ನ್ಯೂಯಾರ್ಕ್ (ಅಮೆರಿಕ): ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಆಗಿರುವ ಗಮನಾರ್ಹ ಪ್ರಗತಿಯ ಕುರಿತು ಬೆಳಕು ಚೆಲ್ಲಿದ್ದಾರೆ. "ಭಾರತವು ಪಂಚಾಯತ್ ರಾಜ್ ಎಂದು ಕರೆಯಲ್ಪಡುವ ಗ್ರಾಮೀಣ ಆಡಳಿತದ ಒಂದು ಅನನ್ಯ ವ್ಯವಸ್ಥೆಯ ಬಗ್ಗೆ ಹೆಮ್ಮೆಪಡುತ್ತದೆ. ತಳಮಟ್ಟದಲ್ಲಿ ವಿಕೇಂದ್ರೀಕೃತ ಅಧಿಕಾರದ ಚಿಹ್ನೆಯಾಗಿದೆ'' ಎಂದು ಹೇಳಿದ್ದಾರೆ.
ನ್ಯೂಯಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಮಹಿಳೆಯರು ಸ್ಥಳೀಯ ಆಡಳಿತವನ್ನು ಮುನ್ನಡೆಸುತ್ತಿದ್ದಾರೆ. ತಳಮಟ್ಟದಲ್ಲಿ ಮಹಿಳಾ ಸಬಲೀಕರಣದ ಪರಿವರ್ತಕ ಪರಿಣಾಮದ ಕುರಿತು ಕಾಂಬೋಜ್ ವಿವರಿಸಿದರು. "ಪಂಚಾಯತ್ ರಾಜ್ ಗ್ರಾಮ ಸಭೆಯ ಮೂಲಕ ಪಂಚಾಯತ್ನ ಎಲ್ಲಾ ನಿವಾಸಿಗಳಿಂದ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವ ನೇರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ಉದಾಹರಣೆಯಾಗಿದೆ" ಎಂದು ಕಾಂಬೋಜ್ ಎತ್ತಿ ತೋರಿಸಿದ್ದಾರೆ.
ವ್ಯವಸ್ಥೆಯ ವಿಕೇಂದ್ರೀಕೃತ ಅಧಿಕಾರ ರಚನೆಯ ಕುರಿತು ಒತ್ತಿಹೇಳಿದರು. ಈ ವಿಶಿಷ್ಟ ಅಂಶವು ಪ್ರಪಂಚದ ಬೇರೆಡೆ ಕಂಡು ಬರುವ ಸಾಂಪ್ರದಾಯಿಕ ಆಡಳಿತ ಮಾದರಿಗಳಿಂದ ಇದನ್ನು ಪ್ರತ್ಯೇಕಿಸುತ್ತದೆ. ಇದು ಅಂತರ್ಗತ ನಿರ್ಧಾರ - ಮಾಡುವ ಪ್ರಕ್ರಿಯೆಗಳನ್ನು ಉತ್ತೇಜಿಸುವ ಮಾದರಿಯಾಗಿದೆ'' ಎಂದು ಅವರು ಪ್ರತಿಪಾದಿಸಿದ್ದಾರೆ.
21 ರಾಜ್ಯಗಳಲ್ಲಿ ಮಹಿಳಾ ಪ್ರಾತಿನಿಧ್ಯ ಶೇ 50ಕ್ಕೆ ಏರಿಕೆ: "1992 ರಲ್ಲಿ ಸಾಂವಿಧಾನಿಕ ತಿದ್ದುಪಡಿಯೊಂದಿಗೆ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದು ಸ್ಥಳೀಯ ಆಡಳಿತದಲ್ಲಿ ಎಲ್ಲ ಚುನಾಯಿತ ಪಾತ್ರಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಕಡ್ಡಾಯಗೊಳಿಸಿತು. ಈ ಸಾಂವಿಧಾನಿಕ ನಿಬಂಧನೆಯು ತಳಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಒಂದು ಹೆಗ್ಗುರುತಾಗಿದೆ. ಭಾರತದೊಳಗಿನ 21 ರಾಜ್ಯಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇಕಡಾ 50ಕ್ಕೆ ಏರಿದೆ'' ಎಂದು ತಿಳಿಸಿದರು.
"ಇಂದು 3.1 ಮಿಲಿಯನ್ ಚುನಾಯಿತ ಪ್ರತಿನಿಧಿಗಳಲ್ಲಿ 1.4 ಮಿಲಿಯನ್ಗಿಂತಲೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದಾರೆ. ಮಹಿಳೆಯರ ಭಾಗವಹಿಸುವಿಕೆಯು ಹೆಚ್ಚುತ್ತಿರುವುದು ಆಡಳಿತ ಮತ್ತು ಸಮುದಾಯದ ಅಭಿವೃದ್ಧಿಗೆ ಕೊಡುಗೆಗಳನ್ನು ಗುರುತಿಸುವ ಮತ್ತು ಮೌಲ್ಯೀಕರಿಸುವ ಕಡೆಗೆ ವಿಶಾಲವಾದ ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯೊಳಗಿನ ಸ್ಥಳೀಯ ಯೋಜನಾ ಪ್ರಕ್ರಿಯೆಯ ಕುರಿತು ಕಾಂಬೋಜ್ ವಿವರಿಸಿದಂತೆ, ಸುಸ್ಥಿರ ಅಭಿವೃದ್ಧಿ ಗುರಿಗಳ ಸ್ಥಳೀಕರಣದೊಂದಿಗೆ ನಿಖರವಾಗಿ ಜೋಡಿಸಲ್ಪಟ್ಟಿದೆ. ಇದು ಮಹಿಳೆಯರ ಸಬಲೀಕರಣದ ಮೇಲೆ ಗಮನಹರಿಸಲು ಸಾಧ್ಯವಾಗತ್ತದೆ'' ಎಂದರು.
ಸಾಂಪ್ರದಾಯಿಕ ಅಡೆತಡೆಗಳನ್ನು ಮುರಿಯುವಲ್ಲಿ ಮಹಿಳಾ ನಾಯಕರ ಪ್ರಯತ್ನಗಳನ್ನು ಶ್ಲಾಘಿಸಿದ ಕಾಂಬೋಜ್ ಅವರು, ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಮೂಲಕ ಸಮುದಾಯಗಳನ್ನು ಕ್ರಾಂತಿಗೊಳಿಸುವಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಿದರು.
ತಳಮಟ್ಟದಲ್ಲಿ ಸಕಾರಾತ್ಮಕ ಬದಲಾವಣೆ: ಪಂಚಾಯತ್ ರಾಜ್ ಸಂಸ್ಥೆಗಳಲ್ಲಿನ ಮಹಿಳಾ ನಾಯಕರು ತಳಮಟ್ಟದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಎದುರಿಸಲು ತಮ್ಮ ವಿಶಿಷ್ಟ ದೃಷ್ಟಿಕೋನಗಳು ಮತ್ತು ಅನುಭವಗಳನ್ನು ಬಳಸಿಕೊಳ್ಳುತ್ತಾರೆ. ಲಿಂಗ ಸಮಾನತೆಯನ್ನು ಮುನ್ನಡೆಸಲು ಕಾನೂನು ಚೌಕಟ್ಟುಗಳು, ದೃಢವಾದ ಸಾಮರ್ಥ್ಯ ನಿರ್ಮಾಣ ಉಪಕ್ರಮಗಳು ಮತ್ತು ಸಹಯೋಗದ ಪಾಲುದಾರಿಕೆಗಳ ಅಗತ್ಯದ ಕುರಿತು ರುಚಿರಾ ಕಾಂಬೋಜ್ ತಿಳಿಸಿದರು.
"ನಾವು ಮುಂದುವರೆಯುತ್ತಿದ್ದಂತೆ, ಲಿಂಗ ಸಮಾನತೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಅದರ ಪರಿವರ್ತಕ ಶಕ್ತಿಯನ್ನು ಗುರುತಿಸಿ, ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವ ಬೆಳೆಸುವ ನಮ್ಮ ಸಮರ್ಪಣೆಯನ್ನು ನವೀಕರಿಸೋಣ" ಎಂದು ಕಾಂಬೋಜ್ ಮಹಾತ್ಮ ಗಾಂಧಿಯವರ ಮಾತುಗಳನ್ನು ಉದಾಹರಣೆ ನೀಡಿ ಮಹಿಳೆಯರ ಅಳೆಯಲಾಗದ ಶಕ್ತಿ ಬಗ್ಗೆ ಒತ್ತಿ ಹೇಳಿದರು.
ಇದನ್ನೂ ಓದಿ: ಕೊಲಂಬಿಯಾ ವಿವಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸುವ ವೇಳೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ - protest in us