ETV Bharat / international

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: 1 ಹುದ್ದೆಗೆ 39 ಅಭ್ಯರ್ಥಿಗಳಿಂದ ನಾಮಪತ್ರ! - Sri Lankan Presidential Election

author img

By PTI

Published : Aug 15, 2024, 5:57 PM IST

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ರೇಸ್‌ನಲ್ಲಿದ್ದಾರೆ. ದೇಶದ ಇತಿಹಾಸದಲ್ಲೇ ಇಂಥ ಬೆಳವಣಿಗೆ ಇದೇ ಮೊದಲು.

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ (ETV Bharat)

ಕೊಲಂಬೊ(ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಮುಂದಿನ ತಿಂಗಳು ಅಧ್ಯಕ್ಷೀಯ ಚುನಾವಣೆಗಳು ನಡೆಯಲಿದ್ದು, ದಾಖಲೆಯ ಪ್ರಮಾಣದಲ್ಲಿ ಅಭ್ಯರ್ಥಿಗಳು ಮುಂದೆ ಬಂದಿದ್ದಾರೆ. ವಿಶೇಷವೆಂದರೆ, ಅಲ್ಪಸಂಖ್ಯಾತರಾಗಿರುವ ಮೂವರು ತಮಿಳರು, ಇಬ್ಬರು ಬೌದ್ಧ ಸನ್ಯಾಸಿಗಳು ಕೂಡ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 21ರಂದು ಚುನಾವಣೆ: ಈ ಬಾರಿಯ ಅತಿ ಹೆಚ್ಚು ಅಭ್ಯರ್ಥಿಗಳು ಅಧ್ಯಕ್ಷೀಯ ಚುನಾವಣಾ ಕಣದಲ್ಲಿದ್ದಾರೆ. ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಪದಚ್ಯುತಿಗೆ ದೇಶಾದ್ಯಂತ ಹೋರಾಟ ರೂಪಿಸಿದ್ದ ಅರಗಲಾಯ ಸೇರಿದಂತೆ 39 ಜನರು ನಾಮಪತ್ರ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 21ರಂದು ಚುನಾವಣೆ ನಡೆಯಲಿದೆ. ಇಷ್ಟು ಪ್ರಮಾಣದ ಆಕಾಂಕ್ಷಿಗಳ ಪೈಕಿ ಒಬ್ಬ ಮಹಿಳಾ ಅಭ್ಯರ್ಥಿ ಇಲ್ಲ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

ಇದಕ್ಕೂ ಮೊದಲು, 2019ರ ಅಧ್ಯಕ್ಷೀಯ ಚುನಾವಣೆಯಲ್ಲಿ 35 ಅಭ್ಯರ್ಥಿಗಳು ಕಣದಲ್ಲಿದ್ದರು. ಇದು ಈವರೆಗಿನ ಅತ್ಯಧಿಕ ದಾಖಲೆಯಾಗಿತ್ತು. ಅತಿ ಕಡಿಮೆ ಎಂದರೆ 1982ರಲ್ಲಿ ನಡೆದ ಮೊದಲ ಅಧ್ಯಕ್ಷೀಯ ಚುನಾವಣೆಯಲ್ಲಿ ಕೇವಲ 6 ಮಂದಿ ಮಾತ್ರ ಅಭ್ಯರ್ಥಿಗಳಿದ್ದರು.

ನಾಮಪತ್ರ ಸಲ್ಲಿಕೆಗೆ ಇಂದು(ಆಗಸ್ಟ್​ 15) ಕೊನೆಯ ದಿನವಾಗಿತ್ತು. ಕಣಕ್ಕಿಳಿಯಲು ಬಯಸಿದವರು ಬುಧವಾರದೊಳಗೆ ಠೇವಣಿ ಪಾವತಿಸಲು ಸೂಚಿಸಲಾಗಿತ್ತು. ಸ್ಥಳೀಯ ಕಾಲಮಾನ ಬೆಳಿಗ್ಗೆ 9ರಿಂದ 11 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 40 ಠೇವಣಿಗಳು ಬಂದಿವೆ. ಆದರೆ ಅವರಲ್ಲಿ ಒಬ್ಬರು ನಾಮಪತ್ರ ಸಲ್ಲಿಸಿಲ್ಲ.

39 ಆಕಾಂಕ್ಷಿಗಳ ಪೈಕಿ ಮೂವರ ನಾಮಪತ್ರಗಳನ್ನು ವಿವಿಧ ಕಾರಣಗಳಿಗಾಗಿ ಆಯೋಗ ತಿರಸ್ಕರಿಸಿದೆ. ದ್ವೀಪ ರಾಷ್ಟ್ರದಾದ್ಯಂತ 22 ಜಿಲ್ಲೆಗಳಲ್ಲಿ 17 ದಶಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಆರ್‌ಎಂಎಎಲ್ ರತ್ನಯ್ಯ ತಿಳಿಸಿದ್ದಾರೆ.

ಹಾಲಿ ಅಧ್ಯಕ್ಷ ವಿಕ್ರಮಸಿಂಘೆ ಸೇರಿದಂತೆ ರಾಜಪಕ್ಸೆ ಮನೆತನದ ಉತ್ತರಾಧಿಕಾರಿ ನಮಲ್ ರಾಜಪಕ್ಸೆ, ಪ್ರಮುಖ ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ್​, ಮಾರ್ಕ್ಸ್‌ವಾದಿ ಜೆವಿಪಿ ನಾಯಕ ಅನುರ ಕುಮಾರ ಡಿಸಾನಾಯಕೆ, 2022ರಲ್ಲಿ ದೇಶದಲ್ಲಿ ಕ್ರಾಂತಿ ನಡೆಯಲು ಚಳವಳಿ ರೂಪಿಸಿದ ನಾಯಕರಲ್ಲಿ ಒಬ್ಬರಾದ ಅರಗಲಾಯ ಸೇರಿದಂತೆ ಹಲವು ಪ್ರಮುಖರು ಅಧ್ಯಕ್ಷೀಯ ರೇಸ್​ನಲ್ಲಿದ್ದಾರೆ.

ಆರ್ಥಿಕ ದಿವಾಳಿಯಿಂದ ಕ್ಷಿಪ್ರ ಕ್ರಾಂತಿ: ಗೋಟಬಯ ರಾಜಪಕ್ಸೆ ಅಧ್ಯಕ್ಷರಾಗಿದ್ದಾಗ 2022ರಲ್ಲಿ ದೇಶ ಆರ್ಥಿಕವಾಗಿ ದಿವಾಳಿಯಾಗಿತ್ತು. ತೀವ್ರ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದ್ದರಿಂದ ಜನರು ಕ್ಷಿಪ್ರಕ್ರಾಂತಿ ನಡೆಸಿದ್ದರು. ದೇಶದ ಮೂಲೆಮೂಲೆಯಲ್ಲೂ ಜನರು ದಂಗೆ ಎದ್ದು, ಅಧ್ಯಕ್ಷರ ಮನೆಗೂ ನುಗ್ಗಿದ್ದರು. ಇದರಿಂದ ಗೋಟಬಯ ದೇಶ ಬಿಟ್ಟು ಪರಾರಿಯಾಗಿದ್ದರು. ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿದ ನಂತರ ದ್ವೀಪರಾಷ್ಟ್ರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರನಿಲ್ ವಿಕ್ರಮಸಿಂಘೆ ನಿರ್ಧಾರ - elections in Sri Lanka

ಕೊಲಂಬೊ(ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಮುಂದಿನ ತಿಂಗಳು ಅಧ್ಯಕ್ಷೀಯ ಚುನಾವಣೆಗಳು ನಡೆಯಲಿದ್ದು, ದಾಖಲೆಯ ಪ್ರಮಾಣದಲ್ಲಿ ಅಭ್ಯರ್ಥಿಗಳು ಮುಂದೆ ಬಂದಿದ್ದಾರೆ. ವಿಶೇಷವೆಂದರೆ, ಅಲ್ಪಸಂಖ್ಯಾತರಾಗಿರುವ ಮೂವರು ತಮಿಳರು, ಇಬ್ಬರು ಬೌದ್ಧ ಸನ್ಯಾಸಿಗಳು ಕೂಡ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 21ರಂದು ಚುನಾವಣೆ: ಈ ಬಾರಿಯ ಅತಿ ಹೆಚ್ಚು ಅಭ್ಯರ್ಥಿಗಳು ಅಧ್ಯಕ್ಷೀಯ ಚುನಾವಣಾ ಕಣದಲ್ಲಿದ್ದಾರೆ. ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಪದಚ್ಯುತಿಗೆ ದೇಶಾದ್ಯಂತ ಹೋರಾಟ ರೂಪಿಸಿದ್ದ ಅರಗಲಾಯ ಸೇರಿದಂತೆ 39 ಜನರು ನಾಮಪತ್ರ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 21ರಂದು ಚುನಾವಣೆ ನಡೆಯಲಿದೆ. ಇಷ್ಟು ಪ್ರಮಾಣದ ಆಕಾಂಕ್ಷಿಗಳ ಪೈಕಿ ಒಬ್ಬ ಮಹಿಳಾ ಅಭ್ಯರ್ಥಿ ಇಲ್ಲ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

ಇದಕ್ಕೂ ಮೊದಲು, 2019ರ ಅಧ್ಯಕ್ಷೀಯ ಚುನಾವಣೆಯಲ್ಲಿ 35 ಅಭ್ಯರ್ಥಿಗಳು ಕಣದಲ್ಲಿದ್ದರು. ಇದು ಈವರೆಗಿನ ಅತ್ಯಧಿಕ ದಾಖಲೆಯಾಗಿತ್ತು. ಅತಿ ಕಡಿಮೆ ಎಂದರೆ 1982ರಲ್ಲಿ ನಡೆದ ಮೊದಲ ಅಧ್ಯಕ್ಷೀಯ ಚುನಾವಣೆಯಲ್ಲಿ ಕೇವಲ 6 ಮಂದಿ ಮಾತ್ರ ಅಭ್ಯರ್ಥಿಗಳಿದ್ದರು.

ನಾಮಪತ್ರ ಸಲ್ಲಿಕೆಗೆ ಇಂದು(ಆಗಸ್ಟ್​ 15) ಕೊನೆಯ ದಿನವಾಗಿತ್ತು. ಕಣಕ್ಕಿಳಿಯಲು ಬಯಸಿದವರು ಬುಧವಾರದೊಳಗೆ ಠೇವಣಿ ಪಾವತಿಸಲು ಸೂಚಿಸಲಾಗಿತ್ತು. ಸ್ಥಳೀಯ ಕಾಲಮಾನ ಬೆಳಿಗ್ಗೆ 9ರಿಂದ 11 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 40 ಠೇವಣಿಗಳು ಬಂದಿವೆ. ಆದರೆ ಅವರಲ್ಲಿ ಒಬ್ಬರು ನಾಮಪತ್ರ ಸಲ್ಲಿಸಿಲ್ಲ.

39 ಆಕಾಂಕ್ಷಿಗಳ ಪೈಕಿ ಮೂವರ ನಾಮಪತ್ರಗಳನ್ನು ವಿವಿಧ ಕಾರಣಗಳಿಗಾಗಿ ಆಯೋಗ ತಿರಸ್ಕರಿಸಿದೆ. ದ್ವೀಪ ರಾಷ್ಟ್ರದಾದ್ಯಂತ 22 ಜಿಲ್ಲೆಗಳಲ್ಲಿ 17 ದಶಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಆರ್‌ಎಂಎಎಲ್ ರತ್ನಯ್ಯ ತಿಳಿಸಿದ್ದಾರೆ.

ಹಾಲಿ ಅಧ್ಯಕ್ಷ ವಿಕ್ರಮಸಿಂಘೆ ಸೇರಿದಂತೆ ರಾಜಪಕ್ಸೆ ಮನೆತನದ ಉತ್ತರಾಧಿಕಾರಿ ನಮಲ್ ರಾಜಪಕ್ಸೆ, ಪ್ರಮುಖ ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ್​, ಮಾರ್ಕ್ಸ್‌ವಾದಿ ಜೆವಿಪಿ ನಾಯಕ ಅನುರ ಕುಮಾರ ಡಿಸಾನಾಯಕೆ, 2022ರಲ್ಲಿ ದೇಶದಲ್ಲಿ ಕ್ರಾಂತಿ ನಡೆಯಲು ಚಳವಳಿ ರೂಪಿಸಿದ ನಾಯಕರಲ್ಲಿ ಒಬ್ಬರಾದ ಅರಗಲಾಯ ಸೇರಿದಂತೆ ಹಲವು ಪ್ರಮುಖರು ಅಧ್ಯಕ್ಷೀಯ ರೇಸ್​ನಲ್ಲಿದ್ದಾರೆ.

ಆರ್ಥಿಕ ದಿವಾಳಿಯಿಂದ ಕ್ಷಿಪ್ರ ಕ್ರಾಂತಿ: ಗೋಟಬಯ ರಾಜಪಕ್ಸೆ ಅಧ್ಯಕ್ಷರಾಗಿದ್ದಾಗ 2022ರಲ್ಲಿ ದೇಶ ಆರ್ಥಿಕವಾಗಿ ದಿವಾಳಿಯಾಗಿತ್ತು. ತೀವ್ರ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದ್ದರಿಂದ ಜನರು ಕ್ಷಿಪ್ರಕ್ರಾಂತಿ ನಡೆಸಿದ್ದರು. ದೇಶದ ಮೂಲೆಮೂಲೆಯಲ್ಲೂ ಜನರು ದಂಗೆ ಎದ್ದು, ಅಧ್ಯಕ್ಷರ ಮನೆಗೂ ನುಗ್ಗಿದ್ದರು. ಇದರಿಂದ ಗೋಟಬಯ ದೇಶ ಬಿಟ್ಟು ಪರಾರಿಯಾಗಿದ್ದರು. ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿದ ನಂತರ ದ್ವೀಪರಾಷ್ಟ್ರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರನಿಲ್ ವಿಕ್ರಮಸಿಂಘೆ ನಿರ್ಧಾರ - elections in Sri Lanka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.