ETV Bharat / international

ಬಿಷ್ಣೋಯ್​ ಗ್ಯಾಂಗ್​​ನಿಂದ ಖಲಿಸ್ತಾನಿಗಳ ಹತ್ಯೆಗೆ ಭಾರತ ಸರ್ಕಾರದ ಸಂಚು: ಕೆನಡಾ ಆರೋಪ

ಬಿಷ್ಣೋಯ್ ​ಲಾರೆನ್ಸ್​ ಗ್ಯಾಂಗ್​ ಬಳಸಿಕೊಂಡು ಭಾರತ ಸರ್ಕಾರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಮಾಡಿದೆ ಎಂದು ಕೆನಡಾ ಸರ್ಕಾರ ಆರೋಪಿಸಿದೆ.

author img

By ETV Bharat Karnataka Team

Published : 3 hours ago

ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ಗೆ ಹಾಜರಾದ ಲಾರೆನ್ಸ್ ಬಿಷ್ಣೋಯ್
ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ಗೆ ಹಾಜರಾದ ಲಾರೆನ್ಸ್ ಬಿಷ್ಣೋಯ್ (ANI)

ಒಟ್ಟಾವ, ಕೆನಡಾ: ಉಗ್ರ ನಿಜ್ಜರ್​​ ಹತ್ಯೆ ವಿಚಾರದಲ್ಲಿ ಕೆನಡಾ ಮತ್ತು ಭಾರತದ ರಾಜತಾಂತ್ರಿಕ ಸಂಬಂಧಗಳು ಮುರಿದುಬಿದ್ದಿವೆ. ಇದರ ಬೆನ್ನಲ್ಲೇ, ಕೆನಡಾ ಭಾರತದ ಮೇಲೆ ಮತ್ತೊಂದು ಗುರುತರ ಆರೋಪ ಮಾಡಿದೆ. 'ಖಲಿಸ್ತಾನಿಗಳ ವಿರುದ್ಧ ಬಿಷ್ಣೋಯ್​ ಲಾರೆನ್ಸ್ ಗ್ಯಾಂಗ್​​ ಅನ್ನು ಭಾರತ ಸರ್ಕಾರ ಬಳಸಿಕೊಳ್ಳುತ್ತಿದೆ' ಎಂದು ಆರೋಪಿಸಿದೆ.

ಕೆನಡಾದ ರಾಷ್ಟ್ರೀಯ ಭದ್ರತೆಯ ಸಹಾಯಕ ಕಮಿಷನರ್ ಬ್ರಿಗಿಟ್ಟೆ ಗೌವಿನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಏಜೆಂಟರು ಖಲಿಸ್ತಾನಿ ಪರ ವ್ಯಕ್ತಿಗಳನ್ನು ಗುರಿಯಾಗಿಸಲು ಬಿಷ್ಣೋಯ್​​ ಲಾರೆನ್ಸ್ ಗ್ಯಾಂಗ್​ ಅನ್ನು ಬಳಸುತ್ತಿದ್ದಾರೆ. ಅವರ ಮೂಲಕ ನಿಜ್ಜರ್​ ಹತ್ಯೆ ಮಾಡಿಸಲಾಗಿದೆ ಎಂದು ದೂರಿದ್ದಾರೆ.

ದಕ್ಷಿಣ ಏಷ್ಯಾದ ಜನರನ್ನು, ಅದರಲ್ಲೂ ವಿಶೇಷವಾಗಿ ಖಲಿಸ್ತಾನಿ ಹೋರಾಟಗಾರರನ್ನು ಟಾರ್ಗೆಟ್​ ಮಾಡಲಾಗಿದೆ. ತನಿಖೆ ಮತ್ತು ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಷ್ಣೋಯ್​ ಗ್ಯಾಂಗ್​​ನ ಸಂಘಟಿತ ಅಪರಾಧದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.

ಬಿಷ್ಣೋಯ್​ ಗ್ಯಾಂಗ್​ ಭಾರತ ಸರ್ಕಾರದ ಏಜೆಂಟರೊಂದಿಗೆ ಸಂಪರ್ಕ ಹೊಂದಿದೆ. ಸರ್ಕಾರವೇ ಇದರಲ್ಲಿ ಭಾಗಿಯಾದ ಬಗ್ಗೆ ತಮ್ಮ ಬಳಿ ಮಾಹಿತಿ ಇದೆ ಎಂದು ಅಧಿಕಾರಿ ಆರೋಪಿಸಿದರು.

ರಾಯಭಾರಿ ವರ್ಮಾಗೆ ಬೆದರಿಕೆ: ಈ ಮಧ್ಯೆ ಖಲಿಸ್ತಾನಿ ಉಗ್ರ ಸಂಘಟನೆಯಾದ ಸಿಖ್​ ಫಾರ್​ ಜಸ್ಟಿಸ್​​ ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಸಂಜಯ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, ಸಂಜಯ್​ ಕುಮಾರ್​​ ಅವರು ಸಂಘಟನೆಗೆ ಸೇರಿದ ನಾಯಕರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದಿದೆ. ಜೊತೆಗೆ, ವರ್ಮಾ ಅವರ ಫೋಟೋಗೆ ಗುಂಡು ಹಾರಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು.

ರಾಜತಾಂತ್ರಿಕರು ಹೊರಕ್ಕೆ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ವಿಚಾರವಾಗಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಘರ್ಷ ಮತ್ತೆ ಭುಗಿಲೆದ್ದಿದ್ದು, ಉಭಯ ರಾಷ್ಟ್ರಗಳ ರಾಜತಾಂತ್ರಿಕರನ್ನು ಹೊರದಬ್ಬಲಾಗಿದೆ. ಭಾರತದಲ್ಲಿರುವ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದೇ ವೇಳೆ, ಕೆನಡಾ ಸರ್ಕಾರ ಕೂಡಾ ಭಾರತದ 6 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ಹೊರಹಾಕುವ ತೀರ್ಮಾನ ಪ್ರಕಟಿಸಿದೆ.

ಇದನ್ನೂ ಓದಿ: 'ಕೆನಡಾ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ': ಹೈಕಮಿಷನರ್ ವಾಪಸ್ ಕರೆಸಿಕೊಳ್ಳಲು ಭಾರತ ಮಹತ್ವದ ನಿರ್ಧಾರ

ಒಟ್ಟಾವ, ಕೆನಡಾ: ಉಗ್ರ ನಿಜ್ಜರ್​​ ಹತ್ಯೆ ವಿಚಾರದಲ್ಲಿ ಕೆನಡಾ ಮತ್ತು ಭಾರತದ ರಾಜತಾಂತ್ರಿಕ ಸಂಬಂಧಗಳು ಮುರಿದುಬಿದ್ದಿವೆ. ಇದರ ಬೆನ್ನಲ್ಲೇ, ಕೆನಡಾ ಭಾರತದ ಮೇಲೆ ಮತ್ತೊಂದು ಗುರುತರ ಆರೋಪ ಮಾಡಿದೆ. 'ಖಲಿಸ್ತಾನಿಗಳ ವಿರುದ್ಧ ಬಿಷ್ಣೋಯ್​ ಲಾರೆನ್ಸ್ ಗ್ಯಾಂಗ್​​ ಅನ್ನು ಭಾರತ ಸರ್ಕಾರ ಬಳಸಿಕೊಳ್ಳುತ್ತಿದೆ' ಎಂದು ಆರೋಪಿಸಿದೆ.

ಕೆನಡಾದ ರಾಷ್ಟ್ರೀಯ ಭದ್ರತೆಯ ಸಹಾಯಕ ಕಮಿಷನರ್ ಬ್ರಿಗಿಟ್ಟೆ ಗೌವಿನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಏಜೆಂಟರು ಖಲಿಸ್ತಾನಿ ಪರ ವ್ಯಕ್ತಿಗಳನ್ನು ಗುರಿಯಾಗಿಸಲು ಬಿಷ್ಣೋಯ್​​ ಲಾರೆನ್ಸ್ ಗ್ಯಾಂಗ್​ ಅನ್ನು ಬಳಸುತ್ತಿದ್ದಾರೆ. ಅವರ ಮೂಲಕ ನಿಜ್ಜರ್​ ಹತ್ಯೆ ಮಾಡಿಸಲಾಗಿದೆ ಎಂದು ದೂರಿದ್ದಾರೆ.

ದಕ್ಷಿಣ ಏಷ್ಯಾದ ಜನರನ್ನು, ಅದರಲ್ಲೂ ವಿಶೇಷವಾಗಿ ಖಲಿಸ್ತಾನಿ ಹೋರಾಟಗಾರರನ್ನು ಟಾರ್ಗೆಟ್​ ಮಾಡಲಾಗಿದೆ. ತನಿಖೆ ಮತ್ತು ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಷ್ಣೋಯ್​ ಗ್ಯಾಂಗ್​​ನ ಸಂಘಟಿತ ಅಪರಾಧದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.

ಬಿಷ್ಣೋಯ್​ ಗ್ಯಾಂಗ್​ ಭಾರತ ಸರ್ಕಾರದ ಏಜೆಂಟರೊಂದಿಗೆ ಸಂಪರ್ಕ ಹೊಂದಿದೆ. ಸರ್ಕಾರವೇ ಇದರಲ್ಲಿ ಭಾಗಿಯಾದ ಬಗ್ಗೆ ತಮ್ಮ ಬಳಿ ಮಾಹಿತಿ ಇದೆ ಎಂದು ಅಧಿಕಾರಿ ಆರೋಪಿಸಿದರು.

ರಾಯಭಾರಿ ವರ್ಮಾಗೆ ಬೆದರಿಕೆ: ಈ ಮಧ್ಯೆ ಖಲಿಸ್ತಾನಿ ಉಗ್ರ ಸಂಘಟನೆಯಾದ ಸಿಖ್​ ಫಾರ್​ ಜಸ್ಟಿಸ್​​ ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಸಂಜಯ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, ಸಂಜಯ್​ ಕುಮಾರ್​​ ಅವರು ಸಂಘಟನೆಗೆ ಸೇರಿದ ನಾಯಕರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದಿದೆ. ಜೊತೆಗೆ, ವರ್ಮಾ ಅವರ ಫೋಟೋಗೆ ಗುಂಡು ಹಾರಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು.

ರಾಜತಾಂತ್ರಿಕರು ಹೊರಕ್ಕೆ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ವಿಚಾರವಾಗಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಘರ್ಷ ಮತ್ತೆ ಭುಗಿಲೆದ್ದಿದ್ದು, ಉಭಯ ರಾಷ್ಟ್ರಗಳ ರಾಜತಾಂತ್ರಿಕರನ್ನು ಹೊರದಬ್ಬಲಾಗಿದೆ. ಭಾರತದಲ್ಲಿರುವ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದೇ ವೇಳೆ, ಕೆನಡಾ ಸರ್ಕಾರ ಕೂಡಾ ಭಾರತದ 6 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ಹೊರಹಾಕುವ ತೀರ್ಮಾನ ಪ್ರಕಟಿಸಿದೆ.

ಇದನ್ನೂ ಓದಿ: 'ಕೆನಡಾ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ': ಹೈಕಮಿಷನರ್ ವಾಪಸ್ ಕರೆಸಿಕೊಳ್ಳಲು ಭಾರತ ಮಹತ್ವದ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.