ETV Bharat / international

ವಿಕ್ರಮಸಿಂಘೆ ಬೆಂಬಲಿಸಿದ ಎಸ್ಎಲ್​​ಪಿಪಿಯ 92 ಸಂಸದರು: ಶ್ರೀಲಂಕಾದ ಅತಿದೊಡ್ಡ ರಾಜಕೀಯ ಪಕ್ಷ ಇಬ್ಭಾಗ - Sri Lanka Elections

author img

By ETV Bharat Karnataka Team

Published : Jul 31, 2024, 1:05 PM IST

ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಬೆಂಬಲಿಸುವ ವಿಷಯದಲ್ಲಿ ಶ್ರೀಲಂಕಾದ ಅತಿದೊಡ್ಡ ರಾಜಕೀಯ ಪಕ್ಷ ಇಬ್ಭಾಗವಾಗಿದೆ.

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (IANS)

ಕೊಲಂಬೊ: ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಬೆಂಬಲಿಸುವ ವಿಚಾರದಲ್ಲಿ ಶ್ರೀಲಂಕಾದ ಅತಿ ದೊಡ್ಡ ರಾಜಕೀಯ ಪಕ್ಷ ಇಬ್ಭಾಗವಾಗಿದೆ. ಪಕ್ಷದ 92 ಜನಪ್ರತಿನಿಧಿಗಳು ರನಿಲ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ಪಕ್ಷವಾದ ಶ್ರೀಲಂಕಾ ಪೊಡುಜನ ಪೆರಮುನಾ (ಎಸ್ಎಲ್​​ಪಿಪಿ)ನ ಹೆಚ್ಚಿನ ಸಂಖ್ಯೆಯ ಸಂಸದರು ಸೆಪ್ಟೆಂಬರ್ 21ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಕ್ರಮಸಿಂಘೆ ಅವರ ಗೆಲುವಿಗೆ ಬೇಷರತ್ತಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಪ್ರಧಾನಿ ದಿನೇಶ್ ಗುಣವರ್ಧನೆ, ವಿದೇಶಾಂಗ ಸಚಿವ ಅಲಿ ಸಬ್ರಿ ಮತ್ತು ಹಲವಾರು ಕ್ಯಾಬಿನೆಟ್ ಮಂತ್ರಿಗಳು ಮತ್ತು ರಾಜ್ಯ ಸಚಿವರು ಸೇರಿದಂತೆ ಇನ್ನೂ ಅನೇಕರು ವಿಕ್ರಮಸಿಂಘೆ ಅವರನ್ನು ಬೆಂಬಲಿಸಿದ್ದಾರೆ. ದೇಶದಲ್ಲಿ 2022ರಲ್ಲಿ ಎದುರಾದ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಅದರ ನಂತರ ದೇಶಾದ್ಯಂತ ಆರಂಭವಾದ ಗಲಭೆಗಳ ನಂತರ ಆಗಿನ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶದಿಂದ ಪಲಾಯನ ಮಾಡಿದಾಗ ಇವರೆಲ್ಲರೂ ವಿಕ್ರಮಸಿಂಘೆ ಜೊತೆ ಸೇರಿಕೊಂಡಿದ್ದರು. ದೇಶದಿಂದ ಹೊರಗಿದ್ದುಕೊಂಡೇ ಗೊಟಬಯ ಕೂಡ ವಿಕ್ರಮಸಿಂಘೆ ಅವರನ್ನು ಬೆಂಬಲಿಸಿದ್ದರು.

"ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ನಾಯಕತ್ವದಲ್ಲಿ, ಶ್ರೀಲಂಕಾ ಇತಿಹಾಸದಲ್ಲಿಯೇ ಅತ್ಯಂತ ತೀವ್ರವಾದ ಬಿಕ್ಕಟ್ಟನ್ನು ನಿವಾರಿಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಮತ್ತೆ ಇಂಥ ಬಿಕ್ಕಟ್ಟು ಮರುಕಳಿಸದಂತೆ ತಡೆಯಲು, ಅಧ್ಯಕ್ಷ ವಿಕ್ರಮಸಿಂಘೆ ಅವರ ದೃಷ್ಟಿಕೋನ ಮತ್ತು ಉಪಕ್ರಮಗಳನ್ನು ಬೆಂಬಲಿಸುವುದನ್ನು ಮುಂದುವರಿಸುವುದು ಅತ್ಯಗತ್ಯ. ನಮ್ಮ ರಾಜಕೀಯ ದೃಷ್ಟಿಕೋನಗಳಿಗಿಂತ ಮೊದಲು ನಾವು ದೇಶವನ್ನು ರಕ್ಷಿಸಬೇಕಾಗಿದೆ" ಎಂದು ವಿಕ್ರಮಸಿಂಘೆ ಅವರೊಂದಿಗೆ ಸೇರಿದ ಹಣಕಾಸು ರಾಜ್ಯ ಸಚಿವ ಸೆಹಾನ್ ಸೆಮಸಿಂಘೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಅಧ್ಯಕ್ಷ ವಿಕ್ರಮಸಿಂಘೆ ಅವರೊಂದಿಗೆ ಇನ್ನೂ ಹೆಚ್ಚಿನ ಸಂಸದರು ಸೇರಲಿದ್ದಾರೆ" ಎಂದು ವಿಕ್ರಮಸಿಂಘೆ ಅವರೊಂದಿಗೆ ಸೇರಿದ ರಕ್ಷಣಾ ರಾಜ್ಯ ಸಚಿವೆ ಪ್ರಮಿತಾ ಬಂಡಾರ ತೆನ್ನಕೋಣೆ ಸುದ್ದಿಗಾರರಿಗೆ ತಿಳಿಸಿದರು.

ಅಧ್ಯಕ್ಷ ವಿಕ್ರಮಸಿಂಘೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಆಹ್ವಾನ ನೀಡಿದ್ದರೂ, ರಾಜಪಕ್ಸೆ ಅವರ ಪಕ್ಷವು ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸೆ, ವಿಕ್ರಮಸಿಂಘೆ ಅವರು ತಮ್ಮ ಚಿಕ್ಕಪ್ಪಂದಿರಾದ ಬೆಸಿಲ್ ಮತ್ತು ಗೋಟಬಯ ಸ್ಥಾಪಿಸಿದ ಪಕ್ಷವನ್ನು ವಿಭಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವಾರ, ಅಧ್ಯಕ್ಷ ವಿಕ್ರಮಸಿಂಘೆ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಘೋಷಿಸಿದರೆ, ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಸಮಗಿ ಜನಬಲವೇಗಯಾ (ಯುನೈಟೆಡ್ ಪೀಪಲ್ಸ್ ಪವರ್) ಪಕ್ಷದಿಂದ ಮತ್ತು ಮಾರ್ಕ್ಸ್​ವಾದಿ ಪಕ್ಷ ನ್ಯಾಷನಲ್ ಪೀಪಲ್ಸ್ ಪವರ್​ನ ಅನುರಾ ಕುಮಾರ ದಿಸ್ಸಾನಾಯಕೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ - Hamas Leader Ismail Haniyeh Killed

ಕೊಲಂಬೊ: ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಬೆಂಬಲಿಸುವ ವಿಚಾರದಲ್ಲಿ ಶ್ರೀಲಂಕಾದ ಅತಿ ದೊಡ್ಡ ರಾಜಕೀಯ ಪಕ್ಷ ಇಬ್ಭಾಗವಾಗಿದೆ. ಪಕ್ಷದ 92 ಜನಪ್ರತಿನಿಧಿಗಳು ರನಿಲ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ಪಕ್ಷವಾದ ಶ್ರೀಲಂಕಾ ಪೊಡುಜನ ಪೆರಮುನಾ (ಎಸ್ಎಲ್​​ಪಿಪಿ)ನ ಹೆಚ್ಚಿನ ಸಂಖ್ಯೆಯ ಸಂಸದರು ಸೆಪ್ಟೆಂಬರ್ 21ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಕ್ರಮಸಿಂಘೆ ಅವರ ಗೆಲುವಿಗೆ ಬೇಷರತ್ತಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಪ್ರಧಾನಿ ದಿನೇಶ್ ಗುಣವರ್ಧನೆ, ವಿದೇಶಾಂಗ ಸಚಿವ ಅಲಿ ಸಬ್ರಿ ಮತ್ತು ಹಲವಾರು ಕ್ಯಾಬಿನೆಟ್ ಮಂತ್ರಿಗಳು ಮತ್ತು ರಾಜ್ಯ ಸಚಿವರು ಸೇರಿದಂತೆ ಇನ್ನೂ ಅನೇಕರು ವಿಕ್ರಮಸಿಂಘೆ ಅವರನ್ನು ಬೆಂಬಲಿಸಿದ್ದಾರೆ. ದೇಶದಲ್ಲಿ 2022ರಲ್ಲಿ ಎದುರಾದ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಅದರ ನಂತರ ದೇಶಾದ್ಯಂತ ಆರಂಭವಾದ ಗಲಭೆಗಳ ನಂತರ ಆಗಿನ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶದಿಂದ ಪಲಾಯನ ಮಾಡಿದಾಗ ಇವರೆಲ್ಲರೂ ವಿಕ್ರಮಸಿಂಘೆ ಜೊತೆ ಸೇರಿಕೊಂಡಿದ್ದರು. ದೇಶದಿಂದ ಹೊರಗಿದ್ದುಕೊಂಡೇ ಗೊಟಬಯ ಕೂಡ ವಿಕ್ರಮಸಿಂಘೆ ಅವರನ್ನು ಬೆಂಬಲಿಸಿದ್ದರು.

"ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ನಾಯಕತ್ವದಲ್ಲಿ, ಶ್ರೀಲಂಕಾ ಇತಿಹಾಸದಲ್ಲಿಯೇ ಅತ್ಯಂತ ತೀವ್ರವಾದ ಬಿಕ್ಕಟ್ಟನ್ನು ನಿವಾರಿಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಮತ್ತೆ ಇಂಥ ಬಿಕ್ಕಟ್ಟು ಮರುಕಳಿಸದಂತೆ ತಡೆಯಲು, ಅಧ್ಯಕ್ಷ ವಿಕ್ರಮಸಿಂಘೆ ಅವರ ದೃಷ್ಟಿಕೋನ ಮತ್ತು ಉಪಕ್ರಮಗಳನ್ನು ಬೆಂಬಲಿಸುವುದನ್ನು ಮುಂದುವರಿಸುವುದು ಅತ್ಯಗತ್ಯ. ನಮ್ಮ ರಾಜಕೀಯ ದೃಷ್ಟಿಕೋನಗಳಿಗಿಂತ ಮೊದಲು ನಾವು ದೇಶವನ್ನು ರಕ್ಷಿಸಬೇಕಾಗಿದೆ" ಎಂದು ವಿಕ್ರಮಸಿಂಘೆ ಅವರೊಂದಿಗೆ ಸೇರಿದ ಹಣಕಾಸು ರಾಜ್ಯ ಸಚಿವ ಸೆಹಾನ್ ಸೆಮಸಿಂಘೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಅಧ್ಯಕ್ಷ ವಿಕ್ರಮಸಿಂಘೆ ಅವರೊಂದಿಗೆ ಇನ್ನೂ ಹೆಚ್ಚಿನ ಸಂಸದರು ಸೇರಲಿದ್ದಾರೆ" ಎಂದು ವಿಕ್ರಮಸಿಂಘೆ ಅವರೊಂದಿಗೆ ಸೇರಿದ ರಕ್ಷಣಾ ರಾಜ್ಯ ಸಚಿವೆ ಪ್ರಮಿತಾ ಬಂಡಾರ ತೆನ್ನಕೋಣೆ ಸುದ್ದಿಗಾರರಿಗೆ ತಿಳಿಸಿದರು.

ಅಧ್ಯಕ್ಷ ವಿಕ್ರಮಸಿಂಘೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಆಹ್ವಾನ ನೀಡಿದ್ದರೂ, ರಾಜಪಕ್ಸೆ ಅವರ ಪಕ್ಷವು ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸೆ, ವಿಕ್ರಮಸಿಂಘೆ ಅವರು ತಮ್ಮ ಚಿಕ್ಕಪ್ಪಂದಿರಾದ ಬೆಸಿಲ್ ಮತ್ತು ಗೋಟಬಯ ಸ್ಥಾಪಿಸಿದ ಪಕ್ಷವನ್ನು ವಿಭಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವಾರ, ಅಧ್ಯಕ್ಷ ವಿಕ್ರಮಸಿಂಘೆ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಘೋಷಿಸಿದರೆ, ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಸಮಗಿ ಜನಬಲವೇಗಯಾ (ಯುನೈಟೆಡ್ ಪೀಪಲ್ಸ್ ಪವರ್) ಪಕ್ಷದಿಂದ ಮತ್ತು ಮಾರ್ಕ್ಸ್​ವಾದಿ ಪಕ್ಷ ನ್ಯಾಷನಲ್ ಪೀಪಲ್ಸ್ ಪವರ್​ನ ಅನುರಾ ಕುಮಾರ ದಿಸ್ಸಾನಾಯಕೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ - Hamas Leader Ismail Haniyeh Killed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.