ETV Bharat / international

ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ; 9 ಕಾರ್ಮಿಕರ ಸಾವು - 9 KILLED IN PAKISTAN

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್​ ಬಾಂಬ್​ ಸ್ಫೋಟಕ್ಕೆ ತುತ್ತಾಗಿದೆ.

9-killed-in-pakistan-as-roadside-bomb-hits-vehicle-carrying-coal-miners
ಸಾಂದರ್ಭಿಕ ಚಿತ್ರ (ಐಎಎನ್​ಎಸ್​​)
author img

By PTI

Published : Feb 14, 2025, 2:17 PM IST

ಬಲೂಚಿಸ್ತಾನ, ಪಾಕಿಸ್ತಾನ: ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದ ಬಾಂಬ್​ ಸ್ಫೋಟಿಸಿ 9 ಕಾರ್ಮಿಕರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್​ ಪ್ರಾಂತ್ಯದಲ್ಲಿ ವರದಿಯಾಗಿದೆ.

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುವಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿಯ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತರಾದ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಏಳು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆಯಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತಿಲ್ಲ. ಆದರೆ, ಬಲೂಚ್ ಲಿಬರೇಶನ್ ಆರ್ಮಿ ಇದೇ ರೀತಿ ಈ ಹಿಂದೆ ನಡೆದ ಕಾನೂನುಬಾಹಿರ ಕೃತ್ಯಗಳನ್ನು ಎಸೆಗಿದೆ ಎಂದು ಆರೋಪಿಸಲಾಗಿತ್ತು.

ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿವೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿ ಕೆಲಸಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಆರೋಪಿಸಲಾಗುತ್ತಿದೆ. ಮತ್ತೆ ಕೆಲವರು ಶಂಕಿಸದಂತೆ ಈ ಕೆಲಸಗಾರರು ಬಲೂಚಿಸ್ತಾನ ಮೂಲದವರಲ್ಲದ ಕಾರಣ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಗಣಿ ಇಲಾಖೆ ಪ್ರಕಾರ, ಸಾವನ್ನಪ್ಪಿದವರೆಲ್ಲ ಖೈಬರ್​ ಪಖ್ತುಂಖ್ವಾದ ಸ್ವತ್​ ಮತ್ತು ಶಂಗಲ ಮೂಲದವರಾಗಿದ್ದಾರೆ.

ಇದನ್ನೂ ಓದಿ: ದೇಶೀ ನಿರ್ಮಿತ ಪಿನಾಕಾ ರಾಕೆಟ್‌ ಅಧ್ಯಯನಕ್ಕಾಗಿ ಭಾರತಕ್ಕೆ ಬರುವಂತೆ ಫ್ರೆಂಚ್ ಸೈನ್ಯಕ್ಕೆ ಮೋದಿ ಆಹ್ವಾನ

ಇದನ್ನೂ ಓದಿ: ಪ್ರಧಾನಿ ಮೋದಿ ನನಗಿಂತ ಹೆಚ್ಚು ಕಠಿಣ ಸಂಧಾನಕಾರರು:ಅಮೆರಿಕ ಅಧ್ಯಕ್ಷ ಟ್ರಂಪ್ ಬಣ್ಣನೆ

ಬಲೂಚಿಸ್ತಾನ, ಪಾಕಿಸ್ತಾನ: ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದ ಬಾಂಬ್​ ಸ್ಫೋಟಿಸಿ 9 ಕಾರ್ಮಿಕರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್​ ಪ್ರಾಂತ್ಯದಲ್ಲಿ ವರದಿಯಾಗಿದೆ.

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುವಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿಯ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತರಾದ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಏಳು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆಯಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತಿಲ್ಲ. ಆದರೆ, ಬಲೂಚ್ ಲಿಬರೇಶನ್ ಆರ್ಮಿ ಇದೇ ರೀತಿ ಈ ಹಿಂದೆ ನಡೆದ ಕಾನೂನುಬಾಹಿರ ಕೃತ್ಯಗಳನ್ನು ಎಸೆಗಿದೆ ಎಂದು ಆರೋಪಿಸಲಾಗಿತ್ತು.

ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿವೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿ ಕೆಲಸಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಆರೋಪಿಸಲಾಗುತ್ತಿದೆ. ಮತ್ತೆ ಕೆಲವರು ಶಂಕಿಸದಂತೆ ಈ ಕೆಲಸಗಾರರು ಬಲೂಚಿಸ್ತಾನ ಮೂಲದವರಲ್ಲದ ಕಾರಣ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಗಣಿ ಇಲಾಖೆ ಪ್ರಕಾರ, ಸಾವನ್ನಪ್ಪಿದವರೆಲ್ಲ ಖೈಬರ್​ ಪಖ್ತುಂಖ್ವಾದ ಸ್ವತ್​ ಮತ್ತು ಶಂಗಲ ಮೂಲದವರಾಗಿದ್ದಾರೆ.

ಇದನ್ನೂ ಓದಿ: ದೇಶೀ ನಿರ್ಮಿತ ಪಿನಾಕಾ ರಾಕೆಟ್‌ ಅಧ್ಯಯನಕ್ಕಾಗಿ ಭಾರತಕ್ಕೆ ಬರುವಂತೆ ಫ್ರೆಂಚ್ ಸೈನ್ಯಕ್ಕೆ ಮೋದಿ ಆಹ್ವಾನ

ಇದನ್ನೂ ಓದಿ: ಪ್ರಧಾನಿ ಮೋದಿ ನನಗಿಂತ ಹೆಚ್ಚು ಕಠಿಣ ಸಂಧಾನಕಾರರು:ಅಮೆರಿಕ ಅಧ್ಯಕ್ಷ ಟ್ರಂಪ್ ಬಣ್ಣನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.