಿಸಿದರು.

Jungle Mangal film team
'ಜಂಗಲ್ ಮಂಗಲ್' ನಟ-ನಟಿ (ETV Bharat)

ಪುತ್ತೂರು ಮೂಲದ ನಿರ್ದೇಶಕ ರಕ್ಷಿತ್ ಕುಮಾರ್ ಮಾತನಾಡಿ, ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ‌. ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಸುಬ್ರಹ್ಮಣ್ಯ ಬಳಿಯ ಕಾಡಿನಲ್ಲೇ ನಡೆದಿದೆ. ಯಶ್ ಶೆಟ್ಟಿ ನಾಯಕನಾಗಿ, ಹರ್ಷಿತಾ ರಾಮಚಂದ್ರ ನಾಯಕಿಯಾಗಿ ಹಾಗೂ ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ಇನ್ನೂ ನನಗೆ ಹತ್ತು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿದೆ. ನನಗಿರುವ ನಿರ್ದೇಶನದ ಆಸೆಗೆ ನನ್ನ ಸ್ನೇಹಿತರು ಆಸರೆಯಾದರು. ಸಹ್ಯಾದ್ರಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣವಾಗಿದ್ದು, ಸಿಂಪಲ್ ಸುನಿ ನಮ್ಮ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ ಎಂದರು.

Jungle Mangal film team
'ಜಂಗಲ್ ಮಂಗಲ್' ಚಿತ್ರತಂಡ (ETV Bharat)

ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ ಎಂದು ಮಾತನಾಡಿದ ಯಶ್ ಶೆಟ್ಟಿ, ನಿರ್ದೇಶಕರ ಈ ಕಥೆ ಚೆನ್ನಾಗಿದೆ. ವಿಭಿನ್ನ ಕಥೆ ಎನ್ನಬಹುದು. ಮೊದಲು ಉಗ್ರಂ ಮಂಜು ಅವರ ಪಾತ್ರ ನಾನು ಮಾಡಬೇಕಿತ್ತು. ಆನಂತರ ಬದಲಾಗಿ ನಿರ್ದೇಶಕರು ಈ ಪಾತ್ರ ನೀಡಿದರು. ಪಾತ್ರ ಹಾಗೂ ಚಿತ್ರ ಎರಡೂ ಚೆನ್ನಾಗಿದೆ. ತಂಡಕ್ಕೆ ಸಹಕಾರ ನೀಡುತ್ತಿರುವ ಸುನಿ ಅವರಿಗೆ ಧನ್ಯವಾದ ಎಂದರು.

ಇದನ್ನೂ ಓದಿ: 'ರೇಷ್ಮೆ ಬೆಳೆಗಾರನಾಗಿ ಅಭಿನಯಿಸಿರೋದು ಖುಷಿ ಕೊಟ್ಟಿದೆ': ಸಂಜು ವೆಡ್ಸ್ ಗೀತಾ 2 ನಟ ಶ್ರೀನಗರ ಕಿಟ್ಟಿ - Habibi song

ನಟಿ ಹರ್ಷಿತಾ ರಾಮಚಂದ್ರ ಮಾತನಾಡಿ, ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಈ ಹುಡುಗಿಗೆ ಜವಾಬ್ದಾರಿ ಇಲ್ಲದ ಹುಡುಗನ ಜೊತೆ ಪ್ರೀತಿ. ಒಂದು ಕಡೆ ಕುಟುಂಬ, ಮತ್ತೊಂದು ಕಡೆ ಪ್ರೀತಿ. ಈ ಎರಡರಲ್ಲಿ ನನ್ನ ಆಯ್ಕೆ ಏನು? ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು.

ಇದನ್ನೂ ಓದಿ: ಶೈನ್ ಶೆಟ್ಟಿ 'ಜಸ್ಟ್ ಮ್ಯಾರಿಡ್' ಅಂದ್ರು ರಿಯಲ್ ಸ್ಟಾರ್ ಉಪೇಂದ್ರ - Just Married

ಈ ಚಿತ್ರವನ್ನು ಪ್ರಜೀತ್ ಹೆಗಡೆ ನಿರ್ಮಾಣ ಮಾಡಿದ್ದು, ಮಂಜು ಶೇಡ್ಗಾರ್ ಅವರ ಸಂಕಲವಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಇನ್ನೊಂದು ತಿಂಗಳಲ್ಲಿ ಜಂಗಲ್ ಮಂಗಲ್ ಚಿತ್ರ ತೆರೆಕಾಣಲು ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ನಟ ಯಶ್ ಶೆಟ್ಟಿ ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.