ETV Bharat / international

ನ್ಯೂಯಾರ್ಕ್‌ನಲ್ಲಿರುವ ಹಿಂದೂ ದೇಗುಲದ ಮೇಲೆ ದುಷ್ಕರ್ಮಿಗಳ ದಾಳಿ; ಸೂಕ್ತ ಕ್ರಮಕ್ಕೆ ಭಾರತ ಆಗ್ರಹ - Hindu Temple Vandalized

author img

By ANI

Published : Sep 17, 2024, 9:10 AM IST

Updated : Sep 17, 2024, 9:42 AM IST

ವಿದೇಶದಲ್ಲಿರುವ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ನಡೆಸುವ ಘಟನೆಗಳು ಮರುಕಳಿಸಿವೆ. ಇದೀಗ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಬಾಪ್ಸ್ ಸ್ವಾಮಿ ನಾರಾಯಣ ದೇಗುಲದ ಮೇಲೆ ದಾಳಿ ನಡೆಸಿ ವಿರೂಪಗೊಳಿಸಲಾಗಿದೆ. ಈ ಘಟನೆಯಲ್ಲಿ ಭಾರತ ಖಂಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ.

BAPS SWAMINARAYAN TEMPLE
ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌(BAPS) ಸ್ವಾಮಿ ನಾರಾಯಣ ದೇಗುಲ (ANI)

ನ್ಯೂಯಾರ್ಕ್(ಯುಎಸ್): ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌(BAPS) ಸ್ವಾಮಿ ನಾರಾಯಣ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಭಾರತೀಯ ಕಾನ್ಸುಲೇಟ್ ಜನರಲ್, ಇಂಥ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಘಟನೆಯ ಕುರಿತು ಕಾನ್ಸುಲೇಟ್ ಜನರಲ್ ಅಧಿಕಾರಿಗಳು ಯುಎಸ್ ಕಾನೂನು ಜಾರಿ ಪ್ರಾಧಿಕಾರಗಳಿಗೆ ದೂರು ನೀಡಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌ ಸ್ವಾಮಿ ನಾರಾಯಣ ದೇಗುಲದ ಮೇಲಿನ ದಾಳಿ ಒಪ್ಪುವಂಥದ್ದಲ್ಲ. ಕಾನ್ಸುಲೇಟ್ ಕಚೇರಿ ಹಿಂದೂ ಸಮುದಾಯದ ಜೊತೆ ಸಂಪರ್ಕದಲ್ಲಿದೆ. ಈ ವಿಷಯವನ್ನು ಯುಎಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಂಥ ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಅಮೆರಿಕನ್ ಹಿಂದೂ ಫೌಂಡೇಷನ್ ದೇಗುಲದ ಮೇಲಿನ ದಾಳಿ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಯುಎಸ್ ನ್ಯಾಯಾಂಗ ಇಲಾಖೆಯನ್ನು ಒತ್ತಾಯಿಸಿದೆ.

ಈ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿ, 'ಈ ವಾರಾಂತ್ಯದಲ್ಲಿ ಮೆಲ್ವಿಲ್ಲೆ ಸಮೀಪದ ನಾಸ್ಸೌ ಕೌಂಟಿಯಲ್ಲಿ ಹಿಂದೂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಸೇರುವ ಕಾರ್ಯಕ್ರಮ ಇರುವುದರಿಂದ ಹಿಂದೂ ಸಂಸ್ಥೆಗಳ ಮೇಲೆ ದಾಳಿ ಬೆದರಿಕೆ ಆತಂಕ ವ್ಯಕ್ತವಾಗಿತ್ತು' ಎಂದು ತಿಳಿಸಿದೆ. ಇದರ ಜೊತೆಗೆ, 'ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಇತ್ತೀಚೆಗೆ ವಿಡಿಯೋ ಮೂಲಕ ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲೆ ಬೆದರಿಕ ಹಾಕಿದ್ದ' ಎಂದು ತಿಳಿಸಿದೆ. 'ನ್ಯೂಯಾರ್ಕ್‌ನಲ್ಲಿರುವ ದೇಗುಲದ ಮೇಲೆ ನಡೆದ ದಾಳಿಯು ಈ ಹಿಂದೆ ಕ್ಯಾಲಿಫೋರ್ನಿಯಾ ಮತ್ತು ಕೆನಡಾದಲ್ಲಿ ನಡೆದ ದಾಳಿಗಳೊಂದಿಗೆ ಸಾಮ್ಯತೆ ಹೊಂದಿದೆ' ಎಂದು ತಿಳಿಸಿದೆ.

ಕಳೆದ ಜುಲೈನಲ್ಲಿ ಕೆನಡಾದ ಎಡ್ಮಾಂಟನ್‌ನಲ್ಲಿರುವ ಬಾಪ್ಸ್‌ ಸ್ವಾಮಿ ನಾರಾಯಣ ಮಂದಿರದ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದು, ಭಾರತೀಯ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದೀಗ ಅಮೆರಿಕದಲ್ಲಿ ದಾಳಿ ಮರುಕಳಿಸಿದೆ.

ಇದನ್ನೂ ಓದಿ: ಪಪುವಾ ನ್ಯೂ ಗಿನಿಯಾದಲ್ಲಿ ಬುಡಕಟ್ಟು ಜನರ ಸಂಘರ್ಷ: 20 ಸಾವು, 5 ಸಾವಿರ ಜನರ ಪಲಾಯನ - Papua New Guinea Clashes

ನ್ಯೂಯಾರ್ಕ್(ಯುಎಸ್): ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌(BAPS) ಸ್ವಾಮಿ ನಾರಾಯಣ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಭಾರತೀಯ ಕಾನ್ಸುಲೇಟ್ ಜನರಲ್, ಇಂಥ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಘಟನೆಯ ಕುರಿತು ಕಾನ್ಸುಲೇಟ್ ಜನರಲ್ ಅಧಿಕಾರಿಗಳು ಯುಎಸ್ ಕಾನೂನು ಜಾರಿ ಪ್ರಾಧಿಕಾರಗಳಿಗೆ ದೂರು ನೀಡಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್‌ ಸ್ವಾಮಿ ನಾರಾಯಣ ದೇಗುಲದ ಮೇಲಿನ ದಾಳಿ ಒಪ್ಪುವಂಥದ್ದಲ್ಲ. ಕಾನ್ಸುಲೇಟ್ ಕಚೇರಿ ಹಿಂದೂ ಸಮುದಾಯದ ಜೊತೆ ಸಂಪರ್ಕದಲ್ಲಿದೆ. ಈ ವಿಷಯವನ್ನು ಯುಎಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಂಥ ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಅಮೆರಿಕನ್ ಹಿಂದೂ ಫೌಂಡೇಷನ್ ದೇಗುಲದ ಮೇಲಿನ ದಾಳಿ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಯುಎಸ್ ನ್ಯಾಯಾಂಗ ಇಲಾಖೆಯನ್ನು ಒತ್ತಾಯಿಸಿದೆ.

ಈ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿ, 'ಈ ವಾರಾಂತ್ಯದಲ್ಲಿ ಮೆಲ್ವಿಲ್ಲೆ ಸಮೀಪದ ನಾಸ್ಸೌ ಕೌಂಟಿಯಲ್ಲಿ ಹಿಂದೂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಸೇರುವ ಕಾರ್ಯಕ್ರಮ ಇರುವುದರಿಂದ ಹಿಂದೂ ಸಂಸ್ಥೆಗಳ ಮೇಲೆ ದಾಳಿ ಬೆದರಿಕೆ ಆತಂಕ ವ್ಯಕ್ತವಾಗಿತ್ತು' ಎಂದು ತಿಳಿಸಿದೆ. ಇದರ ಜೊತೆಗೆ, 'ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಇತ್ತೀಚೆಗೆ ವಿಡಿಯೋ ಮೂಲಕ ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲೆ ಬೆದರಿಕ ಹಾಕಿದ್ದ' ಎಂದು ತಿಳಿಸಿದೆ. 'ನ್ಯೂಯಾರ್ಕ್‌ನಲ್ಲಿರುವ ದೇಗುಲದ ಮೇಲೆ ನಡೆದ ದಾಳಿಯು ಈ ಹಿಂದೆ ಕ್ಯಾಲಿಫೋರ್ನಿಯಾ ಮತ್ತು ಕೆನಡಾದಲ್ಲಿ ನಡೆದ ದಾಳಿಗಳೊಂದಿಗೆ ಸಾಮ್ಯತೆ ಹೊಂದಿದೆ' ಎಂದು ತಿಳಿಸಿದೆ.

ಕಳೆದ ಜುಲೈನಲ್ಲಿ ಕೆನಡಾದ ಎಡ್ಮಾಂಟನ್‌ನಲ್ಲಿರುವ ಬಾಪ್ಸ್‌ ಸ್ವಾಮಿ ನಾರಾಯಣ ಮಂದಿರದ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದು, ಭಾರತೀಯ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದೀಗ ಅಮೆರಿಕದಲ್ಲಿ ದಾಳಿ ಮರುಕಳಿಸಿದೆ.

ಇದನ್ನೂ ಓದಿ: ಪಪುವಾ ನ್ಯೂ ಗಿನಿಯಾದಲ್ಲಿ ಬುಡಕಟ್ಟು ಜನರ ಸಂಘರ್ಷ: 20 ಸಾವು, 5 ಸಾವಿರ ಜನರ ಪಲಾಯನ - Papua New Guinea Clashes

Last Updated : Sep 17, 2024, 9:42 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.